Homeಕರ್ನಾಟಕವಾಲ್ಮೀಕಿ ನಿಗಮದ ಅಕ್ರಮ : ಶಾಸಕ ನಾಗೇಂದ್ರ ಸೇರಿ 25 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ...

ವಾಲ್ಮೀಕಿ ನಿಗಮದ ಅಕ್ರಮ : ಶಾಸಕ ನಾಗೇಂದ್ರ ಸೇರಿ 25 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ

- Advertisement -
- Advertisement -

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂಪಾಯಿ ಹಣ ವರ್ಗಾಯಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಸೇರಿ 25 ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) 4,970 ಪುಟಗಳ ಆರೋಪ ಪಟ್ಟಿ ಹಾಗೂ 144 ಪುಟಗಳ ದೂರನ್ನು ಸೋಮವಾರ (ಸೆ.9) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಹಣ ಅಕ್ರಮ ವರ್ಗಾವಣೆ ಕಾಯ್ದೆಯ ಸೆಕ್ಷನ್‌ 3 ಮತ್ತು 4ರ ಅಡಿ ಜಾರಿ ನಿರ್ದೇಶನಾಲಯ ವಿಸ್ತೃತ ತನಿಖೆ ನಡೆಸಿ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರಿಗೆ ಆರೋಪ ಪಟ್ಟಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

ಪ್ರಕರಣದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕರಾಗಿರುವ ಬಿ ನಾಗೇಂದ್ರ ಅವರು ಮೊದಲನೇ ಆರೋಪಿಯಾಗಿದ್ದು, ಸತ್ಯನಾರಾಯಣ ವರ್ಮ (ಬ್ರೋಕರ್) ಎರಡನೇ ಆರೋಪಿ, ಮೂರನೇ ಆರೋಪಿಯಾಗಿ ಸತ್ಯನಾರಾಯಣ ವರ್ಮ ಏಕತಾರಿ (ಫಸ್ಟ್ ಬ್ಯಾಂಕ್ ಮಾಲೀಕ), ನಾಲ್ಕನೇ ಆರೋಪಿಯಾಗಿ ಜೆ ಜಿ ಪದ್ಮನಾಭ (ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ) ಅವರನ್ನು ಹೆಸರಿಸಲಾಗಿದೆ ಎಂದು ವರದಿಗಳು ಹೇಳಿವೆ.

ವಾಲ್ಮೀಕಿ ನಿಗಮದ ಖಾತೆಯಿಂದ ಒಟ್ಟಾರೆ 84 ಕೋಟಿ ರೂಪಾಯಿಯನ್ನು ಅಕ್ರಮವಾಗಿ ಬಳಕೆ ಮಾಡಲಾಗಿದೆ. ಮಾಜಿ ಸಚಿವ ಬಿ ನಾಗೇಂದ್ರ ಅವರು ನಕಲಿ ಖಾತೆ ಸೃಷ್ಟಿಸಲು ಸೂಚಿಸಿ, ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದಾರೆ. ನಾಗೇಂದ್ರ ಸೂಚನೆಯಂತೆ ಪದ್ಮನಾಭರಿಂದ ಹಣ ವರ್ಗಾವಣೆಯಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಒಳಸಂಚು ರೂಪಿಸಿದ್ದು, ನಂತರ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ವಸಂತ ನಗರದ ಶಾಂಗ್ರೀಲಾ ಹೋಟೆಲ್‌ನಲ್ಲಿ ನಾಗೇಂದ್ರ ಸಭೆ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮನಕ್ಕೆ ಪದ್ಮನಾಭ ಅವರನ್ನು ನಾಗೇಂದ್ರ ಆಪ್ತನಾದ ನೆಕ್ಕಂಟಿ ನಾಗರಾಜ್‌ ಮೂಲಕ ನೇಮಕ ಮಾಡಲಾಗಿತ್ತು ಎಂದು ಚಾರ್ಜ್ ಶೀಟ್‌ನಲ್ಲಿ ಆರೋಪಿಸಿರುವುದಾಗಿ ತಿಳಿದು ಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳಕೆ ಮಾಡಲಾಗಿದೆ. ನಾಗೇಂದ್ರ ಅವರ ಆಪ್ತ ಸಹಾಯಕನಾದ 8ನೇ ಆರೋಪಿ ವಿಜಯ್ ಕುಮಾರ್ ಮೊಬೈಲ್‌ನಲ್ಲಿ ಹಣದ ಮೊತ್ತ, ಯಾರಿಗೆಲ್ಲಾ ಪೂರೈಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಬಳ್ಳಾರಿ ಲೋಕಸಭಾ ಚುನಾವಣೆಗೆ 20.19 ಕೋಟಿ ರೂಪಾಯಿ ಬಳಕೆ ಮಾಡಲಾಗಿದೆ ಎಂದು ವಿವರಿಸಲಾಗಿದೆ. ಈ ಸಂಬಂಧ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಲಾಗಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಸದ್ಯ 15 ಸಾಕ್ಷಿಗಳ ಕಲೆ ಹಾಕಲಾಗಿದ್ದು, ನಾಗೇಂದ್ರ 5.26 ಕೋಟಿ ರೂಪಾಯಿ ಬಳಕೆ ಮಾಡಿದ್ದಾರೆ. ಆದರೆ, ಈ ಸಂಬಂಧ ಉತ್ತರಿಸಲು ನಾಗೇಂದ್ರ ನಿರಾಕರಿಸಿದ್ದಾರೆ. ಸಣ್ಣ ಕೆಲಸಗಳಿಗೆ ಹೆಚ್ಚಿನ ಮೊತ್ತದ ನಕಲಿ ಬಿಲ್‌ಗಳನ್ನು ಸೃಷ್ಟಿಸಲಾಗಿದೆ. ಹಗರಣದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯ ಸಂಶಯ ವ್ಯಕ್ತಪಡಿಸಿದೆ ಎಂದು ಆರೋಪಿಸಲಾಗಿದೆ.

