Homeಕರ್ನಾಟಕವಂದೇಭಾರತ್‌ ಮೈಸೂರು-ಬೆಂಗಳೂರು ಪ್ರಯಾಣ; 5 ನಿಮಿಷಕ್ಕಾಗಿ ₹415 ಹೆಚ್ಚುವರಿ ಪಾವತಿಸಿ!

ವಂದೇಭಾರತ್‌ ಮೈಸೂರು-ಬೆಂಗಳೂರು ಪ್ರಯಾಣ; 5 ನಿಮಿಷಕ್ಕಾಗಿ ₹415 ಹೆಚ್ಚುವರಿ ಪಾವತಿಸಿ!

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಆದರೆ ವಂದೇ ಭಾರತ್‌‌ ರೈಲಿನ ಪ್ರಯಾಣ ದರ ಮತ್ತು ಪ್ರಯಾಣ ವೇಗವು ಇದೀಗ ವಿವಾದಕ್ಕೆ ಕಾರಣವಾಗಿದೆ.

ಶುಕ್ರವಾರ ಮುಂಜಾನೆ ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಿ ಕೆಎಸ್‌ಆರ್‌‌ ರೈಲು ನಿಲ್ದಾಣದ ಪ್ಲಾಟ್‌ಫಾರಂ ನಂ. 7ರಲ್ಲಿ ವಂದೇಭಾರತ್‌‌ ರೈಲಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಪ್ರಧಾನಿ ಬೆಂಗಳೂರಿನಲ್ಲಿ ಉದ್ಘಾಟಿಸಿರುವ ವಂದೇಭಾರತ್‌ ಸರಣಿಯ ಈ ರೈಲು ದೇಶದ ಐದನೇ ಮತ್ತು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಾಗಿದೆ. ಇದು ಚೆನ್ನೈ, ಬೆಂಗಳೂರು ಮತ್ತು ಮೈಸೂರಿನ ಓಡಾಡುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕ ಮತ್ತು ವಾಣಿಜ್ಯ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಇದು ಜೀವನವನ್ನು ಸುಲಭಗೊಳಿಸುತ್ತದೆ. ಈ ರೈಲಿಗೆ ಬೆಂಗಳೂರಿನಿಂದ ಹಸಿರು ನಿಶಾನೆ ತೋರಿಸಿರುವುದು ಸಂತೋಷ ನೀಡಿದೆ.” ಎಂದು ಪ್ರಧಾನಿಯವರು ಟ್ವೀಟ್‌‌ನಲ್ಲಿ ಹೇಳಿದ್ದರು.

ಆದರೆ ಸಾಮಾನ್ಯ ಜನರು ರೈಲಿನ ದರ ಮತ್ತು ವೇಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ವಂದೇಭಾರತ್‌ ರೈಲು ಸುಮಾರು 01:55 ನಿಮಿಷದಲ್ಲಿ ಪ್ರಯಾಣಿಸುತ್ತದೆ. ಈ ರೈಲಿನ ಎಸಿ ಚೆಯರ್‌ ಕಾರ್‌ (CC) ನಲ್ಲಿ ದರ 515 ರೂ. ಇದ್ದರೆ, ಎಕ್ಸ್‌ಕುಟಿವ್‌ ಎಸಿ ಚಯರ್‌ ಕಾರ್‌‌ (EC) ನಲ್ಲಿ 985 ರೂ.ಗಳನ್ನು ಪಾವತಿಸಬೇಕಾಗುತ್ತದೆ.

ಆದರೆ ವಿಶೇಷವೇನೆಂದರೆ ಈ ಹಿಂದೆ ಇದ್ದ ಶತಾಬ್ದಿ ರೈಲು ಕೂಡಾ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸಲು ಅಂದಾಜು ಇದೇ ಸಮಯವನ್ನು ತೆಗೆದುಕೊಳ್ಳುತ್ತದೆ. ಅಲ್ಲದೆ, ರೈಲಿನ ದರ ಕೂಡಾ ವಂದೇ ಭಾರತ್ ರೈಲಿಗಿಂತ ಕಡಿಮೆ ಇದೆ.

