Homeಕರ್ನಾಟಕಮುಗಿಲಿನಿಂದ ಯಾರೂ ಉಚಿಗೊಂಡು ಬಿದ್ದಿಲ್ಲ ! ದಲಿತರ ಮೇಲಿನ ಕ್ರೌರ್ಯಕ್ಕೆ ನಾಗರಿಕ ಸಮಾಜವೇ ತಲೆ ತಗ್ಗಿಸಬೇಕು

ಮುಗಿಲಿನಿಂದ ಯಾರೂ ಉಚಿಗೊಂಡು ಬಿದ್ದಿಲ್ಲ ! ದಲಿತರ ಮೇಲಿನ ಕ್ರೌರ್ಯಕ್ಕೆ ನಾಗರಿಕ ಸಮಾಜವೇ ತಲೆ ತಗ್ಗಿಸಬೇಕು

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ನಮ್ಮೆಲ್ಲರ ಮನಸ್ಸಿಗೆ ಅಂಟಿದ ಏಡ್ಸ್, ಕಾನ್ಸರ್‍ಗಿಂತಲೂ ಭೀಕರವಾದ ಜಾತಿಯತೆಯ ಭ್ರಮೆ ತೊಲಗುವ ಯಾವ ಲಕ್ಷಣಗಳು ನಮ್ಮ ನಾಗರಿಕ ಸಮಾಜದಲ್ಲಿ ಕಾಣುತ್ತಿಲ್ಲ. ವ್ಯಕ್ತಿಯ ಹುಟ್ಟಿನ ಮೂಲಕವೆ ಆತನ ಜಾತಿಯನ್ನು ನಿರ್ಧರಿಸುವ ಸಮಾಜವನ್ನು ಸ್ವಾಸ್ಥ್ಯ ಸಮಾಜವೆಂದು ಹೇಗೆ ಕರೆಯಬೇಕು? ವ್ಯಕ್ತಿಯ ಕೆಲಸಗಳಿಂದ ಆರಂಭವಾದ ಈ ಜಾತಿ ಪದ್ಧತಿ ಇಂದಿಗೂ ಮುಂದುವರೆದಿರುವುದು ದುರಂತವೆಂದೇ ಹೇಳಬೇಕಾಗಿದೆ. ಯಾವ ವ್ಯಕ್ತಿಯೂ ಹುಟ್ಟುವಾಗಲೆ ಕುರುಪಿ, ಕುಡಗೋಲು, ಸಲಿಕೆ, ಪುಟ್ಟಿಗಳನ್ನು ಜೊತೆಗೆ ತೆಗೆದುಕೊಂಡು ಹುಟ್ಟಿ ಬಂದಿಲ್ಲ. ಹಾಗೆಯೆ ಜನಿವಾರ, ನಾಮ, ವಿಭೂತಿ, ಇಷ್ಟಲಿಂಗ ಮುಂತಾದ ಲಾಂಛನಗಳನ್ನೂ ಹೊತ್ತು ಬಂದಿಲ್ಲ. ಆದರೂ ಜನ ಮಾನಸದಲ್ಲಿ ಜಾತಿಯ ಬೇರುಗಳು ಆಳಕ್ಕೆ ಇಳಿದು ಅವರೊಳಗಿನ ಮನುಷ್ಯತ್ವವನ್ನೆ ಕತ್ತರಿಸಿ ಹಾಕಿವೆ.

ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ
ಜಲಬಿಂದುವಿನ ವ್ಯವಹಾರ ಒಂದೇ
ಆಶೆಯಾಮಿಷ ರೋಹ ಹರುಷ ವಿಷಯಾದಿಗಳೆಲ್ಲಾ ಒಂದೇ
ಏನನೋದಿ ಏನ ಕೇಳಿ ಏನು ಫಲ ?
ಕುಲಜನೆಂಬುದಕ್ಕೆ ಆವುದು ದೃಷ್ಟ ?
ಕಾಶಿ ಕಮ್ಮಾರನಾದ ಬೀಸಿ ಮಡಿವಾಳನಾದ
ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ
ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ?
ಇದು ಕಾಣರ ಕೂಡಲಸಂಗಮದೇವಾ
ಲಿಂಗಸ್ಥಲವನರಿದವನೆ ಕುಲಜನು

