Homeಕರೋನಾ ತಲ್ಲಣಮಕ್ಕಳಿಗೂ ಬರಲಿದೆ ವ್ಯಾಕ್ಸಿನ್: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಒಕ್ಕೂಟ ಸರ್ಕಾರ

ಮಕ್ಕಳಿಗೂ ಬರಲಿದೆ ವ್ಯಾಕ್ಸಿನ್: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಒಕ್ಕೂಟ ಸರ್ಕಾರ

- Advertisement -
- Advertisement -

18 ವರ್ಷ ಮೇಲ್ಪಟ್ಟ ನಾಗರಿಕರಿಗೆಲ್ಲರಿಗೂ ವ್ಯಾಕ್ಸಿನ್ ನೀಡುವ ಪ್ರಕ್ರಿಯೆ ದೇಶದಲ್ಲಿ ನಡೆಯುತ್ತಿದೆ. ಇದುವರೆಗೆ ದೇಶದಲ್ಲಿ 20 ಕೋಟಿಗೂ ಅಧಿಕ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ವಯಸ್ಕರಿಗೆಲ್ಲರಿಗೂ ಈ ವರ್ಷಾಂತ್ಯದ ಒಳಗೆ ವ್ಯಾಕ್ಸಿನ್ ನೀಡುವ ಗುರಿಯನ್ನು ಸರ್ಕಾರಗಳು ಇಟ್ಟುಕೊಂಡಿವೆ. ಕೊರೋನಾ ಮೂರನೇ ಅಲೆಯು ಶೀಘ್ರದಲ್ಲಿಯೇ ದೇಶದಲ್ಲಿ ಕಾಣಿಸಿಕೊಳ್ಳಲಿದ್ದು ಮಕ್ಕಳಿಗೆ ಹೆಚ್ಚಿನ ಅಪಾಯವಿದೆ ಎಂದು ತಜ್ಞರು ಸತತವಾಗಿ ಎಚ್ಚರಿಕೆಯನ್ನು ನೀಡುತ್ತ ಬಂದಿದ್ದಾರೆ. ಜೊತೆಗೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆ ಕಾಲೇಜುಗಳನ್ನು ತೆರೆಯುವ ಕುರಿತು ಚರ್ಚೆಗಳು ಆರಂಭವಾಗಿದೆ. ಇದೆಲ್ಲದರ ನಡುವೆ ಕೊರೋನಾ 3 ನೇ ಅಲೆಯ ಅಪಾಯದಿಂದ ಮಕ್ಕಳಿಗೆ ರಕ್ಷಣೆ ಹೇಗೆ ಎಂಬ ಚಿಂತೆ ಪೋಷಕರಲ್ಲಿ ಕಾಡುತ್ತಿದೆ.

ರಾಜ್ಯ ಸರ್ಕಾರಗಳು ಮಕ್ಕಳಿಗೆ ಕೊರೋನಾ ಸೋಂಕಿನ ಚಿಕಿತ್ಸೆ ನೀಡಲು ವಿಶೇಷ ಆಸ್ಪತ್ರೆಗಳನ್ನು ಸಿದ್ಧಪಡಿಸುತ್ತಿವೆ. ಚಿಕಿತ್ಸೆ, ಆಸ್ಪತ್ರೆ, ಬೆಡ್‌ಗಳ ನಡುವೆ ಮಕ್ಕಳ ವ್ಯಾಕ್ಸಿನ್ ಯಾವಾಗ ಬರುತ್ತದೆ? ಅಥವಾ ಮಕ್ಕಳಿಗೆ ವ್ಯಾಕ್ಸಿನ್‌ಗಳನ್ನು ನೀಡಲಾಗುವುದಿಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದೆ. ಪೋಷಕರ ಆತಂಕಕ್ಕೆ ಉತ್ತರ ಸಿಕ್ಕಿದ್ದು ಕೆಲವೇ ದಿನಗಳಲ್ಲಿ ಮಕ್ಕಳ ವ್ಯಾಕ್ಸಿನ್ ದೇಶದಲ್ಲಿ ಲಭ್ಯವಾಗಲಿದೆ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಭಾರತ ಬಯೋಟೆಕ್ ಕಂಪನಿ ಸಿದ್ಧಪಡಿಸಿರುವ ಝೈಡೂಸ್ ಕ್ಯಾಂಡಿಲಾ ವ್ಯಾಕ್ಸಿನ್‌ನ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ ಕೊನೆಗೊಂಡಿದ್ದು ಸದ್ಯದಲ್ಲಿಯೇ 12-18 ವಯಸ್ಸಿನ ಮಕ್ಕಳಿಗೆ ವ್ಯಾಕ್ಸಿನ್ ಲಭ್ಯವಾಗಲಿದೆ. ಕೆಲವು ಕಾನೂನಿನ ಪ್ರಕ್ರಿಯೆಗಳು ಅಂತ್ಯವಾದ ನಂತದ ದೇಶದಲ್ಲಿ ಮಕ್ಕಳಿಗೂ ವ್ಯಾಕ್ಸಿನ್ ಲಭ್ಯವಾಗಲಿದೆ ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಜೂನ್ ಆರಂಭದಲ್ಲಿ ತಲೆ ದೋರಿದ ವ್ಯಾಕ್ಸಿನ್ ಕೊರತೆ, ಕೇಂದ್ರ ಸರ್ಕಾರದ ವ್ಯಾಕ್ಸಿನೇಶನ್ ನೀತಿ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮಕ್ಕಳಿಗೆ ಯಾವಾಗ ವ್ಯಾಕ್ಸಿನ್ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರವನ್ನು ಕೇಳಿತ್ತು. ಸುಪ್ರೀಂ ಕೋರ್ಟ್ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸರ್ಕಾರ ಕೊರೋನಾ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗೆ ಅಪಾಯವಿರುವುದನ್ನು ಮನಗಂಡು 18 ವರ್ಷದೊಳಗಿನ ವಯೋವರ್ಗಕ್ಕೆ ವ್ಯಾಕ್ಸಿನ್ ನೀಡುವ ಸಿದ್ಧತೆಗಳು ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡೆವಿಟ್ ಸಲ್ಲಿಸಿದೆ.

