Homeಮುಖಪುಟಹಿಂದೂಯೇತರರಿಗೆ ಗಂಗಾ ಘಾಟ್‌ಗಳು, ದೇವಾಲಯಗಳಿಗೆ ಪ್ರವೇಶವಿಲ್ಲ: ವಾರಣಾಸಿಯಲ್ಲಿ ಪೋಸ್ಟರ್‌ಗಳು

ಹಿಂದೂಯೇತರರಿಗೆ ಗಂಗಾ ಘಾಟ್‌ಗಳು, ದೇವಾಲಯಗಳಿಗೆ ಪ್ರವೇಶವಿಲ್ಲ: ವಾರಣಾಸಿಯಲ್ಲಿ ಪೋಸ್ಟರ್‌ಗಳು

- Advertisement -
- Advertisement -

ಧಾರ್ಮಿಕ ಕ್ಷೇತ್ರ ವಾರಣಾಸಿಯಲ್ಲಿ ಗಂಗಾ ನದಿಯ ಘಾಟ್‌ಗಳು ಮತ್ತು ನದಿಯುದ್ದಕ್ಕೂ ಇರುವ ದೇವಾಲಯಗಳಿಂದ ಹಿಂದೂಯೇತರರು ದೂರವಿರುವಂತೆ, ಪ್ರವೇಶ ನಿಷೇಧಿಸಲಾಗಿದೆ ಎಂದು ಹೇಳುವ ಪೋಸ್ಟರ್‌ಗಳು ವಾರಣಾಸಿಯಲ್ಲಿ ಕಾಣಿಸಿಕೊಂಡಿವೆ.

ಬಲಪಂಥೀಯ ಸಂಘಟನೆಗಳು ನಗರದಲ್ಲಿ ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎಂದು ಶಂಕಿಸಲಾಗಿದ್ದು, ಪೊಲೀಸರು ಅವುಗಳನ್ನು ತೆರವುಗೊಳಿಸುತ್ತಿದ್ದಾರೆ. ಘಟನೆ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹಿಂದೂಯೇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಕಾಶಿಯಲ್ಲಿ ಗಂಗಾ ಮಾತೆಯ ಉದ್ದಕ್ಕೂ ಇರುವ ಘಾಟ್‌ಗಳು ಮತ್ತು ದೇವಾಲಯಗಳು ಸನಾತನ ಧರ್ಮ, ಭಾರತೀಯ ಸಂಸ್ಕೃತಿ ಮತ್ತು ನಂಬಿಕೆಯ ಸಂಕೇತಗಳಾಗಿವೆ. ಸನಾತನ ಧರ್ಮದಲ್ಲಿ ಭಕ್ತಿ ಮತ್ತು ನಂಬಿಕೆ ಇರುವವರಿಗೆ ಸ್ವಾಗತ. ಇಲ್ಲದಿದ್ದರೆ, ಇದು ಪಿಕ್ನಿಕ್ ಸ್ಪಾಟ್ ಅಲ್ಲ” ಎಂದು ಹಿಂದಿಯಲ್ಲಿ ಬರೆದ ಪೋಸ್ಟರ್‌ಗಳು ನಗರದುದ್ದಕ್ಕೂ ಕಾಣಿಸಿಕೊಂಡಿವೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

Posters In Varanasi Ask Non-Hindus To Stay Away From Ghats

ಪೋಸ್ಟರ್‌ನಲ್ಲಿ “ಇದು ವಿನಂತಿಯಲ್ಲ, ಎಚ್ಚರಿಕೆ” ಎಂದು ಬರೆಯಲಾಗಿದ್ದು, ವಿಶ್ವ ಹಿಂದೂ ಪರಿಷತ್ ಮತ್ತು ಬವಜರಂಗದಳ ಹೆಸರನ್ನು ಸೇರಿಸಲಾಗಿದೆ. ಈ ಪೋಸ್ಟರ್‌ಗಳ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿಯೂ ಕಾಣಿಸಿಕೊಂಡಿವೆ.

“ಈ ಘಟನೆ ಕುರಿತು ಸ್ಥಳೀಯ ಭೇಲುಪುರ ಪೊಲೀಸ್ ಠಾಣೆಯಿಂದ ತನಿಖೆ ನಡೆಸಲಾಗುತ್ತಿದೆ. ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಜನರನ್ನು ಗುರುತಿಸಲಾಗುತ್ತಿದೆ. ಇಲ್ಲಿಯವರೆಗೆ, ಪೊಲೀಸರಿಗೆ ಯಾವುದೇ ಲಿಖಿತ ದೂರು ಬಂದಿಲ್ಲ. ಕೆಲವು ಸ್ಥಳೀಯ ಗುಂಪುಗಳು ಅದನ್ನು ಹೈಲೈಟ್ ಮಾಡಿದ ನಂತರ ಪೊಲೀಸರು ಜನರ ಸಹಾಯದಿಂದ ಪೋಸ್ಟರ್‌ಗಳನ್ನು ತೆಗೆದುಹಾಕುತ್ತಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಿಂದೂಯೇತರರು ಘಾಟ್‌ಗಳ ಶುದ್ಧತೆಯನ್ನು ಉಲ್ಲಂಘಿಸುತ್ತಾರೆ. ಅದಕ್ಕಾಗಿಯೇ ಅವರಿಗೆ ಈ ಎಚ್ಚರಿಕೆ ನೀಡಲಾಗಿದೆ. ಇವರು ಘಾಟ್‌ಗಳಲ್ಲಿ ಮದ್ಯ ಮತ್ತು ಮಾಂಸಾಹಾರ ಸೇವಿಸುತ್ತಾರೆ” ಎಂದು ಬಜರಂಗದಳದ ಕಾಶಿ ಮಹಾನಗರದ ಸಂಯೋಜಕ ನಿಖಿಲ್ ತ್ರಿಪಾಠಿ ರುದ್ರ ಅವರನ್ನು ಪಿಟಿಐ ಉಲ್ಲೇಖಿಸಿದೆ.


ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...