Homeಮುಖಪುಟಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

ಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

- Advertisement -
- Advertisement -

ಲಸಿಕೆಗಳು ಸಾರ್ವಜನಿಕ ಸ್ವತ್ತುಗಳಾಗಿದ್ದು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಲಸಿಕೆ ವಿತರಣೆ ಕುರಿತು ಕೇಂದ್ರದ ಹೊಸ ನೀತಿಯನ್ನು ಮರುಪರಿಶೀಲಿಸುವಂತೆ ಅವರು ಆಗ್ರಹಿಸಿದ್ದಾರೆ.

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಳನ್ನು ಲಭ್ಯವಾಗುವಂತೆ ಮಾಡುವ ಭಾರತ ಸರ್ಕಾರದ ಕ್ರಮವನ್ನು ಪಿಣರಾಯಿ ಸ್ವಾಗತಿಸಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಸುಗಮ ವ್ಯಾಕ್ಸಿನೇಷನ್ ಖಾತ್ರಿಪಡಿಸುವಲ್ಲಿ ಕೇಂದ್ರವು ನೀಡಿದ ಬೆಂಬಲ ಮತ್ತು ಮಾರ್ಗದರ್ಶನಕ್ಕಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಲಸಿಕೆ ಯೋಜನೆಯನ್ನು ಜಾರಿಗೆ ತರಲು ಅಗತ್ಯವಿರುವ 50 ಲಕ್ಷ ಲಸಿಕೆ ಪ್ರಮಾಣಗಳ ಬೇಡಿಕೆಯ ಮನವಿಯನ್ನು ಅವರು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಕೇರಳಕ್ಕೆ ಇದುವರೆಗೆ ಕೇವಲ 5.5 ಲಕ್ಷ ಡೋಸ್‌ಗಳು ಮಾತ್ರ ದೊರೆತಿವೆ, ಇದರಿಂದಾಗಿ ಸ್ಪಾಟ್ ನೋಂದಣಿಯನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ತಂದಿದೆ. ಇದು ಲಸಿಕಾ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಅಡ್ಡಿಯಾಗಿದೆ. ಬಾಕಿ ಡೋಸ್‌ಗಳನ್ನು ಶೀಘ್ರವಾಗಿ ಹಂಚಿಕೆ ಮಾಡಬೇಕು ಎಂದು ಕೇಂದ್ರವನ್ನು ಅವರು ಒತ್ತಾಯಿಸಿದ್ದಾರೆ.

ಲಸಿಕೆ ವಿತರಣೆಯ ಕುರಿತು ಕೇಂದ್ರದ ಹೊಸ ನೀತಿಯಲ್ಲಿ, ಉತ್ಪಾದಕರಿಂದ ನೇರವಾಗಿ ಲಸಿಕೆ ಪಡೆಯಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.

“ಸಾಂಕ್ರಾಮಿಕ ಪರಿಣಾಮಗಳಿಂದ ರಾಜ್ಯಗಳು ಈಗಾಗಲೇ ಹೆಚ್ಚುವರಿ ಹಣಕಾಸಿನ ಬದ್ಧತೆಗಳನ್ನು ಎದುರಿಸುತ್ತಿವೆ. ಹೀಗಾಗಿ ಲಸಿಕೆಗಳ ವೆಚ್ಚದಿಂದ ಹೊರೆಯಾಗಬಾರದು. ಲಸಿಕೆಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕು. ಲಸಿಕೆ ಪಡೆಯಲು ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯನ್ನು ಕೇಂದ್ರ ನೀಡಬೇಕು ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆರ್ಥಿಕ ಹಿಂಜರಿತ ಇನ್ನೂ ಮುಂದುವರಿದಂತೆ, ಲಸಿಕೆ ಖರೀದಿಸುವ ಹೆಚ್ಚುವರಿ ಹೊರೆ ರಾಜ್ಯದ ಹಣಕಾಸಿನ ಮೇಲೆ ಸಾಕಷ್ಟು ಒತ್ತಡವನ್ನುಂಟು ಮಾಡುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ, ಅದರ ಪ್ರತಿಯೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.

“ರಾಜ್ಯ ಸರ್ಕಾರಗಳು ಆರೋಗ್ಯ ಕ್ಷೇತ್ರದಲ್ಲಿ ಸಾಂವಿಧಾನಿಕ ಬಾಧ್ಯತೆಯನ್ನು ಹೊಂದಿವೆ ಮತ್ತು ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಉಚಿತವಾಗಿ ಒದಗಿಸಬೇಕಾದ ಕೋವಿಡ್ ಲಸಿಕೆಯ ಖಚಿತ ಕೋಟಾ ಅಗತ್ಯವಿದೆ. ಲಸಿಕೆಗಳನ್ನು ರಾಜ್ಯಗಳಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಉಚಿತವಾಗಿ ನೀಡುವುದು ಕಡ್ಡಾಯವಾಗಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮಾನದಂಡಗಳ ಆಧಾರದ ಮೇಲೆ ಕೇಂದ್ರವು ತನ್ನ ಶೇಕಡಾ 50 ರಷ್ಟು ಕೋಟಾದಿಂದ ರಾಜ್ಯ ಸರ್ಕಾರಗಳಿಗೆ ಲಸಿಕೆ ಉಚಿತವಾಗಿ ನೀಡಲಿದೆ ಎಂದು ನೀತಿ ಹೇಳಿದ್ದರೂ, ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆ ರಾಜ್ಯಗಳಿಗೆ ಇದೆ ಎಂದು ಅವರು ಹೇಳಿದ್ದಾರೆ.

ಕೇರಳವು ಕೋವಿಡ್ ಎರಡನೇ ಅಲೆ ಎದುರಿಸುತ್ತಿದ್ದು, ಪ್ರತಿದಿನ ಗಣನೀಯ ಪ್ರಮಾಣದ ಏರಿಕೆಗೆ ಸಾಕ್ಷಿಯಾಗುತ್ತಿರುವಾಗ, ಹೆಚ್ಚುತ್ತಿರುವ ಪ್ರಕರಣಗಳ ರೇಖೆಯನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...