ಜಾತಿಗಳಿಲ್ಲಿಯೇ ಶ್ರೇಷ್ಠ ಜಾತಿ ಎಂದು ಬೊಗಳೆ ಬಿಡುವ ಅಳಲೆಕಾಯಿ ಪಂಡಿತರು ಹುಟ್ಟಿದ್ದು ತಾಯಿಯ ಗರ್ಭದಲ್ಲಿಯೆ. ತಂದೆ ಮತ್ತು ತಾಯಿಗಳ ಮಿಲನದಿಂದ ಗರ್ಭಕಟ್ಟಿ ಮಗುವಾಗಿ ತಾಯಿಯ ಯೋನಿಯ ಮೂಲಕ ಹೊರಬಂದದ್ದು. ಈ ಸತ್ಯವನ್ನು ಅರಿತೂ ಅರಿಯದಂತೆ ನಡೆಸುವ ಮನುಷ್ಯ ತನ್ನೊಳಗೆ ದುಷ್ಟತನವನ್ನು ಸಾಕಿ ಸಲಹಿದ್ದಾನೆ. ಶುಕ್ಲ ಶೋಣಿತದ ಎಲ್ಲರ ಹುಟ್ಟು ಇದೆ. ವೇದ ಆಗಮ ಶಾಸ್ತ್ರ ಪುರಾಣ ಪುಣ್ಯ ಕತೆಗಳನ್ನು ಓದಿದ್ದೇವೆ ಎಂದು ಒಂದೆ ಸಮ ಅರಚುವ ಪಂಡಿತೋತ್ತಮರೂ ಸಹ ಜಾತಿಯ ಹೊಲಸಿನಲ್ಲಿ ಸಿಕ್ಕಿ ಬಿದಿದ್ದಾರೆ. ಜನತೆಯ ಮನಸ್ಸನ್ನು ಸರಿಯಾಗಿ ಗ್ರಹಿಸಿದ ಬಸವಣ್ಣನವರು ಆಶೆಯಾಮಿಷ ರೋಷ ಹರುಷಗಳು ಸಹ ಮನುಷ್ಯರಲ್ಲಿ ಒಂದೆ ಬಗೆಯಾಗಿರುತ್ತವೆ. ಜಾತಿ ಭಿನ್ನವಾದ ಮಾತ್ರಕ್ಕೆ ಅವರವರ ಮನಸ್ಥಿತಿಗಳು ಬದಲಾಗಲಾರವು ಎಂದಿದ್ದಾರೆ.

ಇದನ್ನು ಓದಿ: ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಪ್ರತಿಭಟನೆ

ಮಾಡುವ ಕಾಯಕಗಳು ಹೇಗೆ ಜಾತಿಯಾದವು ? ಎಂಬುದನ್ನು ಮನಂಬುಗುವಂತೆ ವಚನದಲ್ಲಿ ವಿವರಿಸಿದ್ದಾರೆ. ಯಾರೂ ಕಿವಿಯಲ್ಲಿ ಹುಟ್ಟಲು ಸಾಧ್ಯವೆ ಇಲ್ಲ. ಲಿಂಗಸ್ಥಲದ ಅರಿವು ಅಂದರೆ ಅದು ವಾಸ್ತವದ ಅರಿವು. ಸತ್ಯದ ಅರಿವು. ವಿಜ್ಞಾನದ ಅರಿವು ಎಂದರ್ಥ. ಯಾರು ಸತ್ಯವನ್ನು ಸಾಕ್ಷಾತ್ಕಾರ ಮಾಡಿಕೊಳ್ಳುತ್ತಾನೊ ಆತನೆ ಶ್ರೇಷ್ಠ ಕುಲದವನು ಎಂಬ ವಾದ ಬಸವಣ್ಣನವರದು. ಕುಲಗಳು ಶ್ರೇಷ್ಠ ಕನಿಷ್ಠ ಎಂದು ವಿಂಗಡಿಸುವಿರಾದರೆ ಹಿಂದೆ ಇದ್ದ ಮನು ಮುನಿಗಳು ಯಾರಿದ್ದರು ? ಎಂಬ ಇತಿಹಾಸದ ಪುಟವನ್ನು ಹೆಕ್ಕಿ ನೋಡಿದರೆ ಸತ್ಯ ಕಾಣುತ್ತದೆ.

