Homeಚಳವಳಿವರವರ ರಾವ್ ದೈಹಿಕವಾಗಿ ಇನ್ನೂ ದುರ್ಬಲವಾಗಿಯೇ ಇದ್ದಾರೆ: ಎನ್ ವೇಣುಗೋಪಾಲ್

ವರವರ ರಾವ್ ದೈಹಿಕವಾಗಿ ಇನ್ನೂ ದುರ್ಬಲವಾಗಿಯೇ ಇದ್ದಾರೆ: ಎನ್ ವೇಣುಗೋಪಾಲ್

ಎಲ್ಗರ್ ಪರಿಷತ್ ಪ್ರಕರಣದಲ್ಲಿ ವರವರ ರಾವ್ ಅವರ ಜಾಮೀನು ಅರ್ಜಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆಕ್ಷೇಪ ವ್ಯಕ್ತಪಡಿಸಿತ್ತು.

- Advertisement -
- Advertisement -

ಜುಲೈ 16 ರಂದು ಕೊರೊನಾ ದೃಢಪಟ್ಟ ನಂತರ ಜೈಲಿನಲ್ಲಿದ್ದ 80 ವರ್ಷದ ಹೋರಾಟಗಾರ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ವರವರರಾವ್, ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಇನ್ನೂ ದೈಹಿಕವಾಗಿ ದುರ್ಬಲವಾಗಿಯೇ ಇದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

“ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ, ಆಗಸ್ಟ್ 18 ರ ಮಂಗಳವಾರ ಅವರೊಂದಿಗೆ ವೀಡಿಯೊ ಕರೆ ಮಾಡಲು ನಮಗೆ ಅನುಮತಿ ನೀಡಲಾಯಿತು. ಅದೃಷ್ಟವಶಾತ್, ಅವರ ದೈಹಿಕ ಆರೋಗ್ಯ ಇನ್ನೂ ದುರ್ಬಲವಾಗಿದ್ದರೂ ಈ ಬಾರಿ ಅವರು ಸ್ಥಿಮಿತದಲ್ಲಿದ್ದರು” ಎಂದು ಅವರ ಸೋದರಳಿಯ ಎನ್ ವೇಣುಗೋಪಾಲ್ ದಿ ಕ್ವಿಂಟ್‌ಗೆ ಹೇಳಿದರು.

“ಪ್ರಸ್ತುತ ಅವರು ಕೊರೊನಾ ಸೋಂಕಿನಿಂದ ಗುಣವಾಗಿದ್ದಾರೆಯೇ ಎಂದೂ ತಿಳಿದಿಲ್ಲ. ಅಧಿಕಾರಿಗಳು ಅಥವಾ ವೈದ್ಯರಿಂದ ಯಾವುದೇ ಅಧಿಕೃತ ಹೊಸ ವಿಷಯಗಳು ತಿಳಿದುಬಂದಿಲ್ಲ. ಅವರು ಸಾಮಾನ್ಯವಾಗಿ ಎಲ್ಲಾ ವರದಿಗಳನ್ನು ನ್ಯಾಯಾಲಯಗಳಿಗೆ ಸಲ್ಲಿಸುತ್ತಾರೆ. ಯಾವುದೇ ಪರೀಕ್ಷಾ ಫಲಿತಾಂಶಗಳ ಬಗ್ಗೆ ಕುಟುಂಬಕ್ಕೆ ತಿಳಿಸಲಾಗಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಜುಲೈ 28 ರಂದು, ಮೂರು ದಿನಗಳಲ್ಲಿ ವರವರ ರಾವ್ ಅವರ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಅಧಿಕಾರಿಗಳಿಗೆ ಸೂಚಿಸಿತ್ತು ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

“ಸೋಮವಾರ, ನ್ಯಾಯಪೀಠವು ಜುಲೈ 31 ರಂದು ಸಲ್ಲಿಸಿದ ವೈದ್ಯಕೀಯ ವರದಿಯನ್ನು ಪರಿಶೀಲಿಸಿದೆ” ಎಂದು ಹೇಳಿದರು.

ಆಗಸ್ಟ್ 17, ಸೋಮವಾರ, ಎಲ್ಗರ್ ಪರಿಷತ್ ಪ್ರಕರಣದಲ್ಲಿ ರಾವ್ ಅವರಿಗೆ ಜಾಮೀನು ನೀಡುವುದನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆಕ್ಷೇಪ ವ್ಯಕ್ತಪಡಿಸಿತ್ತು.

ಬಾಂಬೆ ಹೈಕೋರ್ಟ್ ರಾಜ್ಯ ಜೈಲು ಅಧಿಕಾರಿಗಳಿಗೆ ವರವರ ರಾವ್ ಅವರ ಕುಟುಂಬದೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿತ್ತು.

ಜುಲೈ 31 ರಂದು ವೀಡಿಯೊ ಕರೆಯ ನಂತರ, “ರಾವ್ ತನ್ನ ತಂದೆಯ ಸಾವಿನ ಬಗ್ಗೆ ಭ್ರಮನಿರಸನಗೊಂಡಿದ್ದಾರೆ. ಇದು ಅತ್ಯಂತ ದುರ್ಬಲ ಮತ್ತು ಅಸಂಗತ ವಿಷಯವಾಗಿದೆ” ಎಂದು ಅವರ ಕುಟುಂಬವು ಹೇಳಿಕೊಂಡಿತ್ತು.

ತಲೋಜಾ ಜೈಲಿನಲ್ಲಿದ್ದ ರಾವ್ ಅವರಿಗೆ ತಲೆಗೆ ಪೆಟ್ಟಾಗಿದ್ದರಿಂದ, ಸರ್ಕಾರ ನಡೆಸುತ್ತಿರುವ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉತ್ತಮ ಚಿಕಿತ್ಸೆಗಾಗಿ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಮಹಾರಾಷ್ಟ್ರ ಸರ್ಕಾರದ ಪತ್ರಿಕಾ ಪ್ರಕಟಣೆಯ ಪ್ರಕಾರ, ಆಗಸ್ಟ್ 16 ರವರೆಗೆ, ತಲೋಜಾ ಜೈಲಿನಲ್ಲಿರುವ ಮೂವರು ಕೈದಿಗಳಿಗೆ ಕೊರೊನಾ ದೃಢಪಟ್ಟಿದ್ದು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಹೈಕೋರ್ಟಿನ ಆದೇಶದ ಪ್ರಕಾರ, ತಲೋಜಾ ಜೈಲು ಕೈದಿಗಳ ಮೇಲೆ 46 ಕ್ಷಿಪ್ರ ಕೊರೊನಾ ಪರೀಕ್ಷೆಗಳನ್ನು ನಡೆಸಿದೆ.

ಇತರ ಭೀಮಾ ಕೋರೆಗಾಂವ್ ಆರೋಪಿಗಳಾದ ಆನಂದ್ ತೇಲ್ದುಂಬ್ಡೆ ಮತ್ತು ವೆರ್ನಾನ್ ಗೊನ್ಸಾಲ್ವೆಸ್ ಸಹ ತಾಲೋಜ ಜೈಲಿನಲ್ಲಿದ್ದಾರೆ.

ಅವರೂ ಕೂಡ ಸಾಂಕ್ರಾಮಿಕ ಸಮಯದಲ್ಲಿ ಆರೋಗ್ಯ ಪರಿಸ್ಥಿತಿಯ ಆಧಾರದಲ್ಲಿ ಜಾಮೀನು ಕೋರಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...