Homeಮುಖಪುಟಲಸಿಕೆ ಸಂಗ್ರಹದ ಕೊರತೆ, ಅಲಭ್ಯತೆ: ನಾಳೆ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ 3ನೆ ಹಂತದ ಅಭಿಯಾನದ...

ಲಸಿಕೆ ಸಂಗ್ರಹದ ಕೊರತೆ, ಅಲಭ್ಯತೆ: ನಾಳೆ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ 3ನೆ ಹಂತದ ಅಭಿಯಾನದ ಆರಂಭವಿಲ್ಲ!

- Advertisement -
- Advertisement -

ಏಪ್ರಿಲ್ 28 ರಂದು, ಕೇಂದ್ರವು ತನ್ನ ಕೋ-ವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಮೂರನೇ ಹಂತದ ಲಸಿಕೆಗಾಗಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೋಂದಣಿಯನ್ನು ತೆರೆಯಿತು. ಈಗ ಒಂದರ ಹಿಂದೆ ಒಂದು ರಾಜ್ಯಗಳು ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಆರಂಭಿಸುವುದು ಕಷ್ಟ ಎಂದು ಘೋಷಿಸುತ್ತಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಾರಣವೆಂದರೆ ಲಸಿಕೆ ದಾಸ್ತಾನು ಸಂಗ್ರಹಿಸಲು ಆಗದಿರುವುದು ಮತ್ತು 18-45 ಗುಂಪಿಗೆ ವಿಸ್ತರಿಸುವ ಮೊದಲು ಈಗಾಗಲೇ ಮೊದಲ ಡೋಸ್ ಪಡೆದ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಬೇಕಿರುವುದು.

ತಡರಾತ್ರಿ ವಿಡಿಯೋ ಪೋಸ್ಟ್ ಮಾಡಿರುವ ಬಿಜೆಪಿ ಆಡಳಿತದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ತಮ್ಮ ರಾಜ್ಯವು ಮೇ 1 ರಂದು 18-45 ವಯೋಮಾನದವರಿಗೆ ಲಸಿಕೆ ಹಾಕುವುದನ್ನು ಪ್ರಾರಂಭಿಸುವುದಿಲ್ಲ. ಆದರೆ 45 ವರ್ಷಕ್ಕಿಂತ ಹೆಚ್ಚಿನ ವಯಸ್ಕರಿಗೆ ಲಸಿಕೆ ನೀಡುವುದನ್ನು ಮುಂದುವರೆಸಲಿದೆ ಎಂದು ಹೇಳಿದ್ದಾರೆ.

“ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳ ತಯಾರಕರನ್ನು ಸಂಪರ್ಕಿಸಿದಾಗ, ಮೇ 1 ರಂದು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನಮಗೆ ಡೋಸೇಜ್ ನೀಡಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಆದ್ದರಿಂದ ಯುವಜನರನ್ನು ಒಳಗೊಳ್ಳುವ ಅಭಿಯಾನ ಮೇ 1 ರಿಂದ ಪ್ರಾರಂಭವಾಗುವುದಿಲ್ಲ” ಎಂದು ತಿಳಿಸಿದ್ದಾರೆ.

ಕೋ-ವಿನ್ ಪ್ಲಾಟ್‌ಫಾರ್ಮಿನಲ್ಲಿ ಬುಧವಾರ ಮಧ್ಯರಾತ್ರಿಯ ಹೊತ್ತಿಗೆ, 1.33 ಕೋಟಿ ಹೊಸ ಸೈನ್‌ಇನ್‌ಗಳಿವೆ. ಅಂದರೆ ಅಷ್ಟು ಜನರು ಲಸಿಕೆ ನೋಂದಣಿಗೆ ಯತ್ನಿಸಿದ್ದಾರೆ.. ಈ ತಿಂಗಳ ಆರಂಭದಲ್ಲಿ, ಕೇಂದ್ರವು ಇಡೀ ವಯಸ್ಕ ಜನಸಂಖ್ಯೆಗೆ ಲಸಿಕೆ ತೆರೆಯುವುದಾಗಿ ಘೋಷಿಸಿತ್ತು ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಕೋವಿಶೀಲ್ಡ್) ಮತ್ತು ಭಾರತ್ ಬಯೋಟೆಕ್ (ಕೊವಾಕ್ಸಿನ್) ತಮ್ಮ ಹೊಸ ಶೇ.50 ರಷ್ಟು ಲಸಿಕೆಗಳನ್ನು ನೇರವಾಗಿ ರಾಜ್ಯಗಳು, ಖಾಸಗಿ ಆಸ್ಪತ್ರೆಗಳು ಮತ್ತು ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡಲು ಅವಕಾಶ ನೀಡಿತು.

