Homeಮುಖಪುಟಲಸಿಕೆ ಸಂಗ್ರಹದ ಕೊರತೆ, ಅಲಭ್ಯತೆ: ನಾಳೆ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ 3ನೆ ಹಂತದ ಅಭಿಯಾನದ...

ಲಸಿಕೆ ಸಂಗ್ರಹದ ಕೊರತೆ, ಅಲಭ್ಯತೆ: ನಾಳೆ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ 3ನೆ ಹಂತದ ಅಭಿಯಾನದ ಆರಂಭವಿಲ್ಲ!

- Advertisement -
- Advertisement -

ಏಪ್ರಿಲ್ 28 ರಂದು, ಕೇಂದ್ರವು ತನ್ನ ಕೋ-ವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಮೂರನೇ ಹಂತದ ಲಸಿಕೆಗಾಗಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೋಂದಣಿಯನ್ನು ತೆರೆಯಿತು. ಈಗ ಒಂದರ ಹಿಂದೆ ಒಂದು ರಾಜ್ಯಗಳು ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಆರಂಭಿಸುವುದು ಕಷ್ಟ ಎಂದು ಘೋಷಿಸುತ್ತಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಾರಣವೆಂದರೆ ಲಸಿಕೆ ದಾಸ್ತಾನು ಸಂಗ್ರಹಿಸಲು ಆಗದಿರುವುದು ಮತ್ತು 18-45 ಗುಂಪಿಗೆ ವಿಸ್ತರಿಸುವ ಮೊದಲು ಈಗಾಗಲೇ ಮೊದಲ ಡೋಸ್ ಪಡೆದ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಬೇಕಿರುವುದು.

ತಡರಾತ್ರಿ ವಿಡಿಯೋ ಪೋಸ್ಟ್ ಮಾಡಿರುವ ಬಿಜೆಪಿ ಆಡಳಿತದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ತಮ್ಮ ರಾಜ್ಯವು ಮೇ 1 ರಂದು 18-45 ವಯೋಮಾನದವರಿಗೆ ಲಸಿಕೆ ಹಾಕುವುದನ್ನು ಪ್ರಾರಂಭಿಸುವುದಿಲ್ಲ. ಆದರೆ 45 ವರ್ಷಕ್ಕಿಂತ ಹೆಚ್ಚಿನ ವಯಸ್ಕರಿಗೆ ಲಸಿಕೆ ನೀಡುವುದನ್ನು ಮುಂದುವರೆಸಲಿದೆ ಎಂದು ಹೇಳಿದ್ದಾರೆ.

“ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳ ತಯಾರಕರನ್ನು ಸಂಪರ್ಕಿಸಿದಾಗ, ಮೇ 1 ರಂದು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನಮಗೆ ಡೋಸೇಜ್ ನೀಡಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಆದ್ದರಿಂದ ಯುವಜನರನ್ನು ಒಳಗೊಳ್ಳುವ ಅಭಿಯಾನ ಮೇ 1 ರಿಂದ ಪ್ರಾರಂಭವಾಗುವುದಿಲ್ಲ” ಎಂದು ತಿಳಿಸಿದ್ದಾರೆ.

ಕೋ-ವಿನ್ ಪ್ಲಾಟ್‌ಫಾರ್ಮಿನಲ್ಲಿ ಬುಧವಾರ ಮಧ್ಯರಾತ್ರಿಯ ಹೊತ್ತಿಗೆ, 1.33 ಕೋಟಿ ಹೊಸ ಸೈನ್‌ಇನ್‌ಗಳಿವೆ. ಅಂದರೆ ಅಷ್ಟು ಜನರು ಲಸಿಕೆ ನೋಂದಣಿಗೆ ಯತ್ನಿಸಿದ್ದಾರೆ.. ಈ ತಿಂಗಳ ಆರಂಭದಲ್ಲಿ, ಕೇಂದ್ರವು ಇಡೀ ವಯಸ್ಕ ಜನಸಂಖ್ಯೆಗೆ ಲಸಿಕೆ ತೆರೆಯುವುದಾಗಿ ಘೋಷಿಸಿತ್ತು ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಕೋವಿಶೀಲ್ಡ್) ಮತ್ತು ಭಾರತ್ ಬಯೋಟೆಕ್ (ಕೊವಾಕ್ಸಿನ್) ತಮ್ಮ ಹೊಸ ಶೇ.50 ರಷ್ಟು ಲಸಿಕೆಗಳನ್ನು ನೇರವಾಗಿ ರಾಜ್ಯಗಳು, ಖಾಸಗಿ ಆಸ್ಪತ್ರೆಗಳು ಮತ್ತು ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡಲು ಅವಕಾಶ ನೀಡಿತು.

