Homeಮುಖಪುಟಆಗ್ರಾ: ಪ್ರೇಮಿಗಳಿಗೆ ಕಿರುಕುಳ ನೀಡಿದ್ದ ಬಜರಂಗದಳದ 30-35 ಮಂದಿ ಮೇಲೆ FIR

ಆಗ್ರಾ: ಪ್ರೇಮಿಗಳಿಗೆ ಕಿರುಕುಳ ನೀಡಿದ್ದ ಬಜರಂಗದಳದ 30-35 ಮಂದಿ ಮೇಲೆ FIR

- Advertisement -
- Advertisement -

ಆಗ್ರಾದಲ್ಲಿ ಪ್ರೇಮಿಗಳ ದಿನದಂದು ಹಲವು ಜೋಡಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಗಳು ನಡೆದಿದ್ದು, ಉದ್ಯಾನವನಗಳಲ್ಲಿದ್ದ ಜೋಡಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ರಾಷ್ಟ್ರೀಯ ಬಜರಂಗದಳದ 30 ರಿಂದ 35 ಮಂದಿ ಮೇಲೆ ಎಫ್‌ಐಆರ್‌ ದಾಖಲಾಗಿದೆ ಎಂದು ಆಗ್ರಾ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಬಜರಂಗದಳ ಮತ್ತು ಹಿಂದೂ ಮಹಾಸಭಾದ ಕಾರ್ಯಕರ್ತರು ಸೋಮವಾರ (ವ್ಯಾಲೆಂಟೈನ್ಸ್ ದಿನ) ಹಾಕಿ ಸ್ಟಿಕ್‌ಗಳೊಂದಿಗೆ ಬೀದಿಗಳಲ್ಲಿ ಓಡಾಡುತ್ತಿದ್ದದ್ದು ಕಂಡುಬಂದಿತು. ಇದೇ ವೇಳೆ ಉದ್ಯಾನವನದಲ್ಲಿ ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಲಾಗಿತ್ತು. ಪ್ರೇಮಿಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

ಇದರ ಜೊತೆಗೆ ಬಜರಂಗದಳದ ಜೊತೆ ಇದ್ದ ಹುಡುಗಿಯರೂ ಕೂಡ ಯುವತಿಯನ್ನು ಬೈದು ಆಕೆಯ ಬ್ಯಾಗ್‌ನಲ್ಲಿ ಹುಡುಕಾಟ ನಡೆಸಿದ್ದಾರೆ. ಕಾಲೇಜು ಡ್ರೆಸ್‌ನಲ್ಲಿದ್ದ ಯುವತಿಯನ್ನು ಬಲವಂತವಾಗಿ ವಿಡಿಯೋ ಮಾಡಿ ಆಕೆಯ ಕುಟುಂಬದ ಸದಸ್ಯರ ನಂಬರ್ ಪಡೆದು ದೌರ್ಜನ್ಯ ಎಸಗಿದ್ದಾರೆ. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದಾಗ, ಬಜರಂಗದಳದವರು ಅವರೊಂದಿಗೂ ಜಗಳವಾಡಿದರು. ಇಷ್ಟೆಲ್ಲಾ ನಡೆದರೂ ಪಾರ್ಕ್ ಮುಂಭಾಗಗಳಲ್ಲಿದ್ದ ಪೊಲೀಸರೂ ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಇದನ್ನೂ ಓದಿ: ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ಬಳಿಕ ಈ ವಿಷಯವನ್ನು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ವಿಷಯ ತಿಳಿದ ಎಸ್‌ಎಸ್‌ಪಿ ಸುಧೀರ್‌ಕುಮಾರ್‌ ಹರಿಪರ್ವತ್‌ ಪೊಲೀಸ್‌ ಠಾಣೆಗೆ ಪ್ರಕರಣ ದಾಖಲಿಸಿಕೊಳ್ಳಲು ಆದೇಶಿಸಿದ್ದರು.

ಆಗ್ರಾ ಪೊಲೀಸರು ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.”ಹರಿಪರ್ವತ ಪೊಲೀಸ್ ಠಾಣಾ ವ್ಯಾಪ್ತಿಯ ಪಲಿವಾಲ್ ಪಾರ್ಕ್‌ನಲ್ಲಿ ರಾಷ್ಟ್ರೀಯ ಬಜರಂಗ ದಳವು ಯುವಕ-ಯುವತಿಯರ ಮೇಲೆ ಅಸಭ್ಯವಾಗಿ ವರ್ತಿಸಿದ ಪ್ರಕರಣವನ್ನು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರೀಯ ಬಜರಂಗದಳದ 30 ರಿಂದ 35 ಮಂದಿ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಮುಂದಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಬಜರಂಗದಳ ಮತ್ತು ಅಖಿಲ ಭಾರತ ಹಿಂದೂ ಮಹಾಸಭಾದ ಪದಾಧಿಕಾರಿಗಳು ಉದ್ಯಾನವನಗಳಲ್ಲಿ ಯಾರೇ ಅಶ್ಲೀಲವಾಗಿ ವರ್ತಿಸಿದರೆ ಅವರ ಮುಖ ಕಪ್ಪಾಗಿಸಿ ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಗುವುದು. ಅಲ್ಲದೆ, ಹಿಂದೂ ಸಂಪ್ರದಾಯದ ಪ್ರಕಾರ ಅವರಿಗೆ ಸ್ಥಳದಲ್ಲೇ ಮದುವೆ ಮಾಡಲಾಗುತ್ತದೆ ಎಂದು ಘೋಷಿಸಿದ್ದರು.

ಅಖಿಲ ಭಾರತ ಹಿಂದೂ ಮಹಾಸಭಾದ ಮೀನಾ ದಿವಾಕರ್ ಮತ್ತು ರೌನಕ್ ಠಾಕೂರ್ ನೇತೃತ್ವದಲ್ಲಿ ಸೋಮವಾರ ದಿವಾಣಿ ಚೌಕದಲ್ಲಿ ಪ್ರೇಮಿಗಳ ಪ್ರತಿಕೃತಿ ದಹಿಸಲಾಯಿತು. ಇದಾದ ನಂತರ, ರಾಷ್ಟ್ರೀಯ ಬಜರಂಗದಳದ ಕಾರ್ಯಕರ್ತರು ವ್ಯಾಲೆಂಟೈನ್ ಪ್ರತಿಮೆಗೆ ಸೀರೆ ತೊಡಿಸಿ ಪ್ರತಿಭಟನೆ ನಡೆಸಿದ್ದರು. ಇದಾದ ನಂತರ ಉಭಯ ಪಕ್ಷಗಳ ಕಾರ್ಯಕರ್ತರು ಉದ್ಯಾನವನಗಳತ್ತ ತೆರಳಿ ಜೋಡಿಗಳ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ಮಾಡಿದ್ದರು.


ಇದನ್ನೂ ಓದಿ: ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರೀತಿ ಪ್ರೇಮ ಸಹನೆ ತಾಳ್ಮೆ ಮತ್ತು ವಿವೇಚನೆ ಇಲ್ಲದೆ ಈ ಅಂಧರು ಜಾತಿಗ್ರಸ್ಥ ಸಮಾಜ ನಿರ್ಮಾಣಕ್ಕಾಗಿ ಕುತಂತ್ರ ಮಾಡುತ್ತಿರುವುದು ತೀರಾ ಖಂಡನೀಯಾ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...