Homeಮುಖಪುಟಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

ಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

- Advertisement -
- Advertisement -

ಲಸಿಕೆಗಳು ಸಾರ್ವಜನಿಕ ಸ್ವತ್ತುಗಳಾಗಿದ್ದು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಲಸಿಕೆ ವಿತರಣೆ ಕುರಿತು ಕೇಂದ್ರದ ಹೊಸ ನೀತಿಯನ್ನು ಮರುಪರಿಶೀಲಿಸುವಂತೆ ಅವರು ಆಗ್ರಹಿಸಿದ್ದಾರೆ.

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಳನ್ನು ಲಭ್ಯವಾಗುವಂತೆ ಮಾಡುವ ಭಾರತ ಸರ್ಕಾರದ ಕ್ರಮವನ್ನು ಪಿಣರಾಯಿ ಸ್ವಾಗತಿಸಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಸುಗಮ ವ್ಯಾಕ್ಸಿನೇಷನ್ ಖಾತ್ರಿಪಡಿಸುವಲ್ಲಿ ಕೇಂದ್ರವು ನೀಡಿದ ಬೆಂಬಲ ಮತ್ತು ಮಾರ್ಗದರ್ಶನಕ್ಕಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಲಸಿಕೆ ಯೋಜನೆಯನ್ನು ಜಾರಿಗೆ ತರಲು ಅಗತ್ಯವಿರುವ 50 ಲಕ್ಷ ಲಸಿಕೆ ಪ್ರಮಾಣಗಳ ಬೇಡಿಕೆಯ ಮನವಿಯನ್ನು ಅವರು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಕೇರಳಕ್ಕೆ ಇದುವರೆಗೆ ಕೇವಲ 5.5 ಲಕ್ಷ ಡೋಸ್‌ಗಳು ಮಾತ್ರ ದೊರೆತಿವೆ, ಇದರಿಂದಾಗಿ ಸ್ಪಾಟ್ ನೋಂದಣಿಯನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ತಂದಿದೆ. ಇದು ಲಸಿಕಾ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಅಡ್ಡಿಯಾಗಿದೆ. ಬಾಕಿ ಡೋಸ್‌ಗಳನ್ನು ಶೀಘ್ರವಾಗಿ ಹಂಚಿಕೆ ಮಾಡಬೇಕು ಎಂದು ಕೇಂದ್ರವನ್ನು ಅವರು ಒತ್ತಾಯಿಸಿದ್ದಾರೆ.

ಲಸಿಕೆ ವಿತರಣೆಯ ಕುರಿತು ಕೇಂದ್ರದ ಹೊಸ ನೀತಿಯಲ್ಲಿ, ಉತ್ಪಾದಕರಿಂದ ನೇರವಾಗಿ ಲಸಿಕೆ ಪಡೆಯಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.

“ಸಾಂಕ್ರಾಮಿಕ ಪರಿಣಾಮಗಳಿಂದ ರಾಜ್ಯಗಳು ಈಗಾಗಲೇ ಹೆಚ್ಚುವರಿ ಹಣಕಾಸಿನ ಬದ್ಧತೆಗಳನ್ನು ಎದುರಿಸುತ್ತಿವೆ. ಹೀಗಾಗಿ ಲಸಿಕೆಗಳ ವೆಚ್ಚದಿಂದ ಹೊರೆಯಾಗಬಾರದು. ಲಸಿಕೆಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕು. ಲಸಿಕೆ ಪಡೆಯಲು ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯನ್ನು ಕೇಂದ್ರ ನೀಡಬೇಕು ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆರ್ಥಿಕ ಹಿಂಜರಿತ ಇನ್ನೂ ಮುಂದುವರಿದಂತೆ, ಲಸಿಕೆ ಖರೀದಿಸುವ ಹೆಚ್ಚುವರಿ ಹೊರೆ ರಾಜ್ಯದ ಹಣಕಾಸಿನ ಮೇಲೆ ಸಾಕಷ್ಟು ಒತ್ತಡವನ್ನುಂಟು ಮಾಡುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ, ಅದರ ಪ್ರತಿಯೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.

“ರಾಜ್ಯ ಸರ್ಕಾರಗಳು ಆರೋಗ್ಯ ಕ್ಷೇತ್ರದಲ್ಲಿ ಸಾಂವಿಧಾನಿಕ ಬಾಧ್ಯತೆಯನ್ನು ಹೊಂದಿವೆ ಮತ್ತು ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಉಚಿತವಾಗಿ ಒದಗಿಸಬೇಕಾದ ಕೋವಿಡ್ ಲಸಿಕೆಯ ಖಚಿತ ಕೋಟಾ ಅಗತ್ಯವಿದೆ. ಲಸಿಕೆಗಳನ್ನು ರಾಜ್ಯಗಳಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಉಚಿತವಾಗಿ ನೀಡುವುದು ಕಡ್ಡಾಯವಾಗಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮಾನದಂಡಗಳ ಆಧಾರದ ಮೇಲೆ ಕೇಂದ್ರವು ತನ್ನ ಶೇಕಡಾ 50 ರಷ್ಟು ಕೋಟಾದಿಂದ ರಾಜ್ಯ ಸರ್ಕಾರಗಳಿಗೆ ಲಸಿಕೆ ಉಚಿತವಾಗಿ ನೀಡಲಿದೆ ಎಂದು ನೀತಿ ಹೇಳಿದ್ದರೂ, ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆ ರಾಜ್ಯಗಳಿಗೆ ಇದೆ ಎಂದು ಅವರು ಹೇಳಿದ್ದಾರೆ.

ಕೇರಳವು ಕೋವಿಡ್ ಎರಡನೇ ಅಲೆ ಎದುರಿಸುತ್ತಿದ್ದು, ಪ್ರತಿದಿನ ಗಣನೀಯ ಪ್ರಮಾಣದ ಏರಿಕೆಗೆ ಸಾಕ್ಷಿಯಾಗುತ್ತಿರುವಾಗ, ಹೆಚ್ಚುತ್ತಿರುವ ಪ್ರಕರಣಗಳ ರೇಖೆಯನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...