Homeಮುಖಪುಟಹಿಂದೂಯೇತರರಿಗೆ ಗಂಗಾ ಘಾಟ್‌ಗಳು, ದೇವಾಲಯಗಳಿಗೆ ಪ್ರವೇಶವಿಲ್ಲ: ವಾರಣಾಸಿಯಲ್ಲಿ ಪೋಸ್ಟರ್‌ಗಳು

ಹಿಂದೂಯೇತರರಿಗೆ ಗಂಗಾ ಘಾಟ್‌ಗಳು, ದೇವಾಲಯಗಳಿಗೆ ಪ್ರವೇಶವಿಲ್ಲ: ವಾರಣಾಸಿಯಲ್ಲಿ ಪೋಸ್ಟರ್‌ಗಳು

- Advertisement -
- Advertisement -

ಧಾರ್ಮಿಕ ಕ್ಷೇತ್ರ ವಾರಣಾಸಿಯಲ್ಲಿ ಗಂಗಾ ನದಿಯ ಘಾಟ್‌ಗಳು ಮತ್ತು ನದಿಯುದ್ದಕ್ಕೂ ಇರುವ ದೇವಾಲಯಗಳಿಂದ ಹಿಂದೂಯೇತರರು ದೂರವಿರುವಂತೆ, ಪ್ರವೇಶ ನಿಷೇಧಿಸಲಾಗಿದೆ ಎಂದು ಹೇಳುವ ಪೋಸ್ಟರ್‌ಗಳು ವಾರಣಾಸಿಯಲ್ಲಿ ಕಾಣಿಸಿಕೊಂಡಿವೆ.

ಬಲಪಂಥೀಯ ಸಂಘಟನೆಗಳು ನಗರದಲ್ಲಿ ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎಂದು ಶಂಕಿಸಲಾಗಿದ್ದು, ಪೊಲೀಸರು ಅವುಗಳನ್ನು ತೆರವುಗೊಳಿಸುತ್ತಿದ್ದಾರೆ. ಘಟನೆ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹಿಂದೂಯೇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಕಾಶಿಯಲ್ಲಿ ಗಂಗಾ ಮಾತೆಯ ಉದ್ದಕ್ಕೂ ಇರುವ ಘಾಟ್‌ಗಳು ಮತ್ತು ದೇವಾಲಯಗಳು ಸನಾತನ ಧರ್ಮ, ಭಾರತೀಯ ಸಂಸ್ಕೃತಿ ಮತ್ತು ನಂಬಿಕೆಯ ಸಂಕೇತಗಳಾಗಿವೆ. ಸನಾತನ ಧರ್ಮದಲ್ಲಿ ಭಕ್ತಿ ಮತ್ತು ನಂಬಿಕೆ ಇರುವವರಿಗೆ ಸ್ವಾಗತ. ಇಲ್ಲದಿದ್ದರೆ, ಇದು ಪಿಕ್ನಿಕ್ ಸ್ಪಾಟ್ ಅಲ್ಲ” ಎಂದು ಹಿಂದಿಯಲ್ಲಿ ಬರೆದ ಪೋಸ್ಟರ್‌ಗಳು ನಗರದುದ್ದಕ್ಕೂ ಕಾಣಿಸಿಕೊಂಡಿವೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

Posters In Varanasi Ask Non-Hindus To Stay Away From Ghats

ಪೋಸ್ಟರ್‌ನಲ್ಲಿ “ಇದು ವಿನಂತಿಯಲ್ಲ, ಎಚ್ಚರಿಕೆ” ಎಂದು ಬರೆಯಲಾಗಿದ್ದು, ವಿಶ್ವ ಹಿಂದೂ ಪರಿಷತ್ ಮತ್ತು ಬವಜರಂಗದಳ ಹೆಸರನ್ನು ಸೇರಿಸಲಾಗಿದೆ. ಈ ಪೋಸ್ಟರ್‌ಗಳ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿಯೂ ಕಾಣಿಸಿಕೊಂಡಿವೆ.

“ಈ ಘಟನೆ ಕುರಿತು ಸ್ಥಳೀಯ ಭೇಲುಪುರ ಪೊಲೀಸ್ ಠಾಣೆಯಿಂದ ತನಿಖೆ ನಡೆಸಲಾಗುತ್ತಿದೆ. ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಜನರನ್ನು ಗುರುತಿಸಲಾಗುತ್ತಿದೆ. ಇಲ್ಲಿಯವರೆಗೆ, ಪೊಲೀಸರಿಗೆ ಯಾವುದೇ ಲಿಖಿತ ದೂರು ಬಂದಿಲ್ಲ. ಕೆಲವು ಸ್ಥಳೀಯ ಗುಂಪುಗಳು ಅದನ್ನು ಹೈಲೈಟ್ ಮಾಡಿದ ನಂತರ ಪೊಲೀಸರು ಜನರ ಸಹಾಯದಿಂದ ಪೋಸ್ಟರ್‌ಗಳನ್ನು ತೆಗೆದುಹಾಕುತ್ತಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಿಂದೂಯೇತರರು ಘಾಟ್‌ಗಳ ಶುದ್ಧತೆಯನ್ನು ಉಲ್ಲಂಘಿಸುತ್ತಾರೆ. ಅದಕ್ಕಾಗಿಯೇ ಅವರಿಗೆ ಈ ಎಚ್ಚರಿಕೆ ನೀಡಲಾಗಿದೆ. ಇವರು ಘಾಟ್‌ಗಳಲ್ಲಿ ಮದ್ಯ ಮತ್ತು ಮಾಂಸಾಹಾರ ಸೇವಿಸುತ್ತಾರೆ” ಎಂದು ಬಜರಂಗದಳದ ಕಾಶಿ ಮಹಾನಗರದ ಸಂಯೋಜಕ ನಿಖಿಲ್ ತ್ರಿಪಾಠಿ ರುದ್ರ ಅವರನ್ನು ಪಿಟಿಐ ಉಲ್ಲೇಖಿಸಿದೆ.


ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...