Homeಅಂಕಣಗಳುಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

ಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

- Advertisement -
- Advertisement -

ಇಪ್ಪತ್ತೊಂದು ದಿವಸ ಮನ್ಯಾಗ ಕುತಗೊಂಡು ಎಲ್ಲಾರಿಗೂ ಸಾಕಾಗಿ ಹೋಗೇತಿ. ಕೆಲವರಂತೂ ಕುಂತಲ್ಲೇ ಕುಂತು ಕುಂತು ಬೂಳಸ ಬಂದು ಬಿಟ್ಟಾರು.

ಜನರಿಗೆ ನೀವು ಠೀವಿ ನೋಡ್ರಿ, ಫೋನಿನ್ಯಾಗ ಸಮಾಜ ವಿರೋಧಿ ಮಾಧ್ಯಮದ ಪೋಸ್ಟುಗಳನ್ನ ಪೋಸ್ಟಮೆನ್‍ಗತೆ ಮಂದಿಗೆ ಹಂಚಿಕೊಂತ ಕೂತ ಬಿಡ್ರಿ ಅಂದರ ಹೂಂ ಅಂತೇವಿ. ಆದರ “ನೀವು ಹಿಂಗ ಇರಬ್ಯಾಡ್ರಿ, ಒಂದು ಈಟು ಬುದ್ಧಿ ಉಪಯೋಗ ಮಾಡ್ರಿ” ಅಂತ ಅಂದರ ಹೆಂಗ? ಅದೊಂದು ಬಿಟ್ಟು ಬ್ಯಾರೆ ಏನರ ಹೇಳರಿ, ಮಾಡೇವಿ, ಇದನ್ನ ಮಾತ್ರ ಅನಬ್ಯಾಡ್ರಿ,” ಅಂತ ಅಂತೀರೇನೋ? ಇರಲಿ, ಇದೊಂದು ಸಲ ಕೇಳ್ರಿ.

`ಈ ಕೊರೊನಾ ವೈರಸ್ಸನ ಅಪಾಯವನ್ನೇ ನಮ್ಮ ವಿಜ್ಞಾನಿಗಳು ಅನ್ನಿಸಿಕೊಳ್ಳೋರು ಅರ್ಥ ಮಾಡಿಕೊಂಡಿಲ್ಲ, ಇನ್ನ ಇಸ್ಲಾಮಿನ ಅಪಾಯವನ್ನು ಹೇಗೆ ಅರ್ಥ ಮಾಡಿಕೊಂಡಾರು ಅಂತ ಹೇಳಿ ನಮ್ಮ ನವ್ಯಾತೀತ ಚಿಂತಕ ಅನಂತ ಕುಮಾರ ಹೆಗಡೆ ಅವರು ಹೇಳ್ಯಾರ. ಸರ್ವೇ ಸಾಮಾನ್ಯವಾಗಿ ಅವರು ಮಾತಾಡೋದು ಕಮ್ಮಿ. ಅವರ ಕೈ ಆಡೋದ ಜಾಸ್ತಿ. ಹಿಂಗಾಗಿ ಅವರೇನೋ ಅಪರೂಪಕ್ಕೊಮ್ಮೆ ಮಾತಾಡಿರಬೇಕು ಅಂತ ಜನಾ ಸುಮ್ಮನಿರಬೇಕು.

ಆದರ ನಿಜವಾಗಿಯೂ ವಿಜ್ಞಾನಿಗಳಿಗೆ ಈ ಕರೋನಾ ಅಥವಾ ಕಿರೀಟಿ ವೈರಸ್ಸು ವ್ಯಾಧಿಯನ್ನು ಅರ್ಥ ಮಾಡಿಕೊಳ್ಳೋದರಾಗ ಹಿಂಬರಿಕಿ ಆಗೇದೇನು? ಅವರು ಸೋತು ಹೋಗ್ಯಾರೇನು? ಅವರಿಗೆ ಅರ್ಥನ ಆಗಿಲ್ಲಾ ಅಂದರ ನಮ್ಮ ಗತಿ ಏನು?

ಈ ಹೊಸಾ ಇಂಗ್ಲೀಷ ಪಿಚ್ಚರ ಬಂದಿರತಾವಲ್ಲಾ. ಅದರಾಗ ಯಾವಾನೋ ಒಬ್ಬವ ರಷಿಯಾ/ ಇರಾನ/ ‍ಅಫಘಾನಿಸ್ತಾನ/ ಉತ್ತರ ಕೋರಿಯಾದಿಂದ ಬರತಾನ, ಯಾರಿಗೂ ಗೊತ್ತಾಗದಂಗ ಜನರ ನಡುವ ಒಂದು ವೈರಸ್ ಬಿಟ್ಟ ಬಿಡತಾನ.

