Homeಮುಖಪುಟವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

ವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

- Advertisement -
- Advertisement -

ಮಸೀದಿಯ ಬಳಿ ಮದುವೆ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಿದ್ದಕ್ಕಾಗಿ ಶನಿವಾರ (ಮಾರ್ಚ್ 11) ಗುಜರಾತ್‌ನ ವಡೋದರಾ ತಾಲೂಕಿನ ಸಾಮಿಯಾಲ ಗ್ರಾಮದಲ್ಲಿ ಕೋಮು ಘರ್ಷಣೆ ಸಂಭವಿಸಿತ್ತು. ಈ ಘಟನೆಯಲ್ಲಿ ಒಟ್ಟು 37 ಜನರನ್ನು ಬಂಧಿಸಲಾಗಿತ್ತು. ಈಗ ಅವರ ಜಾಮೀನು ಪ್ರಕ್ರಿಯೆಯಲ್ಲಿ ಗ್ರಾಮಸ್ಥರು ಒಬ್ಬರಿಗೊಬ್ಬರು ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ.

ಭಾನುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಾಮಿಯಾಲ ಗ್ರಾಮದ ಎರಡೂ ಸಮುದಾಯದವರೊಂದಿಗೆ ಜತೆ ಶಾಂತಿ ಸಭೆ ಏರ್ಪಡಿಸಿದ್ದರು. ಜಾಮೀನು ಪ್ರಕ್ರಿಯೆಯಲ್ಲಿ ಪರಸ್ಪರ ಜಾಮೀನುದಾರರಾಗಿರಲು ಅಧಿಕಾರಿಗಳು ಮತ್ತು ಪೊಲೀಸರ ಶಿಫಾರಸನ್ನು ಗ್ರಾಮದ ಹಿರಿಯರು ಮತ್ತು ಸಮಾಜದ ಮುಖಂಡರು ಒಪ್ಪಿಕೊಂಡರು.

ಬಂಧಿತರಾಗಿದ್ದ 37ಜನರಿಗೆ (22 ಹಿಂದೂ ಸಮುದಾಯದಿಂದ ಮತ್ತು 15 ಮುಸ್ಲಿಂ) ಇತರ ಸಮುದಾಯದವರು ಪರಸ್ಪರ ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ. ಈ ಬೆಳವಣಿಗೆಯು “ಹಳೆಯ ತಲೆಮಾರಿನ” ನಡುವೆ ಅಸ್ತಿತ್ವದಲ್ಲಿದ್ದ “ಸೋದರತ್ವ”ದ ಮನೋಭಾವವನ್ನು ಮತ್ತೆ ಜಾರಿಗೆ ತಂದಂತಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

ಸಭೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಚ್.ಚಾವಡಾ, ತಾಲೂಕು ಪೊಲೀಸ್ ಠಾಣಾ ಪ್ರಭಾರ ಉಪನಿರೀಕ್ಷಕ ವಿ.ಜಿ.ಲಂಬಾರಿಯಾ ಹಾಗೂ ಇತರೆ ಪೊಲೀಸ್ ಆಡಳಿತ ಅಧಿಕಾರಿಗಳು, ಗ್ರಾಮದ ಎರಡೂ ಸಮುದಾಯದ ಸದಸ್ಯರನ್ನು ಭೇಟಿ ಮಾಡಿ, ಸಂಪೂರ್ಣ ಸಾಮರಸ್ಯದಿಂದ ಜೀವನ ನಡೆಸಬೇಕು ಎಂದು ಒತ್ತಾಯಿಸಿದರು.

ಹಿಂದು ಸಮುದಾಯದವರು ಶನಿವಾರ (ಮಾ.11) ಮಧ್ಯರಾತ್ರಿ ಡಿಜೆ ಸಂಗೀತದೊಂದಿಗೆ ವಿವಾಹದ ಮೆರವಣಿಗೆಯಲ್ಲಿ ಬಂದು ಮಸೀದಿಯ ಬಳಿ ಪಟಾಕಿ ಸಿಡಿಸಿರುವುದು ಪ್ರಚೋದನೆಗೆ ಕಾರಣವಾಗಿದೆ. ಆ ಬಳಿಕ ಎರಡು ಸಮುದಾಯಗಳ ಗುಂಪುಗಳ ನಡುವೆ ಸಂಘರ್ಷ ಆರಂಭವಾಗಿ, ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿ ಮತ್ತು ಹಲವರು ಹಾನಿಗೊಳಗಾದರು. ಈ ಘಟನೆ ನಡೆದ ಎರಡು ದಿನಗಳ ನಂತರ ಗ್ರಾಮವು ಸಹಜ ಸ್ಥಿತಿಗೆ ಮರಳಿತು ಎಂದು ಪೊಲೀಸರು ತಿಳಿಸಿದ್ದಾರೆ.

Fight over crackers sparks communal riot near Vadodara | Vadodara News -  Times of India

ಪೊಲೀಸರ ಮಧ್ಯಪ್ರವೇಶದ ನಂತರ, ಗ್ರಾಮಸ್ಥರು ಈ ವಾರಾಂತ್ಯದಲ್ಲಿ ಕೋಮು ಸೌಹಾರ್ದತೆಗಾಗಿ ಮತ್ತೊಂದು ಸಭೆ ಕರೆಯಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ಸಬ್-ಇನ್‌ಸ್ಪೆಕ್ಟರ್ ಲಂಬಾರಿಯಾ, ”2017ರಲ್ಲಿ ಎರಡು ಕೋಮಿನ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟ ನಂತರ ಅಹಿತಕರ ಘಟನೆಗಳನ್ನು ತಪ್ಪಿಸಲು ಗ್ರಾಮಸ್ಥರು ಮೆರವಣಿಗೆಗಳು, ಧಾರ್ಮಿಕ ಹಬ್ಬಗಳು ಮತ್ತು ಪೂಜಾ ಸ್ಥಳಗಳ ಬಗ್ಗೆ ನಿಯಮಗಳನ್ನು ರಚಿಸಿದ್ದರು. ಆದರೆ ಕೆಲ ವರ್ಷದಿಂದ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಗ್ರಾಮಸ್ಥರು ನಮಗೆ ತಿಳಿಸಿದರು. ಈಗ ಅದೇ ನಿಯಮಗಳನ್ನು ಬಲಪಡಿಸಲು ಅವರು ಸಭೆಯನ್ನು ಕರೆಯಲು ನಿರ್ಧರಿಸಿದ್ದಾರೆ” ಎಂದು ಲಂಬಾರಿಯಾ ಅವರು ತಿಳಿಸಿದರು.

ಸಾಮಿಯಾಲ ಗ್ರಾಮದಲ್ಲಿ ಒಟ್ಟು 6,000 ಜನಸಂಖ್ಯೆ ಇದ್ದು, ಸುಮಾರು 2,000 ಮುಸ್ಲಿಮರಿದ್ದಾರೆ. 12 ಪಂಚಾಯಿತಿ ಸದಸ್ಯರಲ್ಲಿ ಇಬ್ಬರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...