Homeಕ್ರೀಡೆಒಲಂಪಿಕ್ವಂದನಾ ಜಾತಿ ನಿಂದನೆ ಪ್ರಕರಣ; ಘಟನೆ ನಾಚಿಕೆಗೇಡು ಎಂದ ಹಾಕಿ ತಂಡದ ನಾಯಕಿ

ವಂದನಾ ಜಾತಿ ನಿಂದನೆ ಪ್ರಕರಣ; ಘಟನೆ ನಾಚಿಕೆಗೇಡು ಎಂದ ಹಾಕಿ ತಂಡದ ನಾಯಕಿ

- Advertisement -
- Advertisement -

ಭಾರತ ಹಾಕಿ ತಂಡದ ಮಹಿಳಾ ಆಟಗಾರ್ತಿ ವಂದನಾ ಕಟಾರಿಯಾ ವಿರುದ್ಧ ಜಾತಿ ನಿಂದನೆ ಮಾಡಿದ ಘಟನೆಯನ್ನು ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್‌ ‘ನಾಚಿಕೆಗೇಡು’ ಎಂದು  ಖಂಡಿಸಿದ್ದಾರೆ. ಆಟಗಾರರು ದೇಶದ ಎಲ್ಲಾ ಕಡೆಗಳಿಂದ ಬರುತ್ತಾರೆ, ಆದರೆ ಅವರು ಭಾರತದ ಧ್ವಜಕ್ಕಾಗಿ ಆಡುತ್ತಾರೆ ಎಂದು ಅವರು ಶನಿವಾರ ಹೇಳಿದ್ದಾರೆ.

“ಮಹಿಳೆಯರ ಹಾಕಿ ತಂಡದಲ್ಲಿ ದಲಿತ ಆಟಗಾರರೇ ಇರುವುದರಿಂದ ಸೆಮಿಫೈನಲ್ ಸೋತು ಹೋಯಿತು. ದಲಿತರನ್ನು ಹಾಕಿ ಮಾತ್ರವಲ್ಲ, ಯಾವುದೆ ಆಟಕ್ಕೂ ಸೇರಿಸಿಕೊಳ್ಳಬಾರದು” ಎಂದು ಹಾಕಿ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಮೇಲ್ಜಾತಿಯ ವ್ಯಕ್ತಿಗಳು ಗಲಾಟೆ ಮಾಡಿದ್ದರು. ದುಷ್ಕರ್ಮಿಗಳು ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತಿದ್ದಕ್ಕಾಗಿ ಸಂತೋಷ ವ್ಯಕ್ತಪಡಿಸಿ ಜನಾಂಗೀಯ ಮತ್ತು ಜಾತಿ ನಿಂದನೆ ಮಾಡಿ ವಂದನಾ ಅವರ ಮನೆಯ ಮುಂದೆ ಕುಣಿದು ಸಂತೋಷ ವ್ಯಕ್ತಪಡಿಸಿದ್ದರು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿತ್ತು.

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

“ವಂದನಾ ಅವರ ಕುಟುಂಬದೊಂದಿಗೆ ನಡೆದ ಘಟನೆ ನಾಚಿಕೆಗೇಡು. ನಾನು ಜನರು ಜಾತಿವಾದವನ್ನು ಮೀರಲಿ ಎಂದು ಬಯಸುತ್ತೇನೆ. ನಮ್ಮ ಧರ್ಮಗಳು ವಿಭಿನ್ನವಾಗಿದ್ದು, ನಾವು ದೇಶದ ವಿವಿಧ ಭಾಗಗಳಿಂದ ಬಂದಿದ್ದೇವೆ. ಆದರೆ ನಾವು ಆಡುವಾಗ ನಾವು ಭಾರತದ ಧ್ವಜಕ್ಕಾಗಿ ಆಡುತ್ತೇವೆ” ಎಂದು ತಂಡದ ನಾಯಕ ರಾಣಿ ರಾಂಪಾಲ್ ಹೇಳಿದ್ದಾರೆ.

“ಇದು ಯಾವುದೇ ಕ್ರೀಡಾಪಟು ಅಥವಾ ಸಾಮಾನ್ಯ ವ್ಯಕ್ತಿಗೆ ಸಂಭವಿಸಬಾರದು. ನಮ್ಮ ತಂಡವು ಮೊದಲ ಪದಕ ಗೆಲ್ಲದಿದ್ದರೂ ಜನರಿಂದ ತುಂಬಾ ಪ್ರೀತಿಯನ್ನು ಗಳಿಸಿದೆ. ಆದರೆ ಇಂತಹ ದೌರ್ಜನ್ಯವನ್ನು ಕೊನೆಯಾಗಬೇಕು. ನಾವು ನಮ್ಮ ದೇಶವನ್ನು ಕ್ರೀಡಾ ರಾಷ್ಟ್ರವನ್ನಾಗಿ ಮಾಡಬೇಕು” ಎಂದು ಅವರು ಹೇಳಿದ್ದಾರೆ.

ಪ್ರಕರಣದ ಮೂರನೇ ವ್ಯಕ್ತಿಯನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನಾನು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ಘಟನೆಯ ಬಗ್ಗೆ ನಾನು ಸ್ವಲ್ಪ ತಿಳಿದುಕೊಂಡಿದ್ದೇನೆ. ಕುಟುಂಬದೊಂದಿಗೆ ಮಾತನಾಡಿದ್ದು, ಅವರು ಎಲ್ಲವೂ ಚೆನ್ನಾಗಿದೆ ಎಂದು ಹೇಳಿದ್ದಾರೆ. ಪೊಲೀಸರು ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ” ವಂದನಾ ಕಟಾರಿಯಾ ಹೇಳಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...