Homeಕರ್ನಾಟಕವಾರ್ತಾಭಾರತಿಗೆ ಎರಡು ದಶಕ

ವಾರ್ತಾಭಾರತಿಗೆ ಎರಡು ದಶಕ

- Advertisement -
- Advertisement -

ಕನ್ನಡ ದಿನಪತ್ರಿಕೆ ‘ವಾರ್ತಾಭಾರತಿ’ ಎರಡು ದಶಕಗಳನ್ನು ಪೂರೈಸಿದೆ. ವಾಣಿಜ್ಯಸುದ್ದಿ ಮತ್ತು ಮತೀಯ ನಾಯಕರ ಹೇಳಿಕೆಗಳಿಗೆ ಹೆಚ್ಚಿನ ಪತ್ರಿಕೆಗಳು ಕೊಡುವ ಆದ್ಯತೆಗೆ ಹೋಲಿಸಿದರೆ, ಇದು ಜನಸಾಮಾನ್ಯರ ಸಾಮಾಜಿಕ ರಾಜಕೀಯ ವಿಷಯಗಳಿಗೆ ಹೆಚ್ಚಿನ ಆದ್ಯತೆ ಕೊಡುತ್ತಾ ಬಂದಿದೆ. ಕರ್ನಾಟಕದ ಮುಖ್ಯ ಪತ್ರಿಕೆಗಳ ಮುಖಪುಟದ ತಲೆಬರೆಹಗಳನ್ನು ‘ವಾರ್ತಾಭಾರತಿ’ಯವುಗಳ ಜತೆಗಿಟ್ಟು ಗಮನಿಸಿದರೆ, ಇದರ ತಾತ್ವಿಕ ನಿಲುವು ಮತ್ತು ರಾಜಕಾರಣದ ದಿಸೆ ಸ್ಪಷ್ಟವಾಗುತ್ತದೆ. ಕಳೆದ ವರ್ಷ ಅಂಬೇಡ್ಕರ್ ಚಿತ್ರಪಟವನ್ನು ತೆಗೆಸಿದ ನ್ಯಾಯಾಧೀಶರ ವಿರುದ್ಧ ನಡೆದ ಚಳವಳಿಯನ್ನು ಇದು ವರದಿ ಮಾಡಿದ ಬಗೆಯನ್ನು ನೆನೆಯಬಹುದು. ‘ವಾರ್ತಾಭಾರತಿ’ ಇಲ್ಲದಿದ್ದರೆ, ಕರ್ನಾಟಕದಲ್ಲಿ ಮುಖ್ಯವಾಗಿ ಕರಾವಳಿಯಲ್ಲಿ ಜರುಗಿದ ಎಷ್ಟೊ ವಿದ್ಯಮಾನಗಳ ಇನ್ನೊಂದು ಮಗ್ಗುಲು ಓದುಗರಿಗೆ ಸಿಗುತ್ತಿರಲಿಲ್ಲ. ಅಡಗಿಸಲಾದ ಸುದ್ದಿಯನ್ನು ಅಥವಾ ಘಟನೆಯ ಇನ್ನೊಂದು ಮಗ್ಗುಲನ್ನು ಬಿಡಿಸಿ ತೋರಿಸುವುದು, ಭಿನ್ನಮತ ಹುಟ್ಟಿಸುವುದು, ಚಿಂತನಶೀಲತೆ ಬೆಳೆಸುವುದು ಸಾರ್ವಜನಿಕ ಚಿಂತಕರು ಮತ್ತು ಪತ್ರಿಕೆಗಳು ಮಾಡಬೇಕಾದ ಕೆಲಸ. ‘ವಾರ್ತಾಭಾರತಿ’ ಭಿನ್ನಮತವನ್ನು ಮತ್ತು ಸುದ್ದಿಯ ಭಿನ್ನಮಗ್ಗುಲನ್ನು ದಾಖಲಿಸುತ್ತ ಬಂದಿದೆ.