ವ್ಯಾಸ ಬೋವಿತಿಯ ಮಗ, ಮಾರ್ಕಂಡೇಯ ಮಾತಂಗಿಯ ಮಗ
ಮಂಡೋದರಿ ಕಪ್ಪೆಯ ಮಗಳು, ಕುಲವನರಸದಿರಿಂ ಭೋ
ಕುಲದಿಂದ ಮುನ್ನೆನಾದಿರಿಂ ಭೋ !
ಸಾಕ್ಷಾತ್ ಅಗಸ್ತ್ಯ ಕಬ್ಬಿಲ, ದುರ್ವಾಸ ಮಚ್ಚಿಗ
ಕಶ್ಯಪ್ಪ ಕಮ್ಮಾರ, ಕೌಂಡಿನ್ಯನೆಂಬ ಖುಷಿ
ಮೂರು ಭುವನರಿಯದೆ ನಾವಿದ ಕಾಣಿ ಭೋ !
ನಮ್ಮ ಕೂಡಲ ಸಂಗನ ವಚನವಿಂತೆಂದುದು
ಶ್ವಪಚೋಪಿಯಾದಡೇನು , ಭಕ್ತನೆ ಕುಲಜಂ ಭೋ !

ರಾಮಾಯಣ ಮಹಾಕಾವ್ಯವನ್ನು ರಚಿಸಿ ಮಹಾಋಷಿ ಎನಿಸಿಕೊಂಡ ವ್ಯಾಸ ಬೋವಿತಿಯ ಮಗ. ಮಾರ್ಕಂಡೇಯ ಮಹರ್ಷಿ ಮಾತಂಗಿಯ ಮಗ. ಅಗಸ್ತ್ಯ ಮಹರ್ಷಿ ಕಬ್ಬಲಿಗ, ದುರ್ವಾಸ ಮುನಿ ಮಚ್ಚಿಗ, ಕೌಂಡಿನ್ಯ ಎಂಬ ಋಷಿ ನಾವಿದ. ಆದ್ದರಿಂದ ಯಾರೂ ಜಾತಿಯ ಮೂಲಕ ಶ್ರೇಷ್ಠ ಕನಿಷ್ಠರಾಗಲು ಸಾಧ್ಯವಿಲ್ಲ ಎಂಬುದು ಬಸವಣ್ಣನವರ ಖಚಿತವಾದ ನಿಲುವು. ಯಾರು ಕಾಯಕ ಜೀವಿಯಾಗಿರುತ್ತಾನೋ, ತನ್ನ ಪರಿಶ್ರಮದ ದುಡಿಮೆಯ ಮೂಲಕ ಬಂದ ಫಲದಲ್ಲಿ ಸತ್ಪಾತ್ರರಿಗೆ ದಾಸೋಹ ನಡೆಸುತ್ತಾನೋ ಆ ಭಕ್ತನೆ ಕುಲಜನು ಎಂಬುದು ಶರಣರ ಇಂಗಿತವಾಗಿದೆ.

ಅಂಬಿಗರಚೌಡಯ್ಯನೆಂಬ ಶರಣನಂತೂ ಜಾತಿಯನ್ನು ನೋಡಿ ವ್ಯವಹರಿಸುವವರ ಕಂಡರೆ ಕೆಂಡಾಮಂಡಲವಾಗುತ್ತಾನೆ.

