Homeಅಂಕಣಗಳುಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

ಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

- Advertisement -
- Advertisement -

ಇಪ್ಪತ್ತೊಂದು ದಿವಸ ಮನ್ಯಾಗ ಕುತಗೊಂಡು ಎಲ್ಲಾರಿಗೂ ಸಾಕಾಗಿ ಹೋಗೇತಿ. ಕೆಲವರಂತೂ ಕುಂತಲ್ಲೇ ಕುಂತು ಕುಂತು ಬೂಳಸ ಬಂದು ಬಿಟ್ಟಾರು.

ಜನರಿಗೆ ನೀವು ಠೀವಿ ನೋಡ್ರಿ, ಫೋನಿನ್ಯಾಗ ಸಮಾಜ ವಿರೋಧಿ ಮಾಧ್ಯಮದ ಪೋಸ್ಟುಗಳನ್ನ ಪೋಸ್ಟಮೆನ್‍ಗತೆ ಮಂದಿಗೆ ಹಂಚಿಕೊಂತ ಕೂತ ಬಿಡ್ರಿ ಅಂದರ ಹೂಂ ಅಂತೇವಿ. ಆದರ “ನೀವು ಹಿಂಗ ಇರಬ್ಯಾಡ್ರಿ, ಒಂದು ಈಟು ಬುದ್ಧಿ ಉಪಯೋಗ ಮಾಡ್ರಿ” ಅಂತ ಅಂದರ ಹೆಂಗ? ಅದೊಂದು ಬಿಟ್ಟು ಬ್ಯಾರೆ ಏನರ ಹೇಳರಿ, ಮಾಡೇವಿ, ಇದನ್ನ ಮಾತ್ರ ಅನಬ್ಯಾಡ್ರಿ,” ಅಂತ ಅಂತೀರೇನೋ? ಇರಲಿ, ಇದೊಂದು ಸಲ ಕೇಳ್ರಿ.

`ಈ ಕೊರೊನಾ ವೈರಸ್ಸನ ಅಪಾಯವನ್ನೇ ನಮ್ಮ ವಿಜ್ಞಾನಿಗಳು ಅನ್ನಿಸಿಕೊಳ್ಳೋರು ಅರ್ಥ ಮಾಡಿಕೊಂಡಿಲ್ಲ, ಇನ್ನ ಇಸ್ಲಾಮಿನ ಅಪಾಯವನ್ನು ಹೇಗೆ ಅರ್ಥ ಮಾಡಿಕೊಂಡಾರು ಅಂತ ಹೇಳಿ ನಮ್ಮ ನವ್ಯಾತೀತ ಚಿಂತಕ ಅನಂತ ಕುಮಾರ ಹೆಗಡೆ ಅವರು ಹೇಳ್ಯಾರ. ಸರ್ವೇ ಸಾಮಾನ್ಯವಾಗಿ ಅವರು ಮಾತಾಡೋದು ಕಮ್ಮಿ. ಅವರ ಕೈ ಆಡೋದ ಜಾಸ್ತಿ. ಹಿಂಗಾಗಿ ಅವರೇನೋ ಅಪರೂಪಕ್ಕೊಮ್ಮೆ ಮಾತಾಡಿರಬೇಕು ಅಂತ ಜನಾ ಸುಮ್ಮನಿರಬೇಕು.

ಆದರ ನಿಜವಾಗಿಯೂ ವಿಜ್ಞಾನಿಗಳಿಗೆ ಈ ಕರೋನಾ ಅಥವಾ ಕಿರೀಟಿ ವೈರಸ್ಸು ವ್ಯಾಧಿಯನ್ನು ಅರ್ಥ ಮಾಡಿಕೊಳ್ಳೋದರಾಗ ಹಿಂಬರಿಕಿ ಆಗೇದೇನು? ಅವರು ಸೋತು ಹೋಗ್ಯಾರೇನು? ಅವರಿಗೆ ಅರ್ಥನ ಆಗಿಲ್ಲಾ ಅಂದರ ನಮ್ಮ ಗತಿ ಏನು?

ಈ ಹೊಸಾ ಇಂಗ್ಲೀಷ ಪಿಚ್ಚರ ಬಂದಿರತಾವಲ್ಲಾ. ಅದರಾಗ ಯಾವಾನೋ ಒಬ್ಬವ ರಷಿಯಾ/ ಇರಾನ/ ‍ಅಫಘಾನಿಸ್ತಾನ/ ಉತ್ತರ ಕೋರಿಯಾದಿಂದ ಬರತಾನ, ಯಾರಿಗೂ ಗೊತ್ತಾಗದಂಗ ಜನರ ನಡುವ ಒಂದು ವೈರಸ್ ಬಿಟ್ಟ ಬಿಡತಾನ.