ಮೇ 3 ರ ಸುಮಾರಿಗೆ ಮಧ್ಯಪ್ರದೇಶವು ಲಸಿಕೆ ಪ್ರಮಾಣವನ್ನು ಪಡೆಯಬೇಕೆಂದು ಆಶಿಸುತ್ತಿದೆ ಎಂದು ಚೌಹಾಣ್ ಹೇಳಿದರು. “ಅದರ ನಂತರ ನಾವು ಯುವಜನರಿಗೆ ಲಸಿಕೆ ನೀಡುವ ಅಭಿಯಾನದ ಚಾಲನೆಗೆ ಅಂತಿಮ ಆಕಾರವನ್ನು ನೀಡುತ್ತೇವೆ. ತಾಳ್ಮೆಯಿಂದಿರಿ ಮತ್ತು ಭಯಪಡುವ ಅಗತ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ. ರಾಜ್ಯವು ಈಗಾಗಲೇ ಸೀರಮ್ ಸಂಸ್ಥೆ ಮತ್ತು ಭಾರತ್ ಬಯೋಟೆಕ್‌ಗಳಿಗೆ ಆರ್ಡರ್ ಸಲ್ಲಿಸಿದೆ.

ಎರಡನೇ ಡೋಸ್‌ಗೆ ಅರ್ಹರಾದವರಿಗೆ ರಾಜ್ಯ ಆದ್ಯತೆ ನೀಡಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಹೇಳಿದ್ದಾರೆ, “ಇದಕ್ಕಾಗಿ ವ್ಯಾಕ್ಸಿನೇಷನ್ ಕೇಂದ್ರಗಳಿಗೆ ಧಾವಿಸುವ ಅಗತ್ಯವಿಲ್ಲ. ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಅನ್ನು 6-8 ವಾರಗಳಲ್ಲಿ ಮತ್ತು ಕೋವಾಕ್ಸಿನ್ ಅನ್ನು 4-6 ವಾರಗಳಲ್ಲಿ ತೆಗೆದುಕೊಳ್ಳಬೇಕು. ಎರಡನೇ ಡೋಸ್ ತೆಗೆದುಕೊಳ್ಳುವವರಿಗೆ ಆದ್ಯತೆ ನೀಡಿದ ನಂತರವೇ ಮೊದಲ ಡೋಸ್‌ನ ಸ್ಲಾಟ್ ಅನ್ನು ಆನ್‌ಲೈನ್ ಬುಕಿಂಗ್‌ಗೆ ಅನುಮತಿಸಲಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಕೋವಿಡ್ ಲಸಿಕೆ: ರಾಜ್ಯಗಳಿಗೆ ಸಹಾಯ ಮಾಡುವುದು ಕೇಂದ್ರದ ಮೂಲಭೂತ ಕರ್ತವ್ಯ – ಇದು ಕಂಪನಿಗಳು ಅತಿಹೆಚ್ಚು ಲಾಭ ಮಾಡುವ ಸಮಯವಲ್ಲ

ದೆಹಲಿ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ಕೂಡ ಮೇ 1 ರಂದು ಯುವಕರಿಗೆ ಲಸಿಕಾ ಅಭಿಯಾನ ಪ್ರಾರಂಭಿಸಲು ಸಾಧ್ಯವಾಗುವುದಿಲ್ಲ ಎಂದು ಸೂಚಿಸಿವೆ.