ಜಾತಿ ಭ್ರಮೆ, ನೀತಿ ಭ್ರಮೆ ಎಂಬ ಕರ್ಮಂಗಳನು
ಘಾತಿಸಿ ಕಳೆಯಬಲ್ಲಡಾತ ಯೋಗಿ
ಯೋಗಿ ಅಂದರೆ ನಾಡು ಬಿಟ್ಟು ಕಾಡು ಸೇರುವವನಲ್ಲ. ಗಡ್ಡ ಬಿಟ್ಟು, ಹೆಂಡತಿ ಮಕ್ಕಳ ತೊರೆದು ಹೋಗುವಾತನಲ್ಲ. ಜಾತಿ ಭ್ರಮೆಂiÀiನ್ನು ಕಳೆಯುವವನೆ ಯೋಗಿ ಎಂದಿದ್ದಾರೆ. ಆನು ಹಾರುವನೆಂದರೆ ಕೂಡಲ ಸಂಗಮ ನಗುವನಯ್ಯಾ ಎನ್ನುತ್ತಲೆ ಬಸವಣ್ಣನವರು ತಮ್ಮ ಮೇಲಿರಿಮೆಯ ಭ್ರಮೆಯನ್ನು ಕಳಚಿಕೊಂಡು ಮಾದಾರ ಚೆನ್ನಯ್ಯನ ಮನೆಯ ಮಗ ನಾನು ಎಂದು ಹೇಳುವ ಮೂಲಕ ತಮ್ಮ ಮನಸ್ಸಿಗೆ ಅಂಟಿದ ಕೊಳೆಯನ್ನು ತೊಳಕೊಂಡರು. ಅಷ್ಟಕ್ಕೂ ಅವರಿಗೆ ಸಮಾಧಾನವಾಗಲಿಲ್ಲ. ಆಗ

ಚೆನ್ನಯ್ಯನ ಮನೆಯ ದಾಸಿನ ಮಗನು
ಕಕ್ಕಯ್ಯನ ಮನೆಯ ದಾಸಿಯ ಮಗಳು
ಇಬ್ಬರಿಗೂ ಹೊದಲು ಬೆರಣಿಗೆ ಹೋಗಿ
ಸಂಗವ ಮಾಡಿದರು ಇವರಿಬ್ಬರಿಗೆ ಹುಟ್ಟಿದ ಮಗ ನಾನು
ಕೂಡಲಸಂಗವದೇವ ಸಾಕ್ಷಿಯಾಗಿ

ಎನ್ನುವ ಮೂಲಕ ತಮ್ಮನ್ನು ಕೇವಲ ತಳವರ್ಗದ ವ್ಯಕ್ತಿಗಳೊಂದಿಗೆ ಗುರುತಿಸಿಕೊಳ್ಳಲಿಲ್ಲ. ಚೆನ್ನಯ್ಯ ಮತ್ತು ಕಕ್ಕಯ್ಯನೆಂದರೆ ಕೀಳು ಎಂದು ತಿಳಿದ ಆ ದಿನಗಳಲ್ಲಿ ಅವರ ಮನೆಯ ಆಳುಗಳು ಬೆರಣಿಯ ಆಯಲು ಹೋದಾಗ ಸಮಾಜದ ಒಪ್ಪಿಗೆಯೂ ಪಡೆಯದೆ ಸಂಗವ ಮಾಡಿದರು. ಅಂದರೆ ಅಕ್ಷರಶಃ ಅವರು ಹಾದಕ್ಕೆ ಒಳಗಾದಾಗ ಹುಟ್ಟಿದ ಕೂಸು ನಾನು ಎನ್ನುವ ಮೂಲಕ ತಮ್ಮೊಳಗಿನ ಜಾತಿಯ ತಿಮಿರವನ್ನು ಕಳೆದುಕೊಳ್ಳುತ್ತಾರೆ.

ಅಮ್ಮುಗೆಯ ದೇವಯ್ಯ ಎಂಬ ಶರಣ ಕೂಡ
ಕಕ್ಕಯ್ಯನ ಪ್ರಸಾದ ಕೊಂಡೆನ್ನ ಕುಲ ಸೂತಕ ಹೋಯಿತ್ತಯ್ಯಾ
ಚೆನ್ನಯ್ಯನ ಪ್ರಸಾದವ ಕೊಂಡೆನ್ನ ಛಲ ಸೂತಕ ಹೋಯಿತ್ತಯ್ಯಾ
ದಾಸಯ್ಯನ ಪ್ರಸಾದವ ಕೊಂಡೆನ್ನ ತನು ಸೂತಕ ಹೋಯಿತ್ತಯ್ಯಾ
ಚಂದಯ್ಯನ ಪ್ರಸಾದವ ಕೊಂಡೆನ್ನ ಮನ ಸೂತಕ ಹೋಯಿತ್ತಯ್ಯಾ

