Homeಕರ್ನಾಟಕಮುಗಿಲಿನಿಂದ ಯಾರೂ ಉಚಿಗೊಂಡು ಬಿದ್ದಿಲ್ಲ ! ದಲಿತರ ಮೇಲಿನ ಕ್ರೌರ್ಯಕ್ಕೆ ನಾಗರಿಕ ಸಮಾಜವೇ ತಲೆ ತಗ್ಗಿಸಬೇಕು

ಮುಗಿಲಿನಿಂದ ಯಾರೂ ಉಚಿಗೊಂಡು ಬಿದ್ದಿಲ್ಲ ! ದಲಿತರ ಮೇಲಿನ ಕ್ರೌರ್ಯಕ್ಕೆ ನಾಗರಿಕ ಸಮಾಜವೇ ತಲೆ ತಗ್ಗಿಸಬೇಕು

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ನಮ್ಮೆಲ್ಲರ ಮನಸ್ಸಿಗೆ ಅಂಟಿದ ಏಡ್ಸ್, ಕಾನ್ಸರ್‍ಗಿಂತಲೂ ಭೀಕರವಾದ ಜಾತಿಯತೆಯ ಭ್ರಮೆ ತೊಲಗುವ ಯಾವ ಲಕ್ಷಣಗಳು ನಮ್ಮ ನಾಗರಿಕ ಸಮಾಜದಲ್ಲಿ ಕಾಣುತ್ತಿಲ್ಲ. ವ್ಯಕ್ತಿಯ ಹುಟ್ಟಿನ ಮೂಲಕವೆ ಆತನ ಜಾತಿಯನ್ನು ನಿರ್ಧರಿಸುವ ಸಮಾಜವನ್ನು ಸ್ವಾಸ್ಥ್ಯ ಸಮಾಜವೆಂದು ಹೇಗೆ ಕರೆಯಬೇಕು? ವ್ಯಕ್ತಿಯ ಕೆಲಸಗಳಿಂದ ಆರಂಭವಾದ ಈ ಜಾತಿ ಪದ್ಧತಿ ಇಂದಿಗೂ ಮುಂದುವರೆದಿರುವುದು ದುರಂತವೆಂದೇ ಹೇಳಬೇಕಾಗಿದೆ. ಯಾವ ವ್ಯಕ್ತಿಯೂ ಹುಟ್ಟುವಾಗಲೆ ಕುರುಪಿ, ಕುಡಗೋಲು, ಸಲಿಕೆ, ಪುಟ್ಟಿಗಳನ್ನು ಜೊತೆಗೆ ತೆಗೆದುಕೊಂಡು ಹುಟ್ಟಿ ಬಂದಿಲ್ಲ. ಹಾಗೆಯೆ ಜನಿವಾರ, ನಾಮ, ವಿಭೂತಿ, ಇಷ್ಟಲಿಂಗ ಮುಂತಾದ ಲಾಂಛನಗಳನ್ನೂ ಹೊತ್ತು ಬಂದಿಲ್ಲ. ಆದರೂ ಜನ ಮಾನಸದಲ್ಲಿ ಜಾತಿಯ ಬೇರುಗಳು ಆಳಕ್ಕೆ ಇಳಿದು ಅವರೊಳಗಿನ ಮನುಷ್ಯತ್ವವನ್ನೆ ಕತ್ತರಿಸಿ ಹಾಕಿವೆ.

ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ
ಜಲಬಿಂದುವಿನ ವ್ಯವಹಾರ ಒಂದೇ
ಆಶೆಯಾಮಿಷ ರೋಹ ಹರುಷ ವಿಷಯಾದಿಗಳೆಲ್ಲಾ ಒಂದೇ
ಏನನೋದಿ ಏನ ಕೇಳಿ ಏನು ಫಲ ?
ಕುಲಜನೆಂಬುದಕ್ಕೆ ಆವುದು ದೃಷ್ಟ ?
ಕಾಶಿ ಕಮ್ಮಾರನಾದ ಬೀಸಿ ಮಡಿವಾಳನಾದ
ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ
ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ?
ಇದು ಕಾಣರ ಕೂಡಲಸಂಗಮದೇವಾ
ಲಿಂಗಸ್ಥಲವನರಿದವನೆ ಕುಲಜನು

