Homeಅಂಕಣಗಳುಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

ಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

- Advertisement -
- Advertisement -

ಇಪ್ಪತ್ತೊಂದು ದಿವಸ ಮನ್ಯಾಗ ಕುತಗೊಂಡು ಎಲ್ಲಾರಿಗೂ ಸಾಕಾಗಿ ಹೋಗೇತಿ. ಕೆಲವರಂತೂ ಕುಂತಲ್ಲೇ ಕುಂತು ಕುಂತು ಬೂಳಸ ಬಂದು ಬಿಟ್ಟಾರು.

ಜನರಿಗೆ ನೀವು ಠೀವಿ ನೋಡ್ರಿ, ಫೋನಿನ್ಯಾಗ ಸಮಾಜ ವಿರೋಧಿ ಮಾಧ್ಯಮದ ಪೋಸ್ಟುಗಳನ್ನ ಪೋಸ್ಟಮೆನ್‍ಗತೆ ಮಂದಿಗೆ ಹಂಚಿಕೊಂತ ಕೂತ ಬಿಡ್ರಿ ಅಂದರ ಹೂಂ ಅಂತೇವಿ. ಆದರ “ನೀವು ಹಿಂಗ ಇರಬ್ಯಾಡ್ರಿ, ಒಂದು ಈಟು ಬುದ್ಧಿ ಉಪಯೋಗ ಮಾಡ್ರಿ” ಅಂತ ಅಂದರ ಹೆಂಗ? ಅದೊಂದು ಬಿಟ್ಟು ಬ್ಯಾರೆ ಏನರ ಹೇಳರಿ, ಮಾಡೇವಿ, ಇದನ್ನ ಮಾತ್ರ ಅನಬ್ಯಾಡ್ರಿ,” ಅಂತ ಅಂತೀರೇನೋ? ಇರಲಿ, ಇದೊಂದು ಸಲ ಕೇಳ್ರಿ.

`ಈ ಕೊರೊನಾ ವೈರಸ್ಸನ ಅಪಾಯವನ್ನೇ ನಮ್ಮ ವಿಜ್ಞಾನಿಗಳು ಅನ್ನಿಸಿಕೊಳ್ಳೋರು ಅರ್ಥ ಮಾಡಿಕೊಂಡಿಲ್ಲ, ಇನ್ನ ಇಸ್ಲಾಮಿನ ಅಪಾಯವನ್ನು ಹೇಗೆ ಅರ್ಥ ಮಾಡಿಕೊಂಡಾರು ಅಂತ ಹೇಳಿ ನಮ್ಮ ನವ್ಯಾತೀತ ಚಿಂತಕ ಅನಂತ ಕುಮಾರ ಹೆಗಡೆ ಅವರು ಹೇಳ್ಯಾರ. ಸರ್ವೇ ಸಾಮಾನ್ಯವಾಗಿ ಅವರು ಮಾತಾಡೋದು ಕಮ್ಮಿ. ಅವರ ಕೈ ಆಡೋದ ಜಾಸ್ತಿ. ಹಿಂಗಾಗಿ ಅವರೇನೋ ಅಪರೂಪಕ್ಕೊಮ್ಮೆ ಮಾತಾಡಿರಬೇಕು ಅಂತ ಜನಾ ಸುಮ್ಮನಿರಬೇಕು.

ಆದರ ನಿಜವಾಗಿಯೂ ವಿಜ್ಞಾನಿಗಳಿಗೆ ಈ ಕರೋನಾ ಅಥವಾ ಕಿರೀಟಿ ವೈರಸ್ಸು ವ್ಯಾಧಿಯನ್ನು ಅರ್ಥ ಮಾಡಿಕೊಳ್ಳೋದರಾಗ ಹಿಂಬರಿಕಿ ಆಗೇದೇನು? ಅವರು ಸೋತು ಹೋಗ್ಯಾರೇನು? ಅವರಿಗೆ ಅರ್ಥನ ಆಗಿಲ್ಲಾ ಅಂದರ ನಮ್ಮ ಗತಿ ಏನು?

ಈ ಹೊಸಾ ಇಂಗ್ಲೀಷ ಪಿಚ್ಚರ ಬಂದಿರತಾವಲ್ಲಾ. ಅದರಾಗ ಯಾವಾನೋ ಒಬ್ಬವ ರಷಿಯಾ/ ಇರಾನ/ ‍ಅಫಘಾನಿಸ್ತಾನ/ ಉತ್ತರ ಕೋರಿಯಾದಿಂದ ಬರತಾನ, ಯಾರಿಗೂ ಗೊತ್ತಾಗದಂಗ ಜನರ ನಡುವ ಒಂದು ವೈರಸ್ ಬಿಟ್ಟ ಬಿಡತಾನ.

