Homeಮುಖಪುಟವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ವಾರಣಾಸಿಯ ಗಂಗಾನದಿಯ ಘಾಟ್‌ಗಳಲ್ಲಿ ಹಿಂದೂಯೇತರರು ಬರದಂತೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಬಲಪಂಥೀಯ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಇಬ್ಬರು ಸದಸ್ಯರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಗಳಿಂದ ತಲಾ 5 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಬರೆಸಿಕೊಂಡ ಬಳಿಕ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ದ್ವೇಷ ಹರಡಲು ಯತ್ನಿಸಿದ ಆರೋಪಿಗಳನ್ನು ಜೈಲಿಗೆ ಕಳುಹಿಸದ ಯುಪಿ ಪೊಲೀಸರ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿವೆ.

ವಿಎಚ್‌ಪಿ, ಬಜರಂಗದಳದ ಸ್ಥಳೀಯ ಪದಾಧಿಕಾರಿಗಳೆಂದು ಹೇಳಿಕೊಂಡ ರಂಜನ್ ಗುಪ್ತಾ ಮತ್ತು ನಿಖಿಲ್ ತ್ರಿಪಾಠಿ ಅಲಿಯಾಸ್ “ರುದ್ರ” ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಫೋಟೋಗಳು ಮತ್ತು ವಿಡಿಯೋಗಳ ಆಧಾರದ ಮೇಲೆ ಪೊಲೀಸರು ದುಷ್ಕರ್ಮಿಗಳನ್ನು ಪತ್ತೆ ಹಚ್ಚಿದ್ದರು. ಬಲಪಂಥೀಯ ಕಾರ್ಯಕರ್ತರೊಂದಿಗೆ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಹಾಕುತ್ತಿರುವವರ ಫೋಟೋಗಳನ್ನು ತ್ರಿಪಾಠಿ ಮತ್ತು ರುದ್ರ ಅವರು ತಮ್ಮ ಸ್ವಂತ ಫೇಸ್‌ಬುಕ್ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದರು.

ಈ ಕುರಿತು ‘ದಿ ವೈರ್‌’ ಸುದ್ದಿ ಜಾಲತಾಣದೊಂದಿಗೆ ಮಾತನಾಡಿರುವ ಭೇಲುಪುರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರಮಾ ಕಾಂತ್ ದುಬೆ, “ಶಾಂತಿ, ನೆಮ್ಮದಿಯನ್ನು ಖಾತ್ರಿ ಮಾಡಿಕೊಳ್ಳಲು ತಲಾ 5 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಸಲ್ಲಿಸುವಂತೆ ತ್ರಿಪಾಠಿ ಮತ್ತು ರುದ್ರರಿಗೆ ಶುಕ್ರವಾರ ಸಮನ್ಸ್ ಜಾರಿ ಮಾಡಿದ್ದಾರೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 107 ಮತ್ತು 116ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿ ಸಹಾಯಕ ಪೊಲೀಸ್ ಕಮಿಷನರ್ (ಭೇಲುಪುರ) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವೈಯಕ್ತಿಕ ಬಾಂಡ್ ಸಲ್ಲಿಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಇವರ ಬಂಧನದ ಸುದ್ದಿ ಮುಟ್ಟಿದ ಕೂಡಲೇ ಎರಡು ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಬಿಡುಗಡೆಗಾಗಿ ಘೋಷಣೆ ಕೂಗಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಗುಂಪೊಂದು ಕೆಲ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿತು.

“ಈ ಬಗ್ಗೆ ತನಿಖೆ ನಡೆಸುತ್ತಿದ್ದು ದುಷ್ಕರ್ಮಿಗಳ ವಿರುದ್ಧ ಅಗತ್ಯ ಕ್ರಮವನ್ನು ಪೊಲೀಸರು ಜರುಗಿಸಲಿದ್ದಾರೆ” ಎಂದು ಎಸಿಪಿ ಪ್ರವೀಣ್ ಕುಮಾರ್ ದಿ ವೈರ್‌ಗೆ ತಿಳಿಸಿದ್ದಾರೆ.

