Homeಅಂಕಣಗಳುಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

ಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

- Advertisement -
- Advertisement -

ಇಪ್ಪತ್ತೊಂದು ದಿವಸ ಮನ್ಯಾಗ ಕುತಗೊಂಡು ಎಲ್ಲಾರಿಗೂ ಸಾಕಾಗಿ ಹೋಗೇತಿ. ಕೆಲವರಂತೂ ಕುಂತಲ್ಲೇ ಕುಂತು ಕುಂತು ಬೂಳಸ ಬಂದು ಬಿಟ್ಟಾರು.

ಜನರಿಗೆ ನೀವು ಠೀವಿ ನೋಡ್ರಿ, ಫೋನಿನ್ಯಾಗ ಸಮಾಜ ವಿರೋಧಿ ಮಾಧ್ಯಮದ ಪೋಸ್ಟುಗಳನ್ನ ಪೋಸ್ಟಮೆನ್‍ಗತೆ ಮಂದಿಗೆ ಹಂಚಿಕೊಂತ ಕೂತ ಬಿಡ್ರಿ ಅಂದರ ಹೂಂ ಅಂತೇವಿ. ಆದರ “ನೀವು ಹಿಂಗ ಇರಬ್ಯಾಡ್ರಿ, ಒಂದು ಈಟು ಬುದ್ಧಿ ಉಪಯೋಗ ಮಾಡ್ರಿ” ಅಂತ ಅಂದರ ಹೆಂಗ? ಅದೊಂದು ಬಿಟ್ಟು ಬ್ಯಾರೆ ಏನರ ಹೇಳರಿ, ಮಾಡೇವಿ, ಇದನ್ನ ಮಾತ್ರ ಅನಬ್ಯಾಡ್ರಿ,” ಅಂತ ಅಂತೀರೇನೋ? ಇರಲಿ, ಇದೊಂದು ಸಲ ಕೇಳ್ರಿ.

`ಈ ಕೊರೊನಾ ವೈರಸ್ಸನ ಅಪಾಯವನ್ನೇ ನಮ್ಮ ವಿಜ್ಞಾನಿಗಳು ಅನ್ನಿಸಿಕೊಳ್ಳೋರು ಅರ್ಥ ಮಾಡಿಕೊಂಡಿಲ್ಲ, ಇನ್ನ ಇಸ್ಲಾಮಿನ ಅಪಾಯವನ್ನು ಹೇಗೆ ಅರ್ಥ ಮಾಡಿಕೊಂಡಾರು ಅಂತ ಹೇಳಿ ನಮ್ಮ ನವ್ಯಾತೀತ ಚಿಂತಕ ಅನಂತ ಕುಮಾರ ಹೆಗಡೆ ಅವರು ಹೇಳ್ಯಾರ. ಸರ್ವೇ ಸಾಮಾನ್ಯವಾಗಿ ಅವರು ಮಾತಾಡೋದು ಕಮ್ಮಿ. ಅವರ ಕೈ ಆಡೋದ ಜಾಸ್ತಿ. ಹಿಂಗಾಗಿ ಅವರೇನೋ ಅಪರೂಪಕ್ಕೊಮ್ಮೆ ಮಾತಾಡಿರಬೇಕು ಅಂತ ಜನಾ ಸುಮ್ಮನಿರಬೇಕು.

ಆದರ ನಿಜವಾಗಿಯೂ ವಿಜ್ಞಾನಿಗಳಿಗೆ ಈ ಕರೋನಾ ಅಥವಾ ಕಿರೀಟಿ ವೈರಸ್ಸು ವ್ಯಾಧಿಯನ್ನು ಅರ್ಥ ಮಾಡಿಕೊಳ್ಳೋದರಾಗ ಹಿಂಬರಿಕಿ ಆಗೇದೇನು? ಅವರು ಸೋತು ಹೋಗ್ಯಾರೇನು? ಅವರಿಗೆ ಅರ್ಥನ ಆಗಿಲ್ಲಾ ಅಂದರ ನಮ್ಮ ಗತಿ ಏನು?

ಈ ಹೊಸಾ ಇಂಗ್ಲೀಷ ಪಿಚ್ಚರ ಬಂದಿರತಾವಲ್ಲಾ. ಅದರಾಗ ಯಾವಾನೋ ಒಬ್ಬವ ರಷಿಯಾ/ ಇರಾನ/ ‍ಅಫಘಾನಿಸ್ತಾನ/ ಉತ್ತರ ಕೋರಿಯಾದಿಂದ ಬರತಾನ, ಯಾರಿಗೂ ಗೊತ್ತಾಗದಂಗ ಜನರ ನಡುವ ಒಂದು ವೈರಸ್ ಬಿಟ್ಟ ಬಿಡತಾನ.