ಕಳೆದ ಆಗಸ್ಟ್‌ 6ರಂದು ಕೆಎಂವಿಎಸ್‌ಟಿಡಿಸಿಎಲ್‌ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಏಳು ಸಂಪುಟಗಳಲ್ಲಿ 3,072 ಪುಟಗಳ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿತ್ತು.

ವಾಲ್ಮೀಕಿ ನಿಗಮದ ಅಕ್ರಮದ ಕುರಿತು ತನಿಖೆ ನಡೆಸಲು ಸರ್ಕಾರ ರಚಿಸಿದ್ದ ವಿಶೇಷ ತನಿಖಾ ದಳ(ಎಸ್‌ಐಟಿ) ನ್ಯಾಯಾಲಯಕ್ಕೆ ಪ್ರತ್ಯೇಕವಾಗಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ನಾಗೇಂದ್ರ ಅವರನ್ನು ಆರೋಪಿ ಎಂದು ಉಲ್ಲೇಖಿಸಿರಲಿಲ್ಲ. ಅಧಿಕಾರಿಗಳನ್ನಷ್ಟೇ ಹೊಣೆ ಮಾಡಿತ್ತು. ಆದರೆ, ಇಡಿ ಸಲ್ಲಿಸಿರುವ ಆರೋಪ ಪಟ್ಟಿ ವ್ಯತಿರಿಕ್ತವಾಗಿದೆ. ನಾಗೇಂದ್ರ ಅವರನ್ನೇ ಮೊದಲನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) 300 ಪುಟಗಳ ಆರೋಪ ಪಟ್ಟಿಯನ್ನು ಆಗಸ್ಟ್ 22ರಂದು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪ್ರಕರಣದಲ್ಲಿ ಕೆಎಂವಿಎಸ್‌ಟಿಡಿಸಿಎಲ್‌ ಹಿಂದಿನ ವ್ಯವಸ್ಥಾಪಕ ಜೆ.ಜಿ ಪದ್ಮನಾಭ ಮತ್ತು ಪರಶುರಾಮ ದುರ್ಗಣ್ಣನವರ್‌ ಅವರನ್ನು ಆರೋಪಿಗಳನ್ನಾಗಿಸಲಾಗಿದೆ. ಈ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದೆ. ಚಂದ್ರಶೇಖರನ್‌ ಪತ್ನಿ ಕವಿತಾ ಅವರು ನೀಡಿದ ದೂರಿನನ್ವಯ ಶಿವಮೊಗ್ಗದ ವಿನೋಬನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 306 ಮತ್ತು 34ರ ಅಡಿ ಪ್ರಕರಣ ದಾಖಲಾಗಿತ್ತು.

ಈ ಆರೋಪ ಪಟ್ಟಿಯಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಹಾಗೂ ಇನ್ನಿತರರ ಹೆಸರು ಇಲ್ಲ ಎಂದು ತಿಳಿದು ಬಂದಿದೆ.

ಚಂದ್ರಶೇಖರನ್‌ ಅವರ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ಬಳಿಕ, ರಾಜ್ಯ ಸರ್ಕಾರ ಮೇ 31,2023ರಂದು ಸಿಐಡಿಯ ಎಸ್‌ಐಟಿಗೆ ಪ್ರಕರಣದ ತನಿಖೆ ವರ್ಗಾಯಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಎಲ್ಲವನ್ನೂ ಎಸ್‌ಐಟಿ ತನಿಖೆ ನಡೆಸುತ್ತಿದೆ.

ಶಿವಮೊಗ್ಗದ ವಿನೋಬನಗರದ ತಮ್ಮ ಮನೆಯಲ್ಲಿ 2024ರ ಮೇ 26 ರಂದು ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಾಥಮಿಕ ಹಂತದ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ಮಾಡಬೇಕಾಗಿದ್ದು, ಸಂಪೂರ್ಣ ದೋಷರೋಪ ಪಟ್ಟಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ವಿವಿಧ ಹಗರಣಗಳ ತನಿಖೆ ಸಮನ್ವಯಕ್ಕೆ ಗೃಹ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...