Homeಕರೋನಾ ತಲ್ಲಣಮಕ್ಕಳಿಗೂ ಬರಲಿದೆ ವ್ಯಾಕ್ಸಿನ್: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಒಕ್ಕೂಟ ಸರ್ಕಾರ

ಮಕ್ಕಳಿಗೂ ಬರಲಿದೆ ವ್ಯಾಕ್ಸಿನ್: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಒಕ್ಕೂಟ ಸರ್ಕಾರ

- Advertisement -
- Advertisement -

18 ವರ್ಷ ಮೇಲ್ಪಟ್ಟ ನಾಗರಿಕರಿಗೆಲ್ಲರಿಗೂ ವ್ಯಾಕ್ಸಿನ್ ನೀಡುವ ಪ್ರಕ್ರಿಯೆ ದೇಶದಲ್ಲಿ ನಡೆಯುತ್ತಿದೆ. ಇದುವರೆಗೆ ದೇಶದಲ್ಲಿ 20 ಕೋಟಿಗೂ ಅಧಿಕ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ವಯಸ್ಕರಿಗೆಲ್ಲರಿಗೂ ಈ ವರ್ಷಾಂತ್ಯದ ಒಳಗೆ ವ್ಯಾಕ್ಸಿನ್ ನೀಡುವ ಗುರಿಯನ್ನು ಸರ್ಕಾರಗಳು ಇಟ್ಟುಕೊಂಡಿವೆ. ಕೊರೋನಾ ಮೂರನೇ ಅಲೆಯು ಶೀಘ್ರದಲ್ಲಿಯೇ ದೇಶದಲ್ಲಿ ಕಾಣಿಸಿಕೊಳ್ಳಲಿದ್ದು ಮಕ್ಕಳಿಗೆ ಹೆಚ್ಚಿನ ಅಪಾಯವಿದೆ ಎಂದು ತಜ್ಞರು ಸತತವಾಗಿ ಎಚ್ಚರಿಕೆಯನ್ನು ನೀಡುತ್ತ ಬಂದಿದ್ದಾರೆ. ಜೊತೆಗೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆ ಕಾಲೇಜುಗಳನ್ನು ತೆರೆಯುವ ಕುರಿತು ಚರ್ಚೆಗಳು ಆರಂಭವಾಗಿದೆ. ಇದೆಲ್ಲದರ ನಡುವೆ ಕೊರೋನಾ 3 ನೇ ಅಲೆಯ ಅಪಾಯದಿಂದ ಮಕ್ಕಳಿಗೆ ರಕ್ಷಣೆ ಹೇಗೆ ಎಂಬ ಚಿಂತೆ ಪೋಷಕರಲ್ಲಿ ಕಾಡುತ್ತಿದೆ.

ರಾಜ್ಯ ಸರ್ಕಾರಗಳು ಮಕ್ಕಳಿಗೆ ಕೊರೋನಾ ಸೋಂಕಿನ ಚಿಕಿತ್ಸೆ ನೀಡಲು ವಿಶೇಷ ಆಸ್ಪತ್ರೆಗಳನ್ನು ಸಿದ್ಧಪಡಿಸುತ್ತಿವೆ. ಚಿಕಿತ್ಸೆ, ಆಸ್ಪತ್ರೆ, ಬೆಡ್‌ಗಳ ನಡುವೆ ಮಕ್ಕಳ ವ್ಯಾಕ್ಸಿನ್ ಯಾವಾಗ ಬರುತ್ತದೆ? ಅಥವಾ ಮಕ್ಕಳಿಗೆ ವ್ಯಾಕ್ಸಿನ್‌ಗಳನ್ನು ನೀಡಲಾಗುವುದಿಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದೆ. ಪೋಷಕರ ಆತಂಕಕ್ಕೆ ಉತ್ತರ ಸಿಕ್ಕಿದ್ದು ಕೆಲವೇ ದಿನಗಳಲ್ಲಿ ಮಕ್ಕಳ ವ್ಯಾಕ್ಸಿನ್ ದೇಶದಲ್ಲಿ ಲಭ್ಯವಾಗಲಿದೆ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಭಾರತ ಬಯೋಟೆಕ್ ಕಂಪನಿ ಸಿದ್ಧಪಡಿಸಿರುವ ಝೈಡೂಸ್ ಕ್ಯಾಂಡಿಲಾ ವ್ಯಾಕ್ಸಿನ್‌ನ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ ಕೊನೆಗೊಂಡಿದ್ದು ಸದ್ಯದಲ್ಲಿಯೇ 12-18 ವಯಸ್ಸಿನ ಮಕ್ಕಳಿಗೆ ವ್ಯಾಕ್ಸಿನ್ ಲಭ್ಯವಾಗಲಿದೆ. ಕೆಲವು ಕಾನೂನಿನ ಪ್ರಕ್ರಿಯೆಗಳು ಅಂತ್ಯವಾದ ನಂತದ ದೇಶದಲ್ಲಿ ಮಕ್ಕಳಿಗೂ ವ್ಯಾಕ್ಸಿನ್ ಲಭ್ಯವಾಗಲಿದೆ ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಜೂನ್ ಆರಂಭದಲ್ಲಿ ತಲೆ ದೋರಿದ ವ್ಯಾಕ್ಸಿನ್ ಕೊರತೆ, ಕೇಂದ್ರ ಸರ್ಕಾರದ ವ್ಯಾಕ್ಸಿನೇಶನ್ ನೀತಿ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮಕ್ಕಳಿಗೆ ಯಾವಾಗ ವ್ಯಾಕ್ಸಿನ್ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರವನ್ನು ಕೇಳಿತ್ತು. ಸುಪ್ರೀಂ ಕೋರ್ಟ್ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸರ್ಕಾರ ಕೊರೋನಾ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗೆ ಅಪಾಯವಿರುವುದನ್ನು ಮನಗಂಡು 18 ವರ್ಷದೊಳಗಿನ ವಯೋವರ್ಗಕ್ಕೆ ವ್ಯಾಕ್ಸಿನ್ ನೀಡುವ ಸಿದ್ಧತೆಗಳು ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡೆವಿಟ್ ಸಲ್ಲಿಸಿದೆ.