ಮೇ 3 ರ ಸುಮಾರಿಗೆ ಮಧ್ಯಪ್ರದೇಶವು ಲಸಿಕೆ ಪ್ರಮಾಣವನ್ನು ಪಡೆಯಬೇಕೆಂದು ಆಶಿಸುತ್ತಿದೆ ಎಂದು ಚೌಹಾಣ್ ಹೇಳಿದರು. “ಅದರ ನಂತರ ನಾವು ಯುವಜನರಿಗೆ ಲಸಿಕೆ ನೀಡುವ ಅಭಿಯಾನದ ಚಾಲನೆಗೆ ಅಂತಿಮ ಆಕಾರವನ್ನು ನೀಡುತ್ತೇವೆ. ತಾಳ್ಮೆಯಿಂದಿರಿ ಮತ್ತು ಭಯಪಡುವ ಅಗತ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ. ರಾಜ್ಯವು ಈಗಾಗಲೇ ಸೀರಮ್ ಸಂಸ್ಥೆ ಮತ್ತು ಭಾರತ್ ಬಯೋಟೆಕ್‌ಗಳಿಗೆ ಆರ್ಡರ್ ಸಲ್ಲಿಸಿದೆ.

ಎರಡನೇ ಡೋಸ್‌ಗೆ ಅರ್ಹರಾದವರಿಗೆ ರಾಜ್ಯ ಆದ್ಯತೆ ನೀಡಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಹೇಳಿದ್ದಾರೆ, “ಇದಕ್ಕಾಗಿ ವ್ಯಾಕ್ಸಿನೇಷನ್ ಕೇಂದ್ರಗಳಿಗೆ ಧಾವಿಸುವ ಅಗತ್ಯವಿಲ್ಲ. ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಅನ್ನು 6-8 ವಾರಗಳಲ್ಲಿ ಮತ್ತು ಕೋವಾಕ್ಸಿನ್ ಅನ್ನು 4-6 ವಾರಗಳಲ್ಲಿ ತೆಗೆದುಕೊಳ್ಳಬೇಕು. ಎರಡನೇ ಡೋಸ್ ತೆಗೆದುಕೊಳ್ಳುವವರಿಗೆ ಆದ್ಯತೆ ನೀಡಿದ ನಂತರವೇ ಮೊದಲ ಡೋಸ್‌ನ ಸ್ಲಾಟ್ ಅನ್ನು ಆನ್‌ಲೈನ್ ಬುಕಿಂಗ್‌ಗೆ ಅನುಮತಿಸಲಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಕೋವಿಡ್ ಲಸಿಕೆ: ರಾಜ್ಯಗಳಿಗೆ ಸಹಾಯ ಮಾಡುವುದು ಕೇಂದ್ರದ ಮೂಲಭೂತ ಕರ್ತವ್ಯ – ಇದು ಕಂಪನಿಗಳು ಅತಿಹೆಚ್ಚು ಲಾಭ ಮಾಡುವ ಸಮಯವಲ್ಲ

ದೆಹಲಿ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ಕೂಡ ಮೇ 1 ರಂದು ಯುವಕರಿಗೆ ಲಸಿಕಾ ಅಭಿಯಾನ ಪ್ರಾರಂಭಿಸಲು ಸಾಧ್ಯವಾಗುವುದಿಲ್ಲ ಎಂದು ಸೂಚಿಸಿವೆ.

