Homeಮುಖಪುಟಹಿಂದೂಯೇತರರಿಗೆ ಗಂಗಾ ಘಾಟ್‌ಗಳು, ದೇವಾಲಯಗಳಿಗೆ ಪ್ರವೇಶವಿಲ್ಲ: ವಾರಣಾಸಿಯಲ್ಲಿ ಪೋಸ್ಟರ್‌ಗಳು

ಹಿಂದೂಯೇತರರಿಗೆ ಗಂಗಾ ಘಾಟ್‌ಗಳು, ದೇವಾಲಯಗಳಿಗೆ ಪ್ರವೇಶವಿಲ್ಲ: ವಾರಣಾಸಿಯಲ್ಲಿ ಪೋಸ್ಟರ್‌ಗಳು

- Advertisement -
- Advertisement -

ಧಾರ್ಮಿಕ ಕ್ಷೇತ್ರ ವಾರಣಾಸಿಯಲ್ಲಿ ಗಂಗಾ ನದಿಯ ಘಾಟ್‌ಗಳು ಮತ್ತು ನದಿಯುದ್ದಕ್ಕೂ ಇರುವ ದೇವಾಲಯಗಳಿಂದ ಹಿಂದೂಯೇತರರು ದೂರವಿರುವಂತೆ, ಪ್ರವೇಶ ನಿಷೇಧಿಸಲಾಗಿದೆ ಎಂದು ಹೇಳುವ ಪೋಸ್ಟರ್‌ಗಳು ವಾರಣಾಸಿಯಲ್ಲಿ ಕಾಣಿಸಿಕೊಂಡಿವೆ.

ಬಲಪಂಥೀಯ ಸಂಘಟನೆಗಳು ನಗರದಲ್ಲಿ ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎಂದು ಶಂಕಿಸಲಾಗಿದ್ದು, ಪೊಲೀಸರು ಅವುಗಳನ್ನು ತೆರವುಗೊಳಿಸುತ್ತಿದ್ದಾರೆ. ಘಟನೆ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹಿಂದೂಯೇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಕಾಶಿಯಲ್ಲಿ ಗಂಗಾ ಮಾತೆಯ ಉದ್ದಕ್ಕೂ ಇರುವ ಘಾಟ್‌ಗಳು ಮತ್ತು ದೇವಾಲಯಗಳು ಸನಾತನ ಧರ್ಮ, ಭಾರತೀಯ ಸಂಸ್ಕೃತಿ ಮತ್ತು ನಂಬಿಕೆಯ ಸಂಕೇತಗಳಾಗಿವೆ. ಸನಾತನ ಧರ್ಮದಲ್ಲಿ ಭಕ್ತಿ ಮತ್ತು ನಂಬಿಕೆ ಇರುವವರಿಗೆ ಸ್ವಾಗತ. ಇಲ್ಲದಿದ್ದರೆ, ಇದು ಪಿಕ್ನಿಕ್ ಸ್ಪಾಟ್ ಅಲ್ಲ” ಎಂದು ಹಿಂದಿಯಲ್ಲಿ ಬರೆದ ಪೋಸ್ಟರ್‌ಗಳು ನಗರದುದ್ದಕ್ಕೂ ಕಾಣಿಸಿಕೊಂಡಿವೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

Posters In Varanasi Ask Non-Hindus To Stay Away From Ghats

ಪೋಸ್ಟರ್‌ನಲ್ಲಿ “ಇದು ವಿನಂತಿಯಲ್ಲ, ಎಚ್ಚರಿಕೆ” ಎಂದು ಬರೆಯಲಾಗಿದ್ದು, ವಿಶ್ವ ಹಿಂದೂ ಪರಿಷತ್ ಮತ್ತು ಬವಜರಂಗದಳ ಹೆಸರನ್ನು ಸೇರಿಸಲಾಗಿದೆ. ಈ ಪೋಸ್ಟರ್‌ಗಳ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿಯೂ ಕಾಣಿಸಿಕೊಂಡಿವೆ.

“ಈ ಘಟನೆ ಕುರಿತು ಸ್ಥಳೀಯ ಭೇಲುಪುರ ಪೊಲೀಸ್ ಠಾಣೆಯಿಂದ ತನಿಖೆ ನಡೆಸಲಾಗುತ್ತಿದೆ. ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಜನರನ್ನು ಗುರುತಿಸಲಾಗುತ್ತಿದೆ. ಇಲ್ಲಿಯವರೆಗೆ, ಪೊಲೀಸರಿಗೆ ಯಾವುದೇ ಲಿಖಿತ ದೂರು ಬಂದಿಲ್ಲ. ಕೆಲವು ಸ್ಥಳೀಯ ಗುಂಪುಗಳು ಅದನ್ನು ಹೈಲೈಟ್ ಮಾಡಿದ ನಂತರ ಪೊಲೀಸರು ಜನರ ಸಹಾಯದಿಂದ ಪೋಸ್ಟರ್‌ಗಳನ್ನು ತೆಗೆದುಹಾಕುತ್ತಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಿಂದೂಯೇತರರು ಘಾಟ್‌ಗಳ ಶುದ್ಧತೆಯನ್ನು ಉಲ್ಲಂಘಿಸುತ್ತಾರೆ. ಅದಕ್ಕಾಗಿಯೇ ಅವರಿಗೆ ಈ ಎಚ್ಚರಿಕೆ ನೀಡಲಾಗಿದೆ. ಇವರು ಘಾಟ್‌ಗಳಲ್ಲಿ ಮದ್ಯ ಮತ್ತು ಮಾಂಸಾಹಾರ ಸೇವಿಸುತ್ತಾರೆ” ಎಂದು ಬಜರಂಗದಳದ ಕಾಶಿ ಮಹಾನಗರದ ಸಂಯೋಜಕ ನಿಖಿಲ್ ತ್ರಿಪಾಠಿ ರುದ್ರ ಅವರನ್ನು ಪಿಟಿಐ ಉಲ್ಲೇಖಿಸಿದೆ.


ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...