ದೇಶದಲ್ಲಿ ವ್ಯಾಕ್ಸಿನ್ ಕೊರತೆ ಇಲ್ಲವೆಂದು ಹೇಳಿರುವ ಕೇಂದ್ರ ಸರ್ಕಾರ ಮೇ 12 ರಂದು ಡ್ರಗ್‌ ಕಂಟ್ರೋಲರ್ ಜನರಲ್ ಅವರು ಭಾರತ್ ಬಯೋಟೆಕ್ ಸಂಸ್ಥೆಯ ಝೈಡೂಸ್ ಕ್ಯಾಂಡಿಲಾ ವ್ಯಾಕ್ಸಿನ್‌ನ ಕ್ಲಿನಿಕಲ್ ಟ್ರಯಲ್‌ಗೆ ಅನುಮತಿ ನೀಡಿದ್ದರು. 12-18 ವರ್ಷದ ಮಕ್ಕಳು ಸ್ವಯಂ ಪ್ರೇರಿತರಾಗಿ ವ್ಯಾಕ್ಸಿನ್ ಟ್ರಯಲ್‌ಗೆ ಒಳಗಾಗಿದ್ದು ಉತ್ತಮ ಫಲಿತಾಂಶ ಬಂದಿದೆ. ಈಗ 3 ನೇ ಹಂತದ ಟ್ರಯಲ್‌ಗಳು ಪೂರ್ಣಗೊಂಡಿದೆ ಎಂದು ಒಕ್ಕೂಟ ಸರ್ಕಾರ ತನ್ನ ಅಫಿಡೆವಿಟ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ದೇಶದ ವ್ಯಾಕ್ಸಿನ್ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದು ಮೇ ತಿಂಗಳಿಗಿಂತ ಜೂನ್ ಅವಧಿಯಲ್ಲಿ ವ್ಯಾಕ್ಸಿನ್ ಉತ್ಪಾದನೆ ದುಪ್ಪಟ್ಟಾಗಿದೆ. ಜುಲೈ ಆಗಸ್ಟ್‌ ಹೊತ್ತಿಗೆ ಈಗಿರುವ ವ್ಯಾಕ್ಸಿನ್‌ ಉತ್ಪಾದನೆಯ ಪ್ರಮಾಣದಲ್ಲಿ ಭಾರಿ ಹೆಚ್ಚಳವಾಗಲಿದೆ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸಿದೆ.


ಇದನ್ನೂ ಓದಿ : ಜಮ್ಮು ವಿಮಾನ ನಿಲ್ಧಾಣದಲ್ಲಿ ಸಣ್ಣ ಪ್ರಮಾಣದ ಸ್ಪೋಟ : ಡ್ರೋನ್ ದಾಳಿಯ ಸಾಧ್ಯತೆಯ ತನಿಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...