ಇದರಿಂದಾಗಿ ಹೀರೋ- ಹಿರೋಯಿನಿ ಇಬ್ಬಳಾರನ್ನ ಬಿಟ್ಟು ಎಲ್ಲಾರು ಷಟದು ಹೋಗತಾರು. ಕಡೀಕೆ ಅದಕ್ಕ ಒಂದು ಭಾರತೀಯ/ ಪೂರ್ವ ಯುರೋಪಿಯನ್ನ/ ಆಫ್ರಿಕನ್ ವಿಜ್ಞಾನಿ ಎಂಟಿಡೋಟು ಅಥವಾ ನಂಜುಮುರಕಾ ಕಂಡು ಹಿಡಿತಾನ. ಅದರಿಂದ ಕೆಲವರ ಜೀವ ಉಳೀತೇತಿ.

ಈಗನೂ ಹಂಗ ಆಗೋದ ಐತೇನು? ನಾವೆಲ್ಲಾ ಭೈರವಿ ಭಜನೆ ಹಾಡಿಕೊಂತ ಹೋಗಾವರ ಅದೇವೇನು?

ಇಂಥಾ ಎಲ್ಲಾ ಪ್ರಶ್ನಿಗಳ ಉತ್ತರ ಏನು ಅಂತ ಅಂದರ. “ಇಲ್ಲಾ”. ವಿಜ್ಞಾನಿಗಳು- ಭಾರತೀರಾಗಿರಲಿ, ಹೊರಗಿನವರಾಗಿರಲಿ, ಇದರ ಮ್ಯಾಲೆ ಭಾಳ ಕೆಲಸಾ ಮಾಡಾಕುಂತಾರು. ಮನಿ- ಮಠಾ ಬಿಟ್ಟು ಹಗಲೂ -ರಾತ್ರಿ ಅದರಾಗ ಸಂಶೋಧನೆ ನಡದೇತಿ. ಎಂದಿನಂತೆ ನಮ್ಮ ಸರಕಾರಗಳು ಇಂಥಾದೆಲ್ಲಾ ನಮ್ಮಿಂದ ಮುಚ್ಚಿ ಇಡಾಕ ಹತ್ಯಾರ.

ಇದು ಎರಡು ಲೆವಲ್ಲಿನೊಳಗ ಕೆಲಸ ನಡದದ. ಒಂದು ಲಸಿಕೆ ತಯಾರು ಮಾಡೋದು, ಇನ್ನೊಂದು ಔಷಧಿ ಕಂಡು ಹಿಡಿಯೋದು.

ಇದರೊಳಗ ಒಂದು ಸಣ್ಣ ವ್ಯತ್ಯಾಸ ಅದ.

ಔಷಧಿ ಅಂದರ ರಸಾಯನಶಾಸ್ತ್ರದ ಸಂಶೋಧನೆಯೊಳಗಿಂದ ಹುಟ್ಟೋದು. ಲಸಿಕೆ ಉಪಯೋಗ ಅಂದರ ಜೀವಶಾಸ್ತ್ರಜ್ಞರ ತಡಕಾಟ.

ಔಷಧಿ ಅಂದರ ಕೆಲವು ರಸಾಯನಿಕಗಳನ್ನ ತೊಗೊಳ್ಳೋದು, ಅವು ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಇತರ ರೋಗಾಣುಗಳನ್ನು ನಿಷ್ಕ್ರಿಯ ಗೊಳಿಸತದೋ ಇಲ್ಲೋ ಅಂತ ನೋಡೋದು.

ಇದು ಸಾಮಾನ್ಯವಾಗಿ ಆಗತದ ಅಂದರ ಆ ರೋಗಾಣುವಿನ ಜೀವಕೋಶದ ಚರ್ಮವನ್ನು ಕರಗಿಸಿ ಬಿಡತದ. ಔಷಧಿ ಶಾಸ್ತ್ರಜ್ಞರು ಹೆಂಗ ಮಾಡತಾರ ಅಂದರ ಈಗ ಮಾರುಕಟ್ಟೆಯೊಳಗ ಇರೋ ಔಷಧಿಗಳನ್ನು ಬೇರೆ ಬೇರೆ ರೋಗಗಳನ್ನ ಗುಣ ಪಡಿಸಲಿಕ್ಕೆ ಉಪಯೋಗ ಮಾಡತಾರ. ಇದಕ್ಕ ರಿಪರಪಸಿಂಗ ಅಥವಾ ಮರುಪ್ರಯೋಜನ ಮಾಡೋದು ಅಂತಾರ.

