Homeಮುಖಪುಟವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

ವಡೋದರಾ ಕೋಮು ಸಂಘರ್ಷ: ಪರಸ್ಪರ ಜಾಮೀನುದಾರರಾಗಿ ಸೌಹಾರ್ದತೆಗೆ ಒಪ್ಪಿದ ಗ್ರಾಮಸ್ಥರು

- Advertisement -
- Advertisement -

ಮಸೀದಿಯ ಬಳಿ ಮದುವೆ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಿದ್ದಕ್ಕಾಗಿ ಶನಿವಾರ (ಮಾರ್ಚ್ 11) ಗುಜರಾತ್‌ನ ವಡೋದರಾ ತಾಲೂಕಿನ ಸಾಮಿಯಾಲ ಗ್ರಾಮದಲ್ಲಿ ಕೋಮು ಘರ್ಷಣೆ ಸಂಭವಿಸಿತ್ತು. ಈ ಘಟನೆಯಲ್ಲಿ ಒಟ್ಟು 37 ಜನರನ್ನು ಬಂಧಿಸಲಾಗಿತ್ತು. ಈಗ ಅವರ ಜಾಮೀನು ಪ್ರಕ್ರಿಯೆಯಲ್ಲಿ ಗ್ರಾಮಸ್ಥರು ಒಬ್ಬರಿಗೊಬ್ಬರು ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ.

ಭಾನುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಾಮಿಯಾಲ ಗ್ರಾಮದ ಎರಡೂ ಸಮುದಾಯದವರೊಂದಿಗೆ ಜತೆ ಶಾಂತಿ ಸಭೆ ಏರ್ಪಡಿಸಿದ್ದರು. ಜಾಮೀನು ಪ್ರಕ್ರಿಯೆಯಲ್ಲಿ ಪರಸ್ಪರ ಜಾಮೀನುದಾರರಾಗಿರಲು ಅಧಿಕಾರಿಗಳು ಮತ್ತು ಪೊಲೀಸರ ಶಿಫಾರಸನ್ನು ಗ್ರಾಮದ ಹಿರಿಯರು ಮತ್ತು ಸಮಾಜದ ಮುಖಂಡರು ಒಪ್ಪಿಕೊಂಡರು.

ಬಂಧಿತರಾಗಿದ್ದ 37ಜನರಿಗೆ (22 ಹಿಂದೂ ಸಮುದಾಯದಿಂದ ಮತ್ತು 15 ಮುಸ್ಲಿಂ) ಇತರ ಸಮುದಾಯದವರು ಪರಸ್ಪರ ಜಾಮೀನುದಾರರಾಗಲು ಒಪ್ಪಿಕೊಂಡಿದ್ದಾರೆ. ಈ ಬೆಳವಣಿಗೆಯು “ಹಳೆಯ ತಲೆಮಾರಿನ” ನಡುವೆ ಅಸ್ತಿತ್ವದಲ್ಲಿದ್ದ “ಸೋದರತ್ವ”ದ ಮನೋಭಾವವನ್ನು ಮತ್ತೆ ಜಾರಿಗೆ ತಂದಂತಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

ಸಭೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಚ್.ಚಾವಡಾ, ತಾಲೂಕು ಪೊಲೀಸ್ ಠಾಣಾ ಪ್ರಭಾರ ಉಪನಿರೀಕ್ಷಕ ವಿ.ಜಿ.ಲಂಬಾರಿಯಾ ಹಾಗೂ ಇತರೆ ಪೊಲೀಸ್ ಆಡಳಿತ ಅಧಿಕಾರಿಗಳು, ಗ್ರಾಮದ ಎರಡೂ ಸಮುದಾಯದ ಸದಸ್ಯರನ್ನು ಭೇಟಿ ಮಾಡಿ, ಸಂಪೂರ್ಣ ಸಾಮರಸ್ಯದಿಂದ ಜೀವನ ನಡೆಸಬೇಕು ಎಂದು ಒತ್ತಾಯಿಸಿದರು.

ಹಿಂದು ಸಮುದಾಯದವರು ಶನಿವಾರ (ಮಾ.11) ಮಧ್ಯರಾತ್ರಿ ಡಿಜೆ ಸಂಗೀತದೊಂದಿಗೆ ವಿವಾಹದ ಮೆರವಣಿಗೆಯಲ್ಲಿ ಬಂದು ಮಸೀದಿಯ ಬಳಿ ಪಟಾಕಿ ಸಿಡಿಸಿರುವುದು ಪ್ರಚೋದನೆಗೆ ಕಾರಣವಾಗಿದೆ. ಆ ಬಳಿಕ ಎರಡು ಸಮುದಾಯಗಳ ಗುಂಪುಗಳ ನಡುವೆ ಸಂಘರ್ಷ ಆರಂಭವಾಗಿ, ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿ ಮತ್ತು ಹಲವರು ಹಾನಿಗೊಳಗಾದರು. ಈ ಘಟನೆ ನಡೆದ ಎರಡು ದಿನಗಳ ನಂತರ ಗ್ರಾಮವು ಸಹಜ ಸ್ಥಿತಿಗೆ ಮರಳಿತು ಎಂದು ಪೊಲೀಸರು ತಿಳಿಸಿದ್ದಾರೆ.

Fight over crackers sparks communal riot near Vadodara | Vadodara News -  Times of India

ಪೊಲೀಸರ ಮಧ್ಯಪ್ರವೇಶದ ನಂತರ, ಗ್ರಾಮಸ್ಥರು ಈ ವಾರಾಂತ್ಯದಲ್ಲಿ ಕೋಮು ಸೌಹಾರ್ದತೆಗಾಗಿ ಮತ್ತೊಂದು ಸಭೆ ಕರೆಯಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ಸಬ್-ಇನ್‌ಸ್ಪೆಕ್ಟರ್ ಲಂಬಾರಿಯಾ, ”2017ರಲ್ಲಿ ಎರಡು ಕೋಮಿನ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟ ನಂತರ ಅಹಿತಕರ ಘಟನೆಗಳನ್ನು ತಪ್ಪಿಸಲು ಗ್ರಾಮಸ್ಥರು ಮೆರವಣಿಗೆಗಳು, ಧಾರ್ಮಿಕ ಹಬ್ಬಗಳು ಮತ್ತು ಪೂಜಾ ಸ್ಥಳಗಳ ಬಗ್ಗೆ ನಿಯಮಗಳನ್ನು ರಚಿಸಿದ್ದರು. ಆದರೆ ಕೆಲ ವರ್ಷದಿಂದ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಗ್ರಾಮಸ್ಥರು ನಮಗೆ ತಿಳಿಸಿದರು. ಈಗ ಅದೇ ನಿಯಮಗಳನ್ನು ಬಲಪಡಿಸಲು ಅವರು ಸಭೆಯನ್ನು ಕರೆಯಲು ನಿರ್ಧರಿಸಿದ್ದಾರೆ” ಎಂದು ಲಂಬಾರಿಯಾ ಅವರು ತಿಳಿಸಿದರು.

ಸಾಮಿಯಾಲ ಗ್ರಾಮದಲ್ಲಿ ಒಟ್ಟು 6,000 ಜನಸಂಖ್ಯೆ ಇದ್ದು, ಸುಮಾರು 2,000 ಮುಸ್ಲಿಮರಿದ್ದಾರೆ. 12 ಪಂಚಾಯಿತಿ ಸದಸ್ಯರಲ್ಲಿ ಇಬ್ಬರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...