Homeಕರ್ನಾಟಕವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: ಜಾರಿ ನಿರ್ದೇಶನಾಲಯದ ವಶಕ್ಕೆ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: ಜಾರಿ ನಿರ್ದೇಶನಾಲಯದ ವಶಕ್ಕೆ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ

- Advertisement -
- Advertisement -

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆಯನ್ನು ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಂತರ ವಶಕ್ಕೆ ಪಡೆದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹185 ಕೋಟಿಗಳಿಗೂ ಹೆಚ್ಚಿನ ಅವ್ಯವಹಾರದ ಹಿನ್ನೆಲೆಯಲ್ಲಿ, ನಾಗೇಂದ್ರ ಅವರ ಡಾಲರ್ಸ್ ಕಾಲೋನಿಯ ಮನೆ ಸೇರಿದಂತೆ, ಸಂಬಂಧಿಸಿದ ಆಸ್ತಿಗಳಿರುವ ಬಿಇಎಲ್ ರೋಡ್, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ನಾಲ್ಕು ಕಡೆ ಇಡಿ ದಾಳಿ ನಡೆಸಿತ್ತು.

ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಶಾಸಕ ನಾಗೇಂದ್ರ ಹಾಗೂ ಕಾಂಗ್ರೆಸ್‌ ಶಾಸಕ ಬಸವನಗೌಡ ದದ್ದಲ್‌ ಅವರ ನಿನ್ನೆಯ ಸುಧೀರ್ಘ ವಿಚಾರಣೆಯ ಬೆನ್ನಲ್ಲೇ ಇಡಿ ಅಧಿಕಾರಿಗಳು ಇಂದು ಮುಂಜಾನೆಯಿಂದ ಹಠಾತ್‌ ದಾಳಿ ನಡೆಸಿ ಶಾಸಕ ನಾಗೇಂದ್ರರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದ ಮರುದಿನವೇ ಇಡಿ ಅಧಿಕಾರಿಗಳು ಶಾಸಕರಾದ ನಾಗೇಂದ್ರ, ಬಸನಗೌಡ ದದ್ದಲ್‌, ಯೂನಿಯನ್ ಬ್ಯಾಂಕ್ ಬ್ರಾಂಚ್ ಹೆಡ್ ಸುಚಿ ಸ್ಮಿತಾ, ಕ್ರೆಡಿಟ್‌ ಆಫೀಸರ್ ಕೃಷ್ಣಮೂರ್ತಿ, ಬ್ರಾಂಚ್ ಹೆಡ್ ದೀಪಾ ಮುಂತಾದವರ ಮನೆಗಳ ಮೇಲೂ ದಾಳಿ ನಡೆದ್ದು, ಪರಿಶೀಲನೆ ನಡೆಸಲಾಗುತ್ತಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ.

ನಾಗೇಂದ್ರ ಆಪ್ತ ಎನ್ನಲಾದ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.

ಬೆಂಗಳೂರಿನ ಪದ್ಮನಾಭನಗರ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ದದ್ದಲ್ ಇಬ್ಬರೂ ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಬುಧವಾರವೂ ಸಹ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು.

ಹಗರಣದ ಸಂಬಂಧ ಶಾಸಕ ಬಸನಗೌಡ ದದ್ದಲ್‌ ಅವರ ರಾಯಚೂರಿನ ಮನೆ ಕಚೇರಿಗಳ‌ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಪ್ರತ್ಯೇಕ ತನಿಖೆಯನ್ನು ಕೈಗೊಂಡಿರುವುದರಿಂದ ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ.

ವಾಲ್ಮೀಕಿ ನಿಗಮದ ಹಗರಣದಲ್ಲಿ ₹183 ಕೋಟಿ ಅವ್ಯವಹಾರ ನಡೆದಿತ್ತು. ಇದರ ವ್ಯಾಪ್ತಿ ಕೆಳಹಂತದ ಅಧಿಕಾರಿಗಳಿಂದ ಹಿಡಿದು ಮೇಲಿನವರೆಗೂ ವ್ಯಾಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್‌ ಡೆತ್‌ನೋಟ್‌ನಲ್ಲಿಯೂ ಸಚಿವರ ಬಗ್ಗೆ ಉಲ್ಲೇಖ ಇದೆ ಎನ್ನಲಾಗಿದೆ.

ಇದನ್ನೂ ಓದಿ; ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ: ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್ ಮನೆ, ಕಚೇರಿ ಮೇಲೆ ಇಡಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...