ಎರಡನೇ ಡೋಸ್‌ಗೆ ಆದ್ಯತೆ

ಭೀತಿ ಮತ್ತು ಅನಿಶ್ಚಿತತೆಯನ್ನು ತಪ್ಪಿಸಲು, ಬಿಜೆಪಿ ಮತ್ತು ಬಿಜೆಪಿಯೇತರ ಆಡಳಿತದ ಹಲವಾರು ರಾಜ್ಯಗಳು 18-45 ವಯೋಮಾನದವರಿಗೆ ವ್ಯಾಕ್ಸಿನೇಷನ್ ಮೇ 1 ರಿಂದ ಪ್ರಾರಂಭವಾಗುವುದಿಲ್ಲ ಎಂದು ಜನರಿಗೆ ಮಾಹಿತಿ ನೀಡಲು ಆರಂಭಿಸಿವೆ. ಲಸಿಕೆ ತಯಾರಕರಿಂದ ಹೆಚ್ಚಿನ ಪ್ರಮಾಣವನ್ನು ಸಂಗ್ರಹಿಸಲು ಯಾವುದೇ ರಾಜ್ಯಗಳಿಗೆ ಸಾಧ್ಯವಾಗಿಲ್ಲ. ಈಗ ಉಳಿದಿರುವ ಲಸಿಕೆ ಸಂಗ್ರಹದಲ್ಲಿ, ಮೊದಲ ಡೋಸ್ ಪಡೆದ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡುವುದು ರಾಜ್ಯಗಳ ಆದ್ಯತೆಯಾಗಿದೆ.

ಸೀರಮ್ ಸಂಸ್ಥೆ ಮಹಾರಾಷ್ಟ್ರಕ್ಕೆ 3 ಲಕ್ಷ ಡೋಸ್ ನೀಡಲು ಒಪ್ಪಿಗೆ ಸೂಚಿಸಿದೆ. ಆರೋಗ್ಯ ಸಚಿವ ರಾಜೇಶ್ ಟೊಪೆ, ರಾಜ್ಯವು ಇಷ್ಟು ಸಣ್ಣ ದಾಸ್ತಾನು ಮೂಲಕ ಸಾಮೂಹಿಕ ಲಸಿಕಾ ಅಭಿಯಾನ ಪ್ರಾರಂಭಿಸುವುದಿಲ್ಲ. “18-44 ವರ್ಷ ವಯಸ್ಸಿನವರಿಗೆ ಮುಂದಿನ ಹಂತದ ವ್ಯಾಕ್ಸಿನೇಷನ್ ಪ್ರಾರಂಭಿಸಲು ನಾವು ಕನಿಷ್ಠ 25-30 ಲಕ್ಷಗಳನ್ನು ಹೊಂದಿರಬೇಕು” ಎಂದು ಅವರು ಹೇಳಿದರು.

ರಾಷ್ಟ್ರದ ರಾಜಧಾನಿ ದೆಹಲಿಯ ರಾಜ್ಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು, ರಾಜ್ಯವು ಸಾಕಷ್ಟು ಲಸಿಕೆಗಳನ್ನು ಹೊಂದಿಲ್ಲ ಎಂದು ಹೇಳಿದರು. “ನಾವು ಆಯಾ ಕಂಪನಿಗಳಿಂದ ಲಸಿಕೆಗಳನ್ನು ಪೂರೈಸಲು ವಿನಂತಿಸಿದ್ದೇವೆ. ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದ್ದರೂ, ಅಭಿಯಾನ ಪ್ರಾರಂಭವಾಗಲು ಲಸಿಕೆಗಳ ಲಭ್ಯತೆ ಅನಿವಾರ್ಯವಾಗಿದೆ. ನಾವು ಲಸಿಕೆಗಳನ್ನು ಸ್ವೀಕರಿಸಿದ ತಕ್ಷಣ, ಒಂದೆರಡು ದಿನಗಳಲ್ಲಿ ವಿವರ ತಿಳಿಸುತ್ತೇವೆ. ಕಂಪೆನಿಗಳಿಂದ ನಾವು ಇನ್ನೂ ವೇಳಾಪಟ್ಟಿಯನ್ನು ಸ್ವೀಕರಿಸಿಲ್ಲ, ಇದರಲ್ಲಿ ಯಾವ ದಿನಾಂಕಗಳಲ್ಲಿ ಎಷ್ಟು ಬಾಟಲುಗಳು ತಲುಪುತ್ತವೆ ಗೊತ್ತಿಲ್ಲ” ಎಂದು ಜೈನ್ ಹೇಳಿದರು.

