Homeರಾಷ್ಟ್ರೀಯಮಹಿಳೆಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್‌‌ಪ್ರೆಸ್‌‌‌: ಸಾವು

ಮಹಿಳೆಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್‌‌ಪ್ರೆಸ್‌‌‌: ಸಾವು

- Advertisement -
- Advertisement -

ಮಂಗಳವಾರ ಮಧ್ಯಾಹ್ನ ರೈಲ್ವೆ ಟ್ರ್ಯಾಕ್ ದಾಟುವಾಗ 54 ವರ್ಷದ ಮಹಿಳೆಯೊಬ್ಬರು ಆನಂದ್ ರೈಲ್ವೆ ನಿಲ್ದಾಣದ ಬಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ರೈಲ್ವೆ ಪೊಲೀಸರು ದೃಢಪಡಿಸಿದ್ದಾರೆ.

ಮೃತ ಮಹಿಳೆಯನ್ನು ಅಹಮದಾಬಾದ್‌ನ ನಿವಾಸಿ ಬೀಟ್ರಿಸ್ ಪೀಟರ್ ಎಂದು ಗುರುತಿಸಲಾಗಿದೆ. ಮಹಿಳೆಯು ರೈಲ್ವೆ ಹಳಿಗಳನ್ನು ದಾಟಲು ಪ್ರತ್ನಿಸುತ್ತಿರುವಾಗ ಘಟನೆ ಸಂಭವಿಸಿದ್ದು, ಅವರು ಸಂಬಂಧಿಕರನ್ನು ಭೇಟಿ ಮಾಡಲು ಆನಂದ್‌‌‌ಗೆ ಬಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಜೆ 4.30 ರ ಸುಮಾರಿಗೆ, ವಂದೇ ಭಾರತ್ ಎಕ್ಸ್‌ಪ್ರೆಸ್ ಆನಂದ್ ರೈಲ್ವೆ ನಿಲ್ದಾಣದಿಂದ ದಾಟುತ್ತಿತ್ತು. ವಂದೇ ಭಾರತ್ ರೈಲಿಗೆ ಆನಂದ್ ನಿಲ್ದಾಣದಲ್ಲಿ ನಿಲುಗಡೆ ಇರಲಿಲ್ಲ. ರೈಲ್ವೆ ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಿದ್ದು, ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: ಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಘಟನೆ ನಡೆದರೂ ರೈಲು ಯಾವುದೇ ವಿಳಂಬವಿಲ್ಲದೆ ತನ್ನ ನಿಗದಿತ ಸಮಯದಲ್ಲೆ ಓಡಿದೆ ಎಂದು ರೈಲ್ವೆಯ ವಡೋದರಾ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ.

ವಂದೇ ಭಾರತ್ ಸರಣಿಯ ಮೂರನೇ ಸೇವೆಯಾದ ಸ್ವದೇಶಿ ವಿನ್ಯಾಸ ಮತ್ತು ನಿರ್ಮಿಸಿದ ಸೆಮಿ-ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ಗಾಂಧಿನಗರದಿಂದ ಚಾಲನೆ ನೀಡಿದ್ದರು ಮತ್ತು ಮರುದಿನದಿಂದ ರೈಲು ತನ್ನ ವಾಣಿಜ್ಯ ಸಂಚಾರವನ್ನು ಪ್ರಾರಂಭಿಸಿತ್ತು.

ಉದ್ಘಾಟನೆ ಮಾಡಿದ ಒಂದು ತಿಂಗಳ ಒಳಗೆ ಒಟ್ಟು ಮೂರು ಭಾರಿ ಜಾನುವಾರಿಗೆ ಡಿಕ್ಕಿ ಹೊಡೆದಿದ್ದು, ಇದಿರಿಂದಾಗಿ ರೈಲಿನ ಮುಂಬಾಗಕ್ಕೆ ಹಾನಿಯಾಗಿತ್ತು. ಜಾನುವಾರಿಗೆ ಡಿಕ್ಕಿ ಆದ ನಂತರ ರೈಲ್ವೆ ಅಧಿಕಾರಿಗಳು ತಮ್ಮ ಜಾನುವಾರುಗಳನ್ನು ಟ್ರ್ಯಾಕ್ ಬಳಿ ಬಿಡದಂತೆ ಹತ್ತಿರದ ಗ್ರಾಮಸ್ಥರಿಗೆ ಸಲಹೆ ನೀಡಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಚೀನಾ ಲಿಂಕ್: 44 ಅರೆಹೈಸ್ಪೀಡ್ ವಂದೇ ಭಾರತ್‌ ರೈಲು ಟೆಂಡರ್‌‌ ರದ್ದು

ಅಕ್ಟೋಬರ್ 6 ರಂದು ಗುಜರಾತ್‌ನ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ಮುಂಬೈನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ನಾಲ್ಕು ಎಮ್ಮೆಗಳು ಸಾವನ್ನಪ್ಪಿದ್ದವು. ಈ ವೇಳೆ ರೈಲಿಗೆ ಹಾನಿಯಾದ ಕಾರಣ ಅದರ ಮುಂಬಾಗದ ಕವರ್‌‌ ಅನ್ನು ರಾತ್ರೋರಾತ್ರಿ ಬದಲಾಯಿಸಬೇಕಾಯಿತು. ಮರುದಿನ (ಅಕ್ಟೋಬರ್ 7) ಸಂಭವಿಸಿದ ಎರಡನೇ ಘಟನೆಯಲ್ಲಿ, ಮುಂಬೈಗೆ ತೆರಳುತ್ತಿದ್ದಾಗ ಗುಜರಾತ್‌ನ ಆನಂದ್ ಬಳಿ ರೈಲು ಹಸುವಿಗೆ ಡಿಕ್ಕಿ ಹೊಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...