Homeಮುಖಪುಟವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನಿರಾಕರಣೆ; ಕಾಂಗ್ರೆಸ್‌ಗೆ ಆಹ್ವಾನಿಸಿದ ಅಧೀರ್ ರಂಜನ್ ಚೌಧರಿ

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನಿರಾಕರಣೆ; ಕಾಂಗ್ರೆಸ್‌ಗೆ ಆಹ್ವಾನಿಸಿದ ಅಧೀರ್ ರಂಜನ್ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದ ಪಿಲಿಭಿತ್‌ನ ಹಾಲಿ ಬಿಜೆಪಿ ಸಂಸದ ವರುಣ್ ಗಾಂಧಿ ಅವರಿಗೆ ಮುಂಬರುವ ಲೋಕಸಭೆ ಚುನಾವಣೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ. ಪಕ್ಷವು ಅವರ ಬದಲಿಗೆ ಮಾಜಿ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ ಅವರನ್ನು ಹೆಸರು ಘೋಷಣೆ ಮಾಡಿದ್ದು, ಕೇಸರಿ ಟಿಕೆಟ್ ಕೈತಪ್ಪಿದ ಕಾರಣ ಸಂಸದರು ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿಯು ತನ್ನ ಐದನೇ ಅಭ್ಯರ್ಥಿಗಳ ಪಟ್ಟಿಯಲ್ಲಿ, ಪಿಲಿಭಿತ್ ಲೋಕಸಭಾ ಕ್ಷೇತ್ರದಿಂದ ವರುಣ್ ಗಾಂಧಿಯನ್ನು ಕೈಬಿಟ್ಟಿತು. ಆದರೆ, ಉತ್ತರ ಪ್ರದೇಶದ ಸುಲ್ತಾನ್‌ಪುರದಿಂದ ಅವರ ತಾಯಿ ಮೇನಕಾ ಗಾಂಧಿ ಅವರಿಗೆ ಟಿಕೆಟ್ ನೀಡಿದೆ. 2021ರಲ್ಲಿ ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್ ನಾಯಕ ಜೀತನ್ ಪ್ರಸಾದ ಅವರಿಗೆ ವರುಣ್ ಗಾಂಧಿ ಬದಲಿಗೆ ಪಿಲಿಭಿತ್‌ನಿಂದ ಟಿಕೆಟ್ ನೀಡಲಾಯಿತು.

ಬಿಜೆಪಿ ನಡೆಯಿಂದ ನೊಂದಿರುವ ವರುಣ್, ನಾಮಪತ್ರ ಸಲ್ಲಿಸಲು ಪಿಲಿಭಿತ್‌ ಕ್ಷೇತ್ರಕ್ಕೆ ಬರುವುದಿಲ್ಲ ಎನ್ನಲಾಗಿದೆ. ‘ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ವರುಣ್ ಗಾಂಧಿ ತಮ್ಮ ಮುಂದಿನ ಚುನಾವಣಾ ನಡೆಗಳ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

44 ವರ್ಷದ ಬಿಜೆಪಿ ನಾಯಕ ಇತ್ತೀಚೆಗೆ ತನ್ನ ಸಹಚರರ ಮೂಲಕ ನಾಲ್ಕು ಸೆಟ್ ನಾಮಪತ್ರಗಳನ್ನು ಖರೀದಿಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಪಿಲಿಭಿತ್‌ನ ಪ್ರತಿ ಹಳ್ಳಿಯಲ್ಲಿ ಎರಡು ವಾಹನಗಳು ಮತ್ತು 10 ಮೋಟಾರ್‌ಸೈಕಲ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಅವರ ಎಲ್ಲ ಪಕ್ಷದ ಕಾರ್ಯಕರ್ತರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಪ್ರಸಾದ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದಾಗಿನಿಂದ ವರುಣ್ ಗಾಂಧಿ ಪಾಳಯದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಮಾಜಿ ಕಾಂಗ್ರೆಸ್ ನಾಯಕ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಮಾರ್ಚ್ 27 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ವರುಣ್ ಗಾಂಧಿ ಇನ್ನೂ ನಾಮಪತ್ರ ಸಲ್ಲಿಸದ ಕಾರಣ, ಅವರು ಸ್ಪರ್ಧಿಸುವುದಿಲ್ಲ ಎಂಬ ಊಹಾಪೋಹ ಹೆಚ್ಚಾಗಿದೆ.

ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ನಂತರ, ಪ್ರಸಾದ್ ಅವರು ಸೋಮವಾರ ಮೊದಲ ಬಾರಿಗೆ ಪಿಲಿಭಿತ್‌ಗೆ ಭೇಟಿ ನೀಡಿದ್ದರು. ಸಿಖ್ ಸಮುದಾಯದೊಂದಿಗೆ ಸಭೆ ನಡೆಸಿದರು, “ಯಾವುದೇ ಪರಿಸ್ಥಿತಿಯಲ್ಲಿ” ನಾನು ಅವರ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ಹಲವು ಸಂದರ್ಭಗಳಲ್ಲಿ ಟೀಕಿಸಿದ ನಂತರ ವರುಣ್ ಗಾಂಧಿ, ಬಿಜೆಪಿಯ ವಿರುದ್ಧವಾಗಿ ನಿಂತಿದ್ದಾರೆ ಎಂದು ಆರೋಪಿಸಲಾಗಿದೆ.

‘ವರುಣ್ ಗಾಂಧಿಗೆ ಸ್ವಾಗತ..’; ಕಾಂಗ್ರೆಸ್‌ಗೆ ಆಹ್ವಾನಿಸಿದ ಅಧೀರ್

ವರುಣ್ ಗಾಂಧಿಯವರನ್ನು ಕಾಂಗ್ರೆಸ್‌ ಪಕ್ಷ ಸೇರುವಂತೆ ಲೋಕಸಭಶ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಆಹ್ವಾನಿಸಿದ್ದಾರೆ.

ಉತ್ತರ ಪ್ರದೇಶದ ಪಿಲಿಭಿತ್‌ನ ಹಾಲಿ ಸಂಸದ ವರುಣ್ ಗಾಂಧಿ ಅವರನ್ನು ಬಿಜೆಪಿ ತನ್ನ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟ ನಂತರ, ಕಾಂಗ್ರೆಸ್ ಅವರಿಗೆ ಆಫರ್ ನೀಡಿದೆ. ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಂಗಳವಾರ ವರುಣ್ ಗಾಂಧಿ ಅವರು ಹಳೆಯ ಪಕ್ಷಕ್ಕೆ ಸೇರಲು “ಆತ್ಮೀಯ ಸ್ವಾಗತ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ಚೌಧರಿ, ಬಿಜೆಪಿ 44 ವರ್ಷದ ವರುಣ್ ಅವರನ್ನು ಚುನಾವಣಾ ಕಣದಿಂದ ಕೈಬಿಟ್ಟಿರುವುದಕ್ಕೆ ಗಾಂಧಿ ಕುಟುಂಬದಲ್ಲಿನ ಅವರ ಕುಟುಂಬದ ಬೇರುಗಳು ಕಾರಣ ಎಂದು ಆರೋಪಿಸಿದರು.

“ಅವರು (ವರುಣ್ ಗಾಂಧಿ) ಕಾಂಗ್ರೆಸ್ ಸೇರಬೇಕು, ಅವರು ಸೇರಿದರೆ ನಮಗೆ ಸಂತೋಷವಾಗುತ್ತದೆ. ಅವರು ಎತ್ತರದ ನಾಯಕ ಮತ್ತು ಸುಶಿಕ್ಷಿತ ರಾಜಕಾರಣಿ. ಅವರ ಇಮೇಜ್ ಪಾರದರ್ಶಕತೆಯನ್ನು ಹೊರಹಾಕುತ್ತದೆ. ಅವರು ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿದ್ದಾರೆ. ಅವರಿಗೆ ಟಿಕೆಟ್ ಕೈತಪ್ಪಲೂ ಇದೂ ಒಂದು ಕಾರಣವಾಗಿದೆ. ಬಿಜೆಪಿ ಅವರಿಗೆ ಟಿಕೆಟ್ ನೀಡಲಿಲ್ಲ, ವರುಣ್ ಗಾಂಧಿ ಈಗ ಕಾಂಗ್ರೆಸ್ ಸೇರಬೇಕೆಂದು ನಾವು ಬಯಸುತ್ತೇವೆ” ಎಂದು ಚೌಧರಿ ಹೇಳಿದರು.

ಬಿಜೆಪಿ ತನ್ನ ಐದನೇ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ (ಮಾರ್ಚ್ 24) ಬಿಡುಗಡೆ ಮಾಡಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದಿಂದ ಹಾಲಿ ಸಂಸದ ವರುಣ್ ಗಾಂಧಿ ಅವರನ್ನು ಕೈಬಿಟ್ಟಿದೆ. ಆದರೆ, ಪಕ್ಷವು ಅವರ ತಾಯಿ ಮೇನಕಾ ಗಾಂಧಿ ಅವರನ್ನು ಸುಲ್ತಾನ್‌ಪುರ ಕ್ಷೇತ್ರದಿಂದ ಉಳಿಸಿಕೊಂಡಿದೆ.

ಇದನ್ನೂ ಓದಿ; ಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...