Homeಕರ್ನಾಟಕಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

- Advertisement -
- Advertisement -

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ ಸಂಚಾಲಕ ದುರ್ಗೇಶ್ ಬರಗೂರು, ಎಬಿವಿಪಿ ಈ ಹಿಂದೆ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ, ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿತ್ತು.ಎಎಸ್‌ಎ ವಿದ್ಯಾರ್ಥಿಗಳ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು. ಪರಿಣಾಮ ಕೇಂದ್ರ ಸರ್ಕಾರವೇ ಮುತುವರ್ಜಿ ವಹಿಸಿ ದಲಿತ ವಿದ್ಯಾರ್ಥಿಗಳನ್ನು ವಿವಿಯ ಹಾಸ್ಟೆಲ್‌ನಿಂದ ಹೊರಗಟ್ಟಿತ್ತು. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಎಎಸ್‌ಎಯ ನಾಯಕ ರೋಹಿತ್ ವೇಮುಲ ಅವರಿಗೆ ಮಾನಸಿಕ ಕಿರುಕುಳ ನೀಡಿ ಸಾಂಸ್ಥಿಕ ಕೊಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2019ರಲ್ಲಿ ದೆಹಲಿ ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಎಬಿವಿಪಿಯವರು ವಿದ್ಯಾರ್ಥಿಗಳು, ಗ್ರಂಥಾಲಯ ಮತ್ತು ತರಗತಿ ಕೋಣೆಗಳ ಮೇಲೆ ದಾಳಿ ನಡೆಸಿದ್ದರು. ಜೆಎನ್‌ಯುನಲ್ಲೂ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಲಾಗಿತ್ತು. ಇವೆಲ್ಲವನ್ನು ನೋಡಿದರೆ ಎಬಿವಿಪಿಯವರು ನೇರವಾಗಿ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುರಿಯಾಗಿಸಿಕೊಂಡಂತೆ ಕಾಣುತ್ತಿದೆ. ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಇಂತಹ ದಾಳಿ ನಡೆಸುತ್ತಿರುವ ಎಬಿವಿಪಿಯ ದುಂಡಾವರ್ತನೆಯನ್ನು ನಾಗರಿಕ ಸಮಾಜ ಖಂಡಿಸಬೇಕು ಎಂದು ಹೇಳಿದ್ದಾರೆ.

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ ನಡೆಸಿದ ಆರೋಪಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ದಾಳಿಯ ಹಿಂದೆ ಆರ್‌ಎಸ್‌ಎಸ್‌, ಬಿಜೆಪಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈವಾಡ ಇದ್ದಂತಿದೆ. ಆರೋಪಿಗಳು ಅಮಿತ್ ಶಾ ಅವರಿಗೆ ಪತ್ರ ಬರೆದಿರುವುದು ನೋಡಿದರೆ ಈ ಅನುಮಾನ ಬರುತ್ತಿದೆ ಎಂದಿದ್ದಾರೆ.

ಪ್ರಜಾಪ್ರಭುತ್ವವನ್ನು ಒಪ್ಪದ ಎಬಿವಿಪಿ, ವಿವಿಗಳಲ್ಲಿ ಕೋಮುವಾದ ಸೃಷ್ಟಿಸಲು ವಿದ್ಯಾರ್ಥಿಗಳ ಮೇಲೆ ನಡೆಸುತ್ತಿದೆ. ಸಾಮಾಜಿಕ ನ್ಯಾಯ, ಆರ್ಥಿಕ, ರಾಜಕೀಯ ಚರ್ಚೆಗಳನ್ನು ಒಪ್ಪದ ಎಬಿವಿಪಿ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದನ್ನು ಎಂದಿಗೂ ಸಹಿಸುವುದಿಲ್ಲ. ಸಮಾನತೆ ಪಡೆಯುವುದನ್ನು ಅವರು ಒಪ್ಪಲ್ಲ. ಅದೊಂದು ಕೋಮುವಾದಿ ವಿದ್ಯಾರ್ಥಿ ಸಂಘಟನೆಯಾಗಿದೆ ಎಂದು ದುರ್ಗೇಶ್ ಕಿಡಿಕಾರಿದ್ದಾರೆ.

ವಿಶ್ವ ವಿದ್ಯಾಲಯಗಳಲ್ಲಿ ಹಿಂಸೆ, ಪ್ರಚೋದನೆ ಹಾಗೂ ಉದ್ದೇಶ ಪೂರ್ವಕವಾಗಿ ಗಲಭೆಗಳನ್ನು ಸೃಷ್ಟಿಸಿ ವಿದ್ಯಾರ್ಥಿಗಳ ನಡುವೆ ಭಯದ ವಾತಾವರಣ ಸೃಷ್ಟಿಸುವುದೇ ಎಬಿವಿಪಿಯವರ ಮುಖ್ಯ ಉದ್ದೇಶವಾಗಿದೆ. ಅಜೀಂ ಪ್ರೇಮ್‌ ಜಿ ವಿವಿ ಮೇಲಿನ ದಾಳಿ ಕೂಡ ಉದ್ದೇಶಪೂರ್ವಕವಾಗಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ, ಆಸ್ತಿಗಳನ್ನು ಧ್ವಂಸಗೈದು , ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ಮಾಡಿರುವ ಎಬಿವಿಪಿ ಗುಂಡಾಗಳ ಮೇಲೆ ರೌಡಿ ಶೀಟ್ ತೆರೆಯಬೇಕು ಎಂದು ದುರ್ಗೇಶ್ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...