ದೇಶದಲ್ಲಿ ವ್ಯಾಕ್ಸಿನ್ ಕೊರತೆ ಇಲ್ಲವೆಂದು ಹೇಳಿರುವ ಕೇಂದ್ರ ಸರ್ಕಾರ ಮೇ 12 ರಂದು ಡ್ರಗ್‌ ಕಂಟ್ರೋಲರ್ ಜನರಲ್ ಅವರು ಭಾರತ್ ಬಯೋಟೆಕ್ ಸಂಸ್ಥೆಯ ಝೈಡೂಸ್ ಕ್ಯಾಂಡಿಲಾ ವ್ಯಾಕ್ಸಿನ್‌ನ ಕ್ಲಿನಿಕಲ್ ಟ್ರಯಲ್‌ಗೆ ಅನುಮತಿ ನೀಡಿದ್ದರು. 12-18 ವರ್ಷದ ಮಕ್ಕಳು ಸ್ವಯಂ ಪ್ರೇರಿತರಾಗಿ ವ್ಯಾಕ್ಸಿನ್ ಟ್ರಯಲ್‌ಗೆ ಒಳಗಾಗಿದ್ದು ಉತ್ತಮ ಫಲಿತಾಂಶ ಬಂದಿದೆ. ಈಗ 3 ನೇ ಹಂತದ ಟ್ರಯಲ್‌ಗಳು ಪೂರ್ಣಗೊಂಡಿದೆ ಎಂದು ಒಕ್ಕೂಟ ಸರ್ಕಾರ ತನ್ನ ಅಫಿಡೆವಿಟ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ದೇಶದ ವ್ಯಾಕ್ಸಿನ್ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದು ಮೇ ತಿಂಗಳಿಗಿಂತ ಜೂನ್ ಅವಧಿಯಲ್ಲಿ ವ್ಯಾಕ್ಸಿನ್ ಉತ್ಪಾದನೆ ದುಪ್ಪಟ್ಟಾಗಿದೆ. ಜುಲೈ ಆಗಸ್ಟ್‌ ಹೊತ್ತಿಗೆ ಈಗಿರುವ ವ್ಯಾಕ್ಸಿನ್‌ ಉತ್ಪಾದನೆಯ ಪ್ರಮಾಣದಲ್ಲಿ ಭಾರಿ ಹೆಚ್ಚಳವಾಗಲಿದೆ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸಿದೆ.


ಇದನ್ನೂ ಓದಿ : ಜಮ್ಮು ವಿಮಾನ ನಿಲ್ಧಾಣದಲ್ಲಿ ಸಣ್ಣ ಪ್ರಮಾಣದ ಸ್ಪೋಟ : ಡ್ರೋನ್ ದಾಳಿಯ ಸಾಧ್ಯತೆಯ ತನಿಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...