ಇದರಿಂದಾಗಿ ಹೀರೋ- ಹಿರೋಯಿನಿ ಇಬ್ಬಳಾರನ್ನ ಬಿಟ್ಟು ಎಲ್ಲಾರು ಷಟದು ಹೋಗತಾರು. ಕಡೀಕೆ ಅದಕ್ಕ ಒಂದು ಭಾರತೀಯ/ ಪೂರ್ವ ಯುರೋಪಿಯನ್ನ/ ಆಫ್ರಿಕನ್ ವಿಜ್ಞಾನಿ ಎಂಟಿಡೋಟು ಅಥವಾ ನಂಜುಮುರಕಾ ಕಂಡು ಹಿಡಿತಾನ. ಅದರಿಂದ ಕೆಲವರ ಜೀವ ಉಳೀತೇತಿ.

ಈಗನೂ ಹಂಗ ಆಗೋದ ಐತೇನು? ನಾವೆಲ್ಲಾ ಭೈರವಿ ಭಜನೆ ಹಾಡಿಕೊಂತ ಹೋಗಾವರ ಅದೇವೇನು?

ಇಂಥಾ ಎಲ್ಲಾ ಪ್ರಶ್ನಿಗಳ ಉತ್ತರ ಏನು ಅಂತ ಅಂದರ. “ಇಲ್ಲಾ”. ವಿಜ್ಞಾನಿಗಳು- ಭಾರತೀರಾಗಿರಲಿ, ಹೊರಗಿನವರಾಗಿರಲಿ, ಇದರ ಮ್ಯಾಲೆ ಭಾಳ ಕೆಲಸಾ ಮಾಡಾಕುಂತಾರು. ಮನಿ- ಮಠಾ ಬಿಟ್ಟು ಹಗಲೂ -ರಾತ್ರಿ ಅದರಾಗ ಸಂಶೋಧನೆ ನಡದೇತಿ. ಎಂದಿನಂತೆ ನಮ್ಮ ಸರಕಾರಗಳು ಇಂಥಾದೆಲ್ಲಾ ನಮ್ಮಿಂದ ಮುಚ್ಚಿ ಇಡಾಕ ಹತ್ಯಾರ.

ಇದು ಎರಡು ಲೆವಲ್ಲಿನೊಳಗ ಕೆಲಸ ನಡದದ. ಒಂದು ಲಸಿಕೆ ತಯಾರು ಮಾಡೋದು, ಇನ್ನೊಂದು ಔಷಧಿ ಕಂಡು ಹಿಡಿಯೋದು.

ಇದರೊಳಗ ಒಂದು ಸಣ್ಣ ವ್ಯತ್ಯಾಸ ಅದ.

ಔಷಧಿ ಅಂದರ ರಸಾಯನಶಾಸ್ತ್ರದ ಸಂಶೋಧನೆಯೊಳಗಿಂದ ಹುಟ್ಟೋದು. ಲಸಿಕೆ ಉಪಯೋಗ ಅಂದರ ಜೀವಶಾಸ್ತ್ರಜ್ಞರ ತಡಕಾಟ.

ಔಷಧಿ ಅಂದರ ಕೆಲವು ರಸಾಯನಿಕಗಳನ್ನ ತೊಗೊಳ್ಳೋದು, ಅವು ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಇತರ ರೋಗಾಣುಗಳನ್ನು ನಿಷ್ಕ್ರಿಯ ಗೊಳಿಸತದೋ ಇಲ್ಲೋ ಅಂತ ನೋಡೋದು.

ಇದು ಸಾಮಾನ್ಯವಾಗಿ ಆಗತದ ಅಂದರ ಆ ರೋಗಾಣುವಿನ ಜೀವಕೋಶದ ಚರ್ಮವನ್ನು ಕರಗಿಸಿ ಬಿಡತದ. ಔಷಧಿ ಶಾಸ್ತ್ರಜ್ಞರು ಹೆಂಗ ಮಾಡತಾರ ಅಂದರ ಈಗ ಮಾರುಕಟ್ಟೆಯೊಳಗ ಇರೋ ಔಷಧಿಗಳನ್ನು ಬೇರೆ ಬೇರೆ ರೋಗಗಳನ್ನ ಗುಣ ಪಡಿಸಲಿಕ್ಕೆ ಉಪಯೋಗ ಮಾಡತಾರ. ಇದಕ್ಕ ರಿಪರಪಸಿಂಗ ಅಥವಾ ಮರುಪ್ರಯೋಜನ ಮಾಡೋದು ಅಂತಾರ.