ಕರೋನಾದ ವಿರುದ್ಧ ರೆಮೆಡೆಸಿವಿರ, ಏಸೈಕ್ಲೋವಿರ, ಪೆನ್ಸಿಕ್ಲೋವಿರ, ಫಾವಿಪಿರಾವಿರ ಮುಂತಾದ ಔಷಧಿ ಬಗ್ಗೆ ಸಂಶೋಧನೆ ನಡದದ. ಇನ್ನು ನಮ್ಮ ಟ್ರಂಪಣ್ಣನವರ ಧಮಕಿ ಡ್ರಗ್ ಹೈಡ್ರೋಕ್ಸಿ ಕ್ಲೋರೋಕ್ವಿನ್ ಸಹಿತ ಉಪಯೋಗಸಲಿಕ್ಕೆ ಹತ್ಯಾರ. ಇದರಾಗ ಯಾವುದು ಹೆಚ್ಚು ಪ್ರಾಯೋಜಕ ಅನಸತದೋ ಅದನ್ನ ಎಲ್ಲಾರಿಗೂ ಕೊಡತಾರ.

ಇವೆಲ್ಲಾ ಈಗ ಬೇರೆ ಬೇರೆ ರೋಗಗಳಿಗೆ ಬಳಸೋ ಔಷಧಿ. ಇವನ್ನು ಉಪಯೋಗಿಸೋ ಔಚಿತ್ಯ ಏನಂದರ ಹೊಸಾ ಔಷಧಿ ಕಂಡು ಹಿಡೀಬೇಕು ಅಂದರ ಅದಕ್ಕ ಹತ್ತು- ಇಪ್ಪತ್ತು ವರ್ಷ ಹಿಡೀತದ. ಯಾಕಂದರ ಅದನ್ನ ಮದಲಿಗೆ ಪ್ರಾಣಿಗಳ ಮ್ಯಾಲೆ, ಆಮ್ಯಾಲೆ ಮನುಷರ ಮ್ಯಾಲೆ ಪ್ರಯೋಗ ಮಾಡಿ ಆಮ್ಯಾಲೆ ಮಾರುಕಟ್ಟೆ ಒಳಗ ಬಿಡಬೇಕಾಗತದ.

ಇನ್ನ ಲಸಿಕೆ ಅಂದರ ಯಾವ ವೈರಸ್ಸು ರೋಗಾಣುಗಳ ವಿರುದ್ಧ ನೀವು ಲಸಿಕೆ ತಯಾರಿಸಲಿಕ್ಕೆ ಹೊಂಟಿರತೀರೋ ಅದರದ ನಿರುಪದ್ರವಿ ರೂಪವೊಂದನ್ನ ತಯಾರು ಮಾಡಿ ನಿಮಗ ಕೊಡೋದು. ಅದರಿಂದ ನಿಮ್ಮ ದೇಹದ ರೋಗ ನಿರೋಧಕ ಶಕ್ತಿ ಅದರ ವಿರುದ್ಧ ಹೋರಾಡೋವಂಥಾ ಪ್ರತಿಜೀವಿಗಳನ್ನ ತಯಾರು ಮಾಡತದ. ಇಂಥಾ ಲಸಿಕೆ ಸುಮಾರು 60-80 ಶೇಕಡಾ ಜನರಿಗೆ ಸಿಕ್ಕಿತಲಾ ಅಂದರ ಇಡೀ ಜನಸಂಖ್ಯೆಗೆ ರೋಗ ನಿರೋಧಕ ಶಕ್ತಿ ಬರತದ.

ಇವೆರಡೂ ಆಗಲಿಲ್ಲ ಅಂದರ ಸರಕಾರ ಕೈಚೆಲ್ಲಿ ಕುತಕೋಬೇಕು. ಅವಾಗ ಎನಾಗತದ ಅಂದರ ಕೆಲವು ದಶಕಗಳ ನಂತರ ಹಿಂಡು ನಿರೋಧ ಬರತದ. ಅಷ್ಟರೊಳಗ ಭಾಳ ಜನ ಸ್ವರ್ಗ ವಾಸಿಗಳಾಗಿರತಾರ. ಆಗ ನಮ್ಮಲ್ಲಿ ಹಣೆಬರಾ ಗಟ್ಟಿ ಇದ್ದು ಉಳದೋರು, ಮತ್ತು ನಾವು ಆರಿಸಿ ಕಳಿಸಿದವರು ಕೋಲಾಟ ಆಡಬಹುದು – ಯಾರು ಹಿತವರು ನಿನಗೆ ಈ ಮೂವರೊಳಗ ಅಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....