ಮತೀಯವಾದದ ಪ್ರಯೋಗಭೂಮಿಯಾಗಿರುವ ಕರಾವಳಿಯಲ್ಲಿದ್ದು ಇದು ರೂಪುಗೊಂಡಿತು ಮತ್ತು ಎರಡು ದಶಕ ದಾಟಿದೆ. ಈ ಸಂಗತಿಗೆ ಚಾರಿತ್ರಿಕ ಮಹತ್ವವಿದೆ. ಕರಾವಳಿಯಲ್ಲಿ ಹುಟ್ಟುವ ಜನಪರ ಪತ್ರಿಕೆಗಳು ಬೇರುಬಿಡದಂತೆ ಕೊರಳುಗೊಯ್ಕ ಸ್ಪರ್ಧೆಯನ್ನೊಡ್ಡುವ ಸನ್ನಿವೇಶವಿದೆ. ಜನಪರ ಪತ್ರಿಕೆಗಳಿಗೆ ಇದು ಔದ್ಯಮಿಕ ಸ್ಪರ್ಧೆ ಮಾತ್ರವಾಗಿರದೆ, ಸೈದ್ಧಾಂತಿಕ ಹೋರಾಟವೂ ಆಗಿದೆ. ‘ಮುಂಗಾರು’ ಹಾಗೆ ಜನ್ಮ ತಳೆದಿದ್ದು. ಅದನ್ನು ಓದುವುದು, ಅದಕ್ಕೆ ಬರೆಯುವುದು ಮತ್ತು ಚಂದಾ ಮಾಡಿಸುವುದು ನಮಗೆಲ್ಲ ಚಳವಳಿಯ ಕೆಲಸವಾಗಿತ್ತು. ಆದರೆ ನಾನಾ ಕಾರಣಗಳಿಂದ ‘ಮುಂಗಾರು’, ಬಳಿಕ ಬಂದ ‘ಜನವಾಹಿನಿ’ ಪತ್ರಿಕೆಗಳು ಸೋತು ನಿರ್ಗಮಿಸಿದವು. ಆದರೆ ಇವು ನಡೆದ ನಿಲ್ಲಿಸಿದ ಹಾದಿಯಲ್ಲಿ ಪ್ರಯಣ ಆರಂಭಿಸಿದ ‘ವಾರ್ತಾಭಾರತಿ’ ಕರಾವಳಿಯಲ್ಲಿರುವ ಪೈಪೋಟಿಯ ಕದನದಲ್ಲಿ ಬದುಕಿದೆ. ಇದು ಮತೀಯವಾದದ ವಿರುದ್ಧ ಕೆಲಸ ಮಾಡುವ ಚಳವಳಿ ಮತ್ತು ಸಂಗಾತಿಗಳಿಗೆ ವೇದಿಕೆಯಾಗಿದೆ. ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಅಂಕಣ ಬರೆಹಗಳು, ಬಲಪಂಥೀಯ ರಾಜಕೀಯಕ್ಕೆ ಸಾಂಸ್ಕೃತಿಕ ಪ್ರತಿರೋಧವನ್ನು ಕಟ್ಟುವ ಕೆಲಸ ಮಾಡಿವೆ.

