Homeಕರ್ನಾಟಕಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-II ಸಮರ್ಪಕವಾಗಿ ನಡೆಸುವಂತೆ ಆಗ್ರಹ

ಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-II ಸಮರ್ಪಕವಾಗಿ ನಡೆಸುವಂತೆ ಆಗ್ರಹ

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಎರಡನೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಯ ಮಿತಿಯೊಳಗೆ ಪೂರ್ಣಗೊಳಿಸುವುದರೊಂದಿಗೆ ಸಮರ್ಪಕವಾಗಿ ನಡೆಸಬೇಕು ಎಂದು ಸರ್ವ ಸಮುದಾಯಗಳ ಸಾಮಾಜಿಕ ನ್ಯಾಯ ಸಂರಕ್ಷಣಾ ಅಭಿಯಾನ, ಶೋಷಿತ ಸಮುದಾಯಗಳ ಒಕ್ಕೂಟ, ಜಾಗೃತ ಕರ್ನಾಟಕ ಮತ್ತು ದಮನಿತ ಹಿಂದುಳಿದ ಸಮುದಾಯಗಳ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ.

ಬುಧವಾರ (ಸೆ.10) ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್.ನಾಯ್ಕ್‌ ಅವರನ್ನು ಭೇಟಿ ಮಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ಆರ್ ರಮೇಶ್, ಹಿಂದುಳಿದ ವರ್ಗಗಳ ಮುಖಂಡ ಸಣ್ಣಭತ್ತಪ್ಪ, ಪತ್ರಕರ್ತ ಧರಣೀಶ್ ಬೂಕನಕೆರೆ, ಜಾಗೃತ ಕರ್ನಾಟಕದ ಮುಖಂಡರಾದ ವಿನೋದ್ ಕುಮಾರ್ ಇಟಗಿ, ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅವರು ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದಾರೆ.

2015ರ ಮೊದಲ️ ಸಮೀಕ್ಷೆ ಬಗ್ಗೆ ಹಲ️ವಾರು ಆಕ್ಷೇಪಗಳು ವ್ಯಕ್ತವಾಗಿ ಕೊನೆಗೆ ಅದರ ಫಲಿತಾಂಶವನ್ನು ಸರ್ಕಾರ ಅಂಗೀಕರಿಸದೆ ಕೈಬಿ️ಟ್ಟಿರುವುದು ದುರ್ಬಲ️ ಸಮುದಾಯಗಳಿಗೆ ಅಪಾರವಾದ ನಿರಾಶೆ ಮೂಡಿಸಿದೆ. ರಾಜಕೀಯ ಪ್ರೇರಿತ ಆಕ್ಷೇಪಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯ ಇಲ್ಲ. ಹಾಗಂತ ವಸ್ತುನಿಷ್ಠವಾದ ಆಕ್ಷೇಪಗಳನ್ನು ಉಪೇಕ್ಷಿಸುವುದು ಸರಿಯಾದ ಕ್ರಮವಾಗುವುದಿಲ್ಲ. ಎರಡನೆಯ ಸಮೀಕ್ಷೆ ವೇಳೆ ಇಂತಹ ಲೋಪಗಳಾಗದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಮುಖಂಡರು ಸಲ️ಹೆ ನೀಡಿದ್ದಾರೆ.

ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಮತ್ತು ಸರಿಯಾದ ಮಾಹಿತಿಯನ್ನು ಒದಗಿಸಲು ಎಲ್ಲಾ ಸಮುದಾಯಗಳಿಗೆ ಅರಿವು ಮೂಡಿಸುವ ಕೆಲ️ಸವನ್ನು ಸಮೀಕ್ಷೆಗೆ ಪೂರ್ವಭಾವಿಯಾಗಿ ನಡೆಸುವುದು ತುಂಬಾ ಅಗತ್ಯ. ಈ ಕುರಿತು ಆಯೋಗದ ಕಡೆಯಿಂದ ನಡೆದಿರುವ ಪ್ರಯತ್ನಗಳು ಕಾಣಿಸುತ್ತಿಲ್ಲ. ವಿವಿಧ ಸಂಘಟನೆಗಳು ಅವುಗಳಿಗೆ ತಿಳಿದಹಾಗೆ ಅರಿವು ಮೂಡಿಸಲು ಪ್ರಾರಂಭಿಸಿವೆ. ಆದರೆ, ಹಿಂದುಳಿದ, ತೀರಾ ಹಿಂದುಳಿದ, ಸಣ್ಣ, ಅತಿಸಣ್ಣ ಸಮುದಾಯಗಳಲ್ಲಿ ಇಂತಹ ಪ್ರಯತ್ನಗಳು ನಡೆಯುತ್ತಿಲ್ಲ. ಆಯೋಗವು ಸಮುದಾಯಗಳನ್ನು ಸಮಾಲೋಚನೆಗೆ ಆಹ್ವಾನಿಸಬೇಕು ಎಂದು ಮನವಿ ಮಾಡಿದ್ದಾರೆ.

ಆಯೋಗ ನಡೆಸುತ್ತಿರುವ ಎರಡನೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬುವುದು ತಲೆ ಎಣಿಕೆ ಅಲ್ಲ. ರಾಜ್ಯದ ಏಳು ಕೋಟಿಗೂ ಹೆಚ್ಚು ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಅರಿಯುವ ಸಮಗ್ರವಾದ ಕೆಲ️ಸ. ಕೇಂದ್ರ ಸರ್ಕಾರ ಮಾಡುತ್ತಿರುವುದು ಗಣತಿ, ರಾಜ್ಯ ಸರ್ಕಾರ ಮಾಡುತ್ತಿರುವುದು ಸಮೀಕ್ಷೆ ಎನ್ನುವುದನ್ನು ಜನರಿಗೆ ತಿಳಿಸಬೇಕಾಗಿದೆ. ಜನರು ಸಮೀಕ್ಷೆಗೆ ಮುಕ್ತವಾಗಿ ಸ್ಪಂದಿಸುವಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಆಯೋಗವು ವ್ಯಾಪಕ ಪ್ರಚಾರ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಮೊದಲ️ ಸಮೀಕ್ಷೆ ಸಂದರ್ಭದಲ್ಲಿ ದ್ವಿತೀಯ ಮೂಲ️ದ ಮಾಹಿತಿ ಸಂಗ್ರಹಿಸುವ ಕೆಲ️ಸ ಮಾಡಿರಲಿಲ್ಲ. ಮೊದಲ️ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾರಿಯಾಗದಿರಲು ಸರ್ಕಾರಗಳ ಇಚ್ಚಾಶಕ್ತಿಯ ಕೊರತೆ ಕಾರಣವಾಗಿತ್ತೇ, ವಿನಃ ಆಯೋಗ ಅಲ್ಲ. ಆದರೂ ಪ್ರತಿ ಹಂತದಲ್ಲೂ ಪಾರದರ್ಶಕತೆ ಕಾಪಾಡಿಕೊಳ್ಳದೆ ಪ್ರಮಾದ ಎಸಗಲಾಗಿತ್ತು. ಅದಕ್ಕಾಗಿ ಎರಡನೇ ಸಮೀಕ್ಷೆ ವೇಳೆ ಇಡೀ ಪ್ರಕ್ರಿಯೆ ಪಾರದರ್ಶವಾಗಿರಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.

ಡಿಜಿಟಲ್ ಅರೆಸ್ಟ್: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ರೂ. 31 ಲಕ್ಷ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...