Homeಮುಖಪುಟಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

ಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

- Advertisement -
- Advertisement -

ಲಸಿಕೆಗಳು ಸಾರ್ವಜನಿಕ ಸ್ವತ್ತುಗಳಾಗಿದ್ದು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಲಸಿಕೆ ವಿತರಣೆ ಕುರಿತು ಕೇಂದ್ರದ ಹೊಸ ನೀತಿಯನ್ನು ಮರುಪರಿಶೀಲಿಸುವಂತೆ ಅವರು ಆಗ್ರಹಿಸಿದ್ದಾರೆ.

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಳನ್ನು ಲಭ್ಯವಾಗುವಂತೆ ಮಾಡುವ ಭಾರತ ಸರ್ಕಾರದ ಕ್ರಮವನ್ನು ಪಿಣರಾಯಿ ಸ್ವಾಗತಿಸಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಸುಗಮ ವ್ಯಾಕ್ಸಿನೇಷನ್ ಖಾತ್ರಿಪಡಿಸುವಲ್ಲಿ ಕೇಂದ್ರವು ನೀಡಿದ ಬೆಂಬಲ ಮತ್ತು ಮಾರ್ಗದರ್ಶನಕ್ಕಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಲಸಿಕೆ ಯೋಜನೆಯನ್ನು ಜಾರಿಗೆ ತರಲು ಅಗತ್ಯವಿರುವ 50 ಲಕ್ಷ ಲಸಿಕೆ ಪ್ರಮಾಣಗಳ ಬೇಡಿಕೆಯ ಮನವಿಯನ್ನು ಅವರು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಕೇರಳಕ್ಕೆ ಇದುವರೆಗೆ ಕೇವಲ 5.5 ಲಕ್ಷ ಡೋಸ್‌ಗಳು ಮಾತ್ರ ದೊರೆತಿವೆ, ಇದರಿಂದಾಗಿ ಸ್ಪಾಟ್ ನೋಂದಣಿಯನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ತಂದಿದೆ. ಇದು ಲಸಿಕಾ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಅಡ್ಡಿಯಾಗಿದೆ. ಬಾಕಿ ಡೋಸ್‌ಗಳನ್ನು ಶೀಘ್ರವಾಗಿ ಹಂಚಿಕೆ ಮಾಡಬೇಕು ಎಂದು ಕೇಂದ್ರವನ್ನು ಅವರು ಒತ್ತಾಯಿಸಿದ್ದಾರೆ.

ಲಸಿಕೆ ವಿತರಣೆಯ ಕುರಿತು ಕೇಂದ್ರದ ಹೊಸ ನೀತಿಯಲ್ಲಿ, ಉತ್ಪಾದಕರಿಂದ ನೇರವಾಗಿ ಲಸಿಕೆ ಪಡೆಯಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.

“ಸಾಂಕ್ರಾಮಿಕ ಪರಿಣಾಮಗಳಿಂದ ರಾಜ್ಯಗಳು ಈಗಾಗಲೇ ಹೆಚ್ಚುವರಿ ಹಣಕಾಸಿನ ಬದ್ಧತೆಗಳನ್ನು ಎದುರಿಸುತ್ತಿವೆ. ಹೀಗಾಗಿ ಲಸಿಕೆಗಳ ವೆಚ್ಚದಿಂದ ಹೊರೆಯಾಗಬಾರದು. ಲಸಿಕೆಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕು. ಲಸಿಕೆ ಪಡೆಯಲು ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯನ್ನು ಕೇಂದ್ರ ನೀಡಬೇಕು ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆರ್ಥಿಕ ಹಿಂಜರಿತ ಇನ್ನೂ ಮುಂದುವರಿದಂತೆ, ಲಸಿಕೆ ಖರೀದಿಸುವ ಹೆಚ್ಚುವರಿ ಹೊರೆ ರಾಜ್ಯದ ಹಣಕಾಸಿನ ಮೇಲೆ ಸಾಕಷ್ಟು ಒತ್ತಡವನ್ನುಂಟು ಮಾಡುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ, ಅದರ ಪ್ರತಿಯೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.

“ರಾಜ್ಯ ಸರ್ಕಾರಗಳು ಆರೋಗ್ಯ ಕ್ಷೇತ್ರದಲ್ಲಿ ಸಾಂವಿಧಾನಿಕ ಬಾಧ್ಯತೆಯನ್ನು ಹೊಂದಿವೆ ಮತ್ತು ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಉಚಿತವಾಗಿ ಒದಗಿಸಬೇಕಾದ ಕೋವಿಡ್ ಲಸಿಕೆಯ ಖಚಿತ ಕೋಟಾ ಅಗತ್ಯವಿದೆ. ಲಸಿಕೆಗಳನ್ನು ರಾಜ್ಯಗಳಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಉಚಿತವಾಗಿ ನೀಡುವುದು ಕಡ್ಡಾಯವಾಗಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮಾನದಂಡಗಳ ಆಧಾರದ ಮೇಲೆ ಕೇಂದ್ರವು ತನ್ನ ಶೇಕಡಾ 50 ರಷ್ಟು ಕೋಟಾದಿಂದ ರಾಜ್ಯ ಸರ್ಕಾರಗಳಿಗೆ ಲಸಿಕೆ ಉಚಿತವಾಗಿ ನೀಡಲಿದೆ ಎಂದು ನೀತಿ ಹೇಳಿದ್ದರೂ, ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆ ರಾಜ್ಯಗಳಿಗೆ ಇದೆ ಎಂದು ಅವರು ಹೇಳಿದ್ದಾರೆ.

ಕೇರಳವು ಕೋವಿಡ್ ಎರಡನೇ ಅಲೆ ಎದುರಿಸುತ್ತಿದ್ದು, ಪ್ರತಿದಿನ ಗಣನೀಯ ಪ್ರಮಾಣದ ಏರಿಕೆಗೆ ಸಾಕ್ಷಿಯಾಗುತ್ತಿರುವಾಗ, ಹೆಚ್ಚುತ್ತಿರುವ ಪ್ರಕರಣಗಳ ರೇಖೆಯನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನೀವು ನಮ್ಮ ಬೆನ್ನೆಲುಬು; ಪಕ್ಷದ ಡಿಎನ್‌ಎ..’; ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಸಂದೇಶ

0
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪಕ್ಷದ ಕಾರ್ಯಕರ್ತರಿಗೆ ಹೃದಯಸ್ಪರ್ಶಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದಾರೆ. ಕಾಂಗ್ರೆಸ್‌ನ ಅಧಿಕೃತ ಹ್ಯಾಂಡಲ್‌ನಿಂದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ,...