Homeಮುಖಪುಟವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನಿರಾಕರಣೆ; ಕಾಂಗ್ರೆಸ್‌ಗೆ ಆಹ್ವಾನಿಸಿದ ಅಧೀರ್ ರಂಜನ್ ಚೌಧರಿ

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನಿರಾಕರಣೆ; ಕಾಂಗ್ರೆಸ್‌ಗೆ ಆಹ್ವಾನಿಸಿದ ಅಧೀರ್ ರಂಜನ್ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದ ಪಿಲಿಭಿತ್‌ನ ಹಾಲಿ ಬಿಜೆಪಿ ಸಂಸದ ವರುಣ್ ಗಾಂಧಿ ಅವರಿಗೆ ಮುಂಬರುವ ಲೋಕಸಭೆ ಚುನಾವಣೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ. ಪಕ್ಷವು ಅವರ ಬದಲಿಗೆ ಮಾಜಿ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ ಅವರನ್ನು ಹೆಸರು ಘೋಷಣೆ ಮಾಡಿದ್ದು, ಕೇಸರಿ ಟಿಕೆಟ್ ಕೈತಪ್ಪಿದ ಕಾರಣ ಸಂಸದರು ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿಯು ತನ್ನ ಐದನೇ ಅಭ್ಯರ್ಥಿಗಳ ಪಟ್ಟಿಯಲ್ಲಿ, ಪಿಲಿಭಿತ್ ಲೋಕಸಭಾ ಕ್ಷೇತ್ರದಿಂದ ವರುಣ್ ಗಾಂಧಿಯನ್ನು ಕೈಬಿಟ್ಟಿತು. ಆದರೆ, ಉತ್ತರ ಪ್ರದೇಶದ ಸುಲ್ತಾನ್‌ಪುರದಿಂದ ಅವರ ತಾಯಿ ಮೇನಕಾ ಗಾಂಧಿ ಅವರಿಗೆ ಟಿಕೆಟ್ ನೀಡಿದೆ. 2021ರಲ್ಲಿ ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್ ನಾಯಕ ಜೀತನ್ ಪ್ರಸಾದ ಅವರಿಗೆ ವರುಣ್ ಗಾಂಧಿ ಬದಲಿಗೆ ಪಿಲಿಭಿತ್‌ನಿಂದ ಟಿಕೆಟ್ ನೀಡಲಾಯಿತು.

ಬಿಜೆಪಿ ನಡೆಯಿಂದ ನೊಂದಿರುವ ವರುಣ್, ನಾಮಪತ್ರ ಸಲ್ಲಿಸಲು ಪಿಲಿಭಿತ್‌ ಕ್ಷೇತ್ರಕ್ಕೆ ಬರುವುದಿಲ್ಲ ಎನ್ನಲಾಗಿದೆ. ‘ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ವರುಣ್ ಗಾಂಧಿ ತಮ್ಮ ಮುಂದಿನ ಚುನಾವಣಾ ನಡೆಗಳ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

44 ವರ್ಷದ ಬಿಜೆಪಿ ನಾಯಕ ಇತ್ತೀಚೆಗೆ ತನ್ನ ಸಹಚರರ ಮೂಲಕ ನಾಲ್ಕು ಸೆಟ್ ನಾಮಪತ್ರಗಳನ್ನು ಖರೀದಿಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಪಿಲಿಭಿತ್‌ನ ಪ್ರತಿ ಹಳ್ಳಿಯಲ್ಲಿ ಎರಡು ವಾಹನಗಳು ಮತ್ತು 10 ಮೋಟಾರ್‌ಸೈಕಲ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಅವರ ಎಲ್ಲ ಪಕ್ಷದ ಕಾರ್ಯಕರ್ತರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಪ್ರಸಾದ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದಾಗಿನಿಂದ ವರುಣ್ ಗಾಂಧಿ ಪಾಳಯದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಮಾಜಿ ಕಾಂಗ್ರೆಸ್ ನಾಯಕ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಮಾರ್ಚ್ 27 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ವರುಣ್ ಗಾಂಧಿ ಇನ್ನೂ ನಾಮಪತ್ರ ಸಲ್ಲಿಸದ ಕಾರಣ, ಅವರು ಸ್ಪರ್ಧಿಸುವುದಿಲ್ಲ ಎಂಬ ಊಹಾಪೋಹ ಹೆಚ್ಚಾಗಿದೆ.

ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ನಂತರ, ಪ್ರಸಾದ್ ಅವರು ಸೋಮವಾರ ಮೊದಲ ಬಾರಿಗೆ ಪಿಲಿಭಿತ್‌ಗೆ ಭೇಟಿ ನೀಡಿದ್ದರು. ಸಿಖ್ ಸಮುದಾಯದೊಂದಿಗೆ ಸಭೆ ನಡೆಸಿದರು, “ಯಾವುದೇ ಪರಿಸ್ಥಿತಿಯಲ್ಲಿ” ನಾನು ಅವರ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ಹಲವು ಸಂದರ್ಭಗಳಲ್ಲಿ ಟೀಕಿಸಿದ ನಂತರ ವರುಣ್ ಗಾಂಧಿ, ಬಿಜೆಪಿಯ ವಿರುದ್ಧವಾಗಿ ನಿಂತಿದ್ದಾರೆ ಎಂದು ಆರೋಪಿಸಲಾಗಿದೆ.

‘ವರುಣ್ ಗಾಂಧಿಗೆ ಸ್ವಾಗತ..’; ಕಾಂಗ್ರೆಸ್‌ಗೆ ಆಹ್ವಾನಿಸಿದ ಅಧೀರ್

ವರುಣ್ ಗಾಂಧಿಯವರನ್ನು ಕಾಂಗ್ರೆಸ್‌ ಪಕ್ಷ ಸೇರುವಂತೆ ಲೋಕಸಭಶ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಆಹ್ವಾನಿಸಿದ್ದಾರೆ.

ಉತ್ತರ ಪ್ರದೇಶದ ಪಿಲಿಭಿತ್‌ನ ಹಾಲಿ ಸಂಸದ ವರುಣ್ ಗಾಂಧಿ ಅವರನ್ನು ಬಿಜೆಪಿ ತನ್ನ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟ ನಂತರ, ಕಾಂಗ್ರೆಸ್ ಅವರಿಗೆ ಆಫರ್ ನೀಡಿದೆ. ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಂಗಳವಾರ ವರುಣ್ ಗಾಂಧಿ ಅವರು ಹಳೆಯ ಪಕ್ಷಕ್ಕೆ ಸೇರಲು “ಆತ್ಮೀಯ ಸ್ವಾಗತ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ಚೌಧರಿ, ಬಿಜೆಪಿ 44 ವರ್ಷದ ವರುಣ್ ಅವರನ್ನು ಚುನಾವಣಾ ಕಣದಿಂದ ಕೈಬಿಟ್ಟಿರುವುದಕ್ಕೆ ಗಾಂಧಿ ಕುಟುಂಬದಲ್ಲಿನ ಅವರ ಕುಟುಂಬದ ಬೇರುಗಳು ಕಾರಣ ಎಂದು ಆರೋಪಿಸಿದರು.

“ಅವರು (ವರುಣ್ ಗಾಂಧಿ) ಕಾಂಗ್ರೆಸ್ ಸೇರಬೇಕು, ಅವರು ಸೇರಿದರೆ ನಮಗೆ ಸಂತೋಷವಾಗುತ್ತದೆ. ಅವರು ಎತ್ತರದ ನಾಯಕ ಮತ್ತು ಸುಶಿಕ್ಷಿತ ರಾಜಕಾರಣಿ. ಅವರ ಇಮೇಜ್ ಪಾರದರ್ಶಕತೆಯನ್ನು ಹೊರಹಾಕುತ್ತದೆ. ಅವರು ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿದ್ದಾರೆ. ಅವರಿಗೆ ಟಿಕೆಟ್ ಕೈತಪ್ಪಲೂ ಇದೂ ಒಂದು ಕಾರಣವಾಗಿದೆ. ಬಿಜೆಪಿ ಅವರಿಗೆ ಟಿಕೆಟ್ ನೀಡಲಿಲ್ಲ, ವರುಣ್ ಗಾಂಧಿ ಈಗ ಕಾಂಗ್ರೆಸ್ ಸೇರಬೇಕೆಂದು ನಾವು ಬಯಸುತ್ತೇವೆ” ಎಂದು ಚೌಧರಿ ಹೇಳಿದರು.

ಬಿಜೆಪಿ ತನ್ನ ಐದನೇ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ (ಮಾರ್ಚ್ 24) ಬಿಡುಗಡೆ ಮಾಡಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದಿಂದ ಹಾಲಿ ಸಂಸದ ವರುಣ್ ಗಾಂಧಿ ಅವರನ್ನು ಕೈಬಿಟ್ಟಿದೆ. ಆದರೆ, ಪಕ್ಷವು ಅವರ ತಾಯಿ ಮೇನಕಾ ಗಾಂಧಿ ಅವರನ್ನು ಸುಲ್ತಾನ್‌ಪುರ ಕ್ಷೇತ್ರದಿಂದ ಉಳಿಸಿಕೊಂಡಿದೆ.

ಇದನ್ನೂ ಓದಿ; ಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...