Homeಕರ್ನಾಟಕವಾಲ್ಮೀಕಿ ನಿಗಮದ ಅಕ್ರಮ : ಶಾಸಕ ನಾಗೇಂದ್ರ ಸೇರಿ 25 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ...

ವಾಲ್ಮೀಕಿ ನಿಗಮದ ಅಕ್ರಮ : ಶಾಸಕ ನಾಗೇಂದ್ರ ಸೇರಿ 25 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ

- Advertisement -
- Advertisement -

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂಪಾಯಿ ಹಣ ವರ್ಗಾಯಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಸೇರಿ 25 ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) 4,970 ಪುಟಗಳ ಆರೋಪ ಪಟ್ಟಿ ಹಾಗೂ 144 ಪುಟಗಳ ದೂರನ್ನು ಸೋಮವಾರ (ಸೆ.9) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಹಣ ಅಕ್ರಮ ವರ್ಗಾವಣೆ ಕಾಯ್ದೆಯ ಸೆಕ್ಷನ್‌ 3 ಮತ್ತು 4ರ ಅಡಿ ಜಾರಿ ನಿರ್ದೇಶನಾಲಯ ವಿಸ್ತೃತ ತನಿಖೆ ನಡೆಸಿ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರಿಗೆ ಆರೋಪ ಪಟ್ಟಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

ಪ್ರಕರಣದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕರಾಗಿರುವ ಬಿ ನಾಗೇಂದ್ರ ಅವರು ಮೊದಲನೇ ಆರೋಪಿಯಾಗಿದ್ದು, ಸತ್ಯನಾರಾಯಣ ವರ್ಮ (ಬ್ರೋಕರ್) ಎರಡನೇ ಆರೋಪಿ, ಮೂರನೇ ಆರೋಪಿಯಾಗಿ ಸತ್ಯನಾರಾಯಣ ವರ್ಮ ಏಕತಾರಿ (ಫಸ್ಟ್ ಬ್ಯಾಂಕ್ ಮಾಲೀಕ), ನಾಲ್ಕನೇ ಆರೋಪಿಯಾಗಿ ಜೆ ಜಿ ಪದ್ಮನಾಭ (ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ) ಅವರನ್ನು ಹೆಸರಿಸಲಾಗಿದೆ ಎಂದು ವರದಿಗಳು ಹೇಳಿವೆ.

ವಾಲ್ಮೀಕಿ ನಿಗಮದ ಖಾತೆಯಿಂದ ಒಟ್ಟಾರೆ 84 ಕೋಟಿ ರೂಪಾಯಿಯನ್ನು ಅಕ್ರಮವಾಗಿ ಬಳಕೆ ಮಾಡಲಾಗಿದೆ. ಮಾಜಿ ಸಚಿವ ಬಿ ನಾಗೇಂದ್ರ ಅವರು ನಕಲಿ ಖಾತೆ ಸೃಷ್ಟಿಸಲು ಸೂಚಿಸಿ, ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದಾರೆ. ನಾಗೇಂದ್ರ ಸೂಚನೆಯಂತೆ ಪದ್ಮನಾಭರಿಂದ ಹಣ ವರ್ಗಾವಣೆಯಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಒಳಸಂಚು ರೂಪಿಸಿದ್ದು, ನಂತರ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ವಸಂತ ನಗರದ ಶಾಂಗ್ರೀಲಾ ಹೋಟೆಲ್‌ನಲ್ಲಿ ನಾಗೇಂದ್ರ ಸಭೆ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮನಕ್ಕೆ ಪದ್ಮನಾಭ ಅವರನ್ನು ನಾಗೇಂದ್ರ ಆಪ್ತನಾದ ನೆಕ್ಕಂಟಿ ನಾಗರಾಜ್‌ ಮೂಲಕ ನೇಮಕ ಮಾಡಲಾಗಿತ್ತು ಎಂದು ಚಾರ್ಜ್ ಶೀಟ್‌ನಲ್ಲಿ ಆರೋಪಿಸಿರುವುದಾಗಿ ತಿಳಿದು ಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳಕೆ ಮಾಡಲಾಗಿದೆ. ನಾಗೇಂದ್ರ ಅವರ ಆಪ್ತ ಸಹಾಯಕನಾದ 8ನೇ ಆರೋಪಿ ವಿಜಯ್ ಕುಮಾರ್ ಮೊಬೈಲ್‌ನಲ್ಲಿ ಹಣದ ಮೊತ್ತ, ಯಾರಿಗೆಲ್ಲಾ ಪೂರೈಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಬಳ್ಳಾರಿ ಲೋಕಸಭಾ ಚುನಾವಣೆಗೆ 20.19 ಕೋಟಿ ರೂಪಾಯಿ ಬಳಕೆ ಮಾಡಲಾಗಿದೆ ಎಂದು ವಿವರಿಸಲಾಗಿದೆ. ಈ ಸಂಬಂಧ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಲಾಗಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಸದ್ಯ 15 ಸಾಕ್ಷಿಗಳ ಕಲೆ ಹಾಕಲಾಗಿದ್ದು, ನಾಗೇಂದ್ರ 5.26 ಕೋಟಿ ರೂಪಾಯಿ ಬಳಕೆ ಮಾಡಿದ್ದಾರೆ. ಆದರೆ, ಈ ಸಂಬಂಧ ಉತ್ತರಿಸಲು ನಾಗೇಂದ್ರ ನಿರಾಕರಿಸಿದ್ದಾರೆ. ಸಣ್ಣ ಕೆಲಸಗಳಿಗೆ ಹೆಚ್ಚಿನ ಮೊತ್ತದ ನಕಲಿ ಬಿಲ್‌ಗಳನ್ನು ಸೃಷ್ಟಿಸಲಾಗಿದೆ. ಹಗರಣದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯ ಸಂಶಯ ವ್ಯಕ್ತಪಡಿಸಿದೆ ಎಂದು ಆರೋಪಿಸಲಾಗಿದೆ.