ಜಾತಿಗಳಿಲ್ಲಿಯೇ ಶ್ರೇಷ್ಠ ಜಾತಿ ಎಂದು ಬೊಗಳೆ ಬಿಡುವ ಅಳಲೆಕಾಯಿ ಪಂಡಿತರು ಹುಟ್ಟಿದ್ದು ತಾಯಿಯ ಗರ್ಭದಲ್ಲಿಯೆ. ತಂದೆ ಮತ್ತು ತಾಯಿಗಳ ಮಿಲನದಿಂದ ಗರ್ಭಕಟ್ಟಿ ಮಗುವಾಗಿ ತಾಯಿಯ ಯೋನಿಯ ಮೂಲಕ ಹೊರಬಂದದ್ದು. ಈ ಸತ್ಯವನ್ನು ಅರಿತೂ ಅರಿಯದಂತೆ ನಡೆಸುವ ಮನುಷ್ಯ ತನ್ನೊಳಗೆ ದುಷ್ಟತನವನ್ನು ಸಾಕಿ ಸಲಹಿದ್ದಾನೆ. ಶುಕ್ಲ ಶೋಣಿತದ ಎಲ್ಲರ ಹುಟ್ಟು ಇದೆ. ವೇದ ಆಗಮ ಶಾಸ್ತ್ರ ಪುರಾಣ ಪುಣ್ಯ ಕತೆಗಳನ್ನು ಓದಿದ್ದೇವೆ ಎಂದು ಒಂದೆ ಸಮ ಅರಚುವ ಪಂಡಿತೋತ್ತಮರೂ ಸಹ ಜಾತಿಯ ಹೊಲಸಿನಲ್ಲಿ ಸಿಕ್ಕಿ ಬಿದಿದ್ದಾರೆ. ಜನತೆಯ ಮನಸ್ಸನ್ನು ಸರಿಯಾಗಿ ಗ್ರಹಿಸಿದ ಬಸವಣ್ಣನವರು ಆಶೆಯಾಮಿಷ ರೋಷ ಹರುಷಗಳು ಸಹ ಮನುಷ್ಯರಲ್ಲಿ ಒಂದೆ ಬಗೆಯಾಗಿರುತ್ತವೆ. ಜಾತಿ ಭಿನ್ನವಾದ ಮಾತ್ರಕ್ಕೆ ಅವರವರ ಮನಸ್ಥಿತಿಗಳು ಬದಲಾಗಲಾರವು ಎಂದಿದ್ದಾರೆ.

ಇದನ್ನು ಓದಿ: ಗುಂಡ್ಲುಪೇಟೆ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಪ್ರತಿಭಟನೆ

ಮಾಡುವ ಕಾಯಕಗಳು ಹೇಗೆ ಜಾತಿಯಾದವು ? ಎಂಬುದನ್ನು ಮನಂಬುಗುವಂತೆ ವಚನದಲ್ಲಿ ವಿವರಿಸಿದ್ದಾರೆ. ಯಾರೂ ಕಿವಿಯಲ್ಲಿ ಹುಟ್ಟಲು ಸಾಧ್ಯವೆ ಇಲ್ಲ. ಲಿಂಗಸ್ಥಲದ ಅರಿವು ಅಂದರೆ ಅದು ವಾಸ್ತವದ ಅರಿವು. ಸತ್ಯದ ಅರಿವು. ವಿಜ್ಞಾನದ ಅರಿವು ಎಂದರ್ಥ. ಯಾರು ಸತ್ಯವನ್ನು ಸಾಕ್ಷಾತ್ಕಾರ ಮಾಡಿಕೊಳ್ಳುತ್ತಾನೊ ಆತನೆ ಶ್ರೇಷ್ಠ ಕುಲದವನು ಎಂಬ ವಾದ ಬಸವಣ್ಣನವರದು. ಕುಲಗಳು ಶ್ರೇಷ್ಠ ಕನಿಷ್ಠ ಎಂದು ವಿಂಗಡಿಸುವಿರಾದರೆ ಹಿಂದೆ ಇದ್ದ ಮನು ಮುನಿಗಳು ಯಾರಿದ್ದರು ? ಎಂಬ ಇತಿಹಾಸದ ಪುಟವನ್ನು ಹೆಕ್ಕಿ ನೋಡಿದರೆ ಸತ್ಯ ಕಾಣುತ್ತದೆ.

