Homeಮುಖಪುಟವಂದೇ ಮಾತರಂ, ರಾಷ್ಟ್ರಗೀತೆ ಸಂಬಂಧ ಘರ್ಷಣೆ; ಮೀರತ್‌ನ ಇಬ್ಬರು ಬಿಜೆಪಿ ಕೌನ್ಸಿಲರ್‌ ಅರೆಸ್ಟ್

ವಂದೇ ಮಾತರಂ, ರಾಷ್ಟ್ರಗೀತೆ ಸಂಬಂಧ ಘರ್ಷಣೆ; ಮೀರತ್‌ನ ಇಬ್ಬರು ಬಿಜೆಪಿ ಕೌನ್ಸಿಲರ್‌ ಅರೆಸ್ಟ್

ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವ ವಿಚಾರವಾಗಿ ಎಐಎಂಐಎಂ ಹಾಗೂ ಬಿಜೆಪಿ ಕೌನ್ಸಿಲರ್‌ಗಳ ನಡುವೆ ಘರ್ಷಣೆ ನಡೆದಿದೆ

- Advertisement -
- Advertisement -

ಮೀರತ್‌ನಲ್ಲಿ ಹೊಸದಾಗಿ ಚುನಾಯಿತರಾದ ಮೇಯರ್ ಮತ್ತು ಕೌನ್ಸಿಲರ್‌ಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವ ವಿಚಾರವಾಗಿ ಘರ್ಷಣೆಯಾಗಿದೆ.

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖಂಡರೊಂದಿಗೆ ಘರ್ಷಣೆ ನಡೆಸಿದ ನಂತರ ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಕೌನ್ಸಿಲರ್‌ಗಳನ್ನು ಪೊಲೀಸರನ್ನು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆದರೆ, ಇಬ್ಬರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ರಾತ್ರಿ ಎಐಎಂಐಎಂ ಕೌನ್ಸಿಲರ್‌ನ ಪತಿ ದಿಲ್ಶಾದ್ ಸೈಫಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಠಾಣಾಧಿಕಾರಿ ಯೋಗೇಂದ್ರ ಸಿಂಗ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂನ ಕೌನ್ಸಿಲರ್‌ಗಳು ನ್ಯಾಷನಲ್ ಸಾಂಗ್‌ (ವಂದೇ ಮಾತರಂ) ಹಾಡಲು ನಿರಾಕರಿಸಿದಾಗ ಸಮಸ್ಯೆ ಉದ್ಭವಿಸಿದೆ. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಎರಡು ಪಕ್ಷಗಳ ಸದಸ್ಯರನ್ನು ಪ್ರತ್ಯೇಕಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಬಿಜೆಪಿ ಕೌನ್ಸಿಲರ್ ರಾಜೀವ್ ಕಾಳೆ ಅವರು ಎಂಟು ಎಐಎಂಐಎಂ ಕೌನ್ಸಿಲರ್‌ಗಳ ವಿರುದ್ಧ ಹಲ್ಲೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ರಾಜ್ಯಸಭಾ ಸಂಸದ ಲಕ್ಷ್ಮೀಕಾಂತ್ ಬಾಜ್‌ಪೇಯ್ ಕೂಡ ದೂರು ದಾಖಲಿಸಿದ್ದರು. ಆದರೆ, ಈ ದೂರುಗಳಿಗೆ ಸಂಬಂಧಿಸಿದಂತೆ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸೈಫಿ ಅವರ ದೂರಿಗೆ ಸಂಬಂಧಿಸಿದಂತೆ, ಮೂವರು ಬಿಜೆಪಿ ಕೌನ್ಸಿಲರ್‌ಗಳಾದ ರಾಜೀವ್ ಕಾಳೆ, ಉತ್ತಮ್ ಸೈನಿ ಮತ್ತು ಕವಿತಾ ರಾಹಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 352 (ದಾಳಿ ಅಥವಾ ಕ್ರಿಮಿನಲ್ ಬಲಪ್ರಯೋಗ), 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿವಿಲ್ ಲೈನ್ಸ್‌ನ ಸರ್ಕಲ್ ಆಫೀಸರ್ ಅರವಿಂದ್ ಚೌರಾಸಿಯಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಂತರ ಪೊಲೀಸರು ಶುಕ್ರವಾರ ಸಂಜೆ ಕಾಳೆ ಮತ್ತು ಸೈನಿಯನ್ನು ಬಂಧಿಸಿದರು. ಬಳಿಕ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಚೌರಾಸಿಯಾ ಹೇಳಿದ್ದಾರೆ.

ವಂದೇ ಮಾತರಂ ಹಾಡುವ ವೇಳೆ ಎಐಎಂಐಎಂ ಸದಸ್ಯರು ಎದ್ದು ನಿಲ್ಲದೆ ಅಶಿಸ್ತು ಎಸಗಿರುವುದು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಸದನ ಕ್ರಮ ಕೈಗೊಳ್ಳಲಿದ್ದು, ಪೊಲೀಸರ ಪಾತ್ರವಿಲ್ಲ ಎಂದಿದ್ದಾರೆ.

ಬಾಜ್‌ಪೈ ಅವರ ದೂರಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮದ ಕುರಿತು ಪ್ರತಿಕ್ರಿಯಿಸಿರುವ ಚೌರಾಸಿಯಾ, “ಎಐಎಂಐಎಂ ಕೌನ್ಸಿಲರ್‌ಗಳ ವಿರುದ್ಧ ದೇಶದ್ರೋಹದ ಆರೋಪವನ್ನು ದಾಖಲಿಸಬೇಕೆಂದು ದೂರು ನೀಡಲಾಗಿದೆ. ಆದರೆ ದೇಶದ್ರೋಹದ ಕಾನೂನಿಗೆ ತಡೆ ಇದೆ. ವಿಷಯ ವಂದೇ ಮಾತರಂಗೆ ಸಂಬಂಧಿಸಿದ್ದೇ ಹೊರತು ರಾಷ್ಟ್ರಗೀತೆಗೆ (ಜನಗಣಮನಕ್ಕೆ) ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...