Homeಮುಖಪುಟಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

ಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

- Advertisement -
- Advertisement -

ಲಸಿಕೆಗಳು ಸಾರ್ವಜನಿಕ ಸ್ವತ್ತುಗಳಾಗಿದ್ದು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಲಸಿಕೆ ವಿತರಣೆ ಕುರಿತು ಕೇಂದ್ರದ ಹೊಸ ನೀತಿಯನ್ನು ಮರುಪರಿಶೀಲಿಸುವಂತೆ ಅವರು ಆಗ್ರಹಿಸಿದ್ದಾರೆ.

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಳನ್ನು ಲಭ್ಯವಾಗುವಂತೆ ಮಾಡುವ ಭಾರತ ಸರ್ಕಾರದ ಕ್ರಮವನ್ನು ಪಿಣರಾಯಿ ಸ್ವಾಗತಿಸಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಸುಗಮ ವ್ಯಾಕ್ಸಿನೇಷನ್ ಖಾತ್ರಿಪಡಿಸುವಲ್ಲಿ ಕೇಂದ್ರವು ನೀಡಿದ ಬೆಂಬಲ ಮತ್ತು ಮಾರ್ಗದರ್ಶನಕ್ಕಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಲಸಿಕೆ ಯೋಜನೆಯನ್ನು ಜಾರಿಗೆ ತರಲು ಅಗತ್ಯವಿರುವ 50 ಲಕ್ಷ ಲಸಿಕೆ ಪ್ರಮಾಣಗಳ ಬೇಡಿಕೆಯ ಮನವಿಯನ್ನು ಅವರು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಕೇರಳಕ್ಕೆ ಇದುವರೆಗೆ ಕೇವಲ 5.5 ಲಕ್ಷ ಡೋಸ್‌ಗಳು ಮಾತ್ರ ದೊರೆತಿವೆ, ಇದರಿಂದಾಗಿ ಸ್ಪಾಟ್ ನೋಂದಣಿಯನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ತಂದಿದೆ. ಇದು ಲಸಿಕಾ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಅಡ್ಡಿಯಾಗಿದೆ. ಬಾಕಿ ಡೋಸ್‌ಗಳನ್ನು ಶೀಘ್ರವಾಗಿ ಹಂಚಿಕೆ ಮಾಡಬೇಕು ಎಂದು ಕೇಂದ್ರವನ್ನು ಅವರು ಒತ್ತಾಯಿಸಿದ್ದಾರೆ.

ಲಸಿಕೆ ವಿತರಣೆಯ ಕುರಿತು ಕೇಂದ್ರದ ಹೊಸ ನೀತಿಯಲ್ಲಿ, ಉತ್ಪಾದಕರಿಂದ ನೇರವಾಗಿ ಲಸಿಕೆ ಪಡೆಯಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.

“ಸಾಂಕ್ರಾಮಿಕ ಪರಿಣಾಮಗಳಿಂದ ರಾಜ್ಯಗಳು ಈಗಾಗಲೇ ಹೆಚ್ಚುವರಿ ಹಣಕಾಸಿನ ಬದ್ಧತೆಗಳನ್ನು ಎದುರಿಸುತ್ತಿವೆ. ಹೀಗಾಗಿ ಲಸಿಕೆಗಳ ವೆಚ್ಚದಿಂದ ಹೊರೆಯಾಗಬಾರದು. ಲಸಿಕೆಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕು. ಲಸಿಕೆ ಪಡೆಯಲು ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯನ್ನು ಕೇಂದ್ರ ನೀಡಬೇಕು ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆರ್ಥಿಕ ಹಿಂಜರಿತ ಇನ್ನೂ ಮುಂದುವರಿದಂತೆ, ಲಸಿಕೆ ಖರೀದಿಸುವ ಹೆಚ್ಚುವರಿ ಹೊರೆ ರಾಜ್ಯದ ಹಣಕಾಸಿನ ಮೇಲೆ ಸಾಕಷ್ಟು ಒತ್ತಡವನ್ನುಂಟು ಮಾಡುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ, ಅದರ ಪ್ರತಿಯೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.

“ರಾಜ್ಯ ಸರ್ಕಾರಗಳು ಆರೋಗ್ಯ ಕ್ಷೇತ್ರದಲ್ಲಿ ಸಾಂವಿಧಾನಿಕ ಬಾಧ್ಯತೆಯನ್ನು ಹೊಂದಿವೆ ಮತ್ತು ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಉಚಿತವಾಗಿ ಒದಗಿಸಬೇಕಾದ ಕೋವಿಡ್ ಲಸಿಕೆಯ ಖಚಿತ ಕೋಟಾ ಅಗತ್ಯವಿದೆ. ಲಸಿಕೆಗಳನ್ನು ರಾಜ್ಯಗಳಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಉಚಿತವಾಗಿ ನೀಡುವುದು ಕಡ್ಡಾಯವಾಗಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮಾನದಂಡಗಳ ಆಧಾರದ ಮೇಲೆ ಕೇಂದ್ರವು ತನ್ನ ಶೇಕಡಾ 50 ರಷ್ಟು ಕೋಟಾದಿಂದ ರಾಜ್ಯ ಸರ್ಕಾರಗಳಿಗೆ ಲಸಿಕೆ ಉಚಿತವಾಗಿ ನೀಡಲಿದೆ ಎಂದು ನೀತಿ ಹೇಳಿದ್ದರೂ, ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆ ರಾಜ್ಯಗಳಿಗೆ ಇದೆ ಎಂದು ಅವರು ಹೇಳಿದ್ದಾರೆ.

ಕೇರಳವು ಕೋವಿಡ್ ಎರಡನೇ ಅಲೆ ಎದುರಿಸುತ್ತಿದ್ದು, ಪ್ರತಿದಿನ ಗಣನೀಯ ಪ್ರಮಾಣದ ಏರಿಕೆಗೆ ಸಾಕ್ಷಿಯಾಗುತ್ತಿರುವಾಗ, ಹೆಚ್ಚುತ್ತಿರುವ ಪ್ರಕರಣಗಳ ರೇಖೆಯನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...