ವ್ಯಾಸ ಬೋವಿತಿಯ ಮಗ, ಮಾರ್ಕಂಡೇಯ ಮಾತಂಗಿಯ ಮಗ
ಮಂಡೋದರಿ ಕಪ್ಪೆಯ ಮಗಳು, ಕುಲವನರಸದಿರಿಂ ಭೋ
ಕುಲದಿಂದ ಮುನ್ನೆನಾದಿರಿಂ ಭೋ !
ಸಾಕ್ಷಾತ್ ಅಗಸ್ತ್ಯ ಕಬ್ಬಿಲ, ದುರ್ವಾಸ ಮಚ್ಚಿಗ
ಕಶ್ಯಪ್ಪ ಕಮ್ಮಾರ, ಕೌಂಡಿನ್ಯನೆಂಬ ಖುಷಿ
ಮೂರು ಭುವನರಿಯದೆ ನಾವಿದ ಕಾಣಿ ಭೋ !
ನಮ್ಮ ಕೂಡಲ ಸಂಗನ ವಚನವಿಂತೆಂದುದು
ಶ್ವಪಚೋಪಿಯಾದಡೇನು , ಭಕ್ತನೆ ಕುಲಜಂ ಭೋ !

ರಾಮಾಯಣ ಮಹಾಕಾವ್ಯವನ್ನು ರಚಿಸಿ ಮಹಾಋಷಿ ಎನಿಸಿಕೊಂಡ ವ್ಯಾಸ ಬೋವಿತಿಯ ಮಗ. ಮಾರ್ಕಂಡೇಯ ಮಹರ್ಷಿ ಮಾತಂಗಿಯ ಮಗ. ಅಗಸ್ತ್ಯ ಮಹರ್ಷಿ ಕಬ್ಬಲಿಗ, ದುರ್ವಾಸ ಮುನಿ ಮಚ್ಚಿಗ, ಕೌಂಡಿನ್ಯ ಎಂಬ ಋಷಿ ನಾವಿದ. ಆದ್ದರಿಂದ ಯಾರೂ ಜಾತಿಯ ಮೂಲಕ ಶ್ರೇಷ್ಠ ಕನಿಷ್ಠರಾಗಲು ಸಾಧ್ಯವಿಲ್ಲ ಎಂಬುದು ಬಸವಣ್ಣನವರ ಖಚಿತವಾದ ನಿಲುವು. ಯಾರು ಕಾಯಕ ಜೀವಿಯಾಗಿರುತ್ತಾನೋ, ತನ್ನ ಪರಿಶ್ರಮದ ದುಡಿಮೆಯ ಮೂಲಕ ಬಂದ ಫಲದಲ್ಲಿ ಸತ್ಪಾತ್ರರಿಗೆ ದಾಸೋಹ ನಡೆಸುತ್ತಾನೋ ಆ ಭಕ್ತನೆ ಕುಲಜನು ಎಂಬುದು ಶರಣರ ಇಂಗಿತವಾಗಿದೆ.

ಅಂಬಿಗರಚೌಡಯ್ಯನೆಂಬ ಶರಣನಂತೂ ಜಾತಿಯನ್ನು ನೋಡಿ ವ್ಯವಹರಿಸುವವರ ಕಂಡರೆ ಕೆಂಡಾಮಂಡಲವಾಗುತ್ತಾನೆ.