ಅನುಭಾವಿ ಶರಣರ, ಸಂತರ ಸಂಗದಿಂದ ಮಾತ್ರ ನಮ್ಮ ಮನದಲ್ಲಿಯ ಜಾತಿ ಭ್ರಮೆ ಹೋಗಲು ಸಾಧ್ಯವಿದೆ. ಇಲ್ಲದೆ ಹೋದರೆ ಈ ಜಾತಿ ಚಕ್ರವ್ಯೂಹದಲ್ಲಿ ಸಿಲುಕಿದ ಮನುಷ್ಯ ಹೊರಬರುವುದು ತೀರಾ ಅಪರೂಪ.
ಮಂಡೆ ಮಾಸಿದೊಡೆ ಮಹಾಮಜ್ಜನವ ಮಾಡುವುದು
ವಸ್ತ್ರ ಮಾಸಿದಡೆ ಮಡಿವಾಳರಿಕ್ಕುವುದು
ಮನದ ಮೈಲಿಗೆ ತೊಳೆಯಬೇಕಾದಡೆ
ಕೂಡಲಚೆನ್ನಸಂಗಯ್ಯನ ಶರಣರ ಅನುಭಾವ ಮಾಡುವುದು
ಎಂದು ಹೇಳಿದ್ದಾರೆ ಚೆನ್ನಬಸವಣ್ಣನವರು .

ತಳ ಸಮೂಹದಲ್ಲಿ ಹುಟ್ಟಿದ್ದಾರೆ ಎಂಬ ಒಂದೇ ಒಂದು ಕಾರಣಕ್ಕೆ ಆ ಸಮೂಹವನ್ನು ಗುಡಿಯೊಳಗೆ ಬಿಟ್ಟುಕೊಳ್ಳದೆ ಇರುವುದು. ಅವರಿಂದ ಸಣ್ಣ ತಪ್ಪು ಘಟಿಸಿದರೂ ನೆಲ ಮುಗಿಲು ಒಂದಾಗುವಂತೆ ಮಾಡಿ ಮಾನವೀಯತೆ ಮರೆತು ಕ್ರೌರ್ಯದಿಂದ ವರ್ತಿಸುವುದು ನಾಗರಿಕ ಲಕ್ಷಣವಲ್ಲ. ಪಶು ಪಕ್ಷಿಗಳು ಸಹ ಹಿಂಡು ಹಿಂಡಾಗಿ ಸೌಹಾರ್ದತೆಯಿಂದ ವಾಸಿಸುತ್ತಿರುವಾಗ ಮನುಷ್ಯ ಮಾತ್ರ ಜಾತಿಯ ಕಾರಣಕ್ಕಾಗಿ ಒಬ್ಬರು ಮತ್ತೊಬ್ಬರ ಮೇಲೆ ಏರಿ ಹೋಗಿ ಹಲ್ಲೆ ಮಾಡುವುದು ಯಾರೂ ಒಪ್ಪಲು ಸಾಧ್ಯವಿಲ್ಲ.

ಇಷ್ಟಕ್ಕೂ ಯಾವುದೆ ವ್ಯಕ್ತಿ ತಳ ಸಮುದಾಯದಲ್ಲಿ ಹುಟ್ಟಬೇಕೆಂದು ಮೊದಲೆ ಅಪ್ಲಿಕೇಷನ್ ಹಾಕಿಕೊಂಡಿಲ್ಲ. ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆಯ ವೀರನಪುರದಲ್ಲಿ ಇತ್ತೀಚೆಗೆ ನಡೆದ ದಲಿತ ದೌರ್ಜನ್ಯ ಘಟನೆ ಮನುಷ್ಯ ಕುಲ ತಲೆ ತಗ್ಗಿಸುವಂತೆ ಮಾಡಿದೆ. ಪ್ರಜ್ಞಾವಂತ ಮನುಷ್ಯ ಸಮಾಜ ಇದನ್ನು ಬಲವಾಗಿ ಖಂಡಿಸಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...