ಇದರಿಂದಾಗಿ ಹೀರೋ- ಹಿರೋಯಿನಿ ಇಬ್ಬಳಾರನ್ನ ಬಿಟ್ಟು ಎಲ್ಲಾರು ಷಟದು ಹೋಗತಾರು. ಕಡೀಕೆ ಅದಕ್ಕ ಒಂದು ಭಾರತೀಯ/ ಪೂರ್ವ ಯುರೋಪಿಯನ್ನ/ ಆಫ್ರಿಕನ್ ವಿಜ್ಞಾನಿ ಎಂಟಿಡೋಟು ಅಥವಾ ನಂಜುಮುರಕಾ ಕಂಡು ಹಿಡಿತಾನ. ಅದರಿಂದ ಕೆಲವರ ಜೀವ ಉಳೀತೇತಿ.

ಈಗನೂ ಹಂಗ ಆಗೋದ ಐತೇನು? ನಾವೆಲ್ಲಾ ಭೈರವಿ ಭಜನೆ ಹಾಡಿಕೊಂತ ಹೋಗಾವರ ಅದೇವೇನು?

ಇಂಥಾ ಎಲ್ಲಾ ಪ್ರಶ್ನಿಗಳ ಉತ್ತರ ಏನು ಅಂತ ಅಂದರ. “ಇಲ್ಲಾ”. ವಿಜ್ಞಾನಿಗಳು- ಭಾರತೀರಾಗಿರಲಿ, ಹೊರಗಿನವರಾಗಿರಲಿ, ಇದರ ಮ್ಯಾಲೆ ಭಾಳ ಕೆಲಸಾ ಮಾಡಾಕುಂತಾರು. ಮನಿ- ಮಠಾ ಬಿಟ್ಟು ಹಗಲೂ -ರಾತ್ರಿ ಅದರಾಗ ಸಂಶೋಧನೆ ನಡದೇತಿ. ಎಂದಿನಂತೆ ನಮ್ಮ ಸರಕಾರಗಳು ಇಂಥಾದೆಲ್ಲಾ ನಮ್ಮಿಂದ ಮುಚ್ಚಿ ಇಡಾಕ ಹತ್ಯಾರ.

ಇದು ಎರಡು ಲೆವಲ್ಲಿನೊಳಗ ಕೆಲಸ ನಡದದ. ಒಂದು ಲಸಿಕೆ ತಯಾರು ಮಾಡೋದು, ಇನ್ನೊಂದು ಔಷಧಿ ಕಂಡು ಹಿಡಿಯೋದು.

ಇದರೊಳಗ ಒಂದು ಸಣ್ಣ ವ್ಯತ್ಯಾಸ ಅದ.

ಔಷಧಿ ಅಂದರ ರಸಾಯನಶಾಸ್ತ್ರದ ಸಂಶೋಧನೆಯೊಳಗಿಂದ ಹುಟ್ಟೋದು. ಲಸಿಕೆ ಉಪಯೋಗ ಅಂದರ ಜೀವಶಾಸ್ತ್ರಜ್ಞರ ತಡಕಾಟ.

ಔಷಧಿ ಅಂದರ ಕೆಲವು ರಸಾಯನಿಕಗಳನ್ನ ತೊಗೊಳ್ಳೋದು, ಅವು ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಇತರ ರೋಗಾಣುಗಳನ್ನು ನಿಷ್ಕ್ರಿಯ ಗೊಳಿಸತದೋ ಇಲ್ಲೋ ಅಂತ ನೋಡೋದು.

ಇದು ಸಾಮಾನ್ಯವಾಗಿ ಆಗತದ ಅಂದರ ಆ ರೋಗಾಣುವಿನ ಜೀವಕೋಶದ ಚರ್ಮವನ್ನು ಕರಗಿಸಿ ಬಿಡತದ. ಔಷಧಿ ಶಾಸ್ತ್ರಜ್ಞರು ಹೆಂಗ ಮಾಡತಾರ ಅಂದರ ಈಗ ಮಾರುಕಟ್ಟೆಯೊಳಗ ಇರೋ ಔಷಧಿಗಳನ್ನು ಬೇರೆ ಬೇರೆ ರೋಗಗಳನ್ನ ಗುಣ ಪಡಿಸಲಿಕ್ಕೆ ಉಪಯೋಗ ಮಾಡತಾರ. ಇದಕ್ಕ ರಿಪರಪಸಿಂಗ ಅಥವಾ ಮರುಪ್ರಯೋಜನ ಮಾಡೋದು ಅಂತಾರ.