ಕಳೆದ ಆಗಸ್ಟ್‌ 6ರಂದು ಕೆಎಂವಿಎಸ್‌ಟಿಡಿಸಿಎಲ್‌ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಏಳು ಸಂಪುಟಗಳಲ್ಲಿ 3,072 ಪುಟಗಳ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿತ್ತು.

ವಾಲ್ಮೀಕಿ ನಿಗಮದ ಅಕ್ರಮದ ಕುರಿತು ತನಿಖೆ ನಡೆಸಲು ಸರ್ಕಾರ ರಚಿಸಿದ್ದ ವಿಶೇಷ ತನಿಖಾ ದಳ(ಎಸ್‌ಐಟಿ) ನ್ಯಾಯಾಲಯಕ್ಕೆ ಪ್ರತ್ಯೇಕವಾಗಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ನಾಗೇಂದ್ರ ಅವರನ್ನು ಆರೋಪಿ ಎಂದು ಉಲ್ಲೇಖಿಸಿರಲಿಲ್ಲ. ಅಧಿಕಾರಿಗಳನ್ನಷ್ಟೇ ಹೊಣೆ ಮಾಡಿತ್ತು. ಆದರೆ, ಇಡಿ ಸಲ್ಲಿಸಿರುವ ಆರೋಪ ಪಟ್ಟಿ ವ್ಯತಿರಿಕ್ತವಾಗಿದೆ. ನಾಗೇಂದ್ರ ಅವರನ್ನೇ ಮೊದಲನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) 300 ಪುಟಗಳ ಆರೋಪ ಪಟ್ಟಿಯನ್ನು ಆಗಸ್ಟ್ 22ರಂದು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪ್ರಕರಣದಲ್ಲಿ ಕೆಎಂವಿಎಸ್‌ಟಿಡಿಸಿಎಲ್‌ ಹಿಂದಿನ ವ್ಯವಸ್ಥಾಪಕ ಜೆ.ಜಿ ಪದ್ಮನಾಭ ಮತ್ತು ಪರಶುರಾಮ ದುರ್ಗಣ್ಣನವರ್‌ ಅವರನ್ನು ಆರೋಪಿಗಳನ್ನಾಗಿಸಲಾಗಿದೆ. ಈ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದೆ. ಚಂದ್ರಶೇಖರನ್‌ ಪತ್ನಿ ಕವಿತಾ ಅವರು ನೀಡಿದ ದೂರಿನನ್ವಯ ಶಿವಮೊಗ್ಗದ ವಿನೋಬನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 306 ಮತ್ತು 34ರ ಅಡಿ ಪ್ರಕರಣ ದಾಖಲಾಗಿತ್ತು.

ಈ ಆರೋಪ ಪಟ್ಟಿಯಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಹಾಗೂ ಇನ್ನಿತರರ ಹೆಸರು ಇಲ್ಲ ಎಂದು ತಿಳಿದು ಬಂದಿದೆ.

ಚಂದ್ರಶೇಖರನ್‌ ಅವರ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ಬಳಿಕ, ರಾಜ್ಯ ಸರ್ಕಾರ ಮೇ 31,2023ರಂದು ಸಿಐಡಿಯ ಎಸ್‌ಐಟಿಗೆ ಪ್ರಕರಣದ ತನಿಖೆ ವರ್ಗಾಯಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಎಲ್ಲವನ್ನೂ ಎಸ್‌ಐಟಿ ತನಿಖೆ ನಡೆಸುತ್ತಿದೆ.

ಶಿವಮೊಗ್ಗದ ವಿನೋಬನಗರದ ತಮ್ಮ ಮನೆಯಲ್ಲಿ 2024ರ ಮೇ 26 ರಂದು ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಾಥಮಿಕ ಹಂತದ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ಮಾಡಬೇಕಾಗಿದ್ದು, ಸಂಪೂರ್ಣ ದೋಷರೋಪ ಪಟ್ಟಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ವಿವಿಧ ಹಗರಣಗಳ ತನಿಖೆ ಸಮನ್ವಯಕ್ಕೆ ಗೃಹ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...