ಸಂಪಾದಕೀಯವು ಯಾವುದೇ ಪತ್ರಿಕೆಯ ದೃಷ್ಟಿಕೋನವನ್ನು ಪ್ರಕಟಪಡಿಸುವ ಹೃದಯ ಭಾಗ. ಆದರೆ ಕರ್ನಾಕಟದ ಕೆಲವು ಪತ್ರಿಕೆಗಳಿಗೆ ಸಂಪಾದಕೀಯಗಳೇ ಇಲ್ಲ. ಸಂಪಾದಕೀಯ ಇರುವ ಕೆಲವು ಪತ್ರಿಕೆಗಳಲ್ಲಿ ಅದು ಮಹತ್ವದ ಭಾಗವಾಗಿಲ್ಲ. ಸಂಪಾದಕೀಯ ಹೊಣೆಗಾರಿಕೆಯನ್ನು ಕಿರುಪತ್ರಿಕೆಗಳು ಅರ್ಥಪೂರ್ಣವಾಗಿ ನಿಭಾಯಿಸಿಕೊಂಡು ಬಂದ ಚರಿತ್ರೆಯಿದೆ. ‘ಜೀವನ’ ಪತ್ರಿಕೆಗೆ ಮಾಸ್ತಿ, ‘ರುಜುವಾತು’ಗೆ ಅನಂತಮೂರ್ತಿ, ‘ಸಂಕ್ರಮಣ’ಕ್ಕೆ ಚಂಪಾ, ‘ಪ್ರಪಂಚ’ಕ್ಕೆ ಪಾಪು, ‘ಲಂಕೇಶ್ ಪತ್ರಿಕೆ’ಗೆ ಲಂಕೇಶ್, ‘ಗೌರಿ ಲಂಕೇಶ್’ ಪತ್ರಿಕೆಗೆ ಗೌರಿಲಂಕೇಶ್ ಬರೆದ ಸಂಪಾದಕೀಯಗಳು ಪುಸ್ತಕಗಳಾಗಿ ಪ್ರಕಟವಾಗಿವೆ; ಕನ್ನಡ ಚಿಂತನ ಸಾಹಿತ್ಯದ ಭಾಗವಾಗಿವೆ. ತಿಂಗಳ ಅಥವಾ ವಾರದ ಪತ್ರಿಕೆಗಳಲ್ಲಿ ಚಿಂತನಶೀಲವಾದ ಧ್ಯಾನಸ್ಥ ಸಂಪಾದಕೀಯಗಳು ಸಾಧ್ಯ. ಆದರೆ ದಿನವೂ ಪ್ರಕಟವಾಗುವ ಧಾವಂತದ ದಿನಪತ್ರಿಕೆಗಳಲ್ಲಿ ಇವು ಕಷ್ಟ. ಆದರೂ ‘ಹಿಂದೂ’ ‘ಡೆಕ್ಕನ್‌ಹೆರಾಲ್ಡ್’ ಪತ್ರಿಕೆಗಳ, ಈಚೆಗೆ ‘ಪ್ರಜಾವಾಣಿ’ಯ ಸಂಪಾದಕೀಯಗಳು ತಮ್ಮ ಖಚಿತ ಮತ್ತು ಪ್ರಗತಿಪರ ನಾಡನ್ನು ಕಟ್ಟುವ ಕಾಳಜಿಯ ದೃಷ್ಟಿಕೋನಕ್ಕೆ ಸಾಕ್ಷಿಯಾಗಿವೆ. ರಘುರಾಮಶೆಟ್ಟರು ‘ಮುಂಗಾರು’ ಪತ್ರಿಕೆಗಳಿಗೆ ಬರೆಯುತ್ತಿದ್ದ ಸಂಪಾದಕೀಯಗಳು ಚಿಂತನೆಯಿಂದ ಕೂಡಿರುತ್ತಿದ್ದವು. ಅವು ಈಗ ಪುಸ್ತಕವಾಗಿ ಹೊರಬಂದಿವೆ.

ಈ ಹಿನ್ನೆಲೆಯಲ್ಲಿ ವಾರ್ತಾಭಾರತಿಯ ಸಂಪಾದಕೀಯಗಳಲ್ಲಿರುವ ಚಿಂತನಶೀಲತೆ, ರಾಜಕೀಯ ಪ್ರಜ್ಞೆ, ಅಂತಾರಾಷ್ಟ್ರೀಯ ರಾಜಕಾರಣದ ಅರಿವು, ಕೋಮುವಾದ ಮತ್ತು ಸಾಮ್ರಾಜ್ಯಶಾಹಿಯ ಬಗೆಗಿನ ಸೈದ್ಧಾಂತಿಕ ಪ್ರತಿರೋಧ, ಜನಪರ ಕಾಳಜಿ ಮತ್ತು ಬದ್ಧತೆ, ತಾತ್ವಿಕ ಖಚಿತತೆ ಮುಖ್ಯವಾಗಿವೆ. ಸಂಪಾದಕೀಯದ ಭಾಷೆಯಲ್ಲಿ ತಾರ್ಕಿಕ ಬಿಗಿಯಿರುತ್ತದೆ. ಹೊಣೆಗಾರಿಕೆ, ಬಿಕ್ಕಟ್ಟಿನ ಸನ್ನಿವೇಶದಲ್ಲಿ ವಿದ್ಯಮಾನವನ್ನು ಸೂಕ್ಷ್ಮವಾಗಿ ವಿಶ್ಲೇಷಿಸುವ ರೀತಿ, ಪರ್ಯಾಯಗಳನ್ನು ಹೊಳೆಸುವ ಬಗೆ, ನಾಡನ್ನು ಕಟ್ಟುವ ಕಾಣ್ಕೆ ಇರುತ್ತದೆ. ರಾಜಕೀಯವಾಗಿ ಸರಿತನಕ್ಕಾಗಿ ಅತಿ ಎಚ್ಚರವಹಿಸದೆ, ಚರ್ಚಿಸಲು ಹಿಂಜರಿಕೆ ಹುಟ್ಟಿಸುವ ಸಂಕೀರ್ಣ ವಿಷಯಗಳ ಬಗ್ಗೆ, ದಿಟ್ಟವಾದ ಸಂಪಾದಕೀಯಗಳು ಇಲ್ಲಿವೆ. ತಪ್ಪಾದ ಧೋರಣೆಯ ಸಂಪಾದಕೀಯ ಬಂದಾಗ ಓದುಗರು ಹೀಗಲ್ಲ ಎಂದು ಕಟುವಾಗಿ ಪ್ರತಿಕ್ರಿಯಿಸಿರುವುದೂ ಉಂಟು. ಉದಾಹರಣೆಗೆ ಆಫಘಾನಿಸ್ಥಾನದಲ್ಲಿ ಸಾಮ್ರಾಜ್ಯಶಾಹಿ ಅಮೆರಿಕದ ನಿರ್ಗಮನದ ಹೊತ್ತಲ್ಲಿ ಸಂಭವಿಸಿದ ಅಧಿಕಾರ ಬದಲಾವಣೆಯ ಕುರಿತು ಬರೆಯಲಾದ ಸಂಪಾದಕೀಯ. ವಾರ್ತಾಭಾರತಿಯ ಆಯ್ದ ಸಂಪಾದಕೀಯಗಳು ಪುಸ್ತಕ ರೂಪದಲ್ಲಿ ಪ್ರಕಟವಾದರೆ ಕನ್ನಡ ಚಿಂತನ ಸಾಹಿತ್ಯಕ್ಕೆ ಕೊಡುಗೆಯಾಗಬಲ್ಲವು; ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಕೈಪಿಡಿಯಾಗಬಲ್ಲವು.

