Homeಮುಖಪುಟವೈಷ್ಣೋದೇವಿ ಭೂಕುಸಿತ ದುರಂತ: ಮೃತರ ಸಂಖ್ಯೆ 30ಕ್ಕೆ ಏರಿಕೆ

ವೈಷ್ಣೋದೇವಿ ಭೂಕುಸಿತ ದುರಂತ: ಮೃತರ ಸಂಖ್ಯೆ 30ಕ್ಕೆ ಏರಿಕೆ

- Advertisement -
- Advertisement -

ಜಮ್ಮು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದ ಬಳಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ಎಸ್‌ಎಸ್‌ಪಿ ರಿಯಾಸಿ ಪರಮವೀರ್ ಸಿಂಗ್ ದೃಢಪಡಿಸಿದ್ದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮಂಗಳವಾರ (ಆ.26) ಮಧ್ಯಾಹ್ನ 3 ಗಂಟೆ ಸುಮಾರಿಗೆ ವೈಷ್ಣೋದೇವಿ ತೀರ್ಥಯಾತ್ರೆ ಮಾರ್ಗದ  ಅಧ್ಕುವರಿಯಲ್ಲಿ ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಹಲವಾರು ಜನರು ಇನ್ನೂ ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದಲ್ಲಿ ಸತತ ನಾಲ್ಕನೇ ದಿನವೂ ಬುಧವಾರ (ಆ.27) ನಿರಂತರ ಮಳೆಯಾಗುತ್ತಿದ್ದು, ದಿಢೀರ್ ಪ್ರವಾಹ ಮತ್ತು ಭೂಕುಸಿತ ಉಂಟಾಗಿ ವ್ಯಾಪಕ ನಾಶನಷ್ಟ ಸಂಭವಿಸಿದೆ. ತಾವಿ, ಚೆನಾಬ್ ಮತ್ತು ಝೀಲಂ ಸೇರಿದಂತೆ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಂದ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ.

ಸಾರಿಗೆ ವ್ಯವಸ್ಥೆ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ. ಚಕ್ಕಿ ನದಿಯಿಂದ ಉಂಟಾದ ಪ್ರವಾಹ ಪರಿಣಾಮ ಕನಿಷ್ಠ 18 ರೈಲುಗಳ ಸಂಚಾರ ರದ್ದುಗೊಂಡಿದೆ.

ಕೇಂದ್ರಾಡಳಿತ ಪ್ರದೇಶದ ಹೆಚ್ಚಿನ ಭಾಗಗಳಲ್ಲಿ ದೂರಸಂಪರ್ಕ ಸೇವೆಗಳು ವ್ಯತ್ಯಯಗೊಂಡಿದೆ. ಲಕ್ಷಾಂತರ ಜನರು ನಡುವೆ ಸಂಪರ್ಕ ಕಡಿತಗೊಂಡಿದೆ. ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿಶ್ತ್ವಾರ್‌ ಪಟ್ಟಣ ಕೇಂದ್ರದಿಂದ ಬಹು ದೂರದಲ್ಲಿರುವ ಮಾರ್ಗಿ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿ 10 ಮನೆಗಳು ಮತ್ತು ಒಂದು ಸೇತುವೆ ಕೊಚ್ಚಿಕೊಂಡು ಹೋಗಿವೆ. ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಕಥುವಾದ ಲಖನ್‌ಪುರ ಗ್ರಾಮದಲ್ಲಿ ಹಲವಾರು ಮಂದಿ ಅರೆಸೈನಿಕ ಸಿಬ್ಬಂದಿ ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿದ್ದು, ಅವರನ್ನು ಸ್ಥಳಾಂತರಿಸುವ ಪ್ರಯತ್ನಗಳು ಮುಂದುವರೆದಿವೆ.

ಜಮ್ಮು ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ತಾವಿ, ಚೆನಾಬ್, ಉಜ್, ರಾವಿ ಮತ್ತು ಬಸಂತೇರ್‌ನಂತಹ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಾಶ್ಮೀರ ಕಣಿವೆಯಲ್ಲಿ, ಝೀಲಂ ನದಿಯು ಸಂಗಮ್ (ಅನಂತ್‌ನಾಗ್)ನಲ್ಲಿ 21 ಅಡಿ ಪ್ರವಾಹ ಎಚ್ಚರಿಕೆ ಮಟ್ಟವನ್ನು ಮೀರಿ ಹರಿಯುತ್ತಿದೆ. ಶ್ರೀನಗರದ ರಾಮ್ ಮುನ್ಶಿ ಬಾಗ್‌ನಲ್ಲಿ ಎಚ್ಚರಿಕೆಯ ಮಟ್ಟ ಸಮೀಪಿಸಿದೆ.

ಜಲಮೂಲಗಳು ಉಕ್ಕಿ ಹರಿಯುತ್ತಿರುವುದರಿಂದ ಮತ್ತು ಹಠಾತ್ ಪ್ರವಾಹಗಳು ಹೆಚ್ಚಾಗುತ್ತಿರುವುದರಿಂದ ಸೇತುವೆಗಳು, ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಗಡಿ ಹೆಸರು ಬದಲಿಸಲು ಮುಸ್ಲಿಂ ವ್ಯಾಪಾರಿಗೆ ಬೆದರಿಕೆ: ದೆಹಲಿಯಲ್ಲಿ ದ್ವೇಷದ ರಾಜಕಾರಣ ತಾರಕಕ್ಕೇರಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...