Homeಮುಖಪುಟಹಿಂದೂಯೇತರರಿಗೆ ಗಂಗಾ ಘಾಟ್‌ಗಳು, ದೇವಾಲಯಗಳಿಗೆ ಪ್ರವೇಶವಿಲ್ಲ: ವಾರಣಾಸಿಯಲ್ಲಿ ಪೋಸ್ಟರ್‌ಗಳು

ಹಿಂದೂಯೇತರರಿಗೆ ಗಂಗಾ ಘಾಟ್‌ಗಳು, ದೇವಾಲಯಗಳಿಗೆ ಪ್ರವೇಶವಿಲ್ಲ: ವಾರಣಾಸಿಯಲ್ಲಿ ಪೋಸ್ಟರ್‌ಗಳು

- Advertisement -
- Advertisement -

ಧಾರ್ಮಿಕ ಕ್ಷೇತ್ರ ವಾರಣಾಸಿಯಲ್ಲಿ ಗಂಗಾ ನದಿಯ ಘಾಟ್‌ಗಳು ಮತ್ತು ನದಿಯುದ್ದಕ್ಕೂ ಇರುವ ದೇವಾಲಯಗಳಿಂದ ಹಿಂದೂಯೇತರರು ದೂರವಿರುವಂತೆ, ಪ್ರವೇಶ ನಿಷೇಧಿಸಲಾಗಿದೆ ಎಂದು ಹೇಳುವ ಪೋಸ್ಟರ್‌ಗಳು ವಾರಣಾಸಿಯಲ್ಲಿ ಕಾಣಿಸಿಕೊಂಡಿವೆ.

ಬಲಪಂಥೀಯ ಸಂಘಟನೆಗಳು ನಗರದಲ್ಲಿ ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎಂದು ಶಂಕಿಸಲಾಗಿದ್ದು, ಪೊಲೀಸರು ಅವುಗಳನ್ನು ತೆರವುಗೊಳಿಸುತ್ತಿದ್ದಾರೆ. ಘಟನೆ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹಿಂದೂಯೇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಕಾಶಿಯಲ್ಲಿ ಗಂಗಾ ಮಾತೆಯ ಉದ್ದಕ್ಕೂ ಇರುವ ಘಾಟ್‌ಗಳು ಮತ್ತು ದೇವಾಲಯಗಳು ಸನಾತನ ಧರ್ಮ, ಭಾರತೀಯ ಸಂಸ್ಕೃತಿ ಮತ್ತು ನಂಬಿಕೆಯ ಸಂಕೇತಗಳಾಗಿವೆ. ಸನಾತನ ಧರ್ಮದಲ್ಲಿ ಭಕ್ತಿ ಮತ್ತು ನಂಬಿಕೆ ಇರುವವರಿಗೆ ಸ್ವಾಗತ. ಇಲ್ಲದಿದ್ದರೆ, ಇದು ಪಿಕ್ನಿಕ್ ಸ್ಪಾಟ್ ಅಲ್ಲ” ಎಂದು ಹಿಂದಿಯಲ್ಲಿ ಬರೆದ ಪೋಸ್ಟರ್‌ಗಳು ನಗರದುದ್ದಕ್ಕೂ ಕಾಣಿಸಿಕೊಂಡಿವೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

Posters In Varanasi Ask Non-Hindus To Stay Away From Ghats

ಪೋಸ್ಟರ್‌ನಲ್ಲಿ “ಇದು ವಿನಂತಿಯಲ್ಲ, ಎಚ್ಚರಿಕೆ” ಎಂದು ಬರೆಯಲಾಗಿದ್ದು, ವಿಶ್ವ ಹಿಂದೂ ಪರಿಷತ್ ಮತ್ತು ಬವಜರಂಗದಳ ಹೆಸರನ್ನು ಸೇರಿಸಲಾಗಿದೆ. ಈ ಪೋಸ್ಟರ್‌ಗಳ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿಯೂ ಕಾಣಿಸಿಕೊಂಡಿವೆ.

“ಈ ಘಟನೆ ಕುರಿತು ಸ್ಥಳೀಯ ಭೇಲುಪುರ ಪೊಲೀಸ್ ಠಾಣೆಯಿಂದ ತನಿಖೆ ನಡೆಸಲಾಗುತ್ತಿದೆ. ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಜನರನ್ನು ಗುರುತಿಸಲಾಗುತ್ತಿದೆ. ಇಲ್ಲಿಯವರೆಗೆ, ಪೊಲೀಸರಿಗೆ ಯಾವುದೇ ಲಿಖಿತ ದೂರು ಬಂದಿಲ್ಲ. ಕೆಲವು ಸ್ಥಳೀಯ ಗುಂಪುಗಳು ಅದನ್ನು ಹೈಲೈಟ್ ಮಾಡಿದ ನಂತರ ಪೊಲೀಸರು ಜನರ ಸಹಾಯದಿಂದ ಪೋಸ್ಟರ್‌ಗಳನ್ನು ತೆಗೆದುಹಾಕುತ್ತಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಿಂದೂಯೇತರರು ಘಾಟ್‌ಗಳ ಶುದ್ಧತೆಯನ್ನು ಉಲ್ಲಂಘಿಸುತ್ತಾರೆ. ಅದಕ್ಕಾಗಿಯೇ ಅವರಿಗೆ ಈ ಎಚ್ಚರಿಕೆ ನೀಡಲಾಗಿದೆ. ಇವರು ಘಾಟ್‌ಗಳಲ್ಲಿ ಮದ್ಯ ಮತ್ತು ಮಾಂಸಾಹಾರ ಸೇವಿಸುತ್ತಾರೆ” ಎಂದು ಬಜರಂಗದಳದ ಕಾಶಿ ಮಹಾನಗರದ ಸಂಯೋಜಕ ನಿಖಿಲ್ ತ್ರಿಪಾಠಿ ರುದ್ರ ಅವರನ್ನು ಪಿಟಿಐ ಉಲ್ಲೇಖಿಸಿದೆ.


ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...