ಎರಡನೇ ಡೋಸ್‌ಗೆ ಆದ್ಯತೆ

ಭೀತಿ ಮತ್ತು ಅನಿಶ್ಚಿತತೆಯನ್ನು ತಪ್ಪಿಸಲು, ಬಿಜೆಪಿ ಮತ್ತು ಬಿಜೆಪಿಯೇತರ ಆಡಳಿತದ ಹಲವಾರು ರಾಜ್ಯಗಳು 18-45 ವಯೋಮಾನದವರಿಗೆ ವ್ಯಾಕ್ಸಿನೇಷನ್ ಮೇ 1 ರಿಂದ ಪ್ರಾರಂಭವಾಗುವುದಿಲ್ಲ ಎಂದು ಜನರಿಗೆ ಮಾಹಿತಿ ನೀಡಲು ಆರಂಭಿಸಿವೆ. ಲಸಿಕೆ ತಯಾರಕರಿಂದ ಹೆಚ್ಚಿನ ಪ್ರಮಾಣವನ್ನು ಸಂಗ್ರಹಿಸಲು ಯಾವುದೇ ರಾಜ್ಯಗಳಿಗೆ ಸಾಧ್ಯವಾಗಿಲ್ಲ. ಈಗ ಉಳಿದಿರುವ ಲಸಿಕೆ ಸಂಗ್ರಹದಲ್ಲಿ, ಮೊದಲ ಡೋಸ್ ಪಡೆದ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡುವುದು ರಾಜ್ಯಗಳ ಆದ್ಯತೆಯಾಗಿದೆ.

ಸೀರಮ್ ಸಂಸ್ಥೆ ಮಹಾರಾಷ್ಟ್ರಕ್ಕೆ 3 ಲಕ್ಷ ಡೋಸ್ ನೀಡಲು ಒಪ್ಪಿಗೆ ಸೂಚಿಸಿದೆ. ಆರೋಗ್ಯ ಸಚಿವ ರಾಜೇಶ್ ಟೊಪೆ, ರಾಜ್ಯವು ಇಷ್ಟು ಸಣ್ಣ ದಾಸ್ತಾನು ಮೂಲಕ ಸಾಮೂಹಿಕ ಲಸಿಕಾ ಅಭಿಯಾನ ಪ್ರಾರಂಭಿಸುವುದಿಲ್ಲ. “18-44 ವರ್ಷ ವಯಸ್ಸಿನವರಿಗೆ ಮುಂದಿನ ಹಂತದ ವ್ಯಾಕ್ಸಿನೇಷನ್ ಪ್ರಾರಂಭಿಸಲು ನಾವು ಕನಿಷ್ಠ 25-30 ಲಕ್ಷಗಳನ್ನು ಹೊಂದಿರಬೇಕು” ಎಂದು ಅವರು ಹೇಳಿದರು.

ರಾಷ್ಟ್ರದ ರಾಜಧಾನಿ ದೆಹಲಿಯ ರಾಜ್ಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು, ರಾಜ್ಯವು ಸಾಕಷ್ಟು ಲಸಿಕೆಗಳನ್ನು ಹೊಂದಿಲ್ಲ ಎಂದು ಹೇಳಿದರು. “ನಾವು ಆಯಾ ಕಂಪನಿಗಳಿಂದ ಲಸಿಕೆಗಳನ್ನು ಪೂರೈಸಲು ವಿನಂತಿಸಿದ್ದೇವೆ. ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದ್ದರೂ, ಅಭಿಯಾನ ಪ್ರಾರಂಭವಾಗಲು ಲಸಿಕೆಗಳ ಲಭ್ಯತೆ ಅನಿವಾರ್ಯವಾಗಿದೆ. ನಾವು ಲಸಿಕೆಗಳನ್ನು ಸ್ವೀಕರಿಸಿದ ತಕ್ಷಣ, ಒಂದೆರಡು ದಿನಗಳಲ್ಲಿ ವಿವರ ತಿಳಿಸುತ್ತೇವೆ. ಕಂಪೆನಿಗಳಿಂದ ನಾವು ಇನ್ನೂ ವೇಳಾಪಟ್ಟಿಯನ್ನು ಸ್ವೀಕರಿಸಿಲ್ಲ, ಇದರಲ್ಲಿ ಯಾವ ದಿನಾಂಕಗಳಲ್ಲಿ ಎಷ್ಟು ಬಾಟಲುಗಳು ತಲುಪುತ್ತವೆ ಗೊತ್ತಿಲ್ಲ” ಎಂದು ಜೈನ್ ಹೇಳಿದರು.