ಇದರಿಂದಾಗಿ ಹೀರೋ- ಹಿರೋಯಿನಿ ಇಬ್ಬಳಾರನ್ನ ಬಿಟ್ಟು ಎಲ್ಲಾರು ಷಟದು ಹೋಗತಾರು. ಕಡೀಕೆ ಅದಕ್ಕ ಒಂದು ಭಾರತೀಯ/ ಪೂರ್ವ ಯುರೋಪಿಯನ್ನ/ ಆಫ್ರಿಕನ್ ವಿಜ್ಞಾನಿ ಎಂಟಿಡೋಟು ಅಥವಾ ನಂಜುಮುರಕಾ ಕಂಡು ಹಿಡಿತಾನ. ಅದರಿಂದ ಕೆಲವರ ಜೀವ ಉಳೀತೇತಿ.

ಈಗನೂ ಹಂಗ ಆಗೋದ ಐತೇನು? ನಾವೆಲ್ಲಾ ಭೈರವಿ ಭಜನೆ ಹಾಡಿಕೊಂತ ಹೋಗಾವರ ಅದೇವೇನು?

ಇಂಥಾ ಎಲ್ಲಾ ಪ್ರಶ್ನಿಗಳ ಉತ್ತರ ಏನು ಅಂತ ಅಂದರ. “ಇಲ್ಲಾ”. ವಿಜ್ಞಾನಿಗಳು- ಭಾರತೀರಾಗಿರಲಿ, ಹೊರಗಿನವರಾಗಿರಲಿ, ಇದರ ಮ್ಯಾಲೆ ಭಾಳ ಕೆಲಸಾ ಮಾಡಾಕುಂತಾರು. ಮನಿ- ಮಠಾ ಬಿಟ್ಟು ಹಗಲೂ -ರಾತ್ರಿ ಅದರಾಗ ಸಂಶೋಧನೆ ನಡದೇತಿ. ಎಂದಿನಂತೆ ನಮ್ಮ ಸರಕಾರಗಳು ಇಂಥಾದೆಲ್ಲಾ ನಮ್ಮಿಂದ ಮುಚ್ಚಿ ಇಡಾಕ ಹತ್ಯಾರ.

ಇದು ಎರಡು ಲೆವಲ್ಲಿನೊಳಗ ಕೆಲಸ ನಡದದ. ಒಂದು ಲಸಿಕೆ ತಯಾರು ಮಾಡೋದು, ಇನ್ನೊಂದು ಔಷಧಿ ಕಂಡು ಹಿಡಿಯೋದು.

ಇದರೊಳಗ ಒಂದು ಸಣ್ಣ ವ್ಯತ್ಯಾಸ ಅದ.

ಔಷಧಿ ಅಂದರ ರಸಾಯನಶಾಸ್ತ್ರದ ಸಂಶೋಧನೆಯೊಳಗಿಂದ ಹುಟ್ಟೋದು. ಲಸಿಕೆ ಉಪಯೋಗ ಅಂದರ ಜೀವಶಾಸ್ತ್ರಜ್ಞರ ತಡಕಾಟ.

ಔಷಧಿ ಅಂದರ ಕೆಲವು ರಸಾಯನಿಕಗಳನ್ನ ತೊಗೊಳ್ಳೋದು, ಅವು ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಇತರ ರೋಗಾಣುಗಳನ್ನು ನಿಷ್ಕ್ರಿಯ ಗೊಳಿಸತದೋ ಇಲ್ಲೋ ಅಂತ ನೋಡೋದು.

ಇದು ಸಾಮಾನ್ಯವಾಗಿ ಆಗತದ ಅಂದರ ಆ ರೋಗಾಣುವಿನ ಜೀವಕೋಶದ ಚರ್ಮವನ್ನು ಕರಗಿಸಿ ಬಿಡತದ. ಔಷಧಿ ಶಾಸ್ತ್ರಜ್ಞರು ಹೆಂಗ ಮಾಡತಾರ ಅಂದರ ಈಗ ಮಾರುಕಟ್ಟೆಯೊಳಗ ಇರೋ ಔಷಧಿಗಳನ್ನು ಬೇರೆ ಬೇರೆ ರೋಗಗಳನ್ನ ಗುಣ ಪಡಿಸಲಿಕ್ಕೆ ಉಪಯೋಗ ಮಾಡತಾರ. ಇದಕ್ಕ ರಿಪರಪಸಿಂಗ ಅಥವಾ ಮರುಪ್ರಯೋಜನ ಮಾಡೋದು ಅಂತಾರ.