ಕನ್ನಡದಲ್ಲಿ ಬಂಡವಾಳ ಹೂಡಿಕೆ, ಪ್ರಸರಣ ಸಂಖ್ಯೆ, ಗುಣಮಟ್ಟಗಳ ದೃಷ್ಟಿಯಿಂದ ಯಶಸ್ಸನ್ನು ಸಾಧಿಸಿದ ಪತ್ರಿಕೆಗಳು ಬಹಳಷ್ಟಿವೆ. ಆದರೆ ಸುದ್ದಿ ವಿಶ್ಲೇಷಣೆ ಮತ್ತು ವ್ಯಾಖ್ಯಾನ ಆ ಮೂಲಕ ಒಂದು ತಾತ್ವಿಕ ಚಿಂತನೆ ಮಂಡಿಸುವ ವಿಷಯ ಬಂದಾಗ, ಹೆಚ್ಚಿನವು ನಿರಾಶೆ ಹುಟ್ಟಿಸುತ್ತವೆ. ಕೆಲವಕ್ಕೆ ನಮ್ಮ ಕಣ್ಣೆದುರಿನ ಸಮಾಜ ಕುರಿತಂತೆ ಒಂದು ಆಳವಾದ ದಾರ್ಶನಿಕ ದೃಷ್ಟಿಕೋನವೇ ಇರುವುದಿಲ್ಲ. ಇದಕ್ಕೆ ಕಾರಣ, ಅಲ್ಲಿ ಬರೆಯುವ ಚಿಂತಕರ ಗುಣಮಟ್ಟವೂ ಕಾರಣ. ಆದರೆ ಕೆಲವು ಪತ್ರಿಕೆಗಳಲ್ಲಿ ಸುದ್ದಿಗಿಂತ ಸುದ್ದಿ ವಿಶ್ಲೇಷಣೆಗಳೇ ಅವುಗಳ ಹಿರಿಮೆಗೆ ಕಾರಣ. ಅಲ್ಲಿನ ಚಿಂತಕರು ಮಾಡುವ ವಿದ್ಯಮಾನಗಳ ವಿಶ್ಲೇಷಣೆ ಮತ್ತು ವ್ಯಾಖ್ಯಾನಗಳು ಓದುಗರ ಅರಿವನ್ನು ವಿಸ್ತರಿಸಿವೆ ಮತ್ತು ಚಿಂತಿಸುವ ದೃಷ್ಟಿಕೋನವನ್ನೆ ಬದಲಿಸಿವೆ. ‘ವಾರ್ತಾಭಾರತಿ’ಯಲ್ಲಿ ನಾಡಿನ ಅತ್ಯುತ್ತಮ ಚಿಂತಕರು ಬರೆಯುತ್ತಾ ಬಂದಿದ್ದಾರೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ಸೆ. 5ಕ್ಕೆ ಗೌರಿ ನೆನಪು ಕಾರ್ಯಕ್ರಮ: ಅರುಂಧತಿರಾಯ್, ಪ್ರಕಾಶ್ ರಾಜ್, ಮೊಹಮ್ಮದ್ ಝುಬೇರ್ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...