Homeಮುಖಪುಟವಂದೇ ಮಾತರಂ, ರಾಷ್ಟ್ರಗೀತೆ ಸಂಬಂಧ ಘರ್ಷಣೆ; ಮೀರತ್‌ನ ಇಬ್ಬರು ಬಿಜೆಪಿ ಕೌನ್ಸಿಲರ್‌ ಅರೆಸ್ಟ್

ವಂದೇ ಮಾತರಂ, ರಾಷ್ಟ್ರಗೀತೆ ಸಂಬಂಧ ಘರ್ಷಣೆ; ಮೀರತ್‌ನ ಇಬ್ಬರು ಬಿಜೆಪಿ ಕೌನ್ಸಿಲರ್‌ ಅರೆಸ್ಟ್

ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವ ವಿಚಾರವಾಗಿ ಎಐಎಂಐಎಂ ಹಾಗೂ ಬಿಜೆಪಿ ಕೌನ್ಸಿಲರ್‌ಗಳ ನಡುವೆ ಘರ್ಷಣೆ ನಡೆದಿದೆ

- Advertisement -
- Advertisement -

ಮೀರತ್‌ನಲ್ಲಿ ಹೊಸದಾಗಿ ಚುನಾಯಿತರಾದ ಮೇಯರ್ ಮತ್ತು ಕೌನ್ಸಿಲರ್‌ಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವ ವಿಚಾರವಾಗಿ ಘರ್ಷಣೆಯಾಗಿದೆ.

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖಂಡರೊಂದಿಗೆ ಘರ್ಷಣೆ ನಡೆಸಿದ ನಂತರ ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಕೌನ್ಸಿಲರ್‌ಗಳನ್ನು ಪೊಲೀಸರನ್ನು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆದರೆ, ಇಬ್ಬರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ರಾತ್ರಿ ಎಐಎಂಐಎಂ ಕೌನ್ಸಿಲರ್‌ನ ಪತಿ ದಿಲ್ಶಾದ್ ಸೈಫಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಠಾಣಾಧಿಕಾರಿ ಯೋಗೇಂದ್ರ ಸಿಂಗ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂನ ಕೌನ್ಸಿಲರ್‌ಗಳು ನ್ಯಾಷನಲ್ ಸಾಂಗ್‌ (ವಂದೇ ಮಾತರಂ) ಹಾಡಲು ನಿರಾಕರಿಸಿದಾಗ ಸಮಸ್ಯೆ ಉದ್ಭವಿಸಿದೆ. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಎರಡು ಪಕ್ಷಗಳ ಸದಸ್ಯರನ್ನು ಪ್ರತ್ಯೇಕಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಬಿಜೆಪಿ ಕೌನ್ಸಿಲರ್ ರಾಜೀವ್ ಕಾಳೆ ಅವರು ಎಂಟು ಎಐಎಂಐಎಂ ಕೌನ್ಸಿಲರ್‌ಗಳ ವಿರುದ್ಧ ಹಲ್ಲೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ರಾಜ್ಯಸಭಾ ಸಂಸದ ಲಕ್ಷ್ಮೀಕಾಂತ್ ಬಾಜ್‌ಪೇಯ್ ಕೂಡ ದೂರು ದಾಖಲಿಸಿದ್ದರು. ಆದರೆ, ಈ ದೂರುಗಳಿಗೆ ಸಂಬಂಧಿಸಿದಂತೆ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸೈಫಿ ಅವರ ದೂರಿಗೆ ಸಂಬಂಧಿಸಿದಂತೆ, ಮೂವರು ಬಿಜೆಪಿ ಕೌನ್ಸಿಲರ್‌ಗಳಾದ ರಾಜೀವ್ ಕಾಳೆ, ಉತ್ತಮ್ ಸೈನಿ ಮತ್ತು ಕವಿತಾ ರಾಹಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 352 (ದಾಳಿ ಅಥವಾ ಕ್ರಿಮಿನಲ್ ಬಲಪ್ರಯೋಗ), 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿವಿಲ್ ಲೈನ್ಸ್‌ನ ಸರ್ಕಲ್ ಆಫೀಸರ್ ಅರವಿಂದ್ ಚೌರಾಸಿಯಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ರಾಜಕೀಯ ಅಸ್ತ್ರವಾಗಿ ಅತ್ಯಾಚಾರವನ್ನು ಸಮರ್ಥಿಸಿದ್ದ ಸಾವರ್ಕರ್!

ನಂತರ ಪೊಲೀಸರು ಶುಕ್ರವಾರ ಸಂಜೆ ಕಾಳೆ ಮತ್ತು ಸೈನಿಯನ್ನು ಬಂಧಿಸಿದರು. ಬಳಿಕ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಚೌರಾಸಿಯಾ ಹೇಳಿದ್ದಾರೆ.

ವಂದೇ ಮಾತರಂ ಹಾಡುವ ವೇಳೆ ಎಐಎಂಐಎಂ ಸದಸ್ಯರು ಎದ್ದು ನಿಲ್ಲದೆ ಅಶಿಸ್ತು ಎಸಗಿರುವುದು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಸದನ ಕ್ರಮ ಕೈಗೊಳ್ಳಲಿದ್ದು, ಪೊಲೀಸರ ಪಾತ್ರವಿಲ್ಲ ಎಂದಿದ್ದಾರೆ.

ಬಾಜ್‌ಪೈ ಅವರ ದೂರಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮದ ಕುರಿತು ಪ್ರತಿಕ್ರಿಯಿಸಿರುವ ಚೌರಾಸಿಯಾ, “ಎಐಎಂಐಎಂ ಕೌನ್ಸಿಲರ್‌ಗಳ ವಿರುದ್ಧ ದೇಶದ್ರೋಹದ ಆರೋಪವನ್ನು ದಾಖಲಿಸಬೇಕೆಂದು ದೂರು ನೀಡಲಾಗಿದೆ. ಆದರೆ ದೇಶದ್ರೋಹದ ಕಾನೂನಿಗೆ ತಡೆ ಇದೆ. ವಿಷಯ ವಂದೇ ಮಾತರಂಗೆ ಸಂಬಂಧಿಸಿದ್ದೇ ಹೊರತು ರಾಷ್ಟ್ರಗೀತೆಗೆ (ಜನಗಣಮನಕ್ಕೆ) ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...