ಕರೋನಾದ ವಿರುದ್ಧ ರೆಮೆಡೆಸಿವಿರ, ಏಸೈಕ್ಲೋವಿರ, ಪೆನ್ಸಿಕ್ಲೋವಿರ, ಫಾವಿಪಿರಾವಿರ ಮುಂತಾದ ಔಷಧಿ ಬಗ್ಗೆ ಸಂಶೋಧನೆ ನಡದದ. ಇನ್ನು ನಮ್ಮ ಟ್ರಂಪಣ್ಣನವರ ಧಮಕಿ ಡ್ರಗ್ ಹೈಡ್ರೋಕ್ಸಿ ಕ್ಲೋರೋಕ್ವಿನ್ ಸಹಿತ ಉಪಯೋಗಸಲಿಕ್ಕೆ ಹತ್ಯಾರ. ಇದರಾಗ ಯಾವುದು ಹೆಚ್ಚು ಪ್ರಾಯೋಜಕ ಅನಸತದೋ ಅದನ್ನ ಎಲ್ಲಾರಿಗೂ ಕೊಡತಾರ.

ಇವೆಲ್ಲಾ ಈಗ ಬೇರೆ ಬೇರೆ ರೋಗಗಳಿಗೆ ಬಳಸೋ ಔಷಧಿ. ಇವನ್ನು ಉಪಯೋಗಿಸೋ ಔಚಿತ್ಯ ಏನಂದರ ಹೊಸಾ ಔಷಧಿ ಕಂಡು ಹಿಡೀಬೇಕು ಅಂದರ ಅದಕ್ಕ ಹತ್ತು- ಇಪ್ಪತ್ತು ವರ್ಷ ಹಿಡೀತದ. ಯಾಕಂದರ ಅದನ್ನ ಮದಲಿಗೆ ಪ್ರಾಣಿಗಳ ಮ್ಯಾಲೆ, ಆಮ್ಯಾಲೆ ಮನುಷರ ಮ್ಯಾಲೆ ಪ್ರಯೋಗ ಮಾಡಿ ಆಮ್ಯಾಲೆ ಮಾರುಕಟ್ಟೆ ಒಳಗ ಬಿಡಬೇಕಾಗತದ.

ಇನ್ನ ಲಸಿಕೆ ಅಂದರ ಯಾವ ವೈರಸ್ಸು ರೋಗಾಣುಗಳ ವಿರುದ್ಧ ನೀವು ಲಸಿಕೆ ತಯಾರಿಸಲಿಕ್ಕೆ ಹೊಂಟಿರತೀರೋ ಅದರದ ನಿರುಪದ್ರವಿ ರೂಪವೊಂದನ್ನ ತಯಾರು ಮಾಡಿ ನಿಮಗ ಕೊಡೋದು. ಅದರಿಂದ ನಿಮ್ಮ ದೇಹದ ರೋಗ ನಿರೋಧಕ ಶಕ್ತಿ ಅದರ ವಿರುದ್ಧ ಹೋರಾಡೋವಂಥಾ ಪ್ರತಿಜೀವಿಗಳನ್ನ ತಯಾರು ಮಾಡತದ. ಇಂಥಾ ಲಸಿಕೆ ಸುಮಾರು 60-80 ಶೇಕಡಾ ಜನರಿಗೆ ಸಿಕ್ಕಿತಲಾ ಅಂದರ ಇಡೀ ಜನಸಂಖ್ಯೆಗೆ ರೋಗ ನಿರೋಧಕ ಶಕ್ತಿ ಬರತದ.

ಇವೆರಡೂ ಆಗಲಿಲ್ಲ ಅಂದರ ಸರಕಾರ ಕೈಚೆಲ್ಲಿ ಕುತಕೋಬೇಕು. ಅವಾಗ ಎನಾಗತದ ಅಂದರ ಕೆಲವು ದಶಕಗಳ ನಂತರ ಹಿಂಡು ನಿರೋಧ ಬರತದ. ಅಷ್ಟರೊಳಗ ಭಾಳ ಜನ ಸ್ವರ್ಗ ವಾಸಿಗಳಾಗಿರತಾರ. ಆಗ ನಮ್ಮಲ್ಲಿ ಹಣೆಬರಾ ಗಟ್ಟಿ ಇದ್ದು ಉಳದೋರು, ಮತ್ತು ನಾವು ಆರಿಸಿ ಕಳಿಸಿದವರು ಕೋಲಾಟ ಆಡಬಹುದು – ಯಾರು ಹಿತವರು ನಿನಗೆ ಈ ಮೂವರೊಳಗ ಅಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...