ಜಾತಿ ಭ್ರಮೆ, ನೀತಿ ಭ್ರಮೆ ಎಂಬ ಕರ್ಮಂಗಳನು
ಘಾತಿಸಿ ಕಳೆಯಬಲ್ಲಡಾತ ಯೋಗಿ
ಯೋಗಿ ಅಂದರೆ ನಾಡು ಬಿಟ್ಟು ಕಾಡು ಸೇರುವವನಲ್ಲ. ಗಡ್ಡ ಬಿಟ್ಟು, ಹೆಂಡತಿ ಮಕ್ಕಳ ತೊರೆದು ಹೋಗುವಾತನಲ್ಲ. ಜಾತಿ ಭ್ರಮೆಂiÀiನ್ನು ಕಳೆಯುವವನೆ ಯೋಗಿ ಎಂದಿದ್ದಾರೆ. ಆನು ಹಾರುವನೆಂದರೆ ಕೂಡಲ ಸಂಗಮ ನಗುವನಯ್ಯಾ ಎನ್ನುತ್ತಲೆ ಬಸವಣ್ಣನವರು ತಮ್ಮ ಮೇಲಿರಿಮೆಯ ಭ್ರಮೆಯನ್ನು ಕಳಚಿಕೊಂಡು ಮಾದಾರ ಚೆನ್ನಯ್ಯನ ಮನೆಯ ಮಗ ನಾನು ಎಂದು ಹೇಳುವ ಮೂಲಕ ತಮ್ಮ ಮನಸ್ಸಿಗೆ ಅಂಟಿದ ಕೊಳೆಯನ್ನು ತೊಳಕೊಂಡರು. ಅಷ್ಟಕ್ಕೂ ಅವರಿಗೆ ಸಮಾಧಾನವಾಗಲಿಲ್ಲ. ಆಗ

ಚೆನ್ನಯ್ಯನ ಮನೆಯ ದಾಸಿನ ಮಗನು
ಕಕ್ಕಯ್ಯನ ಮನೆಯ ದಾಸಿಯ ಮಗಳು
ಇಬ್ಬರಿಗೂ ಹೊದಲು ಬೆರಣಿಗೆ ಹೋಗಿ
ಸಂಗವ ಮಾಡಿದರು ಇವರಿಬ್ಬರಿಗೆ ಹುಟ್ಟಿದ ಮಗ ನಾನು
ಕೂಡಲಸಂಗವದೇವ ಸಾಕ್ಷಿಯಾಗಿ

ಎನ್ನುವ ಮೂಲಕ ತಮ್ಮನ್ನು ಕೇವಲ ತಳವರ್ಗದ ವ್ಯಕ್ತಿಗಳೊಂದಿಗೆ ಗುರುತಿಸಿಕೊಳ್ಳಲಿಲ್ಲ. ಚೆನ್ನಯ್ಯ ಮತ್ತು ಕಕ್ಕಯ್ಯನೆಂದರೆ ಕೀಳು ಎಂದು ತಿಳಿದ ಆ ದಿನಗಳಲ್ಲಿ ಅವರ ಮನೆಯ ಆಳುಗಳು ಬೆರಣಿಯ ಆಯಲು ಹೋದಾಗ ಸಮಾಜದ ಒಪ್ಪಿಗೆಯೂ ಪಡೆಯದೆ ಸಂಗವ ಮಾಡಿದರು. ಅಂದರೆ ಅಕ್ಷರಶಃ ಅವರು ಹಾದಕ್ಕೆ ಒಳಗಾದಾಗ ಹುಟ್ಟಿದ ಕೂಸು ನಾನು ಎನ್ನುವ ಮೂಲಕ ತಮ್ಮೊಳಗಿನ ಜಾತಿಯ ತಿಮಿರವನ್ನು ಕಳೆದುಕೊಳ್ಳುತ್ತಾರೆ.

ಅಮ್ಮುಗೆಯ ದೇವಯ್ಯ ಎಂಬ ಶರಣ ಕೂಡ
ಕಕ್ಕಯ್ಯನ ಪ್ರಸಾದ ಕೊಂಡೆನ್ನ ಕುಲ ಸೂತಕ ಹೋಯಿತ್ತಯ್ಯಾ
ಚೆನ್ನಯ್ಯನ ಪ್ರಸಾದವ ಕೊಂಡೆನ್ನ ಛಲ ಸೂತಕ ಹೋಯಿತ್ತಯ್ಯಾ
ದಾಸಯ್ಯನ ಪ್ರಸಾದವ ಕೊಂಡೆನ್ನ ತನು ಸೂತಕ ಹೋಯಿತ್ತಯ್ಯಾ
ಚಂದಯ್ಯನ ಪ್ರಸಾದವ ಕೊಂಡೆನ್ನ ಮನ ಸೂತಕ ಹೋಯಿತ್ತಯ್ಯಾ

