Homeಮುಖಪುಟವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

ವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

- Advertisement -
- Advertisement -

ಮಸೀದಿಯ ಬಳಿ ಮದುವೆ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಿದ್ದಕ್ಕಾಗಿ ಶನಿವಾರ (ಮಾರ್ಚ್ 11) ಗುಜರಾತ್‌ನ ವಡೋದರಾ ತಾಲೂಕಿನ ಸಾಮಿಯಾಲ ಗ್ರಾಮದಲ್ಲಿ ಕೋಮು ಘರ್ಷಣೆ ಸಂಭವಿಸಿತ್ತು. ಈ ಘಟನೆಯಲ್ಲಿ ಒಟ್ಟು 37 ಜನರನ್ನು ಬಂಧಿಸಲಾಗಿತ್ತು. ಈಗ ಅವರ ಜಾಮೀನು ಪ್ರಕ್ರಿಯೆಯಲ್ಲಿ ಗ್ರಾಮಸ್ಥರು ಒಬ್ಬರಿಗೊಬ್ಬರು ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ.

ಭಾನುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಾಮಿಯಾಲ ಗ್ರಾಮದ ಎರಡೂ ಸಮುದಾಯದವರೊಂದಿಗೆ ಜತೆ ಶಾಂತಿ ಸಭೆ ಏರ್ಪಡಿಸಿದ್ದರು. ಜಾಮೀನು ಪ್ರಕ್ರಿಯೆಯಲ್ಲಿ ಪರಸ್ಪರ ಜಾಮೀನುದಾರರಾಗಿರಲು ಅಧಿಕಾರಿಗಳು ಮತ್ತು ಪೊಲೀಸರ ಶಿಫಾರಸನ್ನು ಗ್ರಾಮದ ಹಿರಿಯರು ಮತ್ತು ಸಮಾಜದ ಮುಖಂಡರು ಒಪ್ಪಿಕೊಂಡರು.

ಬಂಧಿತರಾಗಿದ್ದ 37ಜನರಿಗೆ (22 ಹಿಂದೂ ಸಮುದಾಯದಿಂದ ಮತ್ತು 15 ಮುಸ್ಲಿಂ) ಇತರ ಸಮುದಾಯದವರು ಪರಸ್ಪರ ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ. ಈ ಬೆಳವಣಿಗೆಯು “ಹಳೆಯ ತಲೆಮಾರಿನ” ನಡುವೆ ಅಸ್ತಿತ್ವದಲ್ಲಿದ್ದ “ಸೋದರತ್ವ”ದ ಮನೋಭಾವವನ್ನು ಮತ್ತೆ ಜಾರಿಗೆ ತಂದಂತಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

ಸಭೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಚ್.ಚಾವಡಾ, ತಾಲೂಕು ಪೊಲೀಸ್ ಠಾಣಾ ಪ್ರಭಾರ ಉಪನಿರೀಕ್ಷಕ ವಿ.ಜಿ.ಲಂಬಾರಿಯಾ ಹಾಗೂ ಇತರೆ ಪೊಲೀಸ್ ಆಡಳಿತ ಅಧಿಕಾರಿಗಳು, ಗ್ರಾಮದ ಎರಡೂ ಸಮುದಾಯದ ಸದಸ್ಯರನ್ನು ಭೇಟಿ ಮಾಡಿ, ಸಂಪೂರ್ಣ ಸಾಮರಸ್ಯದಿಂದ ಜೀವನ ನಡೆಸಬೇಕು ಎಂದು ಒತ್ತಾಯಿಸಿದರು.

ಹಿಂದು ಸಮುದಾಯದವರು ಶನಿವಾರ (ಮಾ.11) ಮಧ್ಯರಾತ್ರಿ ಡಿಜೆ ಸಂಗೀತದೊಂದಿಗೆ ವಿವಾಹದ ಮೆರವಣಿಗೆಯಲ್ಲಿ ಬಂದು ಮಸೀದಿಯ ಬಳಿ ಪಟಾಕಿ ಸಿಡಿಸಿರುವುದು ಪ್ರಚೋದನೆಗೆ ಕಾರಣವಾಗಿದೆ. ಆ ಬಳಿಕ ಎರಡು ಸಮುದಾಯಗಳ ಗುಂಪುಗಳ ನಡುವೆ ಸಂಘರ್ಷ ಆರಂಭವಾಗಿ, ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿ ಮತ್ತು ಹಲವರು ಹಾನಿಗೊಳಗಾದರು. ಈ ಘಟನೆ ನಡೆದ ಎರಡು ದಿನಗಳ ನಂತರ ಗ್ರಾಮವು ಸಹಜ ಸ್ಥಿತಿಗೆ ಮರಳಿತು ಎಂದು ಪೊಲೀಸರು ತಿಳಿಸಿದ್ದಾರೆ.

Fight over crackers sparks communal riot near Vadodara | Vadodara News -  Times of India

ಪೊಲೀಸರ ಮಧ್ಯಪ್ರವೇಶದ ನಂತರ, ಗ್ರಾಮಸ್ಥರು ಈ ವಾರಾಂತ್ಯದಲ್ಲಿ ಕೋಮು ಸೌಹಾರ್ದತೆಗಾಗಿ ಮತ್ತೊಂದು ಸಭೆ ಕರೆಯಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ಸಬ್-ಇನ್‌ಸ್ಪೆಕ್ಟರ್ ಲಂಬಾರಿಯಾ, ”2017ರಲ್ಲಿ ಎರಡು ಕೋಮಿನ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟ ನಂತರ ಅಹಿತಕರ ಘಟನೆಗಳನ್ನು ತಪ್ಪಿಸಲು ಗ್ರಾಮಸ್ಥರು ಮೆರವಣಿಗೆಗಳು, ಧಾರ್ಮಿಕ ಹಬ್ಬಗಳು ಮತ್ತು ಪೂಜಾ ಸ್ಥಳಗಳ ಬಗ್ಗೆ ನಿಯಮಗಳನ್ನು ರಚಿಸಿದ್ದರು. ಆದರೆ ಕೆಲ ವರ್ಷದಿಂದ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಗ್ರಾಮಸ್ಥರು ನಮಗೆ ತಿಳಿಸಿದರು. ಈಗ ಅದೇ ನಿಯಮಗಳನ್ನು ಬಲಪಡಿಸಲು ಅವರು ಸಭೆಯನ್ನು ಕರೆಯಲು ನಿರ್ಧರಿಸಿದ್ದಾರೆ” ಎಂದು ಲಂಬಾರಿಯಾ ಅವರು ತಿಳಿಸಿದರು.

ಸಾಮಿಯಾಲ ಗ್ರಾಮದಲ್ಲಿ ಒಟ್ಟು 6,000 ಜನಸಂಖ್ಯೆ ಇದ್ದು, ಸುಮಾರು 2,000 ಮುಸ್ಲಿಮರಿದ್ದಾರೆ. 12 ಪಂಚಾಯಿತಿ ಸದಸ್ಯರಲ್ಲಿ ಇಬ್ಬರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...