Homeಮುಖಪುಟವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ವಾರಣಾಸಿಯ ಗಂಗಾನದಿಯ ಘಾಟ್‌ಗಳಲ್ಲಿ ಹಿಂದೂಯೇತರರು ಬರದಂತೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಬಲಪಂಥೀಯ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಇಬ್ಬರು ಸದಸ್ಯರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಗಳಿಂದ ತಲಾ 5 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಬರೆಸಿಕೊಂಡ ಬಳಿಕ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ದ್ವೇಷ ಹರಡಲು ಯತ್ನಿಸಿದ ಆರೋಪಿಗಳನ್ನು ಜೈಲಿಗೆ ಕಳುಹಿಸದ ಯುಪಿ ಪೊಲೀಸರ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿವೆ.

ವಿಎಚ್‌ಪಿ, ಬಜರಂಗದಳದ ಸ್ಥಳೀಯ ಪದಾಧಿಕಾರಿಗಳೆಂದು ಹೇಳಿಕೊಂಡ ರಂಜನ್ ಗುಪ್ತಾ ಮತ್ತು ನಿಖಿಲ್ ತ್ರಿಪಾಠಿ ಅಲಿಯಾಸ್ “ರುದ್ರ” ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಫೋಟೋಗಳು ಮತ್ತು ವಿಡಿಯೋಗಳ ಆಧಾರದ ಮೇಲೆ ಪೊಲೀಸರು ದುಷ್ಕರ್ಮಿಗಳನ್ನು ಪತ್ತೆ ಹಚ್ಚಿದ್ದರು. ಬಲಪಂಥೀಯ ಕಾರ್ಯಕರ್ತರೊಂದಿಗೆ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಹಾಕುತ್ತಿರುವವರ ಫೋಟೋಗಳನ್ನು ತ್ರಿಪಾಠಿ ಮತ್ತು ರುದ್ರ ಅವರು ತಮ್ಮ ಸ್ವಂತ ಫೇಸ್‌ಬುಕ್ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದರು.

ಈ ಕುರಿತು ‘ದಿ ವೈರ್‌’ ಸುದ್ದಿ ಜಾಲತಾಣದೊಂದಿಗೆ ಮಾತನಾಡಿರುವ ಭೇಲುಪುರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರಮಾ ಕಾಂತ್ ದುಬೆ, “ಶಾಂತಿ, ನೆಮ್ಮದಿಯನ್ನು ಖಾತ್ರಿ ಮಾಡಿಕೊಳ್ಳಲು ತಲಾ 5 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಸಲ್ಲಿಸುವಂತೆ ತ್ರಿಪಾಠಿ ಮತ್ತು ರುದ್ರರಿಗೆ ಶುಕ್ರವಾರ ಸಮನ್ಸ್ ಜಾರಿ ಮಾಡಿದ್ದಾರೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 107 ಮತ್ತು 116ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

ಇಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿ ಸಹಾಯಕ ಪೊಲೀಸ್ ಕಮಿಷನರ್ (ಭೇಲುಪುರ) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವೈಯಕ್ತಿಕ ಬಾಂಡ್ ಸಲ್ಲಿಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಇವರ ಬಂಧನದ ಸುದ್ದಿ ಮುಟ್ಟಿದ ಕೂಡಲೇ ಎರಡು ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಬಿಡುಗಡೆಗಾಗಿ ಘೋಷಣೆ ಕೂಗಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಗುಂಪೊಂದು ಕೆಲ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿತು.

“ಈ ಬಗ್ಗೆ ತನಿಖೆ ನಡೆಸುತ್ತಿದ್ದು ದುಷ್ಕರ್ಮಿಗಳ ವಿರುದ್ಧ ಅಗತ್ಯ ಕ್ರಮವನ್ನು ಪೊಲೀಸರು ಜರುಗಿಸಲಿದ್ದಾರೆ” ಎಂದು ಎಸಿಪಿ ಪ್ರವೀಣ್ ಕುಮಾರ್ ದಿ ವೈರ್‌ಗೆ ತಿಳಿಸಿದ್ದಾರೆ.

