Homeಅಂಕಣಗಳುಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

ಲಸಿಕಾಯಣ: ಲಸಿಕೆಯೋ, ಔಷಧಿಯೋ, ಭೈರವಿ ಭಜನೆಯೋ

- Advertisement -
- Advertisement -

ಇಪ್ಪತ್ತೊಂದು ದಿವಸ ಮನ್ಯಾಗ ಕುತಗೊಂಡು ಎಲ್ಲಾರಿಗೂ ಸಾಕಾಗಿ ಹೋಗೇತಿ. ಕೆಲವರಂತೂ ಕುಂತಲ್ಲೇ ಕುಂತು ಕುಂತು ಬೂಳಸ ಬಂದು ಬಿಟ್ಟಾರು.

ಜನರಿಗೆ ನೀವು ಠೀವಿ ನೋಡ್ರಿ, ಫೋನಿನ್ಯಾಗ ಸಮಾಜ ವಿರೋಧಿ ಮಾಧ್ಯಮದ ಪೋಸ್ಟುಗಳನ್ನ ಪೋಸ್ಟಮೆನ್‍ಗತೆ ಮಂದಿಗೆ ಹಂಚಿಕೊಂತ ಕೂತ ಬಿಡ್ರಿ ಅಂದರ ಹೂಂ ಅಂತೇವಿ. ಆದರ “ನೀವು ಹಿಂಗ ಇರಬ್ಯಾಡ್ರಿ, ಒಂದು ಈಟು ಬುದ್ಧಿ ಉಪಯೋಗ ಮಾಡ್ರಿ” ಅಂತ ಅಂದರ ಹೆಂಗ? ಅದೊಂದು ಬಿಟ್ಟು ಬ್ಯಾರೆ ಏನರ ಹೇಳರಿ, ಮಾಡೇವಿ, ಇದನ್ನ ಮಾತ್ರ ಅನಬ್ಯಾಡ್ರಿ,” ಅಂತ ಅಂತೀರೇನೋ? ಇರಲಿ, ಇದೊಂದು ಸಲ ಕೇಳ್ರಿ.

`ಈ ಕೊರೊನಾ ವೈರಸ್ಸನ ಅಪಾಯವನ್ನೇ ನಮ್ಮ ವಿಜ್ಞಾನಿಗಳು ಅನ್ನಿಸಿಕೊಳ್ಳೋರು ಅರ್ಥ ಮಾಡಿಕೊಂಡಿಲ್ಲ, ಇನ್ನ ಇಸ್ಲಾಮಿನ ಅಪಾಯವನ್ನು ಹೇಗೆ ಅರ್ಥ ಮಾಡಿಕೊಂಡಾರು ಅಂತ ಹೇಳಿ ನಮ್ಮ ನವ್ಯಾತೀತ ಚಿಂತಕ ಅನಂತ ಕುಮಾರ ಹೆಗಡೆ ಅವರು ಹೇಳ್ಯಾರ. ಸರ್ವೇ ಸಾಮಾನ್ಯವಾಗಿ ಅವರು ಮಾತಾಡೋದು ಕಮ್ಮಿ. ಅವರ ಕೈ ಆಡೋದ ಜಾಸ್ತಿ. ಹಿಂಗಾಗಿ ಅವರೇನೋ ಅಪರೂಪಕ್ಕೊಮ್ಮೆ ಮಾತಾಡಿರಬೇಕು ಅಂತ ಜನಾ ಸುಮ್ಮನಿರಬೇಕು.

ಆದರ ನಿಜವಾಗಿಯೂ ವಿಜ್ಞಾನಿಗಳಿಗೆ ಈ ಕರೋನಾ ಅಥವಾ ಕಿರೀಟಿ ವೈರಸ್ಸು ವ್ಯಾಧಿಯನ್ನು ಅರ್ಥ ಮಾಡಿಕೊಳ್ಳೋದರಾಗ ಹಿಂಬರಿಕಿ ಆಗೇದೇನು? ಅವರು ಸೋತು ಹೋಗ್ಯಾರೇನು? ಅವರಿಗೆ ಅರ್ಥನ ಆಗಿಲ್ಲಾ ಅಂದರ ನಮ್ಮ ಗತಿ ಏನು?

ಈ ಹೊಸಾ ಇಂಗ್ಲೀಷ ಪಿಚ್ಚರ ಬಂದಿರತಾವಲ್ಲಾ. ಅದರಾಗ ಯಾವಾನೋ ಒಬ್ಬವ ರಷಿಯಾ/ ಇರಾನ/ ‍ಅಫಘಾನಿಸ್ತಾನ/ ಉತ್ತರ ಕೋರಿಯಾದಿಂದ ಬರತಾನ, ಯಾರಿಗೂ ಗೊತ್ತಾಗದಂಗ ಜನರ ನಡುವ ಒಂದು ವೈರಸ್ ಬಿಟ್ಟ ಬಿಡತಾನ.

