Homeಮುಖಪುಟವಾರಣಾಸಿ: ಮೋದಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈನಿಕನ ಮನವಿ ತಿರಸ್ಕರಿಸಿದ ಸುಪ್ರೀಂ!

ವಾರಣಾಸಿ: ಮೋದಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈನಿಕನ ಮನವಿ ತಿರಸ್ಕರಿಸಿದ ಸುಪ್ರೀಂ!

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿದ್ದ ಬಿಎಸ್‌ಎಫ್ ಸೈನಿಕ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸುಪ್ರೀಂ ಕೋರ್ಟ್‌ ಮೋರೆ ಹೋಗಿದ್ದರು.

- Advertisement -
- Advertisement -

2019 ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಿದ್ದ ಬಿಎಸ್‌ಎಫ್ ಸೈನಿಕ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸುಪ್ರೀಂ ಕೋರ್ಟ್‌ ಮೋರೆ ಹೋಗಿದ್ದರು. ಅಲ್ಲಿಯೂ ಇವರ ಮನವಿಯ ಅರ್ಜಿಯನ್ನು ತಿರಸ್ಕರಿಸಿಲಾಗಿದೆ.

ಈ ಪ್ರಕರಣದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ಇದನ್ನೂ ಓದಿ: ಮೋದಿ ಅವನತಿ, ಕೆಸಿಆರ್ ಕಸರತ್ತು, ಅಮೀನ್ ಮಟ್ಟು ಕುರಿತು, ಮೇ ಸಾಹಿತ್ಯ ಮೇಳ, ತೇಜ್ ಬಹದ್ದೂರ್ ಇತ್ಯಾದಿ

ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿ ತೇಜ್ ಬಹದ್ದೂರ್ ಅವರ ನಾಮಪತ್ರಗಳನ್ನು ಕಳೆದ ವರ್ಷ ಮೇ 1 ರಂದು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದರು.

ಇದನ್ನೂ ಓದಿ: ತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

ಸೇನೆಯಲ್ಲಿ ಆಹಾರ ಸರಿಯಾಗಿ ಒದಗಿಸುತ್ತಿಲ್ಲ ಎಂಬ ಕಾರಣಕ್ಕೆ ವೀಡಿಯೋ ಮಾಡಿದ್ದ ತೇಜ್ ಬಹದ್ದೂರ್ ಅವರನ್ನು 2017 ರಲ್ಲಿ ಸೇನೆಯಿಂದ ವಜಾಗೊಳಿಸಲಾಗಿತ್ತು. ನಂತರ ಅವರು ನರೇಂದ್ರ ಮೋದಿಯವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಚುನಾವಣಾ ಅಧಿಕಾರಿಗಳು ಇವರ ನಾಮಪತ್ರವನ್ನು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ನಾಮಪತ್ರ ತಿರಸ್ಕಾರದ ನಿರ್ಧಾರವನ್ನು ಎತ್ತಿಹಿಡಿಯಲಾಗಿತ್ತು.

ಇದನ್ನೂ ಓದಿ: Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

ಅರ್ಜಿದಾರರು ಈ ಹಿಂದೆ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು ನಂತರ ಎಸ್‌ಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು ಎಂದು ಬಹದ್ದೂರ್ ಪರ ವಕೀಲರು ಉನ್ನತ ನ್ಯಾಯಾಲಯದ ಮುಂದೆ ವಾದಿಸಿದ್ದರು.

ಇದನ್ನೂ ಓದಿ: ಮೋದಿ ವಿರುದ್ಧ ಸ್ಪರ್ಧಿಸಲು ತೇಜ್ ಬಹದ್ದೂರ್ ಯಾದವ್‍ಗೆ ಟಿಕೆಟ್ ನೀಡಿದ ಸಮಾಜವಾದಿ ಪಕ್ಷ

ಹೈಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ ವಕೀಲರು, “ಬಹದ್ದೂರ್ ಅವರ ನಾಮಪತ್ರವನ್ನು ಬಾಹ್ಯ ಕಾರಣಗಳಿಗಾಗಿ ತಿರಸ್ಕರಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ನಾಮಪತ್ರವನ್ನು ತಿರಸ್ಕರಿಸಿದ ಚುನಾವಣಾ ಅಧಿಕಾರಿಗಳು, “ತೇಜ್ ಬಹದ್ದೂರ್ ಅವರನ್ನು ಭ್ರಷ್ಟಾಚಾರ/ರಾಜ್ಯ ದ್ರೋಹ ಎಸಗಿದ್ದಕ್ಕಾಗಿ ವಜಾಗೊಳಿಸಿಲ್ಲ ಎಂದು ನೀಡುವ ಪ್ರಮಾಣ ಪತ್ರವನ್ನು ನಾಮಪತ್ರದೊಟ್ಟಿಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರಲಿಲ್ಲ” ಎಂದು ಹೇಳಿದ್ದರು.


ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...