Homeಮುಖಪುಟವರವರ ರಾವ್ ಸ್ಥಿತಿ ಗಂಭೀರವಾಗಿದೆ; ನಾನಾವತಿ ಆಸ್ಪತ್ರೆಗೆ ದಾಖಲಿಸಿ - ಬಾಂಬೆ ಹೈಕೋರ್ಟ್‌!

ವರವರ ರಾವ್ ಸ್ಥಿತಿ ಗಂಭೀರವಾಗಿದೆ; ನಾನಾವತಿ ಆಸ್ಪತ್ರೆಗೆ ದಾಖಲಿಸಿ – ಬಾಂಬೆ ಹೈಕೋರ್ಟ್‌!

- Advertisement -
- Advertisement -

ಬಂಧನದಲ್ಲಿರುವ ತೆಲುಗು ಕವಿ ವರವರ ರಾವ್ ಅವರನ್ನು 15 ದಿನಗಳ ಕಾಲ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಿ ಎಂದು ಬಾಂಬೆ ಹೈಕೋರ್ಟ್‌ ಅಧಿಕಾರಿಗಳಿಗೆ ತಿಳಿಸಿದ್ದು, ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಕಳೆದ 2 ವರ್ಷಗಳಿಂದ ತಲೋಜ ಜೈಲಿನಲ್ಲಿರುವ ಇವರಿಗೆ “ಚಿಕಿತ್ಸೆಯ ಅಗತ್ಯವಿದೆ” ಎಂದು ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮಾಧವ್ ಜಮ್ದಾರ್ ಅವರ ನೇತೃತ್ವದ ಹೈಕೋರ್ಟ್ ನ್ಯಾಯಪೀಠ ಹೇಳಿದೆ.

ವರವರ ರಾವ್ ಅವರ ವೈದ್ಯಕೀಯ ಪರೀಕ್ಷೆಯ ವಿವರಗಳನ್ನು ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಮಂಗಳವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿತ್ತು. ವರವರ ರಾವ್ ಅವರನ್ನು ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ಅವರ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

80 ವರ್ಷದ ವರವರಾ ರಾವ್ ಅವರನ್ನು 2018 ರ ಜನವರಿಯಲ್ಲಿ ಬಂಧಿಸಿ, ಭಯೋತ್ಪಾದನಾ-ವಿರೋಧಿ ಕಾನೂನಾದ ಯುಎಪಿಎ ಯನ್ನು ದಾಖಲಿಸಲಾಗಿದೆ. ಅನಾರೋಗ್ಯ ಪೀಡಿತರಾದ ಅವರು ನಿರಂತರವಾಗಿ ಸೆರೆವಾಸ ಅನುಭವಿಸುವುದು ಸಂವಿಧಾನದ 21 ನೇ ಪರಿಚ್ಚೇದದ ಉಲ್ಲಂಘನೆಯಾಗಿದೆ ಮತ್ತು ಅದು ಅವರ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಹೇಳಿತ್ತು.

ಮುಂಬೈ ಬಳಿಯ ತಲೋಜ ಜೈಲಿನಲ್ಲಿರುವ ಪ್ರಕರಣದ ಸಹ-ಆರೋಪಿ ಸ್ಟಾನ್ ಸ್ವಾಮಿ ವಕೀಲರಿಗೆ ಕರೆ ಮಾಡಿ ವರವರ ರಾವ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆಂದು ಇಂದಿರಾ ಜೈಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA

“ವರವಾರ ರಾವ್ ಅವರನ್ನು ತಲೋಜಾ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ನಾನು ತುರ್ತು ಮಧ್ಯಂತರ ಪರಿಹಾರವನ್ನು ಕೋರುತ್ತೇನೆ. ಅವರ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿರುವುದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂಬುದೇ ನನ್ನ ಬಯಕೆಯಾಗಿದೆ” ಎಂದು ವಕೀಲೆ ನ್ಯಾಯಾಲಯಕ್ಕೆ ಹೇಳಿದ್ದರು.

ವರವಾರ ರಾವ್ ಅವರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲು ತಲೋಜಾ ಜೈಲಿನಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ಮೂಲಸೌಕರ್ಯಗಳಿಲ್ಲ ಮತ್ತು ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಬೇಕಾಗಿದೆ. ಈ ಸ್ಥಿತಿಯಲ್ಲಿ ಅವರು ವಿಚಾರಣೆಗೆ ನಿಲ್ಲಲು ಸಹ ಸಾಧ್ಯವಿಲ್ಲ. ಒಂದು ವೇಳೆ ಅವರು ಜೈಲಿನಲ್ಲಿ ಸತ್ತರೆ ಅದು ಕಸ್ಟಡಿಯಲ್ ಸಾವಾಗುತ್ತದೆ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದರು.

ಇದನ್ನೂ ಓದಿ: ಕವಿ ವರವರ ರಾವ್ ಬಿಡುಗಡೆಗೊಳಿಸಿ: ಸಾಹಿತಿ, ಚಿಂತಕರ ಆಗ್ರಹ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು, ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಮರುದಿನ ಭೀಮಾ ಕೊರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆಯಿತು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ, ವರವರ ರಾವ್ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಇದೇ ಪ್ರಕರಣದಲ್ಲಿ ತೀರಾ ಇತ್ತೀಚೆಗೆ ಬಂಧಿಸಲ್ಪಟ್ಟ ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತರಾದ ಫಾದರ್ ಸ್ಟಾನ್ ಸ್ವಾಮಿ, ತನಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಲೋಟಗಳನ್ನು ಹಿಡಿಯಲು ಕೈನಡುಗುತ್ತದೆ, ಆದ್ದರಿಂದ ಸ್ಟ್ರಾ ಬಳಸಿ ನೀರು ಕುಡಿಯಲು ಅನುಮತಿ ನೀಡಬೇಕು ಎಂದು ವಿನಂತಿಸಿಕೊಂಡಿದ್ದರು, ಆದರೆ ಎನ್ಐಎ ಇದಕ್ಕೆ ಪ್ರತಿಕ್ರಿಯಿಸಲು 20 ದಿನಗಳ ಕಾಲಾವಕಾಶ ಕೇಳಿತ್ತು.


ಇದನ್ನೂ ಓದಿ: ನಿರಂಕುಶಾಧಿಕಾರ ಎಂಬ ತೋಳ ಮತ್ತು ಕುರಿಮರಿಗಳಂತಿರುವ ಸಾಮಾನ್ಯರು: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...