ಇದರಿಂದಾಗಿ ಹೀರೋ- ಹಿರೋಯಿನಿ ಇಬ್ಬಳಾರನ್ನ ಬಿಟ್ಟು ಎಲ್ಲಾರು ಷಟದು ಹೋಗತಾರು. ಕಡೀಕೆ ಅದಕ್ಕ ಒಂದು ಭಾರತೀಯ/ ಪೂರ್ವ ಯುರೋಪಿಯನ್ನ/ ಆಫ್ರಿಕನ್ ವಿಜ್ಞಾನಿ ಎಂಟಿಡೋಟು ಅಥವಾ ನಂಜುಮುರಕಾ ಕಂಡು ಹಿಡಿತಾನ. ಅದರಿಂದ ಕೆಲವರ ಜೀವ ಉಳೀತೇತಿ.

ಈಗನೂ ಹಂಗ ಆಗೋದ ಐತೇನು? ನಾವೆಲ್ಲಾ ಭೈರವಿ ಭಜನೆ ಹಾಡಿಕೊಂತ ಹೋಗಾವರ ಅದೇವೇನು?

ಇಂಥಾ ಎಲ್ಲಾ ಪ್ರಶ್ನಿಗಳ ಉತ್ತರ ಏನು ಅಂತ ಅಂದರ. “ಇಲ್ಲಾ”. ವಿಜ್ಞಾನಿಗಳು- ಭಾರತೀರಾಗಿರಲಿ, ಹೊರಗಿನವರಾಗಿರಲಿ, ಇದರ ಮ್ಯಾಲೆ ಭಾಳ ಕೆಲಸಾ ಮಾಡಾಕುಂತಾರು. ಮನಿ- ಮಠಾ ಬಿಟ್ಟು ಹಗಲೂ -ರಾತ್ರಿ ಅದರಾಗ ಸಂಶೋಧನೆ ನಡದೇತಿ. ಎಂದಿನಂತೆ ನಮ್ಮ ಸರಕಾರಗಳು ಇಂಥಾದೆಲ್ಲಾ ನಮ್ಮಿಂದ ಮುಚ್ಚಿ ಇಡಾಕ ಹತ್ಯಾರ.

ಇದು ಎರಡು ಲೆವಲ್ಲಿನೊಳಗ ಕೆಲಸ ನಡದದ. ಒಂದು ಲಸಿಕೆ ತಯಾರು ಮಾಡೋದು, ಇನ್ನೊಂದು ಔಷಧಿ ಕಂಡು ಹಿಡಿಯೋದು.

ಇದರೊಳಗ ಒಂದು ಸಣ್ಣ ವ್ಯತ್ಯಾಸ ಅದ.

ಔಷಧಿ ಅಂದರ ರಸಾಯನಶಾಸ್ತ್ರದ ಸಂಶೋಧನೆಯೊಳಗಿಂದ ಹುಟ್ಟೋದು. ಲಸಿಕೆ ಉಪಯೋಗ ಅಂದರ ಜೀವಶಾಸ್ತ್ರಜ್ಞರ ತಡಕಾಟ.

ಔಷಧಿ ಅಂದರ ಕೆಲವು ರಸಾಯನಿಕಗಳನ್ನ ತೊಗೊಳ್ಳೋದು, ಅವು ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಇತರ ರೋಗಾಣುಗಳನ್ನು ನಿಷ್ಕ್ರಿಯ ಗೊಳಿಸತದೋ ಇಲ್ಲೋ ಅಂತ ನೋಡೋದು.

ಇದು ಸಾಮಾನ್ಯವಾಗಿ ಆಗತದ ಅಂದರ ಆ ರೋಗಾಣುವಿನ ಜೀವಕೋಶದ ಚರ್ಮವನ್ನು ಕರಗಿಸಿ ಬಿಡತದ. ಔಷಧಿ ಶಾಸ್ತ್ರಜ್ಞರು ಹೆಂಗ ಮಾಡತಾರ ಅಂದರ ಈಗ ಮಾರುಕಟ್ಟೆಯೊಳಗ ಇರೋ ಔಷಧಿಗಳನ್ನು ಬೇರೆ ಬೇರೆ ರೋಗಗಳನ್ನ ಗುಣ ಪಡಿಸಲಿಕ್ಕೆ ಉಪಯೋಗ ಮಾಡತಾರ. ಇದಕ್ಕ ರಿಪರಪಸಿಂಗ ಅಥವಾ ಮರುಪ್ರಯೋಜನ ಮಾಡೋದು ಅಂತಾರ.