ಬಿಜೆಪಿ ಆಡಳಿತದ ಗುಜರಾತ್‌ನ ಮುಖ್ಯಮಂತ್ರಿ ವಿಜಯ್ ರೂಪಾನಿ, ಅಗತ್ಯವಾದ ಸ್ಟಾಕ್ ಅನ್ನು ಪೂರೈಸದ ಕಾರಣ 18 ವರ್ಷಕ್ಕಿಂತ ಹೆಚ್ಚಿನವರಿಗೆ ಲಸಿಕೆ ತೆರೆಯಲು ತಮ್ಮ ರಾಜ್ಯಕ್ಕೆ ಸಾಧ್ಯವಾಗದಿರಬಹುದು ಎಂದು ಹೇಳಿದರು. ರಾಜ್ಯವು 2.5 ಕೋಟಿ ಡೋಸ್‌ಗಳನ್ನು ಆದೇಶಿಸಿದೆ. ಮೇ ತಿಂಗಳ ಮೊದಲ 15 ದಿನಗಳಲ್ಲಿ ಆರ್ಡರ್‌ನ ಒಂದು ಭಾಗವಾದರೂ ಲಭ್ಯವಾಗಲಿದೆ ಎಂದು ಅವರು ನಿರೀಕ್ಷಿಸಿದ್ದಾರೆ. “ನಾವು ಲಸಿಕೆ ಪ್ರಮಾಣವನ್ನು ಸ್ವೀಕರಿಸುತ್ತೇವೆ ಮತ್ತು 15 ದಿನಗಳಲ್ಲಿ ನಾವು ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ (18 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ)” ಎಂದು ಅವರು ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಎಲ್ಲರಿಗೂ ವ್ಯಾಕ್ಸಿನೇಷನ್ ಪ್ರಾರಂಭಿಸುವುದು ಪಂಜಾಬ್‌ನಲ್ಲೂ ಅನಿಶ್ಚಿತವಾಗಿದೆ. “ಕೋವಾಕ್ಸಿನ್ ಆದೇಶಕ್ಕಾಗಿ ನಾವು ಇನ್ನೂ ಭಾರತ್ ಬಯೋಟೆಕ್ ಅನ್ನು ಸಂಪರ್ಕಿಸಿರಲಿಲ್ಲ. ಏಕೆಂದರೆ ಅವುಗಳ ಬೆಲೆಗಳು ಹೆಚ್ಚಿನ ಪ್ರಮಾಣದಲ್ಲಿತ್ತು (ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ 600 ರೂ.) ಆದರೆ ಇಂದು ಅವರು ಅದನ್ನು ರಾಜ್ಯಗಳಿಗೆ ಡೋಸ್‌ಗೆ 400 ರೂ.ಗೆ ಇಳಿಸಿದ್ದಾರೆ, ಆದ್ದರಿಂದ ನಾವು ಈಗ ಅದನ್ನು ಪರಿಗಣಿಸುತ್ತೇವೆ” ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಹುಸೇನ್ ಲಾಲ್ ಹೇಳಿದರು. ಲಸಿಕೆ ಪೂರೈಕೆಯ ಬಗ್ಗೆ ಯಾವುದೇ ದೃಢೀಕರಣವಿಲ್ಲದ ಕಾರಣ 18ಕ್ಕೆ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಯೋಜನೆಯನ್ನು ರಾಜ್ಯ ಇನ್ನೂ ಅಂತಿಮಗೊಳಿಸಿಲ್ಲ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿಯೂ ಇದೇ ಪರಿಸ್ಥಿತಿ ಇದ್ದು, ಸಾಕಷ್ಟು ಲಸಿಕೆ ಲಭ್ಯತೆ ಇಲ್ಲದ ಕಾರಣದಿಂದ ನಂತರವೇ 18 ವ‍ರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಆರಂಭವಾಗಲಿದೆ ಎನ್ನಲಾಗಿದೆ.


ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...