Homeಮುಖಪುಟವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

ವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

- Advertisement -
- Advertisement -

ಮಸೀದಿಯ ಬಳಿ ಮದುವೆ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಿದ್ದಕ್ಕಾಗಿ ಶನಿವಾರ (ಮಾರ್ಚ್ 11) ಗುಜರಾತ್‌ನ ವಡೋದರಾ ತಾಲೂಕಿನ ಸಾಮಿಯಾಲ ಗ್ರಾಮದಲ್ಲಿ ಕೋಮು ಘರ್ಷಣೆ ಸಂಭವಿಸಿತ್ತು. ಈ ಘಟನೆಯಲ್ಲಿ ಒಟ್ಟು 37 ಜನರನ್ನು ಬಂಧಿಸಲಾಗಿತ್ತು. ಈಗ ಅವರ ಜಾಮೀನು ಪ್ರಕ್ರಿಯೆಯಲ್ಲಿ ಗ್ರಾಮಸ್ಥರು ಒಬ್ಬರಿಗೊಬ್ಬರು ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ.

ಭಾನುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಾಮಿಯಾಲ ಗ್ರಾಮದ ಎರಡೂ ಸಮುದಾಯದವರೊಂದಿಗೆ ಜತೆ ಶಾಂತಿ ಸಭೆ ಏರ್ಪಡಿಸಿದ್ದರು. ಜಾಮೀನು ಪ್ರಕ್ರಿಯೆಯಲ್ಲಿ ಪರಸ್ಪರ ಜಾಮೀನುದಾರರಾಗಿರಲು ಅಧಿಕಾರಿಗಳು ಮತ್ತು ಪೊಲೀಸರ ಶಿಫಾರಸನ್ನು ಗ್ರಾಮದ ಹಿರಿಯರು ಮತ್ತು ಸಮಾಜದ ಮುಖಂಡರು ಒಪ್ಪಿಕೊಂಡರು.

ಬಂಧಿತರಾಗಿದ್ದ 37ಜನರಿಗೆ (22 ಹಿಂದೂ ಸಮುದಾಯದಿಂದ ಮತ್ತು 15 ಮುಸ್ಲಿಂ) ಇತರ ಸಮುದಾಯದವರು ಪರಸ್ಪರ ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ. ಈ ಬೆಳವಣಿಗೆಯು “ಹಳೆಯ ತಲೆಮಾರಿನ” ನಡುವೆ ಅಸ್ತಿತ್ವದಲ್ಲಿದ್ದ “ಸೋದರತ್ವ”ದ ಮನೋಭಾವವನ್ನು ಮತ್ತೆ ಜಾರಿಗೆ ತಂದಂತಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

ಸಭೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಚ್.ಚಾವಡಾ, ತಾಲೂಕು ಪೊಲೀಸ್ ಠಾಣಾ ಪ್ರಭಾರ ಉಪನಿರೀಕ್ಷಕ ವಿ.ಜಿ.ಲಂಬಾರಿಯಾ ಹಾಗೂ ಇತರೆ ಪೊಲೀಸ್ ಆಡಳಿತ ಅಧಿಕಾರಿಗಳು, ಗ್ರಾಮದ ಎರಡೂ ಸಮುದಾಯದ ಸದಸ್ಯರನ್ನು ಭೇಟಿ ಮಾಡಿ, ಸಂಪೂರ್ಣ ಸಾಮರಸ್ಯದಿಂದ ಜೀವನ ನಡೆಸಬೇಕು ಎಂದು ಒತ್ತಾಯಿಸಿದರು.

ಹಿಂದು ಸಮುದಾಯದವರು ಶನಿವಾರ (ಮಾ.11) ಮಧ್ಯರಾತ್ರಿ ಡಿಜೆ ಸಂಗೀತದೊಂದಿಗೆ ವಿವಾಹದ ಮೆರವಣಿಗೆಯಲ್ಲಿ ಬಂದು ಮಸೀದಿಯ ಬಳಿ ಪಟಾಕಿ ಸಿಡಿಸಿರುವುದು ಪ್ರಚೋದನೆಗೆ ಕಾರಣವಾಗಿದೆ. ಆ ಬಳಿಕ ಎರಡು ಸಮುದಾಯಗಳ ಗುಂಪುಗಳ ನಡುವೆ ಸಂಘರ್ಷ ಆರಂಭವಾಗಿ, ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿ ಮತ್ತು ಹಲವರು ಹಾನಿಗೊಳಗಾದರು. ಈ ಘಟನೆ ನಡೆದ ಎರಡು ದಿನಗಳ ನಂತರ ಗ್ರಾಮವು ಸಹಜ ಸ್ಥಿತಿಗೆ ಮರಳಿತು ಎಂದು ಪೊಲೀಸರು ತಿಳಿಸಿದ್ದಾರೆ.

Fight over crackers sparks communal riot near Vadodara | Vadodara News -  Times of India

ಪೊಲೀಸರ ಮಧ್ಯಪ್ರವೇಶದ ನಂತರ, ಗ್ರಾಮಸ್ಥರು ಈ ವಾರಾಂತ್ಯದಲ್ಲಿ ಕೋಮು ಸೌಹಾರ್ದತೆಗಾಗಿ ಮತ್ತೊಂದು ಸಭೆ ಕರೆಯಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ಸಬ್-ಇನ್‌ಸ್ಪೆಕ್ಟರ್ ಲಂಬಾರಿಯಾ, ”2017ರಲ್ಲಿ ಎರಡು ಕೋಮಿನ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟ ನಂತರ ಅಹಿತಕರ ಘಟನೆಗಳನ್ನು ತಪ್ಪಿಸಲು ಗ್ರಾಮಸ್ಥರು ಮೆರವಣಿಗೆಗಳು, ಧಾರ್ಮಿಕ ಹಬ್ಬಗಳು ಮತ್ತು ಪೂಜಾ ಸ್ಥಳಗಳ ಬಗ್ಗೆ ನಿಯಮಗಳನ್ನು ರಚಿಸಿದ್ದರು. ಆದರೆ ಕೆಲ ವರ್ಷದಿಂದ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಗ್ರಾಮಸ್ಥರು ನಮಗೆ ತಿಳಿಸಿದರು. ಈಗ ಅದೇ ನಿಯಮಗಳನ್ನು ಬಲಪಡಿಸಲು ಅವರು ಸಭೆಯನ್ನು ಕರೆಯಲು ನಿರ್ಧರಿಸಿದ್ದಾರೆ” ಎಂದು ಲಂಬಾರಿಯಾ ಅವರು ತಿಳಿಸಿದರು.

ಸಾಮಿಯಾಲ ಗ್ರಾಮದಲ್ಲಿ ಒಟ್ಟು 6,000 ಜನಸಂಖ್ಯೆ ಇದ್ದು, ಸುಮಾರು 2,000 ಮುಸ್ಲಿಮರಿದ್ದಾರೆ. 12 ಪಂಚಾಯಿತಿ ಸದಸ್ಯರಲ್ಲಿ ಇಬ್ಬರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...