ಗಂಗಾನದಿಯ ದಡದಲ್ಲಿ ಕೋಮುದ್ವೇಶದ ಪೋಸ್ಟರ್‌ಗಳನ್ನು ಅಂಟಿಸಿದವರನ್ನು ಬಂಧಿಸುವಂತೆ ವಿರೋಧ ಪಕ್ಷಗಳು ಒತ್ತಡ ಹೇರಿದ ನಂತರ ಪೊಲೀಸರು ಕ್ರಮಕೈಗೊಂಡರು. “ವಾರಣಾಸಿಯಲ್ಲಿ ಗಂಗಾನದಿಯ ಘಾಟ್‌ಗಳಿಗೆ ಹಿಂದೂಯೇತರರು ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ. ಇದು ಎಚ್ಚರಿಕೆ, ವಿನಂತಿಯಲ್ಲ” ಎಂದು ಪೋಸ್ಟರ್‌‌ನಲ್ಲಿ ಬರೆಯಲಾಗಿತ್ತು. ವಾರಣಾಸಿಯು ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾಗಿದೆ.

ಈ ಪೋಸ್ಟರ್‌ಗಳನ್ನು ಜನವರಿ 6ರಂದು ಗಂಗಾ ನದಿಯ ಪಂಚಗಂಗಾ ಘಾಟ್, ರಾಮ್ ಘಾಟ್, ದಶಾಶ್ವಮೇಧ ಘಾಟ್, ಅಸ್ಸಿ ಘಾಟ್ ಮತ್ತು ಮಣಿಕರ್ಣಿಕಾ ಘಾಟ್‌ನಲ್ಲಿ ಹಾಕಲಾಗಿತ್ತು.

ಕಳೆದ ಕೆಲವು ತಿಂಗಳುಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಹಿಂದುತ್ವ ಗುಂಪುಗಳು ಅಲ್ಪಸಂಖ್ಯಾತ ವಿರೋಧಿ ಅಭಿಯಾನದಲ್ಲಿ ತೊಡಗಿಸಿಕೊಂಡಿವೆ. ಅದರ ಮುಂದುವರಿದ ಭಾಗವಾಗಿ ಈ ಪೋಸ್ಟರ್‌ಗಳನ್ನು ಹಾಕಲಾಗಿದೆ. ಉತ್ತರಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಹಾಕಲಾಗುತ್ತಿರುವ ಈ ಪೋಸ್ಟರ್‌ಗಳಿಗೆ ರಾಜಕೀಯ ಮಹತ್ವವಿದೆ ಎಂದು ಹಲವರು ನಂಬಿದ್ದಾರೆ.

ಚುನಾವಣಾ ಕಾಲದಲ್ಲಿ ಜನರನ್ನು ಕೋಮುವಾದದ ಆಧಾರದ ಮೇಲೆ ವಿಭಜಿಸಲು ಕೇಸರಿ ಬ್ರಿಗೇಡ್‌ ನಡೆಸಿರುವ ಪಿತೂರಿ ಇದೆಂದು ಪ್ರತಿಪಕ್ಷಗಳು ನಂಬಿವೆ. ಕಾಂಗ್ರೆಸ್ ಪಕ್ಷದ ನಿಯೋಗವು ವಾರಣಾಸಿ ಜಿಲ್ಲಾ ಅಧಿಕಾರಿಗಳನ್ನು ಭೇಟಿ ಮಾಡಿ ಪೋಸ್ಟರ್‌ಗಳನ್ನು ಹಾಕುತ್ತಿರುವ ಎಲ್ಲರನ್ನು ಜೈಲಿಗೆ ಹಾಕುವಂತೆ ಒತ್ತಾಯಿಸಿದೆ. ವಿಎಚ್‌ಪಿ ಮತ್ತು ಬಜರಂಗ ದಳದ ಕಾರ್ಯಕರ್ತರ ಬಿಡುಗಡೆಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಚೌಬೆ ಮಾತನಾಡಿ, ‘ಈ ಕಿಡಿಗೇಡಿಗಳ ಬಿಡುಗಡೆ ಇತರ ದ್ವೇಷಿಗಳಿಗೆ ನೆಮ್ಮದಿ ತಂದಿದೆ. ಪೊಲೀಸರ ಕ್ರಮ ಕೇವಲ ಕಣ್ಣೊರೆಸುವ ಕೆಲಸವಾಗಿದೆ ಎಂದು ಆರೋಪಿಸಿದ್ದಾರೆ.

ವಾರಣಾಸಿಯ ವಿವಿಧ ಪ್ರದೇಶಗಳಲ್ಲಿ ಬಲಪಂಥೀಯರು ನಡೆಸಿದ ಮೆರವಣಿಗೆಯಲ್ಲಿ ಕತ್ತಿಗಳನ್ನು ಪ್ರಯೋಗಿಸಲಾಗಿದೆ ಎಂದು ಕಾಂಗ್ರೆಸ್ ದೂರಿದೆ.


ಇದನ್ನೂ ಓದಿರಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...