Homeಕರೋನಾ ತಲ್ಲಣಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ.

- Advertisement -
- Advertisement -

ದೇಶದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತಿದ್ದು ಈ ನಡುವೆ, ಕೋವಾಕ್ಸಿನ್ ತಯಾರಕರಾದ ಭಾರತ್ ಬಯೋಟೆಕ್‌‌ ಅನ್ನು ಉತ್ಪಾದನಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಕೇಂದ್ರವು ಕೇಳಿಕೊಂಡಿದೆ ಎಂದು TNIE ಪತ್ರಿಕೆಯು ವರದಿ ಮಾಡಿದೆ.

ಪ್ರಸ್ತುತ ಲಸಿಕೆಗಳ ಪೂರೈಕೆ ಸಮಸ್ಯೆಯನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರವು ಕೊರೊನಾಕ್ಕಾಗಿ ತಯಾರಿಸಿದ “ದೇಶೀಯ ಲಸಿಕೆಗಳ ಸಾಮರ್ಥ್ಯ ವೃದ್ಧಿಗೆ” ಅನುಕೂಲವಾಗುವಂತೆ ಒಂದು ಸಮಿತಿಯನ್ನು ರಚಿಸಿದೆ. ಭಾರತದಲ್ಲಿ ಇಲ್ಲಿಯವರೆಗೆ ನೀಡಲಾದ 5,33,24,811 ಡೋಸ್‌ಗಳಲ್ಲಿ, 50 ಲಕ್ಷಕ್ಕಿಂತ ಕಡಿಮೆ ಅಥವಾ 10% ಲಸಿಕೆ ಪ್ರಮಾಣವು ದೇಶದ ಮೊದಲ ದೇಶೀಯ ಕೋವಿಡ್‌ ಲಸಿಕೆಯಾದ ಕೊವಾಕ್ಸಿನ್ ಅನ್ನು ಒಳಗೊಂಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಕೊರೊನಾ ಲಸಿಕೆ ದಾಸ್ತಾನು!

ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಹೇಳುವಂತೆ ಭಾರತದಲ್ಲಿ ಅನುಮತಿ ಲಭಿಸಿದ ಎರಡು ಲಸಿಕೆಗಳ ಸುಮಾರು 8.7 ಕೋಟಿ ಡೋಸೇಜ್‌ಗಳನ್ನು ಇಲ್ಲಿಯವರೆಗೆ ರಾಜ್ಯಗಳಿಗೆ ಕಳುಹಿಸಲಾಗಿದೆ. ಆದರೆ ಈಗ ಉದ್ದೇಶಿತ ಫಲಾನುಭವಿಗಳ ಸಂಖ್ಯೆ ಈಗ 34 ಕೋಟಿಗೆ ತಲುಪಿರುವುದರಿಂದ, ಮುಂದಿನ ಕೆಲವು ತಿಂಗಳುಗಳಲ್ಲಿ ಆದ್ಯತೆಯ ಜನಸಂಖ್ಯೆಗಾಗಿ ದೇಶಕ್ಕೆ 64 ಕೋಟಿ ಪ್ರಮಾಣದ ಲಸಿಕೆಗಳು ಬೇಕಾಗುತ್ತವೆ.

“ಇದು ಕಠಿಣ ಕಾರ್ಯವಾಗಿದೆ ಮತ್ತು ಭಾರತ್ ಬಯೋಟೆಕ್ ತನ್ನ ಉತ್ಪಾದನೆಯನ್ನು ಹೆಚ್ಚಿಸದಿದ್ದರೆ, ದೊಡ್ಡ ಸವಾಲಾಗಿ ಪರಿಣಮಿಸುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಧಿಕೃತವಾಗಿ, ಭಾರತದಲ್ಲಿ ಕೋವಿಡ್‌ ಲಸಿಕೆಗಳ ಕೊರತೆಯಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಸಚಿವಾಲಯದ ಅನೇಕ ಅಧಿಕಾರಿಗಳ ಪ್ರಕಾರ, ಈಗಿನಂತೆ ಸೀರಮ್‌ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಉತ್ಪಾದನಾ ಸಾಮರ್ಥ್ಯ 5-6 ಕೋಟಿ ಆಗಿದ್ದರೆ, ಭಾರತ್ ಬಯೋಟೆಕ್‌‌ ಒಂದು ಕೋಟಿ ಮಿಲಿಯನ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. “ಆದಾಗ್ಯೂ, ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ” ಎಂದು ಮೂಲವನ್ನು ಉಲ್ಲೇಖಿಸಿ TNIE  ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

“ಆದ್ದರಿಂದ, ಕೊವಾಕ್ಸಿನ್‌ ಎರಡನೇ ಆಯ್ಕೆಯಾಗುದರ ಬದಲಿಗೆ ಮಹತ್ವದ ಪಾತ್ರ ವಹಿಸಬೇಕಾಗುತ್ತದೆ” ಎಂದು ಮೂಲವು ತಿಳಿಸಿದೆ. ಈ ಕಾರಣಕ್ಕಾಗಿಯೇ ಸರ್ಕಾರ ಕಳೆದ ವಾರ ಅಂತರ ಸಚಿವಾಲಯದ ಸಮಿತಿಯನ್ನು ರಚಿಸಿ, ಲಸಿಕೆ ತಯಾರಕರು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನೇಕ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಕೇಳಿಕೊಂಡಿದೆ.

“ಸರ್ಕಾರವು ಕೆಲವು ಸಣ್ಣ ಉತ್ಪಾದಕರಿಂದ ಕೂಡಾ ವಿನಂತಿಗಳನ್ನು ಸ್ವೀಕರಿಸಿದೆ. ಕೆಲವು ಲಸಿಕೆ ಉತ್ಪಾದನಾ ಘಟಕಗಳನ್ನು ಕೋವಿಡ್ ಲಸಿಕೆ ಉತ್ಪಾದನಾ ಘಟಕಗಳಾಗಿ ಪರಿವರ್ತಿಸಲು ಕೆಲವು ರಾಜ್ಯ ಸರ್ಕಾರಗಳು ಕೋರಿವೆ ಆದರೆ ಇದಕ್ಕೆ ಜೈವಿಕ ಸುರಕ್ಷತೆಯ ಮಟ್ಟಗಳ ಉನ್ನತ ಮಾನದಂಡಗಳಾಗಿ ಪರಿವರ್ತನೆ ಅಗತ್ಯವಿರುತ್ತದೆ” ಎಂದು ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆಂದು TNIE ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾ ಸೋಂಕಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರೇ ಹೆಚ್ಚು: ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...