Homeಚಳವಳಿವರವರ ರಾವ್ ದೈಹಿಕವಾಗಿ ಇನ್ನೂ ದುರ್ಬಲವಾಗಿಯೇ ಇದ್ದಾರೆ: ಎನ್ ವೇಣುಗೋಪಾಲ್

ವರವರ ರಾವ್ ದೈಹಿಕವಾಗಿ ಇನ್ನೂ ದುರ್ಬಲವಾಗಿಯೇ ಇದ್ದಾರೆ: ಎನ್ ವೇಣುಗೋಪಾಲ್

ಎಲ್ಗರ್ ಪರಿಷತ್ ಪ್ರಕರಣದಲ್ಲಿ ವರವರ ರಾವ್ ಅವರ ಜಾಮೀನು ಅರ್ಜಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆಕ್ಷೇಪ ವ್ಯಕ್ತಪಡಿಸಿತ್ತು.

- Advertisement -
- Advertisement -

ಜುಲೈ 16 ರಂದು ಕೊರೊನಾ ದೃಢಪಟ್ಟ ನಂತರ ಜೈಲಿನಲ್ಲಿದ್ದ 80 ವರ್ಷದ ಹೋರಾಟಗಾರ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ವರವರರಾವ್, ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಇನ್ನೂ ದೈಹಿಕವಾಗಿ ದುರ್ಬಲವಾಗಿಯೇ ಇದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

“ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ, ಆಗಸ್ಟ್ 18 ರ ಮಂಗಳವಾರ ಅವರೊಂದಿಗೆ ವೀಡಿಯೊ ಕರೆ ಮಾಡಲು ನಮಗೆ ಅನುಮತಿ ನೀಡಲಾಯಿತು. ಅದೃಷ್ಟವಶಾತ್, ಅವರ ದೈಹಿಕ ಆರೋಗ್ಯ ಇನ್ನೂ ದುರ್ಬಲವಾಗಿದ್ದರೂ ಈ ಬಾರಿ ಅವರು ಸ್ಥಿಮಿತದಲ್ಲಿದ್ದರು” ಎಂದು ಅವರ ಸೋದರಳಿಯ ಎನ್ ವೇಣುಗೋಪಾಲ್ ದಿ ಕ್ವಿಂಟ್‌ಗೆ ಹೇಳಿದರು.

“ಪ್ರಸ್ತುತ ಅವರು ಕೊರೊನಾ ಸೋಂಕಿನಿಂದ ಗುಣವಾಗಿದ್ದಾರೆಯೇ ಎಂದೂ ತಿಳಿದಿಲ್ಲ. ಅಧಿಕಾರಿಗಳು ಅಥವಾ ವೈದ್ಯರಿಂದ ಯಾವುದೇ ಅಧಿಕೃತ ಹೊಸ ವಿಷಯಗಳು ತಿಳಿದುಬಂದಿಲ್ಲ. ಅವರು ಸಾಮಾನ್ಯವಾಗಿ ಎಲ್ಲಾ ವರದಿಗಳನ್ನು ನ್ಯಾಯಾಲಯಗಳಿಗೆ ಸಲ್ಲಿಸುತ್ತಾರೆ. ಯಾವುದೇ ಪರೀಕ್ಷಾ ಫಲಿತಾಂಶಗಳ ಬಗ್ಗೆ ಕುಟುಂಬಕ್ಕೆ ತಿಳಿಸಲಾಗಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಜುಲೈ 28 ರಂದು, ಮೂರು ದಿನಗಳಲ್ಲಿ ವರವರ ರಾವ್ ಅವರ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಅಧಿಕಾರಿಗಳಿಗೆ ಸೂಚಿಸಿತ್ತು ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

“ಸೋಮವಾರ, ನ್ಯಾಯಪೀಠವು ಜುಲೈ 31 ರಂದು ಸಲ್ಲಿಸಿದ ವೈದ್ಯಕೀಯ ವರದಿಯನ್ನು ಪರಿಶೀಲಿಸಿದೆ” ಎಂದು ಹೇಳಿದರು.

ಆಗಸ್ಟ್ 17, ಸೋಮವಾರ, ಎಲ್ಗರ್ ಪರಿಷತ್ ಪ್ರಕರಣದಲ್ಲಿ ರಾವ್ ಅವರಿಗೆ ಜಾಮೀನು ನೀಡುವುದನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆಕ್ಷೇಪ ವ್ಯಕ್ತಪಡಿಸಿತ್ತು.

ಬಾಂಬೆ ಹೈಕೋರ್ಟ್ ರಾಜ್ಯ ಜೈಲು ಅಧಿಕಾರಿಗಳಿಗೆ ವರವರ ರಾವ್ ಅವರ ಕುಟುಂಬದೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿತ್ತು.

ಜುಲೈ 31 ರಂದು ವೀಡಿಯೊ ಕರೆಯ ನಂತರ, “ರಾವ್ ತನ್ನ ತಂದೆಯ ಸಾವಿನ ಬಗ್ಗೆ ಭ್ರಮನಿರಸನಗೊಂಡಿದ್ದಾರೆ. ಇದು ಅತ್ಯಂತ ದುರ್ಬಲ ಮತ್ತು ಅಸಂಗತ ವಿಷಯವಾಗಿದೆ” ಎಂದು ಅವರ ಕುಟುಂಬವು ಹೇಳಿಕೊಂಡಿತ್ತು.

ತಲೋಜಾ ಜೈಲಿನಲ್ಲಿದ್ದ ರಾವ್ ಅವರಿಗೆ ತಲೆಗೆ ಪೆಟ್ಟಾಗಿದ್ದರಿಂದ, ಸರ್ಕಾರ ನಡೆಸುತ್ತಿರುವ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉತ್ತಮ ಚಿಕಿತ್ಸೆಗಾಗಿ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಮಹಾರಾಷ್ಟ್ರ ಸರ್ಕಾರದ ಪತ್ರಿಕಾ ಪ್ರಕಟಣೆಯ ಪ್ರಕಾರ, ಆಗಸ್ಟ್ 16 ರವರೆಗೆ, ತಲೋಜಾ ಜೈಲಿನಲ್ಲಿರುವ ಮೂವರು ಕೈದಿಗಳಿಗೆ ಕೊರೊನಾ ದೃಢಪಟ್ಟಿದ್ದು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಹೈಕೋರ್ಟಿನ ಆದೇಶದ ಪ್ರಕಾರ, ತಲೋಜಾ ಜೈಲು ಕೈದಿಗಳ ಮೇಲೆ 46 ಕ್ಷಿಪ್ರ ಕೊರೊನಾ ಪರೀಕ್ಷೆಗಳನ್ನು ನಡೆಸಿದೆ.

ಇತರ ಭೀಮಾ ಕೋರೆಗಾಂವ್ ಆರೋಪಿಗಳಾದ ಆನಂದ್ ತೇಲ್ದುಂಬ್ಡೆ ಮತ್ತು ವೆರ್ನಾನ್ ಗೊನ್ಸಾಲ್ವೆಸ್ ಸಹ ತಾಲೋಜ ಜೈಲಿನಲ್ಲಿದ್ದಾರೆ.

ಅವರೂ ಕೂಡ ಸಾಂಕ್ರಾಮಿಕ ಸಮಯದಲ್ಲಿ ಆರೋಗ್ಯ ಪರಿಸ್ಥಿತಿಯ ಆಧಾರದಲ್ಲಿ ಜಾಮೀನು ಕೋರಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...