ಗಂಗಾನದಿಯ ದಡದಲ್ಲಿ ಕೋಮುದ್ವೇಶದ ಪೋಸ್ಟರ್‌ಗಳನ್ನು ಅಂಟಿಸಿದವರನ್ನು ಬಂಧಿಸುವಂತೆ ವಿರೋಧ ಪಕ್ಷಗಳು ಒತ್ತಡ ಹೇರಿದ ನಂತರ ಪೊಲೀಸರು ಕ್ರಮಕೈಗೊಂಡರು. “ವಾರಣಾಸಿಯಲ್ಲಿ ಗಂಗಾನದಿಯ ಘಾಟ್‌ಗಳಿಗೆ ಹಿಂದೂಯೇತರರು ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ. ಇದು ಎಚ್ಚರಿಕೆ, ವಿನಂತಿಯಲ್ಲ” ಎಂದು ಪೋಸ್ಟರ್‌‌ನಲ್ಲಿ ಬರೆಯಲಾಗಿತ್ತು. ವಾರಣಾಸಿಯು ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾಗಿದೆ.

ಈ ಪೋಸ್ಟರ್‌ಗಳನ್ನು ಜನವರಿ 6ರಂದು ಗಂಗಾ ನದಿಯ ಪಂಚಗಂಗಾ ಘಾಟ್, ರಾಮ್ ಘಾಟ್, ದಶಾಶ್ವಮೇಧ ಘಾಟ್, ಅಸ್ಸಿ ಘಾಟ್ ಮತ್ತು ಮಣಿಕರ್ಣಿಕಾ ಘಾಟ್‌ನಲ್ಲಿ ಹಾಕಲಾಗಿತ್ತು.

ಕಳೆದ ಕೆಲವು ತಿಂಗಳುಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಹಿಂದುತ್ವ ಗುಂಪುಗಳು ಅಲ್ಪಸಂಖ್ಯಾತ ವಿರೋಧಿ ಅಭಿಯಾನದಲ್ಲಿ ತೊಡಗಿಸಿಕೊಂಡಿವೆ. ಅದರ ಮುಂದುವರಿದ ಭಾಗವಾಗಿ ಈ ಪೋಸ್ಟರ್‌ಗಳನ್ನು ಹಾಕಲಾಗಿದೆ. ಉತ್ತರಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಹಾಕಲಾಗುತ್ತಿರುವ ಈ ಪೋಸ್ಟರ್‌ಗಳಿಗೆ ರಾಜಕೀಯ ಮಹತ್ವವಿದೆ ಎಂದು ಹಲವರು ನಂಬಿದ್ದಾರೆ.

ಚುನಾವಣಾ ಕಾಲದಲ್ಲಿ ಜನರನ್ನು ಕೋಮುವಾದದ ಆಧಾರದ ಮೇಲೆ ವಿಭಜಿಸಲು ಕೇಸರಿ ಬ್ರಿಗೇಡ್‌ ನಡೆಸಿರುವ ಪಿತೂರಿ ಇದೆಂದು ಪ್ರತಿಪಕ್ಷಗಳು ನಂಬಿವೆ. ಕಾಂಗ್ರೆಸ್ ಪಕ್ಷದ ನಿಯೋಗವು ವಾರಣಾಸಿ ಜಿಲ್ಲಾ ಅಧಿಕಾರಿಗಳನ್ನು ಭೇಟಿ ಮಾಡಿ ಪೋಸ್ಟರ್‌ಗಳನ್ನು ಹಾಕುತ್ತಿರುವ ಎಲ್ಲರನ್ನು ಜೈಲಿಗೆ ಹಾಕುವಂತೆ ಒತ್ತಾಯಿಸಿದೆ. ವಿಎಚ್‌ಪಿ ಮತ್ತು ಬಜರಂಗ ದಳದ ಕಾರ್ಯಕರ್ತರ ಬಿಡುಗಡೆಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಚೌಬೆ ಮಾತನಾಡಿ, ‘ಈ ಕಿಡಿಗೇಡಿಗಳ ಬಿಡುಗಡೆ ಇತರ ದ್ವೇಷಿಗಳಿಗೆ ನೆಮ್ಮದಿ ತಂದಿದೆ. ಪೊಲೀಸರ ಕ್ರಮ ಕೇವಲ ಕಣ್ಣೊರೆಸುವ ಕೆಲಸವಾಗಿದೆ ಎಂದು ಆರೋಪಿಸಿದ್ದಾರೆ.

ವಾರಣಾಸಿಯ ವಿವಿಧ ಪ್ರದೇಶಗಳಲ್ಲಿ ಬಲಪಂಥೀಯರು ನಡೆಸಿದ ಮೆರವಣಿಗೆಯಲ್ಲಿ ಕತ್ತಿಗಳನ್ನು ಪ್ರಯೋಗಿಸಲಾಗಿದೆ ಎಂದು ಕಾಂಗ್ರೆಸ್ ದೂರಿದೆ.


ಇದನ್ನೂ ಓದಿರಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...