Homeಕರ್ನಾಟಕಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-II ಸಮರ್ಪಕವಾಗಿ ನಡೆಸುವಂತೆ ಆಗ್ರಹ

ಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-II ಸಮರ್ಪಕವಾಗಿ ನಡೆಸುವಂತೆ ಆಗ್ರಹ

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಎರಡನೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಯ ಮಿತಿಯೊಳಗೆ ಪೂರ್ಣಗೊಳಿಸುವುದರೊಂದಿಗೆ ಸಮರ್ಪಕವಾಗಿ ನಡೆಸಬೇಕು ಎಂದು ಸರ್ವ ಸಮುದಾಯಗಳ ಸಾಮಾಜಿಕ ನ್ಯಾಯ ಸಂರಕ್ಷಣಾ ಅಭಿಯಾನ, ಶೋಷಿತ ಸಮುದಾಯಗಳ ಒಕ್ಕೂಟ, ಜಾಗೃತ ಕರ್ನಾಟಕ ಮತ್ತು ದಮನಿತ ಹಿಂದುಳಿದ ಸಮುದಾಯಗಳ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ.

ಬುಧವಾರ (ಸೆ.10) ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್‌ ಅವರನ್ನು ಭೇಟಿ ಮಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ಆರ್ ರಮೇಶ್, ಹಿಂದುಳಿದ ವರ್ಗಗಳ ಮುಖಂಡ ಸಣ್ಣಭತ್ತಪ್ಪ, ಪತ್ರಕರ್ತ ಧರಣೀಶ್ ಬೂಕನಕೆರೆ, ಜಾಗೃತ ಕರ್ನಾಟಕದ ಮುಖಂಡರಾದ ವಿನೋದ್ ಕುಮಾರ್ ಇಟಗಿ, ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅವರು ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದಾರೆ.

2015ರ ಮೊದಲ️ ಸಮೀಕ್ಷೆ ಬಗ್ಗೆ ಹಲ️ವಾರು ಆಕ್ಷೇಪಗಳು ವ್ಯಕ್ತವಾಗಿ ಕೊನೆಗೆ ಅದರ ಫಲಿತಾಂಶವನ್ನು ಸರ್ಕಾರ ಅಂಗೀಕರಿಸದೆ ಕೈಬಿ️ಟ್ಟಿರುವುದು ದುರ್ಬಲ️ ಸಮುದಾಯಗಳಿಗೆ ಅಪಾರವಾದ ನಿರಾಶೆ ಮೂಡಿಸಿದೆ. ರಾಜಕೀಯ ಪ್ರೇರಿತ ಆಕ್ಷೇಪಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯ ಇಲ್ಲ. ಹಾಗಂತ ವಸ್ತುನಿಷ್ಠವಾದ ಆಕ್ಷೇಪಗಳನ್ನು ಉಪೇಕ್ಷಿಸುವುದು ಸರಿಯಾದ ಕ್ರಮವಾಗುವುದಿಲ್ಲ. ಎರಡನೆಯ ಸಮೀಕ್ಷೆ ವೇಳೆ ಇಂತಹ ಲೋಪಗಳಾಗದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಮುಖಂಡರು ಸಲ️ಹೆ ನೀಡಿದ್ದಾರೆ.

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಮತ್ತು ಸರಿಯಾದ ಮಾಹಿತಿಯನ್ನು ಒದಗಿಸಲು ಎಲ್ಲಾ ಸಮುದಾಯಗಳಿಗೆ ಅರಿವು ಮೂಡಿಸುವ ಕೆಲ️ಸವನ್ನು ಸಮೀಕ್ಷೆಗೆ ಪೂರ್ವಭಾವಿಯಾಗಿ ನಡೆಸುವುದು ತುಂಬಾ ಅಗತ್ಯ. ಈ ಕುರಿತು ಆಯೋಗದ ಕಡೆಯಿಂದ ನಡೆದಿರುವ ಪ್ರಯತ್ನಗಳು ಕಾಣಿಸುತ್ತಿಲ್ಲ. ವಿವಿಧ ಸಂಘಟನೆಗಳು ಅವುಗಳಿಗೆ ತಿಳಿದಹಾಗೆ ಅರಿವು ಮೂಡಿಸಲು ಪ್ರಾರಂಭಿಸಿವೆ. ಆದರೆ, ಹಿಂದುಳಿದ, ತೀರಾ ಹಿಂದುಳಿದ, ಸಣ್ಣ, ಅತಿಸಣ್ಣ ಸಮುದಾಯಗಳಲ್ಲಿ ಇಂತಹ ಪ್ರಯತ್ನಗಳು ನಡೆಯುತ್ತಿಲ್ಲ. ಆಯೋಗವು ಸಮುದಾಯಗಳನ್ನು ಸಮಾಲೋಚನೆಗೆ ಆಹ್ವಾನಿಸಬೇಕು ಎಂದು ಮನವಿ ಮಾಡಿದ್ದಾರೆ.

ಆಯೋಗ ನಡೆಸುತ್ತಿರುವ ಎರಡನೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬುವುದು ತಲೆ ಎಣಿಕೆ ಅಲ್ಲ. ರಾಜ್ಯದ ಏಳು ಕೋಟಿಗೂ ಹೆಚ್ಚು ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಅರಿಯುವ ಸಮಗ್ರವಾದ ಕೆಲ️ಸ. ಕೇಂದ್ರ ಸರ್ಕಾರ ಮಾಡುತ್ತಿರುವುದು ಗಣತಿ, ರಾಜ್ಯ ಸರ್ಕಾರ ಮಾಡುತ್ತಿರುವುದು ಸಮೀಕ್ಷೆ ಎನ್ನುವುದನ್ನು ಜನರಿಗೆ ತಿಳಿಸಬೇಕಾಗಿದೆ. ಜನರು ಸಮೀಕ್ಷೆಗೆ ಮುಕ್ತವಾಗಿ ಸ್ಪಂದಿಸುವಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಆಯೋಗವು ವ್ಯಾಪಕ ಪ್ರಚಾರ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಮೊದಲ️ ಸಮೀಕ್ಷೆ ಸಂದರ್ಭದಲ್ಲಿ ದ್ವಿತೀಯ ಮೂಲ️ದ ಮಾಹಿತಿ ಸಂಗ್ರಹಿಸುವ ಕೆಲ️ಸ ಮಾಡಿರಲಿಲ್ಲ. ಮೊದಲ️ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾರಿಯಾಗದಿರಲು ಸರ್ಕಾರಗಳ ಇಚ್ಚಾಶಕ್ತಿಯ ಕೊರತೆ ಕಾರಣವಾಗಿತ್ತೇ, ವಿನಃ ಆಯೋಗ ಅಲ್ಲ. ಆದರೂ ಪ್ರತಿ ಹಂತದಲ್ಲೂ ಪಾರದರ್ಶಕತೆ ಕಾಪಾಡಿಕೊಳ್ಳದೆ ಪ್ರಮಾದ ಎಸಗಲಾಗಿತ್ತು. ಅದಕ್ಕಾಗಿ ಎರಡನೇ ಸಮೀಕ್ಷೆ ವೇಳೆ ಇಡೀ ಪ್ರಕ್ರಿಯೆ ಪಾರದರ್ಶವಾಗಿರಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.

ಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...