ಕರೋನಾದ ವಿರುದ್ಧ ರೆಮೆಡೆಸಿವಿರ, ಏಸೈಕ್ಲೋವಿರ, ಪೆನ್ಸಿಕ್ಲೋವಿರ, ಫಾವಿಪಿರಾವಿರ ಮುಂತಾದ ಔಷಧಿ ಬಗ್ಗೆ ಸಂಶೋಧನೆ ನಡದದ. ಇನ್ನು ನಮ್ಮ ಟ್ರಂಪಣ್ಣನವರ ಧಮಕಿ ಡ್ರಗ್ ಹೈಡ್ರೋಕ್ಸಿ ಕ್ಲೋರೋಕ್ವಿನ್ ಸಹಿತ ಉಪಯೋಗಸಲಿಕ್ಕೆ ಹತ್ಯಾರ. ಇದರಾಗ ಯಾವುದು ಹೆಚ್ಚು ಪ್ರಾಯೋಜಕ ಅನಸತದೋ ಅದನ್ನ ಎಲ್ಲಾರಿಗೂ ಕೊಡತಾರ.

ಇವೆಲ್ಲಾ ಈಗ ಬೇರೆ ಬೇರೆ ರೋಗಗಳಿಗೆ ಬಳಸೋ ಔಷಧಿ. ಇವನ್ನು ಉಪಯೋಗಿಸೋ ಔಚಿತ್ಯ ಏನಂದರ ಹೊಸಾ ಔಷಧಿ ಕಂಡು ಹಿಡೀಬೇಕು ಅಂದರ ಅದಕ್ಕ ಹತ್ತು- ಇಪ್ಪತ್ತು ವರ್ಷ ಹಿಡೀತದ. ಯಾಕಂದರ ಅದನ್ನ ಮದಲಿಗೆ ಪ್ರಾಣಿಗಳ ಮ್ಯಾಲೆ, ಆಮ್ಯಾಲೆ ಮನುಷರ ಮ್ಯಾಲೆ ಪ್ರಯೋಗ ಮಾಡಿ ಆಮ್ಯಾಲೆ ಮಾರುಕಟ್ಟೆ ಒಳಗ ಬಿಡಬೇಕಾಗತದ.

ಇನ್ನ ಲಸಿಕೆ ಅಂದರ ಯಾವ ವೈರಸ್ಸು ರೋಗಾಣುಗಳ ವಿರುದ್ಧ ನೀವು ಲಸಿಕೆ ತಯಾರಿಸಲಿಕ್ಕೆ ಹೊಂಟಿರತೀರೋ ಅದರದ ನಿರುಪದ್ರವಿ ರೂಪವೊಂದನ್ನ ತಯಾರು ಮಾಡಿ ನಿಮಗ ಕೊಡೋದು. ಅದರಿಂದ ನಿಮ್ಮ ದೇಹದ ರೋಗ ನಿರೋಧಕ ಶಕ್ತಿ ಅದರ ವಿರುದ್ಧ ಹೋರಾಡೋವಂಥಾ ಪ್ರತಿಜೀವಿಗಳನ್ನ ತಯಾರು ಮಾಡತದ. ಇಂಥಾ ಲಸಿಕೆ ಸುಮಾರು 60-80 ಶೇಕಡಾ ಜನರಿಗೆ ಸಿಕ್ಕಿತಲಾ ಅಂದರ ಇಡೀ ಜನಸಂಖ್ಯೆಗೆ ರೋಗ ನಿರೋಧಕ ಶಕ್ತಿ ಬರತದ.

ಇವೆರಡೂ ಆಗಲಿಲ್ಲ ಅಂದರ ಸರಕಾರ ಕೈಚೆಲ್ಲಿ ಕುತಕೋಬೇಕು. ಅವಾಗ ಎನಾಗತದ ಅಂದರ ಕೆಲವು ದಶಕಗಳ ನಂತರ ಹಿಂಡು ನಿರೋಧ ಬರತದ. ಅಷ್ಟರೊಳಗ ಭಾಳ ಜನ ಸ್ವರ್ಗ ವಾಸಿಗಳಾಗಿರತಾರ. ಆಗ ನಮ್ಮಲ್ಲಿ ಹಣೆಬರಾ ಗಟ್ಟಿ ಇದ್ದು ಉಳದೋರು, ಮತ್ತು ನಾವು ಆರಿಸಿ ಕಳಿಸಿದವರು ಕೋಲಾಟ ಆಡಬಹುದು – ಯಾರು ಹಿತವರು ನಿನಗೆ ಈ ಮೂವರೊಳಗ ಅಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...