Homeಮುಖಪುಟವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನಿರಾಕರಣೆ; ಕಾಂಗ್ರೆಸ್‌ಗೆ ಆಹ್ವಾನಿಸಿದ ಅಧೀರ್ ರಂಜನ್ ಚೌಧರಿ

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನಿರಾಕರಣೆ; ಕಾಂಗ್ರೆಸ್‌ಗೆ ಆಹ್ವಾನಿಸಿದ ಅಧೀರ್ ರಂಜನ್ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದ ಪಿಲಿಭಿತ್‌ನ ಹಾಲಿ ಬಿಜೆಪಿ ಸಂಸದ ವರುಣ್ ಗಾಂಧಿ ಅವರಿಗೆ ಮುಂಬರುವ ಲೋಕಸಭೆ ಚುನಾವಣೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ. ಪಕ್ಷವು ಅವರ ಬದಲಿಗೆ ಮಾಜಿ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ ಅವರನ್ನು ಹೆಸರು ಘೋಷಣೆ ಮಾಡಿದ್ದು, ಕೇಸರಿ ಟಿಕೆಟ್ ಕೈತಪ್ಪಿದ ಕಾರಣ ಸಂಸದರು ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿಯು ತನ್ನ ಐದನೇ ಅಭ್ಯರ್ಥಿಗಳ ಪಟ್ಟಿಯಲ್ಲಿ, ಪಿಲಿಭಿತ್ ಲೋಕಸಭಾ ಕ್ಷೇತ್ರದಿಂದ ವರುಣ್ ಗಾಂಧಿಯನ್ನು ಕೈಬಿಟ್ಟಿತು. ಆದರೆ, ಉತ್ತರ ಪ್ರದೇಶದ ಸುಲ್ತಾನ್‌ಪುರದಿಂದ ಅವರ ತಾಯಿ ಮೇನಕಾ ಗಾಂಧಿ ಅವರಿಗೆ ಟಿಕೆಟ್ ನೀಡಿದೆ. 2021ರಲ್ಲಿ ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್ ನಾಯಕ ಜೀತನ್ ಪ್ರಸಾದ ಅವರಿಗೆ ವರುಣ್ ಗಾಂಧಿ ಬದಲಿಗೆ ಪಿಲಿಭಿತ್‌ನಿಂದ ಟಿಕೆಟ್ ನೀಡಲಾಯಿತು.

ಬಿಜೆಪಿ ನಡೆಯಿಂದ ನೊಂದಿರುವ ವರುಣ್, ನಾಮಪತ್ರ ಸಲ್ಲಿಸಲು ಪಿಲಿಭಿತ್‌ ಕ್ಷೇತ್ರಕ್ಕೆ ಬರುವುದಿಲ್ಲ ಎನ್ನಲಾಗಿದೆ. ‘ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ವರುಣ್ ಗಾಂಧಿ ತಮ್ಮ ಮುಂದಿನ ಚುನಾವಣಾ ನಡೆಗಳ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

44 ವರ್ಷದ ಬಿಜೆಪಿ ನಾಯಕ ಇತ್ತೀಚೆಗೆ ತನ್ನ ಸಹಚರರ ಮೂಲಕ ನಾಲ್ಕು ಸೆಟ್ ನಾಮಪತ್ರಗಳನ್ನು ಖರೀದಿಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಪಿಲಿಭಿತ್‌ನ ಪ್ರತಿ ಹಳ್ಳಿಯಲ್ಲಿ ಎರಡು ವಾಹನಗಳು ಮತ್ತು 10 ಮೋಟಾರ್‌ಸೈಕಲ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಅವರ ಎಲ್ಲ ಪಕ್ಷದ ಕಾರ್ಯಕರ್ತರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಪ್ರಸಾದ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದಾಗಿನಿಂದ ವರುಣ್ ಗಾಂಧಿ ಪಾಳಯದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಮಾಜಿ ಕಾಂಗ್ರೆಸ್ ನಾಯಕ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಮಾರ್ಚ್ 27 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ವರುಣ್ ಗಾಂಧಿ ಇನ್ನೂ ನಾಮಪತ್ರ ಸಲ್ಲಿಸದ ಕಾರಣ, ಅವರು ಸ್ಪರ್ಧಿಸುವುದಿಲ್ಲ ಎಂಬ ಊಹಾಪೋಹ ಹೆಚ್ಚಾಗಿದೆ.

ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟ ನಂತರ, ಪ್ರಸಾದ್ ಅವರು ಸೋಮವಾರ ಮೊದಲ ಬಾರಿಗೆ ಪಿಲಿಭಿತ್‌ಗೆ ಭೇಟಿ ನೀಡಿದ್ದರು. ಸಿಖ್ ಸಮುದಾಯದೊಂದಿಗೆ ಸಭೆ ನಡೆಸಿದರು, “ಯಾವುದೇ ಪರಿಸ್ಥಿತಿಯಲ್ಲಿ” ನಾನು ಅವರ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ಹಲವು ಸಂದರ್ಭಗಳಲ್ಲಿ ಟೀಕಿಸಿದ ನಂತರ ವರುಣ್ ಗಾಂಧಿ, ಬಿಜೆಪಿಯ ವಿರುದ್ಧವಾಗಿ ನಿಂತಿದ್ದಾರೆ ಎಂದು ಆರೋಪಿಸಲಾಗಿದೆ.

‘ವರುಣ್ ಗಾಂಧಿಗೆ ಸ್ವಾಗತ..’; ಕಾಂಗ್ರೆಸ್‌ಗೆ ಆಹ್ವಾನಿಸಿದ ಅಧೀರ್

ವರುಣ್ ಗಾಂಧಿಯವರನ್ನು ಕಾಂಗ್ರೆಸ್‌ ಪಕ್ಷ ಸೇರುವಂತೆ ಲೋಕಸಭಶ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಆಹ್ವಾನಿಸಿದ್ದಾರೆ.

ಉತ್ತರ ಪ್ರದೇಶದ ಪಿಲಿಭಿತ್‌ನ ಹಾಲಿ ಸಂಸದ ವರುಣ್ ಗಾಂಧಿ ಅವರನ್ನು ಬಿಜೆಪಿ ತನ್ನ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟ ನಂತರ, ಕಾಂಗ್ರೆಸ್ ಅವರಿಗೆ ಆಫರ್ ನೀಡಿದೆ. ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಂಗಳವಾರ ವರುಣ್ ಗಾಂಧಿ ಅವರು ಹಳೆಯ ಪಕ್ಷಕ್ಕೆ ಸೇರಲು “ಆತ್ಮೀಯ ಸ್ವಾಗತ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ಚೌಧರಿ, ಬಿಜೆಪಿ 44 ವರ್ಷದ ವರುಣ್ ಅವರನ್ನು ಚುನಾವಣಾ ಕಣದಿಂದ ಕೈಬಿಟ್ಟಿರುವುದಕ್ಕೆ ಗಾಂಧಿ ಕುಟುಂಬದಲ್ಲಿನ ಅವರ ಕುಟುಂಬದ ಬೇರುಗಳು ಕಾರಣ ಎಂದು ಆರೋಪಿಸಿದರು.

“ಅವರು (ವರುಣ್ ಗಾಂಧಿ) ಕಾಂಗ್ರೆಸ್ ಸೇರಬೇಕು, ಅವರು ಸೇರಿದರೆ ನಮಗೆ ಸಂತೋಷವಾಗುತ್ತದೆ. ಅವರು ಎತ್ತರದ ನಾಯಕ ಮತ್ತು ಸುಶಿಕ್ಷಿತ ರಾಜಕಾರಣಿ. ಅವರ ಇಮೇಜ್ ಪಾರದರ್ಶಕತೆಯನ್ನು ಹೊರಹಾಕುತ್ತದೆ. ಅವರು ಗಾಂಧಿ ಕುಟುಂಬದೊಂದಿಗೆ ಸಂಬಂಧ ಹೊಂದಿದ್ದಾರೆ. ಅವರಿಗೆ ಟಿಕೆಟ್ ಕೈತಪ್ಪಲೂ ಇದೂ ಒಂದು ಕಾರಣವಾಗಿದೆ. ಬಿಜೆಪಿ ಅವರಿಗೆ ಟಿಕೆಟ್ ನೀಡಲಿಲ್ಲ, ವರುಣ್ ಗಾಂಧಿ ಈಗ ಕಾಂಗ್ರೆಸ್ ಸೇರಬೇಕೆಂದು ನಾವು ಬಯಸುತ್ತೇವೆ” ಎಂದು ಚೌಧರಿ ಹೇಳಿದರು.

ಬಿಜೆಪಿ ತನ್ನ ಐದನೇ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ (ಮಾರ್ಚ್ 24) ಬಿಡುಗಡೆ ಮಾಡಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದಿಂದ ಹಾಲಿ ಸಂಸದ ವರುಣ್ ಗಾಂಧಿ ಅವರನ್ನು ಕೈಬಿಟ್ಟಿದೆ. ಆದರೆ, ಪಕ್ಷವು ಅವರ ತಾಯಿ ಮೇನಕಾ ಗಾಂಧಿ ಅವರನ್ನು ಸುಲ್ತಾನ್‌ಪುರ ಕ್ಷೇತ್ರದಿಂದ ಉಳಿಸಿಕೊಂಡಿದೆ.

ಇದನ್ನೂ ಓದಿ; ಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...