ಕರೋನಾದ ವಿರುದ್ಧ ರೆಮೆಡೆಸಿವಿರ, ಏಸೈಕ್ಲೋವಿರ, ಪೆನ್ಸಿಕ್ಲೋವಿರ, ಫಾವಿಪಿರಾವಿರ ಮುಂತಾದ ಔಷಧಿ ಬಗ್ಗೆ ಸಂಶೋಧನೆ ನಡದದ. ಇನ್ನು ನಮ್ಮ ಟ್ರಂಪಣ್ಣನವರ ಧಮಕಿ ಡ್ರಗ್ ಹೈಡ್ರೋಕ್ಸಿ ಕ್ಲೋರೋಕ್ವಿನ್ ಸಹಿತ ಉಪಯೋಗಸಲಿಕ್ಕೆ ಹತ್ಯಾರ. ಇದರಾಗ ಯಾವುದು ಹೆಚ್ಚು ಪ್ರಾಯೋಜಕ ಅನಸತದೋ ಅದನ್ನ ಎಲ್ಲಾರಿಗೂ ಕೊಡತಾರ.

ಇವೆಲ್ಲಾ ಈಗ ಬೇರೆ ಬೇರೆ ರೋಗಗಳಿಗೆ ಬಳಸೋ ಔಷಧಿ. ಇವನ್ನು ಉಪಯೋಗಿಸೋ ಔಚಿತ್ಯ ಏನಂದರ ಹೊಸಾ ಔಷಧಿ ಕಂಡು ಹಿಡೀಬೇಕು ಅಂದರ ಅದಕ್ಕ ಹತ್ತು- ಇಪ್ಪತ್ತು ವರ್ಷ ಹಿಡೀತದ. ಯಾಕಂದರ ಅದನ್ನ ಮದಲಿಗೆ ಪ್ರಾಣಿಗಳ ಮ್ಯಾಲೆ, ಆಮ್ಯಾಲೆ ಮನುಷರ ಮ್ಯಾಲೆ ಪ್ರಯೋಗ ಮಾಡಿ ಆಮ್ಯಾಲೆ ಮಾರುಕಟ್ಟೆ ಒಳಗ ಬಿಡಬೇಕಾಗತದ.

ಇನ್ನ ಲಸಿಕೆ ಅಂದರ ಯಾವ ವೈರಸ್ಸು ರೋಗಾಣುಗಳ ವಿರುದ್ಧ ನೀವು ಲಸಿಕೆ ತಯಾರಿಸಲಿಕ್ಕೆ ಹೊಂಟಿರತೀರೋ ಅದರದ ನಿರುಪದ್ರವಿ ರೂಪವೊಂದನ್ನ ತಯಾರು ಮಾಡಿ ನಿಮಗ ಕೊಡೋದು. ಅದರಿಂದ ನಿಮ್ಮ ದೇಹದ ರೋಗ ನಿರೋಧಕ ಶಕ್ತಿ ಅದರ ವಿರುದ್ಧ ಹೋರಾಡೋವಂಥಾ ಪ್ರತಿಜೀವಿಗಳನ್ನ ತಯಾರು ಮಾಡತದ. ಇಂಥಾ ಲಸಿಕೆ ಸುಮಾರು 60-80 ಶೇಕಡಾ ಜನರಿಗೆ ಸಿಕ್ಕಿತಲಾ ಅಂದರ ಇಡೀ ಜನಸಂಖ್ಯೆಗೆ ರೋಗ ನಿರೋಧಕ ಶಕ್ತಿ ಬರತದ.

ಇವೆರಡೂ ಆಗಲಿಲ್ಲ ಅಂದರ ಸರಕಾರ ಕೈಚೆಲ್ಲಿ ಕುತಕೋಬೇಕು. ಅವಾಗ ಎನಾಗತದ ಅಂದರ ಕೆಲವು ದಶಕಗಳ ನಂತರ ಹಿಂಡು ನಿರೋಧ ಬರತದ. ಅಷ್ಟರೊಳಗ ಭಾಳ ಜನ ಸ್ವರ್ಗ ವಾಸಿಗಳಾಗಿರತಾರ. ಆಗ ನಮ್ಮಲ್ಲಿ ಹಣೆಬರಾ ಗಟ್ಟಿ ಇದ್ದು ಉಳದೋರು, ಮತ್ತು ನಾವು ಆರಿಸಿ ಕಳಿಸಿದವರು ಕೋಲಾಟ ಆಡಬಹುದು – ಯಾರು ಹಿತವರು ನಿನಗೆ ಈ ಮೂವರೊಳಗ ಅಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...