ಬಿಜೆಪಿ ಆಡಳಿತದ ಗುಜರಾತ್‌ನ ಮುಖ್ಯಮಂತ್ರಿ ವಿಜಯ್ ರೂಪಾನಿ, ಅಗತ್ಯವಾದ ಸ್ಟಾಕ್ ಅನ್ನು ಪೂರೈಸದ ಕಾರಣ 18 ವರ್ಷಕ್ಕಿಂತ ಹೆಚ್ಚಿನವರಿಗೆ ಲಸಿಕೆ ತೆರೆಯಲು ತಮ್ಮ ರಾಜ್ಯಕ್ಕೆ ಸಾಧ್ಯವಾಗದಿರಬಹುದು ಎಂದು ಹೇಳಿದರು. ರಾಜ್ಯವು 2.5 ಕೋಟಿ ಡೋಸ್‌ಗಳನ್ನು ಆದೇಶಿಸಿದೆ. ಮೇ ತಿಂಗಳ ಮೊದಲ 15 ದಿನಗಳಲ್ಲಿ ಆರ್ಡರ್‌ನ ಒಂದು ಭಾಗವಾದರೂ ಲಭ್ಯವಾಗಲಿದೆ ಎಂದು ಅವರು ನಿರೀಕ್ಷಿಸಿದ್ದಾರೆ. “ನಾವು ಲಸಿಕೆ ಪ್ರಮಾಣವನ್ನು ಸ್ವೀಕರಿಸುತ್ತೇವೆ ಮತ್ತು 15 ದಿನಗಳಲ್ಲಿ ನಾವು ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ (18 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ)” ಎಂದು ಅವರು ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಎಲ್ಲರಿಗೂ ವ್ಯಾಕ್ಸಿನೇಷನ್ ಪ್ರಾರಂಭಿಸುವುದು ಪಂಜಾಬ್‌ನಲ್ಲೂ ಅನಿಶ್ಚಿತವಾಗಿದೆ. “ಕೋವಾಕ್ಸಿನ್ ಆದೇಶಕ್ಕಾಗಿ ನಾವು ಇನ್ನೂ ಭಾರತ್ ಬಯೋಟೆಕ್ ಅನ್ನು ಸಂಪರ್ಕಿಸಿರಲಿಲ್ಲ. ಏಕೆಂದರೆ ಅವುಗಳ ಬೆಲೆಗಳು ಹೆಚ್ಚಿನ ಪ್ರಮಾಣದಲ್ಲಿತ್ತು (ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್‌ಗೆ 600 ರೂ.) ಆದರೆ ಇಂದು ಅವರು ಅದನ್ನು ರಾಜ್ಯಗಳಿಗೆ ಡೋಸ್‌ಗೆ 400 ರೂ.ಗೆ ಇಳಿಸಿದ್ದಾರೆ, ಆದ್ದರಿಂದ ನಾವು ಈಗ ಅದನ್ನು ಪರಿಗಣಿಸುತ್ತೇವೆ” ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಹುಸೇನ್ ಲಾಲ್ ಹೇಳಿದರು. ಲಸಿಕೆ ಪೂರೈಕೆಯ ಬಗ್ಗೆ ಯಾವುದೇ ದೃಢೀಕರಣವಿಲ್ಲದ ಕಾರಣ 18ಕ್ಕೆ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಯೋಜನೆಯನ್ನು ರಾಜ್ಯ ಇನ್ನೂ ಅಂತಿಮಗೊಳಿಸಿಲ್ಲ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿಯೂ ಇದೇ ಪರಿಸ್ಥಿತಿ ಇದ್ದು, ಸಾಕಷ್ಟು ಲಸಿಕೆ ಲಭ್ಯತೆ ಇಲ್ಲದ ಕಾರಣದಿಂದ ನಂತರವೇ 18 ವ‍ರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಆರಂಭವಾಗಲಿದೆ ಎನ್ನಲಾಗಿದೆ.


ಇದನ್ನೂ ಓದಿ: ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...