ಶತಾಬ್ದಿ ರೈಲಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸಬೇಕಾದರೆ, CC ಸೀಟಿನ ದರ 315 ರೂ. ಇದ್ದರೆ, EC ಸೀಟಿನಲ್ಲಿ 905 ರೂ.ಗಳನ್ನು ಪಾವತಿಸಬೇಕಾಗಿದ್ದು, ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸಲು 02:10 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.

ಅದಾಗ್ಯೂ, ಶತಾಬ್ದಿ ರೈಲು ವಂದೇ ಭಾರತ್‌ ರೈಲಿಗಿಂತ 15 ನಿಮಿಷಗಳಷ್ಟೆ ನಿಧಾನವಾಗಿ ಹೋಗುತ್ತದೆ, ಜೊತೆಗೆ ಪ್ರಯಾಣ ದರ ಕೂಡಾ ಕಡಿಮೆಯಿದೆ. CC ಸೀಟಿಗೆ ವಂದೇಭಾರತ್‌ ರೈಲಿಗಿಂತ ಶತಾಬ್ದಿ ರೈಲಿನಲ್ಲಿ 200 ರೂ. ಕಡಿಮೆ ಇದ್ದರೆ, EC ಸೀಟಿನಲ್ಲಿ 80 ರೂ. ಕಡಿಮೆ ದರವಿದೆ.

ಅಷ್ಟೆ ಅಲ್ಲದೆ, ವಂದೇ ಭಾರತ್‌ ರೈಲಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಹಿಂತಿರುಗಬೇಕಾದರೆ ಕೂಡಾ ಅಜಗಜಾಂತರ ದರ ವ್ಯತ್ಯಾಸವಿದೆ. ವಂದೇಭಾರತ್ ರೈಲಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ CC ಸೀಟಿನ ದರ ದರ 720 ರೂ. ಇದ್ದರೆ, EC ಸೀಟಿನಲ್ಲಿ 1215 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಮೈಸೂರಿನಿಂದ ಬೆಂಗಳೂರಿಗೆ 01:50 ನಿಮಿಷದಲ್ಲಿ ವಂದೇಭಾರತ್ ರೈಲು ಪ್ರಯಾಣಿಸುತ್ತದೆ.

ವಂದೇ ಭಾರತ್‌ ರೈಲಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವ ದರಕ್ಕಿಂತ, ವಾಪಾಸು ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸಬೇಕಾದರೆ CC ಮತ್ತು CE ಸೀಟಿಗೆ ಕ್ರಮವಾಗಿ 205 ರೂ. ಮತ್ತು 230 ರೂ. ದರ ಹೆಚ್ಚು ಪಾವತಿಸಬೇಕಾಗುತ್ತದೆ.

ವಂದೇಭಾರತ್‌ ಬದಲಾಗಿ ಮೈಸೂರಿನಿಂದ ಬೆಂಗಳೂರಿಗೆ ಶತಾಬ್ದಿ ರೈಲಿನಲ್ಲಿ ಪ್ರಯಾಣಿಸಿದರೆ CC ಸೀಟಿನ ದರ ದರ 315 ರೂ. ಇದ್ದರೆ, EC ಸೀಟಿನಲ್ಲಿ 800 ರೂ. ಇದೆ. ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವ ಶತಾಬ್ದಿ ರೈಲು 01:55 ನಿಮಿಷಗಳಲ್ಲಿ ಪ್ರಯಾಣಿಸುತ್ತದೆ.

ಒಟ್ಟಿನಲ್ಲಿ, ಮೈಸೂರಿನಿಂದ ಬೆಂಗಳೂರಿಗೆ ಹೊರಡುವ ವಂದೇ ಭಾರತ್‌ ರೈಲಿಗಿಂತ ಶತಾಬ್ದಿ ರೈಲು ಐದು ನಿಮಿಷಗಳ ಕಾಲ ನಿಧಾನವಾಗಿ ಪ್ರಯಾಣಿಸುತ್ತದೆ. ಜೊತೆಗೆ ವಂದೇಭಾರತ್‌‌ಗಿಂತ ಶತಾಬ್ದಿ ರೈಲಿನ CC ಸೀಟಿನ ದರ 405 ರೂ. ಕಡಿಮೆಯಿದ್ದರೆ, EC ಸೀಟಿನ ದರ 415 ರೂ.ಗಳಷ್ಟು ಕಡಿಮೆ ದರವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....