ಅನುಭಾವಿ ಶರಣರ, ಸಂತರ ಸಂಗದಿಂದ ಮಾತ್ರ ನಮ್ಮ ಮನದಲ್ಲಿಯ ಜಾತಿ ಭ್ರಮೆ ಹೋಗಲು ಸಾಧ್ಯವಿದೆ. ಇಲ್ಲದೆ ಹೋದರೆ ಈ ಜಾತಿ ಚಕ್ರವ್ಯೂಹದಲ್ಲಿ ಸಿಲುಕಿದ ಮನುಷ್ಯ ಹೊರಬರುವುದು ತೀರಾ ಅಪರೂಪ.
ಮಂಡೆ ಮಾಸಿದೊಡೆ ಮಹಾಮಜ್ಜನವ ಮಾಡುವುದು
ವಸ್ತ್ರ ಮಾಸಿದಡೆ ಮಡಿವಾಳರಿಕ್ಕುವುದು
ಮನದ ಮೈಲಿಗೆ ತೊಳೆಯಬೇಕಾದಡೆ
ಕೂಡಲಚೆನ್ನಸಂಗಯ್ಯನ ಶರಣರ ಅನುಭಾವ ಮಾಡುವುದು
ಎಂದು ಹೇಳಿದ್ದಾರೆ ಚೆನ್ನಬಸವಣ್ಣನವರು .

ತಳ ಸಮೂಹದಲ್ಲಿ ಹುಟ್ಟಿದ್ದಾರೆ ಎಂಬ ಒಂದೇ ಒಂದು ಕಾರಣಕ್ಕೆ ಆ ಸಮೂಹವನ್ನು ಗುಡಿಯೊಳಗೆ ಬಿಟ್ಟುಕೊಳ್ಳದೆ ಇರುವುದು. ಅವರಿಂದ ಸಣ್ಣ ತಪ್ಪು ಘಟಿಸಿದರೂ ನೆಲ ಮುಗಿಲು ಒಂದಾಗುವಂತೆ ಮಾಡಿ ಮಾನವೀಯತೆ ಮರೆತು ಕ್ರೌರ್ಯದಿಂದ ವರ್ತಿಸುವುದು ನಾಗರಿಕ ಲಕ್ಷಣವಲ್ಲ. ಪಶು ಪಕ್ಷಿಗಳು ಸಹ ಹಿಂಡು ಹಿಂಡಾಗಿ ಸೌಹಾರ್ದತೆಯಿಂದ ವಾಸಿಸುತ್ತಿರುವಾಗ ಮನುಷ್ಯ ಮಾತ್ರ ಜಾತಿಯ ಕಾರಣಕ್ಕಾಗಿ ಒಬ್ಬರು ಮತ್ತೊಬ್ಬರ ಮೇಲೆ ಏರಿ ಹೋಗಿ ಹಲ್ಲೆ ಮಾಡುವುದು ಯಾರೂ ಒಪ್ಪಲು ಸಾಧ್ಯವಿಲ್ಲ.

ಇಷ್ಟಕ್ಕೂ ಯಾವುದೆ ವ್ಯಕ್ತಿ ತಳ ಸಮುದಾಯದಲ್ಲಿ ಹುಟ್ಟಬೇಕೆಂದು ಮೊದಲೆ ಅಪ್ಲಿಕೇಷನ್ ಹಾಕಿಕೊಂಡಿಲ್ಲ. ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆಯ ವೀರನಪುರದಲ್ಲಿ ಇತ್ತೀಚೆಗೆ ನಡೆದ ದಲಿತ ದೌರ್ಜನ್ಯ ಘಟನೆ ಮನುಷ್ಯ ಕುಲ ತಲೆ ತಗ್ಗಿಸುವಂತೆ ಮಾಡಿದೆ. ಪ್ರಜ್ಞಾವಂತ ಮನುಷ್ಯ ಸಮಾಜ ಇದನ್ನು ಬಲವಾಗಿ ಖಂಡಿಸಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...