ಕರೋನಾದ ವಿರುದ್ಧ ರೆಮೆಡೆಸಿವಿರ, ಏಸೈಕ್ಲೋವಿರ, ಪೆನ್ಸಿಕ್ಲೋವಿರ, ಫಾವಿಪಿರಾವಿರ ಮುಂತಾದ ಔಷಧಿ ಬಗ್ಗೆ ಸಂಶೋಧನೆ ನಡದದ. ಇನ್ನು ನಮ್ಮ ಟ್ರಂಪಣ್ಣನವರ ಧಮಕಿ ಡ್ರಗ್ ಹೈಡ್ರೋಕ್ಸಿ ಕ್ಲೋರೋಕ್ವಿನ್ ಸಹಿತ ಉಪಯೋಗಸಲಿಕ್ಕೆ ಹತ್ಯಾರ. ಇದರಾಗ ಯಾವುದು ಹೆಚ್ಚು ಪ್ರಾಯೋಜಕ ಅನಸತದೋ ಅದನ್ನ ಎಲ್ಲಾರಿಗೂ ಕೊಡತಾರ.

ಇವೆಲ್ಲಾ ಈಗ ಬೇರೆ ಬೇರೆ ರೋಗಗಳಿಗೆ ಬಳಸೋ ಔಷಧಿ. ಇವನ್ನು ಉಪಯೋಗಿಸೋ ಔಚಿತ್ಯ ಏನಂದರ ಹೊಸಾ ಔಷಧಿ ಕಂಡು ಹಿಡೀಬೇಕು ಅಂದರ ಅದಕ್ಕ ಹತ್ತು- ಇಪ್ಪತ್ತು ವರ್ಷ ಹಿಡೀತದ. ಯಾಕಂದರ ಅದನ್ನ ಮದಲಿಗೆ ಪ್ರಾಣಿಗಳ ಮ್ಯಾಲೆ, ಆಮ್ಯಾಲೆ ಮನುಷರ ಮ್ಯಾಲೆ ಪ್ರಯೋಗ ಮಾಡಿ ಆಮ್ಯಾಲೆ ಮಾರುಕಟ್ಟೆ ಒಳಗ ಬಿಡಬೇಕಾಗತದ.

ಇನ್ನ ಲಸಿಕೆ ಅಂದರ ಯಾವ ವೈರಸ್ಸು ರೋಗಾಣುಗಳ ವಿರುದ್ಧ ನೀವು ಲಸಿಕೆ ತಯಾರಿಸಲಿಕ್ಕೆ ಹೊಂಟಿರತೀರೋ ಅದರದ ನಿರುಪದ್ರವಿ ರೂಪವೊಂದನ್ನ ತಯಾರು ಮಾಡಿ ನಿಮಗ ಕೊಡೋದು. ಅದರಿಂದ ನಿಮ್ಮ ದೇಹದ ರೋಗ ನಿರೋಧಕ ಶಕ್ತಿ ಅದರ ವಿರುದ್ಧ ಹೋರಾಡೋವಂಥಾ ಪ್ರತಿಜೀವಿಗಳನ್ನ ತಯಾರು ಮಾಡತದ. ಇಂಥಾ ಲಸಿಕೆ ಸುಮಾರು 60-80 ಶೇಕಡಾ ಜನರಿಗೆ ಸಿಕ್ಕಿತಲಾ ಅಂದರ ಇಡೀ ಜನಸಂಖ್ಯೆಗೆ ರೋಗ ನಿರೋಧಕ ಶಕ್ತಿ ಬರತದ.

ಇವೆರಡೂ ಆಗಲಿಲ್ಲ ಅಂದರ ಸರಕಾರ ಕೈಚೆಲ್ಲಿ ಕುತಕೋಬೇಕು. ಅವಾಗ ಎನಾಗತದ ಅಂದರ ಕೆಲವು ದಶಕಗಳ ನಂತರ ಹಿಂಡು ನಿರೋಧ ಬರತದ. ಅಷ್ಟರೊಳಗ ಭಾಳ ಜನ ಸ್ವರ್ಗ ವಾಸಿಗಳಾಗಿರತಾರ. ಆಗ ನಮ್ಮಲ್ಲಿ ಹಣೆಬರಾ ಗಟ್ಟಿ ಇದ್ದು ಉಳದೋರು, ಮತ್ತು ನಾವು ಆರಿಸಿ ಕಳಿಸಿದವರು ಕೋಲಾಟ ಆಡಬಹುದು – ಯಾರು ಹಿತವರು ನಿನಗೆ ಈ ಮೂವರೊಳಗ ಅಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...