Homeಕರೋನಾ ತಲ್ಲಣಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ.

- Advertisement -
- Advertisement -

ದೇಶದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತಿದ್ದು ಈ ನಡುವೆ, ಕೋವಾಕ್ಸಿನ್ ತಯಾರಕರಾದ ಭಾರತ್ ಬಯೋಟೆಕ್‌‌ ಅನ್ನು ಉತ್ಪಾದನಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಕೇಂದ್ರವು ಕೇಳಿಕೊಂಡಿದೆ ಎಂದು TNIE ಪತ್ರಿಕೆಯು ವರದಿ ಮಾಡಿದೆ.

ಪ್ರಸ್ತುತ ಲಸಿಕೆಗಳ ಪೂರೈಕೆ ಸಮಸ್ಯೆಯನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರವು ಕೊರೊನಾಕ್ಕಾಗಿ ತಯಾರಿಸಿದ “ದೇಶೀಯ ಲಸಿಕೆಗಳ ಸಾಮರ್ಥ್ಯ ವೃದ್ಧಿಗೆ” ಅನುಕೂಲವಾಗುವಂತೆ ಒಂದು ಸಮಿತಿಯನ್ನು ರಚಿಸಿದೆ. ಭಾರತದಲ್ಲಿ ಇಲ್ಲಿಯವರೆಗೆ ನೀಡಲಾದ 5,33,24,811 ಡೋಸ್‌ಗಳಲ್ಲಿ, 50 ಲಕ್ಷಕ್ಕಿಂತ ಕಡಿಮೆ ಅಥವಾ 10% ಲಸಿಕೆ ಪ್ರಮಾಣವು ದೇಶದ ಮೊದಲ ದೇಶೀಯ ಕೋವಿಡ್‌ ಲಸಿಕೆಯಾದ ಕೊವಾಕ್ಸಿನ್ ಅನ್ನು ಒಳಗೊಂಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಕೊರೊನಾ ಲಸಿಕೆ ದಾಸ್ತಾನು!

ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಹೇಳುವಂತೆ ಭಾರತದಲ್ಲಿ ಅನುಮತಿ ಲಭಿಸಿದ ಎರಡು ಲಸಿಕೆಗಳ ಸುಮಾರು 8.7 ಕೋಟಿ ಡೋಸೇಜ್‌ಗಳನ್ನು ಇಲ್ಲಿಯವರೆಗೆ ರಾಜ್ಯಗಳಿಗೆ ಕಳುಹಿಸಲಾಗಿದೆ. ಆದರೆ ಈಗ ಉದ್ದೇಶಿತ ಫಲಾನುಭವಿಗಳ ಸಂಖ್ಯೆ ಈಗ 34 ಕೋಟಿಗೆ ತಲುಪಿರುವುದರಿಂದ, ಮುಂದಿನ ಕೆಲವು ತಿಂಗಳುಗಳಲ್ಲಿ ಆದ್ಯತೆಯ ಜನಸಂಖ್ಯೆಗಾಗಿ ದೇಶಕ್ಕೆ 64 ಕೋಟಿ ಪ್ರಮಾಣದ ಲಸಿಕೆಗಳು ಬೇಕಾಗುತ್ತವೆ.

“ಇದು ಕಠಿಣ ಕಾರ್ಯವಾಗಿದೆ ಮತ್ತು ಭಾರತ್ ಬಯೋಟೆಕ್ ತನ್ನ ಉತ್ಪಾದನೆಯನ್ನು ಹೆಚ್ಚಿಸದಿದ್ದರೆ, ದೊಡ್ಡ ಸವಾಲಾಗಿ ಪರಿಣಮಿಸುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಧಿಕೃತವಾಗಿ, ಭಾರತದಲ್ಲಿ ಕೋವಿಡ್‌ ಲಸಿಕೆಗಳ ಕೊರತೆಯಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಸಚಿವಾಲಯದ ಅನೇಕ ಅಧಿಕಾರಿಗಳ ಪ್ರಕಾರ, ಈಗಿನಂತೆ ಸೀರಮ್‌ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಉತ್ಪಾದನಾ ಸಾಮರ್ಥ್ಯ 5-6 ಕೋಟಿ ಆಗಿದ್ದರೆ, ಭಾರತ್ ಬಯೋಟೆಕ್‌‌ ಒಂದು ಕೋಟಿ ಮಿಲಿಯನ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. “ಆದಾಗ್ಯೂ, ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ” ಎಂದು ಮೂಲವನ್ನು ಉಲ್ಲೇಖಿಸಿ TNIE  ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

“ಆದ್ದರಿಂದ, ಕೊವಾಕ್ಸಿನ್‌ ಎರಡನೇ ಆಯ್ಕೆಯಾಗುದರ ಬದಲಿಗೆ ಮಹತ್ವದ ಪಾತ್ರ ವಹಿಸಬೇಕಾಗುತ್ತದೆ” ಎಂದು ಮೂಲವು ತಿಳಿಸಿದೆ. ಈ ಕಾರಣಕ್ಕಾಗಿಯೇ ಸರ್ಕಾರ ಕಳೆದ ವಾರ ಅಂತರ ಸಚಿವಾಲಯದ ಸಮಿತಿಯನ್ನು ರಚಿಸಿ, ಲಸಿಕೆ ತಯಾರಕರು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನೇಕ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಕೇಳಿಕೊಂಡಿದೆ.

“ಸರ್ಕಾರವು ಕೆಲವು ಸಣ್ಣ ಉತ್ಪಾದಕರಿಂದ ಕೂಡಾ ವಿನಂತಿಗಳನ್ನು ಸ್ವೀಕರಿಸಿದೆ. ಕೆಲವು ಲಸಿಕೆ ಉತ್ಪಾದನಾ ಘಟಕಗಳನ್ನು ಕೋವಿಡ್ ಲಸಿಕೆ ಉತ್ಪಾದನಾ ಘಟಕಗಳಾಗಿ ಪರಿವರ್ತಿಸಲು ಕೆಲವು ರಾಜ್ಯ ಸರ್ಕಾರಗಳು ಕೋರಿವೆ ಆದರೆ ಇದಕ್ಕೆ ಜೈವಿಕ ಸುರಕ್ಷತೆಯ ಮಟ್ಟಗಳ ಉನ್ನತ ಮಾನದಂಡಗಳಾಗಿ ಪರಿವರ್ತನೆ ಅಗತ್ಯವಿರುತ್ತದೆ” ಎಂದು ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆಂದು TNIE ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾ ಸೋಂಕಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರೇ ಹೆಚ್ಚು: ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...