Homeಮುಖಪುಟಆಗ್ರಾ: ಪ್ರೇಮಿಗಳಿಗೆ ಕಿರುಕುಳ ನೀಡಿದ್ದ ಬಜರಂಗದಳದ 30-35 ಮಂದಿ ಮೇಲೆ FIR

ಆಗ್ರಾ: ಪ್ರೇಮಿಗಳಿಗೆ ಕಿರುಕುಳ ನೀಡಿದ್ದ ಬಜರಂಗದಳದ 30-35 ಮಂದಿ ಮೇಲೆ FIR

- Advertisement -
- Advertisement -

ಆಗ್ರಾದಲ್ಲಿ ಪ್ರೇಮಿಗಳ ದಿನದಂದು ಹಲವು ಜೋಡಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಗಳು ನಡೆದಿದ್ದು, ಉದ್ಯಾನವನಗಳಲ್ಲಿದ್ದ ಜೋಡಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ರಾಷ್ಟ್ರೀಯ ಬಜರಂಗದಳದ 30 ರಿಂದ 35 ಮಂದಿ ಮೇಲೆ ಎಫ್‌ಐಆರ್‌ ದಾಖಲಾಗಿದೆ ಎಂದು ಆಗ್ರಾ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಬಜರಂಗದಳ ಮತ್ತು ಹಿಂದೂ ಮಹಾಸಭಾದ ಕಾರ್ಯಕರ್ತರು ಸೋಮವಾರ (ವ್ಯಾಲೆಂಟೈನ್ಸ್ ದಿನ) ಹಾಕಿ ಸ್ಟಿಕ್‌ಗಳೊಂದಿಗೆ ಬೀದಿಗಳಲ್ಲಿ ಓಡಾಡುತ್ತಿದ್ದದ್ದು ಕಂಡುಬಂದಿತು. ಇದೇ ವೇಳೆ ಉದ್ಯಾನವನದಲ್ಲಿ ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಲಾಗಿತ್ತು. ಪ್ರೇಮಿಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

ಇದರ ಜೊತೆಗೆ ಬಜರಂಗದಳದ ಜೊತೆ ಇದ್ದ ಹುಡುಗಿಯರೂ ಕೂಡ ಯುವತಿಯನ್ನು ಬೈದು ಆಕೆಯ ಬ್ಯಾಗ್‌ನಲ್ಲಿ ಹುಡುಕಾಟ ನಡೆಸಿದ್ದಾರೆ. ಕಾಲೇಜು ಡ್ರೆಸ್‌ನಲ್ಲಿದ್ದ ಯುವತಿಯನ್ನು ಬಲವಂತವಾಗಿ ವಿಡಿಯೋ ಮಾಡಿ ಆಕೆಯ ಕುಟುಂಬದ ಸದಸ್ಯರ ನಂಬರ್ ಪಡೆದು ದೌರ್ಜನ್ಯ ಎಸಗಿದ್ದಾರೆ. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದಾಗ, ಬಜರಂಗದಳದವರು ಅವರೊಂದಿಗೂ ಜಗಳವಾಡಿದರು. ಇಷ್ಟೆಲ್ಲಾ ನಡೆದರೂ ಪಾರ್ಕ್ ಮುಂಭಾಗಗಳಲ್ಲಿದ್ದ ಪೊಲೀಸರೂ ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಇದನ್ನೂ ಓದಿ: ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ಬಳಿಕ ಈ ವಿಷಯವನ್ನು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ವಿಷಯ ತಿಳಿದ ಎಸ್‌ಎಸ್‌ಪಿ ಸುಧೀರ್‌ಕುಮಾರ್‌ ಹರಿಪರ್ವತ್‌ ಪೊಲೀಸ್‌ ಠಾಣೆಗೆ ಪ್ರಕರಣ ದಾಖಲಿಸಿಕೊಳ್ಳಲು ಆದೇಶಿಸಿದ್ದರು.

ಆಗ್ರಾ ಪೊಲೀಸರು ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.”ಹರಿಪರ್ವತ ಪೊಲೀಸ್ ಠಾಣಾ ವ್ಯಾಪ್ತಿಯ ಪಲಿವಾಲ್ ಪಾರ್ಕ್‌ನಲ್ಲಿ ರಾಷ್ಟ್ರೀಯ ಬಜರಂಗ ದಳವು ಯುವಕ-ಯುವತಿಯರ ಮೇಲೆ ಅಸಭ್ಯವಾಗಿ ವರ್ತಿಸಿದ ಪ್ರಕರಣವನ್ನು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರೀಯ ಬಜರಂಗದಳದ 30 ರಿಂದ 35 ಮಂದಿ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಮುಂದಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಬಜರಂಗದಳ ಮತ್ತು ಅಖಿಲ ಭಾರತ ಹಿಂದೂ ಮಹಾಸಭಾದ ಪದಾಧಿಕಾರಿಗಳು ಉದ್ಯಾನವನಗಳಲ್ಲಿ ಯಾರೇ ಅಶ್ಲೀಲವಾಗಿ ವರ್ತಿಸಿದರೆ ಅವರ ಮುಖ ಕಪ್ಪಾಗಿಸಿ ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಗುವುದು. ಅಲ್ಲದೆ, ಹಿಂದೂ ಸಂಪ್ರದಾಯದ ಪ್ರಕಾರ ಅವರಿಗೆ ಸ್ಥಳದಲ್ಲೇ ಮದುವೆ ಮಾಡಲಾಗುತ್ತದೆ ಎಂದು ಘೋಷಿಸಿದ್ದರು.

ಅಖಿಲ ಭಾರತ ಹಿಂದೂ ಮಹಾಸಭಾದ ಮೀನಾ ದಿವಾಕರ್ ಮತ್ತು ರೌನಕ್ ಠಾಕೂರ್ ನೇತೃತ್ವದಲ್ಲಿ ಸೋಮವಾರ ದಿವಾಣಿ ಚೌಕದಲ್ಲಿ ಪ್ರೇಮಿಗಳ ಪ್ರತಿಕೃತಿ ದಹಿಸಲಾಯಿತು. ಇದಾದ ನಂತರ, ರಾಷ್ಟ್ರೀಯ ಬಜರಂಗದಳದ ಕಾರ್ಯಕರ್ತರು ವ್ಯಾಲೆಂಟೈನ್ ಪ್ರತಿಮೆಗೆ ಸೀರೆ ತೊಡಿಸಿ ಪ್ರತಿಭಟನೆ ನಡೆಸಿದ್ದರು. ಇದಾದ ನಂತರ ಉಭಯ ಪಕ್ಷಗಳ ಕಾರ್ಯಕರ್ತರು ಉದ್ಯಾನವನಗಳತ್ತ ತೆರಳಿ ಜೋಡಿಗಳ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ಮಾಡಿದ್ದರು.


ಇದನ್ನೂ ಓದಿ: ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರೀತಿ ಪ್ರೇಮ ಸಹನೆ ತಾಳ್ಮೆ ಮತ್ತು ವಿವೇಚನೆ ಇಲ್ಲದೆ ಈ ಅಂಧರು ಜಾತಿಗ್ರಸ್ಥ ಸಮಾಜ ನಿರ್ಮಾಣಕ್ಕಾಗಿ ಕುತಂತ್ರ ಮಾಡುತ್ತಿರುವುದು ತೀರಾ ಖಂಡನೀಯಾ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...