Homeಮುಖಪುಟವರವರ ರಾವ್ ಸ್ಥಿತಿ ಗಂಭೀರವಾಗಿದೆ; ನಾನಾವತಿ ಆಸ್ಪತ್ರೆಗೆ ದಾಖಲಿಸಿ - ಬಾಂಬೆ ಹೈಕೋರ್ಟ್‌!

ವರವರ ರಾವ್ ಸ್ಥಿತಿ ಗಂಭೀರವಾಗಿದೆ; ನಾನಾವತಿ ಆಸ್ಪತ್ರೆಗೆ ದಾಖಲಿಸಿ – ಬಾಂಬೆ ಹೈಕೋರ್ಟ್‌!

- Advertisement -
- Advertisement -

ಬಂಧನದಲ್ಲಿರುವ ತೆಲುಗು ಕವಿ ವರವರ ರಾವ್ ಅವರನ್ನು 15 ದಿನಗಳ ಕಾಲ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಿ ಎಂದು ಬಾಂಬೆ ಹೈಕೋರ್ಟ್‌ ಅಧಿಕಾರಿಗಳಿಗೆ ತಿಳಿಸಿದ್ದು, ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಕಳೆದ 2 ವರ್ಷಗಳಿಂದ ತಲೋಜ ಜೈಲಿನಲ್ಲಿರುವ ಇವರಿಗೆ “ಚಿಕಿತ್ಸೆಯ ಅಗತ್ಯವಿದೆ” ಎಂದು ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮಾಧವ್ ಜಮ್ದಾರ್ ಅವರ ನೇತೃತ್ವದ ಹೈಕೋರ್ಟ್ ನ್ಯಾಯಪೀಠ ಹೇಳಿದೆ.

ವರವರ ರಾವ್ ಅವರ ವೈದ್ಯಕೀಯ ಪರೀಕ್ಷೆಯ ವಿವರಗಳನ್ನು ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಮಂಗಳವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿತ್ತು. ವರವರ ರಾವ್ ಅವರನ್ನು ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ಅವರ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

80 ವರ್ಷದ ವರವರಾ ರಾವ್ ಅವರನ್ನು 2018 ರ ಜನವರಿಯಲ್ಲಿ ಬಂಧಿಸಿ, ಭಯೋತ್ಪಾದನಾ-ವಿರೋಧಿ ಕಾನೂನಾದ ಯುಎಪಿಎ ಯನ್ನು ದಾಖಲಿಸಲಾಗಿದೆ. ಅನಾರೋಗ್ಯ ಪೀಡಿತರಾದ ಅವರು ನಿರಂತರವಾಗಿ ಸೆರೆವಾಸ ಅನುಭವಿಸುವುದು ಸಂವಿಧಾನದ 21 ನೇ ಪರಿಚ್ಚೇದದ ಉಲ್ಲಂಘನೆಯಾಗಿದೆ ಮತ್ತು ಅದು ಅವರ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಹೇಳಿತ್ತು.

ಮುಂಬೈ ಬಳಿಯ ತಲೋಜ ಜೈಲಿನಲ್ಲಿರುವ ಪ್ರಕರಣದ ಸಹ-ಆರೋಪಿ ಸ್ಟಾನ್ ಸ್ವಾಮಿ ವಕೀಲರಿಗೆ ಕರೆ ಮಾಡಿ ವರವರ ರಾವ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆಂದು ಇಂದಿರಾ ಜೈಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

“ವರವಾರ ರಾವ್ ಅವರನ್ನು ತಲೋಜಾ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ನಾನು ತುರ್ತು ಮಧ್ಯಂತರ ಪರಿಹಾರವನ್ನು ಕೋರುತ್ತೇನೆ. ಅವರ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿರುವುದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂಬುದೇ ನನ್ನ ಬಯಕೆಯಾಗಿದೆ” ಎಂದು ವಕೀಲೆ ನ್ಯಾಯಾಲಯಕ್ಕೆ ಹೇಳಿದ್ದರು.

ವರವಾರ ರಾವ್ ಅವರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲು ತಲೋಜಾ ಜೈಲಿನಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ಮೂಲಸೌಕರ್ಯಗಳಿಲ್ಲ ಮತ್ತು ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಬೇಕಾಗಿದೆ. ಈ ಸ್ಥಿತಿಯಲ್ಲಿ ಅವರು ವಿಚಾರಣೆಗೆ ನಿಲ್ಲಲು ಸಹ ಸಾಧ್ಯವಿಲ್ಲ. ಒಂದು ವೇಳೆ ಅವರು ಜೈಲಿನಲ್ಲಿ ಸತ್ತರೆ ಅದು ಕಸ್ಟಡಿಯಲ್ ಸಾವಾಗುತ್ತದೆ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದರು.

ಇದನ್ನೂ ಓದಿ: ಕವಿ ವರವರ ರಾವ್ ಬಿಡುಗಡೆಗೊಳಿಸಿ: ಸಾಹಿತಿ, ಚಿಂತಕರ ಆಗ್ರಹ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು, ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಮರುದಿನ ಭೀಮಾ ಕೊರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆಯಿತು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ, ವರವರ ರಾವ್ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಇದೇ ಪ್ರಕರಣದಲ್ಲಿ ತೀರಾ ಇತ್ತೀಚೆಗೆ ಬಂಧಿಸಲ್ಪಟ್ಟ ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತರಾದ ಫಾದರ್ ಸ್ಟಾನ್ ಸ್ವಾಮಿ, ತನಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಲೋಟಗಳನ್ನು ಹಿಡಿಯಲು ಕೈನಡುಗುತ್ತದೆ, ಆದ್ದರಿಂದ ಸ್ಟ್ರಾ ಬಳಸಿ ನೀರು ಕುಡಿಯಲು ಅನುಮತಿ ನೀಡಬೇಕು ಎಂದು ವಿನಂತಿಸಿಕೊಂಡಿದ್ದರು, ಆದರೆ ಎನ್ಐಎ ಇದಕ್ಕೆ ಪ್ರತಿಕ್ರಿಯಿಸಲು 20 ದಿನಗಳ ಕಾಲಾವಕಾಶ ಕೇಳಿತ್ತು.


ಇದನ್ನೂ ಓದಿ: ನಿರಂಕುಶಾಧಿಕಾರ ಎಂಬ ತೋಳ ಮತ್ತು ಕುರಿಮರಿಗಳಂತಿರುವ ಸಾಮಾನ್ಯರು: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...